Homeಮುಖಪುಟಕಡುಖೋಟಾ ಅನ್ನೋ ಡೀಫ್ ಫೇಕು : ದೆಹಲಿಯಲ್ಲಿ ಬಿಜೆಪಿಯ ಮನೋಜ್‌ ತಿವಾರಿ ಮಾಡಿದ ಮೋಡಿ ಗೊತ್ತೆ?

ಕಡುಖೋಟಾ ಅನ್ನೋ ಡೀಫ್ ಫೇಕು : ದೆಹಲಿಯಲ್ಲಿ ಬಿಜೆಪಿಯ ಮನೋಜ್‌ ತಿವಾರಿ ಮಾಡಿದ ಮೋಡಿ ಗೊತ್ತೆ?

- Advertisement -
- Advertisement -

ʻನೀಂ ಕಡು ಕಾಫಿ ಬಲ್ಲೆ, ಕಡು ಖೋಟಾ ಬಲ್ಲೆಯಾ?ʼ

ʻನಿನ್ನೆ ಹುಟ್ಟಿದವನಿಗಿಂತ ಇವತ್ತು ಹುಟ್ಟಿದವ ಶಾಣ್ಯಾʼ ಅಂತ ಒಂದು ಗಾದಿ ಮಾತು ಅದ. ಅದು ಬ್ಯಾರೆ ಎಲ್ಲೆರ ಇದು ಸುಳ್ಳು ಆಗಬಹುದು, ಆದರ ತಂತ್ರಜ್ಞಾನದ ವಿಷಯದಾಗ ಅಗದೀ ಖರೆ.

ನಮ್ಮ ಯುವ ಸಾಫ್ಟವೇರು ತಂತ್ರಜ್ಞರು ಒಂದು ಕಂಪ್ಯೂಟರು, ಒಂದು ಇಂಟರನೆಟ್ಟು ಇಟಗೊಂಡು ಏನೇನೆಲ್ಲಾ ಮಾಡತಾರ ಅಂದರ ಕೇಳಬ್ಯಾಡರಿ. ಅವರ ಮಾಡಿದ ಒಂದೊಂದ ಕೆಲಸದ ಪರಿಣಾಮ ತಿಳಕೊಳ್ಳಿಕ್ಕೆ ನಮಗ ಭಾಳ ಟೈಂ ಬೇಕಾಗತದ. ಒಂದು ತಿಳಕೊಳ್ಳೋದರಾಗ ಇನ್ನೊಂದ ಬಂದಿರತದ.

ಕೆಲವೊಮ್ಮೆ ತಿಳಿಯಂಗೇ ಇಲ್ಲ.

ಈಗ ಅಂಥಾದ್ದೊಂದ ಬಂದದ. ಅದರ ಹೆಸರು ಕಡು ಖೋಟಾ. ಖೋಟಾ ಅನ್ನೋದು ನಮಗ ಎಲ್ಲಾರಿಗೂ ಗೊತ್ತು. ದಿನಾ ಅದನ್ನ ನೋಡತೇವಿ, ಕೇಳತೇವಿ, ನಂಬತೇವಿ. ಈಗ ಇದೇನಪಾ ಕಡು ಖೋಟಾ?

ಕಡು ಖೋಟಾ ಅಥವಾ ಡೀಪ್ ಫೇಕು ಅನ್ನೋ ತಂತ್ರಜ್ಞಾನ ನಮ್ಮ ಎಲ್ಲಾ ನಂಬಿಕೆಗಳನ್ನ, ತಿಳಿವಳಿಕೆಯನ್ನ ಬುಡಮೇಲು ಮಾಡುವಷ್ಟು ಶಕ್ತಿ ಇರುವಂಥಾದ್ದು. ಇದು ಮುಂದೆ ಎಂದೋ ಬರೋದಲ್ಲಾ. ಈಗಾಗಲೇ ಬಂದು ಬಿಟ್ಟದ. ಬರೇ ಇಂಗ್ಲಂಡು- ಅಮೆರಿಕಾದಾಗ ಬಂದಿಲ್ಲಾ, ನಮ್ಮ ಭಾರತ ವರ್ಷದಾಗ ಬಂದು ಬಿಟ್ಟದ.

ಮೊನ್ನೆ ದೆಹಲಿ ಚುನಾವಣೆಯೊಳಗ ಇದರ ಉಪಯೋಗ ಆಗೇದ ಅಂತ ತಂತ್ರಜ್ಞಾನ ಕಂಪನಿ ವೈಸ್ ವರದಿ ಮಾಡೇದ.

ಕಡು ಖೋಟಾ ಅಂದರ ತುಂಬ ತೀಕ್ಷ್ಣ ತಂತ್ರಜ್ಞಾನ ಉಪಯೋಗಿಸಿ ಸುಳ್ಳು ಸುಳ್ಳು ವಿಡಿಯೋಗಳನ್ನು ತಯಾರು ಮಾಡೋದು. ಯಾವುದು ಅಸಾಧ್ಯವೋ, ಯಾವುದು ಆಗಲಿಕ್ಕೆ ಸಾಧ್ಯವೇ ಇಲ್ಲವೋ ಅದನ್ನ ಆಗೇ ಬಿಟ್ಟದ ಅನ್ನೋಹಂಗ ತೋರಸೋದು. ಇದು ಸಣ್ಣ ಹುಡುಗರ ವಿಡಿಯೋಗೇಮೋ, ಅನಿಮೇಷನ್ ಕಾರ್ಟೂನೋ ಇದ್ದರ ಸಮಸ್ಯೆ ಇರಲಿಲ್ಲ. ಆದರ ಇದು ಆಗತಾ ಇರೋದು ಸುದ್ದಿ ಮಾಧ್ಯಮದಾಗ. ಕಮಲ ಹಾಸನ ಅವರ ಇಂಡಿಯನ್ ಸಿನಿಮಾದಾಗ ನೇತಾಜಿ ಜೊತೆಗೆ ಚಿತ್ರದ ನಾಯಕ ಓಡಾಡಿದಂಗ ಮಾಡಿದ್ದರು. ಆದರ ಅದು ಕೃತಕ ಅಂತ ಗೊತ್ತಾಗತಿತ್ತು. ಕಡು ಖೋಟಾ ಅಂದರ ಗೊತ್ತೇ ಆಗದ ಹಂಗ ಕಲಬೆರಕೆ ಮಾಡೋ ಕಲೆ. ಇದು ಎಷ್ಟು ಅಪಾಯಕಾರಿ ಅಂತ ಸ್ವಲ್ಪ ವಿಚಾರ ಮಾಡಿದರ ತಿಳೀತದ.

ಉದಾಹರಣೆಗೆ ಕಳೆದ ವಾರ ಇಂಗ್ಲಂಡಿನ ಇಂಜಿನಿಯರು ಒಬ್ಬ ಕನ್ಸರ್ವೇಟಿವ್ ಪಕ್ಷದ ಬೋರಿಸ ಜಾನಸನ್ ಅವರು ಲಿಬರಲ್ ಪಕ್ಷದ ಸಭೆಯೊಳಗ ಭಾಷಣ ಮಾಡಿದಂಗ, ಲಿಬರಲ್ ಪಕ್ಷದ ಜಿಮ್ಮಿ ಕಾರ್ಬಿನ್ ಅವರು ವಿರೋಧ ಪಕ್ಷದ ಸಮಾರಂಭದಾಗ ಸನ್ಮಾನ ಸ್ವೀಕರಿಸಿದ ಹಂಗ ವಿಡಿಯೋ ತಯಾರು ಮಾಡಿಬಿಟ್ಟ. ಇದನ್ನ ಭಾಳ ಮಂದಿ ನಂಬಿ ಷೇರು, ಲೈಕು, ಕಾಮೆಂಟು ಮಾಡಿದರು.

ಗ್ಯಾಬೋನ್ ದೇಶದ ಅಧ್ಯಕ್ಷ ಅಲಿ ಬೊಂಗೋ ಅವರು ಮಾಡಿದ ಭಾಷಣದ ವಿಡಿಯೋ ತುಣುಕಿನಿಂದ ಅವರ ದೇಶದಾಗ ಒಂದು ಕ್ಷಿಪ್ರಕ್ರಾಂತಿ ಆತು. ಹಿಂಸಾಚಾರ ಆತು. ಆದರ ಆ ಭಾಷಣ ಅವರು ಮಾಡಿರಲೇ ಇಲ್ಲ. ಅವರ ಹಳೇ ವಿಡಿಯೋಗಳ ತುಣುಕುಗಳನ್ನು ಸೇರಿಸಿ, ಅವಕ್ಕೆ ಹೊಸಾ ಅಂಗಿ- ಪ್ಯಾಂಟು ಹಾಕಿ ಖೋಟಾ ವಿಡಿಯೋ ತಯಾರು ಮಾಡಲಾಯಿತು. ಅದು ಇಷ್ಟೆಲ್ಲಾ ಘೋಟಾಲಾ ಮಾಡಿತು.

ಕಡು ಖೋಟಾ ವಿಡಿಯೋ ತಂತ್ರಜ್ಞಾನದ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ಹೇಳಿ ಸ್ಲೋವಾಕಿಯಾದ ಒಬ್ಬ ಪುಣ್ಯಾತ್ಮ ಪ್ರಯತ್ನ ಮಾಡಲಿಕ್ಕೆ ಹತ್ಯಾನ. ಕಂಟ್ರೋಲ್- ಶಿಫ್ಟ್ – ಫೇಸ್ ಅನ್ನೋ ಯೂಟ್ಯೂಬ ವಿಡಿಯೋ ಸರಣಿಯೊಳಗ ಆತ ಇಲ್ಲಿಯವರೆಗೂ 20 ಕಡು ಖೋಟಾ ವಿಡಿಯೋಗಳನ್ನ ಹಾಕ್ಯಾನ. ಅದರಾಗಿನ ಉದಾಹರಣೆ ಅಂದರ 1973 ರಲ್ಲಿ ತೀರಿ ಹೋಗಿರೋ ನಟ ಬ್ರೂಸ್ ಲೀ ಯನ್ನು ಹೀರೋ ಮಾಡಿ 2010 ಸಿನಿಮಾಗಳನ್ನು ಮರು ತಯಾರಿ ಮಾಡೋದು, ಬ್ಯಾಟ ಮ್ಯಾನಿನ ಜೋಕರ ಪಾತ್ರ ತೊಗೊಂಡು ಹೋಗಿ ಇನ್ನಾವುದೋ ಸಂಬಂಧ ಇರಲಾರದ ಸಿನಿಮಾದಾಗ ವಿಲನ್ ಮಾಡೋದು, ಈಗ ಜೀವಂತ ಇರಲಾರದ ಡೇವಿಡ್ ಬೋವಿ ಅವರಂತಹಾ ಪಾಪ್- ರಾಕ್ ಹಾಡುಗಾರರ ಬಾಯಾಗಿಂದಾ ಹೊಸಾ ಹಾಡುಗಳನ್ನು ಹೇಳಿಸೋದು, ಇತ್ಯಾದಿ.

ಉದಾಹರಣೆ ನೋಡಿ:

ನೀವು ಕಲ್ಪನೆ ಮಾಡಿಕೊರಿ. ಇವತ್ತಿನ ಚಲನಚಿತ್ರ ನಟಿಯರು ಕಪ್ಪು- ಬಿಳುಪಿನ ಸಿನಿಮಾದಾಗ ಮಾಡೋದು, ಅಥವಾ ಮೀನಾಕುಮಾರಿ, ಉದಯ ಚಂದ್ರಿಕಾ ಸರ್ವಮಂಗಳಾ ಇವರೆಲ್ಲಾ ಇವನೇ ಶ್ರೀಮನ್ನಾರಾಯಣ, ಕೆಜಿಎಫ್ ನಂತಾ ಸಿನಿಮಾದಾಗ ಮಾಡೋದು ಹೆಂಗಿರತದ?

ಇಂಥದೆಲ್ಲಾ ಮಸ್ತ ಮಜಾ ಇರಬಹದು ಬಿಡ್ರಿ.

ಆದರ ಇಂಥಾದೆಲ್ಲಾ ರಾಜಕೀಯದಾಗ ಬಂದರ? ಏನಾದೀತು?

ಉದಾಹರಣೆಗೆ ರಾಹುಲ ಗಾಂಧಿ ನರೇಂದ್ರಮೋದಿ ಚುನಾವಣಾ ಪ್ರಚಾರಕ್ಕ ನಿಂತರ? ದೇವೇಗೌಡರೂ- ಅಮಿತ ಷಾ ಆಲಿಂಗನ ಮಾಡಿಕೊಂಡ ವಿಡಿಯೋ ನಿಮ್ಮ ಫೋನಿನ್ಯಾಗ ಒಡಮೂಡಿದರ? ನೆಹರೂ – ಜಿನ್ನಾ ಇಬ್ಬರೂ ಅಣ್ಣ- ತಮ್ಮಾ ಅಂತ ವಾಟ್ಸಪ್ಪು ಮೆಸೇಜು ಈಗಾಗಲೇ ಬರಲಿಕ್ಕೆ ಹತ್ತೇದ. ಅವರಿಬ್ಬರೂ ನಾವು ಒಂದೇ ತಾಯಿಯ ಮಕ್ಕಳು ಅಂತ ಹೇಳೋ ವಿಡಿಯೋ ಹುಟ್ಟಿಗೊಂಡರ? ನನ್ನನ್ನ ಯಾರೂ ಹತ್ಯೆ ಮಾಡಿಲ್ಲ. ಸುಳ್ಳ ಸುಳ್ಳ ಯರ‍್ಯಾರನ್ನೋ ಬಯ್ಯಬ್ಯಾಡ್ರಿ. ಸಬಕೋ ಸನಮತಿ ದೇ ಭಗವಾನ ಅಂತ ಗಾಂಧಿ ದೇಶವನ್ನು ಸಂಬೋಧಿಸಿ ಮಾತಾಡೋ ವಿಡಿಯೋ ನಾಳೆ ಟೀವಿಯೊಳಗ ಪ್ರಸಾರ ಆದರ? ಇಂಥಾವೆಲ್ಲಾ ಸುರು ಆದರ ಸ್ವರ್ಗಕ್ಕೆ ಕಿಚ್ಚು ಹಚ್ಚೋದು ಅಲ್ಲಾ, ನರಕಕ್ಕೆ ಕಿಚ್ಚು ಹಚ್ಚೋದು ಆಗತೇತಿ.

ಯಾವುದು ಕಡು ಖೋಟಾ, ಯಾವುದು ಅಲ್ಲಾ ಅಂತ ಕಂಡುಹಿಡಿಯೋ ತಂತ್ರಜ್ಞಾನ ಇನ್ನೂ ಬಂದಿಲ್ಲಂತ. ಕೃತಕ ಬುದ್ಧಿಮತ್ತೆ ಕ್ಷೇತ್ರ ಬೆಳದಂಗ ಬರಬಹುದಂತ. ಆದರ ಪೇಪರು- ಫೋನಿನ್ಯಾಗ ಬಂದ ಖೋಟಾ ಸುದ್ದಿಗಳನ್ನು ವರೆಗೆ ಹಚ್ಚಲು ನಮ್ಮ ಜನಾ ತಯಾರಿಲ್ಲಾ ಎಲ್ಲಾನೂ ಹುಯ್ಯ ಅಂತ ನಂಬತಾರ. ಇನ್ನ ಕಡು ಖೋಟಾ ವಿಡಿಯೋ ಪ್ರಸಾರ ಆಗಲಿಕ್ಕೆ ಹತ್ತಿದವಂದರ ಏನಾದೀತ?

ಅಂದಂಗ ಬಿಜೆಪಿ ದೆಹಲಿ ಅಧ್ಯಕ್ಷ ಮನೋಜ ತಿವಾರಿ ಅವರು ಬೇರೆ ಬೇರೆ ಪೋಷಾಕು ಧರಿಸಿ ನಾಲ್ಕು -ಐದು ಭಾಷೆಯೊಳಗ ಮತದಾರರಿಗೆ ಮತ ಕೇಳೋ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದರಂತ. ಅವರಿಗೆ ಅಷ್ಟು ಭಾಷಾನ ಬರಂಗಿಲ್ಲ, ಬಂದರೂ ಅಷ್ಟು ಸುಲಲಿತವಾಗಿ ಮಾತಾಡಲಿಕ್ಕೆ ಆಗಂಗಿಲ್ಲ ಅಂತ ಅವರನ್ನ ಬಲ್ಲವರಿಗೆ ಖಾತ್ರಿ ಆತಂತ. ಹಿಂಗಾಗಿ ಅವು ಕಡು ಖೋಟಾ ಅಂತ ಎಲ್ಲಾರಿಗೂ ಗುಮಾನಿ ಬಂತಂತ. ಆ ನಂತರ ವೈಸ್ ಸಂಸ್ಥೆಯ ವರದಿ ಬಂತು, ಅದು ಬ್ಯಾರೆ ವಿಷಯ. ಇದು ಅಂತ್ಯ ಅಲ್ಲ, ಆರಂಭ ಅನ್ನೋದನ್ನ ನಾವು ತಿಳಕೋಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...