ಮಹಾರಾಷ್ಟ್ರದ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡುವ ಹೊಸ ಮಸೂದೆಯನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ಮಂಡಿಸಲಿದೆ ಎಂದು ರಾಜ್ಯ ಸಚಿವರು ತಿಳಿಸಿದ್ದಾರೆ.
ಈ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ.
ಎಂವಿಎದ ಮೂವರು ಮೈತ್ರಿ ಪಕ್ಷಗಳಲ್ಲಿ ಒಬ್ಬರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮಲಿಕ್ರವರು “ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಲು ಸಹ ಯೋಜಿಸುತ್ತಿದ್ದು, ಸರ್ಕಾರ ಅದಕ್ಕೆ ಕಾನೂನು ಸಲಹೆ ಪಡೆಯುತ್ತಿದೆ” ಎಂದು ಹೇಳಿದ್ದಾರೆ.
ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಬಿಜೆಪಿ ನಡುವಿನ ಒಕ್ಕೂಟದ ಹಿಂದಿನ ಸರ್ಕಾರ, ನ್ಯಾಯಾಲಯದ ಆದೇಶದ ಹೊರತಾಗಿಯೂ ಮೀಸಲಾತಿ ನೀಡಿಲ್ಲ ಎಂದು ಮಲಿಕ್ ಆರೋಪಿಸಿದ್ದಾರೆ.
“ಈ ವಿಧಾನಸಭೆ ಅಧಿವೇಶನದ ಅಂತ್ಯದ ವೇಳೆಗೆ ನಾವು ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.
ಕಳೆದ ವರ್ಷ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿಯನ್ನು ಪರಿಚಯಿಸಿದ ನಂತರ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡುವ ಯೋಜನೆಯನ್ನು ಒಟ್ಟುಗೂಡಿಸಿದರೆ ಈಗಿರುವ ಮೀಸಲಾತಿ ಅಂಕಿ ಅಂಶವು ಸುಪ್ರೀಂ ಕೋರ್ಟ್ ಸೂಚಿಸಿರುವ 50 ಪ್ರತಿಶತಕ್ಕಿಂತ ಹೆಚ್ಚಿದೆ ಎನ್ನಲಾಗುತ್ತಿದೆ.
ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವ ಹಿಂದಿನ ರಾಜ್ಯ ಸರ್ಕಾರದ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಕಳೆದ ವರ್ಷ ಜೂನ್ನಲ್ಲಿ ಎತ್ತಿಹಿಡಿದಿತ್ತು. ಆದರೆ ಸರ್ಕಾರವು ನಿಗದಿಪಡಿಸಿದ ಶೇಕಡಾ 16 ಪ್ರಮಾಣವನ್ನು ಶೇಕಡಾ 13 ಕ್ಕೆ ಇಳಿಸಿತು.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಈಗಿನ ಸರ್ಕಾರವು ಶೇಕಡಾ 50 ರಷ್ಟು ಮೀರುವ ಮೀಸಲಾತಿಯನ್ನು ಹೇಗೆ ಸರಿದೂಗಿಸುತ್ತದೆ ಎಂದು ಇನ್ನೂ ಘೋಷಿಸಿಲ್ಲ.


