Homeಮುಖಪುಟಕಡುಖೋಟಾ ಅನ್ನೋ ಡೀಫ್ ಫೇಕು : ದೆಹಲಿಯಲ್ಲಿ ಬಿಜೆಪಿಯ ಮನೋಜ್‌ ತಿವಾರಿ ಮಾಡಿದ ಮೋಡಿ ಗೊತ್ತೆ?

ಕಡುಖೋಟಾ ಅನ್ನೋ ಡೀಫ್ ಫೇಕು : ದೆಹಲಿಯಲ್ಲಿ ಬಿಜೆಪಿಯ ಮನೋಜ್‌ ತಿವಾರಿ ಮಾಡಿದ ಮೋಡಿ ಗೊತ್ತೆ?

- Advertisement -
- Advertisement -

ʻನೀಂ ಕಡು ಕಾಫಿ ಬಲ್ಲೆ, ಕಡು ಖೋಟಾ ಬಲ್ಲೆಯಾ?ʼ

ʻನಿನ್ನೆ ಹುಟ್ಟಿದವನಿಗಿಂತ ಇವತ್ತು ಹುಟ್ಟಿದವ ಶಾಣ್ಯಾʼ ಅಂತ ಒಂದು ಗಾದಿ ಮಾತು ಅದ. ಅದು ಬ್ಯಾರೆ ಎಲ್ಲೆರ ಇದು ಸುಳ್ಳು ಆಗಬಹುದು, ಆದರ ತಂತ್ರಜ್ಞಾನದ ವಿಷಯದಾಗ ಅಗದೀ ಖರೆ.

ನಮ್ಮ ಯುವ ಸಾಫ್ಟವೇರು ತಂತ್ರಜ್ಞರು ಒಂದು ಕಂಪ್ಯೂಟರು, ಒಂದು ಇಂಟರನೆಟ್ಟು ಇಟಗೊಂಡು ಏನೇನೆಲ್ಲಾ ಮಾಡತಾರ ಅಂದರ ಕೇಳಬ್ಯಾಡರಿ. ಅವರ ಮಾಡಿದ ಒಂದೊಂದ ಕೆಲಸದ ಪರಿಣಾಮ ತಿಳಕೊಳ್ಳಿಕ್ಕೆ ನಮಗ ಭಾಳ ಟೈಂ ಬೇಕಾಗತದ. ಒಂದು ತಿಳಕೊಳ್ಳೋದರಾಗ ಇನ್ನೊಂದ ಬಂದಿರತದ.

ಕೆಲವೊಮ್ಮೆ ತಿಳಿಯಂಗೇ ಇಲ್ಲ.

ಈಗ ಅಂಥಾದ್ದೊಂದ ಬಂದದ. ಅದರ ಹೆಸರು ಕಡು ಖೋಟಾ. ಖೋಟಾ ಅನ್ನೋದು ನಮಗ ಎಲ್ಲಾರಿಗೂ ಗೊತ್ತು. ದಿನಾ ಅದನ್ನ ನೋಡತೇವಿ, ಕೇಳತೇವಿ, ನಂಬತೇವಿ. ಈಗ ಇದೇನಪಾ ಕಡು ಖೋಟಾ?

ಕಡು ಖೋಟಾ ಅಥವಾ ಡೀಪ್ ಫೇಕು ಅನ್ನೋ ತಂತ್ರಜ್ಞಾನ ನಮ್ಮ ಎಲ್ಲಾ ನಂಬಿಕೆಗಳನ್ನ, ತಿಳಿವಳಿಕೆಯನ್ನ ಬುಡಮೇಲು ಮಾಡುವಷ್ಟು ಶಕ್ತಿ ಇರುವಂಥಾದ್ದು. ಇದು ಮುಂದೆ ಎಂದೋ ಬರೋದಲ್ಲಾ. ಈಗಾಗಲೇ ಬಂದು ಬಿಟ್ಟದ. ಬರೇ ಇಂಗ್ಲಂಡು- ಅಮೆರಿಕಾದಾಗ ಬಂದಿಲ್ಲಾ, ನಮ್ಮ ಭಾರತ ವರ್ಷದಾಗ ಬಂದು ಬಿಟ್ಟದ.

ಮೊನ್ನೆ ದೆಹಲಿ ಚುನಾವಣೆಯೊಳಗ ಇದರ ಉಪಯೋಗ ಆಗೇದ ಅಂತ ತಂತ್ರಜ್ಞಾನ ಕಂಪನಿ ವೈಸ್ ವರದಿ ಮಾಡೇದ.

ಕಡು ಖೋಟಾ ಅಂದರ ತುಂಬ ತೀಕ್ಷ್ಣ ತಂತ್ರಜ್ಞಾನ ಉಪಯೋಗಿಸಿ ಸುಳ್ಳು ಸುಳ್ಳು ವಿಡಿಯೋಗಳನ್ನು ತಯಾರು ಮಾಡೋದು. ಯಾವುದು ಅಸಾಧ್ಯವೋ, ಯಾವುದು ಆಗಲಿಕ್ಕೆ ಸಾಧ್ಯವೇ ಇಲ್ಲವೋ ಅದನ್ನ ಆಗೇ ಬಿಟ್ಟದ ಅನ್ನೋಹಂಗ ತೋರಸೋದು. ಇದು ಸಣ್ಣ ಹುಡುಗರ ವಿಡಿಯೋಗೇಮೋ, ಅನಿಮೇಷನ್ ಕಾರ್ಟೂನೋ ಇದ್ದರ ಸಮಸ್ಯೆ ಇರಲಿಲ್ಲ. ಆದರ ಇದು ಆಗತಾ ಇರೋದು ಸುದ್ದಿ ಮಾಧ್ಯಮದಾಗ. ಕಮಲ ಹಾಸನ ಅವರ ಇಂಡಿಯನ್ ಸಿನಿಮಾದಾಗ ನೇತಾಜಿ ಜೊತೆಗೆ ಚಿತ್ರದ ನಾಯಕ ಓಡಾಡಿದಂಗ ಮಾಡಿದ್ದರು. ಆದರ ಅದು ಕೃತಕ ಅಂತ ಗೊತ್ತಾಗತಿತ್ತು. ಕಡು ಖೋಟಾ ಅಂದರ ಗೊತ್ತೇ ಆಗದ ಹಂಗ ಕಲಬೆರಕೆ ಮಾಡೋ ಕಲೆ. ಇದು ಎಷ್ಟು ಅಪಾಯಕಾರಿ ಅಂತ ಸ್ವಲ್ಪ ವಿಚಾರ ಮಾಡಿದರ ತಿಳೀತದ.

ಉದಾಹರಣೆಗೆ ಕಳೆದ ವಾರ ಇಂಗ್ಲಂಡಿನ ಇಂಜಿನಿಯರು ಒಬ್ಬ ಕನ್ಸರ್ವೇಟಿವ್ ಪಕ್ಷದ ಬೋರಿಸ ಜಾನಸನ್ ಅವರು ಲಿಬರಲ್ ಪಕ್ಷದ ಸಭೆಯೊಳಗ ಭಾಷಣ ಮಾಡಿದಂಗ, ಲಿಬರಲ್ ಪಕ್ಷದ ಜಿಮ್ಮಿ ಕಾರ್ಬಿನ್ ಅವರು ವಿರೋಧ ಪಕ್ಷದ ಸಮಾರಂಭದಾಗ ಸನ್ಮಾನ ಸ್ವೀಕರಿಸಿದ ಹಂಗ ವಿಡಿಯೋ ತಯಾರು ಮಾಡಿಬಿಟ್ಟ. ಇದನ್ನ ಭಾಳ ಮಂದಿ ನಂಬಿ ಷೇರು, ಲೈಕು, ಕಾಮೆಂಟು ಮಾಡಿದರು.

ಗ್ಯಾಬೋನ್ ದೇಶದ ಅಧ್ಯಕ್ಷ ಅಲಿ ಬೊಂಗೋ ಅವರು ಮಾಡಿದ ಭಾಷಣದ ವಿಡಿಯೋ ತುಣುಕಿನಿಂದ ಅವರ ದೇಶದಾಗ ಒಂದು ಕ್ಷಿಪ್ರಕ್ರಾಂತಿ ಆತು. ಹಿಂಸಾಚಾರ ಆತು. ಆದರ ಆ ಭಾಷಣ ಅವರು ಮಾಡಿರಲೇ ಇಲ್ಲ. ಅವರ ಹಳೇ ವಿಡಿಯೋಗಳ ತುಣುಕುಗಳನ್ನು ಸೇರಿಸಿ, ಅವಕ್ಕೆ ಹೊಸಾ ಅಂಗಿ- ಪ್ಯಾಂಟು ಹಾಕಿ ಖೋಟಾ ವಿಡಿಯೋ ತಯಾರು ಮಾಡಲಾಯಿತು. ಅದು ಇಷ್ಟೆಲ್ಲಾ ಘೋಟಾಲಾ ಮಾಡಿತು.

ಕಡು ಖೋಟಾ ವಿಡಿಯೋ ತಂತ್ರಜ್ಞಾನದ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ಹೇಳಿ ಸ್ಲೋವಾಕಿಯಾದ ಒಬ್ಬ ಪುಣ್ಯಾತ್ಮ ಪ್ರಯತ್ನ ಮಾಡಲಿಕ್ಕೆ ಹತ್ಯಾನ. ಕಂಟ್ರೋಲ್- ಶಿಫ್ಟ್ – ಫೇಸ್ ಅನ್ನೋ ಯೂಟ್ಯೂಬ ವಿಡಿಯೋ ಸರಣಿಯೊಳಗ ಆತ ಇಲ್ಲಿಯವರೆಗೂ 20 ಕಡು ಖೋಟಾ ವಿಡಿಯೋಗಳನ್ನ ಹಾಕ್ಯಾನ. ಅದರಾಗಿನ ಉದಾಹರಣೆ ಅಂದರ 1973 ರಲ್ಲಿ ತೀರಿ ಹೋಗಿರೋ ನಟ ಬ್ರೂಸ್ ಲೀ ಯನ್ನು ಹೀರೋ ಮಾಡಿ 2010 ಸಿನಿಮಾಗಳನ್ನು ಮರು ತಯಾರಿ ಮಾಡೋದು, ಬ್ಯಾಟ ಮ್ಯಾನಿನ ಜೋಕರ ಪಾತ್ರ ತೊಗೊಂಡು ಹೋಗಿ ಇನ್ನಾವುದೋ ಸಂಬಂಧ ಇರಲಾರದ ಸಿನಿಮಾದಾಗ ವಿಲನ್ ಮಾಡೋದು, ಈಗ ಜೀವಂತ ಇರಲಾರದ ಡೇವಿಡ್ ಬೋವಿ ಅವರಂತಹಾ ಪಾಪ್- ರಾಕ್ ಹಾಡುಗಾರರ ಬಾಯಾಗಿಂದಾ ಹೊಸಾ ಹಾಡುಗಳನ್ನು ಹೇಳಿಸೋದು, ಇತ್ಯಾದಿ.

ಉದಾಹರಣೆ ನೋಡಿ:

ನೀವು ಕಲ್ಪನೆ ಮಾಡಿಕೊರಿ. ಇವತ್ತಿನ ಚಲನಚಿತ್ರ ನಟಿಯರು ಕಪ್ಪು- ಬಿಳುಪಿನ ಸಿನಿಮಾದಾಗ ಮಾಡೋದು, ಅಥವಾ ಮೀನಾಕುಮಾರಿ, ಉದಯ ಚಂದ್ರಿಕಾ ಸರ್ವಮಂಗಳಾ ಇವರೆಲ್ಲಾ ಇವನೇ ಶ್ರೀಮನ್ನಾರಾಯಣ, ಕೆಜಿಎಫ್ ನಂತಾ ಸಿನಿಮಾದಾಗ ಮಾಡೋದು ಹೆಂಗಿರತದ?

ಇಂಥದೆಲ್ಲಾ ಮಸ್ತ ಮಜಾ ಇರಬಹದು ಬಿಡ್ರಿ.

ಆದರ ಇಂಥಾದೆಲ್ಲಾ ರಾಜಕೀಯದಾಗ ಬಂದರ? ಏನಾದೀತು?

ಉದಾಹರಣೆಗೆ ರಾಹುಲ ಗಾಂಧಿ ನರೇಂದ್ರಮೋದಿ ಚುನಾವಣಾ ಪ್ರಚಾರಕ್ಕ ನಿಂತರ? ದೇವೇಗೌಡರೂ- ಅಮಿತ ಷಾ ಆಲಿಂಗನ ಮಾಡಿಕೊಂಡ ವಿಡಿಯೋ ನಿಮ್ಮ ಫೋನಿನ್ಯಾಗ ಒಡಮೂಡಿದರ? ನೆಹರೂ – ಜಿನ್ನಾ ಇಬ್ಬರೂ ಅಣ್ಣ- ತಮ್ಮಾ ಅಂತ ವಾಟ್ಸಪ್ಪು ಮೆಸೇಜು ಈಗಾಗಲೇ ಬರಲಿಕ್ಕೆ ಹತ್ತೇದ. ಅವರಿಬ್ಬರೂ ನಾವು ಒಂದೇ ತಾಯಿಯ ಮಕ್ಕಳು ಅಂತ ಹೇಳೋ ವಿಡಿಯೋ ಹುಟ್ಟಿಗೊಂಡರ? ನನ್ನನ್ನ ಯಾರೂ ಹತ್ಯೆ ಮಾಡಿಲ್ಲ. ಸುಳ್ಳ ಸುಳ್ಳ ಯರ‍್ಯಾರನ್ನೋ ಬಯ್ಯಬ್ಯಾಡ್ರಿ. ಸಬಕೋ ಸನಮತಿ ದೇ ಭಗವಾನ ಅಂತ ಗಾಂಧಿ ದೇಶವನ್ನು ಸಂಬೋಧಿಸಿ ಮಾತಾಡೋ ವಿಡಿಯೋ ನಾಳೆ ಟೀವಿಯೊಳಗ ಪ್ರಸಾರ ಆದರ? ಇಂಥಾವೆಲ್ಲಾ ಸುರು ಆದರ ಸ್ವರ್ಗಕ್ಕೆ ಕಿಚ್ಚು ಹಚ್ಚೋದು ಅಲ್ಲಾ, ನರಕಕ್ಕೆ ಕಿಚ್ಚು ಹಚ್ಚೋದು ಆಗತೇತಿ.

ಯಾವುದು ಕಡು ಖೋಟಾ, ಯಾವುದು ಅಲ್ಲಾ ಅಂತ ಕಂಡುಹಿಡಿಯೋ ತಂತ್ರಜ್ಞಾನ ಇನ್ನೂ ಬಂದಿಲ್ಲಂತ. ಕೃತಕ ಬುದ್ಧಿಮತ್ತೆ ಕ್ಷೇತ್ರ ಬೆಳದಂಗ ಬರಬಹುದಂತ. ಆದರ ಪೇಪರು- ಫೋನಿನ್ಯಾಗ ಬಂದ ಖೋಟಾ ಸುದ್ದಿಗಳನ್ನು ವರೆಗೆ ಹಚ್ಚಲು ನಮ್ಮ ಜನಾ ತಯಾರಿಲ್ಲಾ ಎಲ್ಲಾನೂ ಹುಯ್ಯ ಅಂತ ನಂಬತಾರ. ಇನ್ನ ಕಡು ಖೋಟಾ ವಿಡಿಯೋ ಪ್ರಸಾರ ಆಗಲಿಕ್ಕೆ ಹತ್ತಿದವಂದರ ಏನಾದೀತ?

ಅಂದಂಗ ಬಿಜೆಪಿ ದೆಹಲಿ ಅಧ್ಯಕ್ಷ ಮನೋಜ ತಿವಾರಿ ಅವರು ಬೇರೆ ಬೇರೆ ಪೋಷಾಕು ಧರಿಸಿ ನಾಲ್ಕು -ಐದು ಭಾಷೆಯೊಳಗ ಮತದಾರರಿಗೆ ಮತ ಕೇಳೋ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದರಂತ. ಅವರಿಗೆ ಅಷ್ಟು ಭಾಷಾನ ಬರಂಗಿಲ್ಲ, ಬಂದರೂ ಅಷ್ಟು ಸುಲಲಿತವಾಗಿ ಮಾತಾಡಲಿಕ್ಕೆ ಆಗಂಗಿಲ್ಲ ಅಂತ ಅವರನ್ನ ಬಲ್ಲವರಿಗೆ ಖಾತ್ರಿ ಆತಂತ. ಹಿಂಗಾಗಿ ಅವು ಕಡು ಖೋಟಾ ಅಂತ ಎಲ್ಲಾರಿಗೂ ಗುಮಾನಿ ಬಂತಂತ. ಆ ನಂತರ ವೈಸ್ ಸಂಸ್ಥೆಯ ವರದಿ ಬಂತು, ಅದು ಬ್ಯಾರೆ ವಿಷಯ. ಇದು ಅಂತ್ಯ ಅಲ್ಲ, ಆರಂಭ ಅನ್ನೋದನ್ನ ನಾವು ತಿಳಕೋಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...