Homeಮುಖಪುಟಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಈ ಹೋರಾಟ ಹತ್ತಿಕ್ಕಲಾಗದು : ಎಚ್‌.ಎಸ್‌ ದೊರೆಸ್ವಾಮಿ

ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಈ ಹೋರಾಟ ಹತ್ತಿಕ್ಕಲಾಗದು : ಎಚ್‌.ಎಸ್‌ ದೊರೆಸ್ವಾಮಿ

ಕರ್ನಾಟಕದಲ್ಲೆ ಸಿಎಎ, ಎನ್‌ಆರ್‌ಸಿ ವಿರುದ್ಧ ಇದುವರೆಗೆ 175 ದೊಡ್ಡ ಸಣ್ಣ ಹೋರಾಟಗಳೂ ವಿವಿಧ ಸ್ಥಳಗಳಲ್ಲಿ ನಡೆದಿವೆ. ಭಾರತದಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಈ ಚಳವಳಿ ನಡೆಯುತ್ತಿದೆ. ಈ ರೀತಿಯ ಬೆದರಿಕೆ ಹಾಕಿ ಹೋರಾಟವನ್ನು ಸ್ಥಗಿತ ಗೊಳಿಸುವುದು ಆಗದ ಮಾತು.

- Advertisement -
- Advertisement -

ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿಕಾಯಿದೆ ವಿರುದ್ಧವಾಗಿ ನಡೆದಿರುವ ನೂರಾರು ಹೋರಾಟ ಸಭೆಗಳು ಶಾಂತಿಯುತವಾಗಿ ನಡೆದವು. ನಾವು ಫೆಬ್ರವರಿ ತಿಂಗಳಲ್ಲಿ ನಡೆಸಿದ 4 ದಿನಗಳ ಮೋದಿ ವಿರುದ್ಧದ ಧರಣಿಯೂ ಶಾಂತಿಯುತವಾಗಿ ನಡೆಯುತ್ತಿತ್ತು ಆದರೆ ದುರದೃಷ್ಟವಶಾತ್ ಎರಡು ಕಡೆಗಳಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಹೋರಾಟದ ಸ್ಥಳಗಳಲ್ಲಿ ಇಬ್ಬರು ಅಪ್ರಬುದ್ಧ ಯುವತಿಯರು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಯ ವಿನಾಕಾರಣ ಕೂಗಿ ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದಾರೆ.

ಚಳವಳಿಯನ್ನು ಯಶಸ್ವಿಗೊಳಿಸಬೇಕೆಂಬುದು ಬೆಂಗಳೂರು ಮೊದಲುಗೊಂಡು ಇಲ್ಲಿಯವರೆಗೆ ನಡೆದಿರುವ ಎಲ್ಲಾ ಹೋರಾಟಗಳನ್ನು ರೂಪಿಸುವವರ ಆಶಯವೇ ಹೊರತು, ಚಳವಳಿಯನ್ನು ವಿಫಲಗೊಳಿಸುವುದಲ್ಲ. ರಾಷ್ಟ್ರವಿರೋಧಿ ಘೋಷಣೆ ಹಾಕುವವರನ್ನು ಮತ್ತು ಆ ರೀತಿ ಮಾತನಾಡುವವರನ್ನು ಕರೆದು ಮಾತನಾಡಿಸುವುದನ್ನು ಈ ಸಭೆಗಳನ್ನೂ ನಡೆಸುವವರು ಬಯಸುವುದೇ ಇಲ್ಲ. ಅಮೂಲ್ಯಳನ್ನೆ ತೆಗೆದುಕೋಳ್ಳಿ ಆಕೆ ಮೊದಲು ನಡೆದ ಎರಡು ಸಭೆಗಳಲ್ಲಿ ಯಾವುದೇ ರಾಷ್ಟ್ರವಿರೋಧಿ ಮಾತುಗಳನ್ನು ಆಡಿಲ್ಲ. ಆದ್ದರಿಂದಲೇ ಸ್ವಾತಂತ್ರ್ಯ ಉದ್ಯಾನದ ಸಭೆಗೆ ಸಂಘಟಿತರು ಆಕೆಯನ್ನು ಮಾತನಾಡಲು ಆಹ್ವಾನಿಸಿರಬಹುದು. ಅಂತಹದರಲ್ಲಿ ಸಂಘಟಕರನ್ನು ಅಪರಾಧಿಸ್ಥಾನದಲ್ಲಿ ನಿಲ್ಲಿಸುವುದು ಒಪ್ಪತಕ್ಕ ಮಾತಲ್ಲ.

ಸರ್ವೋಚ್ಛ ನ್ಯಾಯಾಲಯ ಹೇಳಿತು. “ಸರ್ಕಾರದ ನಿಲುವನ್ನು ವಿರೋಧಿಸುವ ಹಕ್ಕನ್ನು ನಮ್ಮ ರಾಜ್ಯಾಂಗ ಪ್ರಜೆಗೆ ನೀಡಿದೆ. ಅದಕ್ಕಾಗಿ ಸಭೆ ಸಮ್ಮೇಳನಗಳನ್ನು ಹೋರಾಟವನ್ನು ಆಯೋಜಿಸುವುದು ಪ್ರಜೆಯ ಹಕ್ಕು. 144ನೇ ಸೆಕ್ಷನ್ ಹಾಕಿ ಶಾಂತಿಯುತವಾಗಿ ನಡೆಯುವ ಹೋರಾಟವನ್ನು ಹತ್ತಿಕ್ಕುವುದು, ಲಾಠಿ ಚಾರ್ಜ್‍ ಮಾಡುವುದನ್ನು, ಬಂದೂಕು ಹಿಡಿದು ಹೋರಾಟಗಾರರ ಮೇಲೆ ಪ್ರಯೋಗ ಮಾಡುವುದನ್ನು ಪೊಲೀಸರು ಮಾಡುವಂತಿಲ್ಲ” ಎಂದೂ ತಾಕೀತು ಮಾಡಿದೆ. ಈ ತೀರ್ಪು ಸರ್ಕಾರದ ಸ್ವೇಚ್ಛಾಚಾರವನ್ನು ತಡೆಹಿಡಿದಿದೆ. ಹೀಗಾಗಿ ಅನ್ಯಮಾರ್ಗಗಳಿಂದ ಹೋರಾಟ ನಡೆಸುವುದನ್ನು ಹತ್ತಿಕ್ಕಲು ಸರ್ಕಾರ ಆಲೋಚನೆ ಮಾಡುತ್ತಿದೆ. ಕರ್ನಾಟಕ ಸರ್ಕಾರದ ಗೃಹ ಸಚಿವರು ಕೈಗೊಂಡಿರುವ ಕ್ರಮಗಳು ಕೂಡ ಇದೇ ಆಗಿದೆ.

ಚಳವಳಿಗೆ ಬರುವವರನ್ನ ಯಾರು ಕೂಡ ಬಿಜೆಪಿ ಸಭೆಗಳಿಗೆ ಕರೆತರುವಂತೆ ಲಾರಿಗಳಲ್ಲಿ ಬಸ್‍ಗಳಲ್ಲಿ ಕರೆತರುವುದಿಲ್ಲ. ಸ್ವಯಂಪ್ರೇರಣೆಯಿಂದ ಜನ ತಾವಾಗಿಯೇ ಬರುತ್ತಾರೆ. ಹೀಗೆ ಬಂದವರಲ್ಲಿ ಯಾರು, ಯಾರು ಸಾರ್ವಜನಿಕರು ಎಂಬುದನ್ನು ಪತ್ತೆ ಹಚ್ಚಿ ಅವರನ್ನು ಹೋರಾಟದ ಸ್ಥಳದಿಂದ ಹೊರಹಾಕುವುದು ಪೊಲೀಸರ ಜವಾಬ್ದಾರಿ. ಹೋರಾಟಕ್ಕೆ ಬಂದವರಲ್ಲಿ ಕೆಲ ಗಣ್ಯರನ್ನು ಹೋರಾಟ ಸಮಿತಿಯವರು ಮಾತನಾಡಲು ಪ್ರಾರ್ಥಿಸಬಹುದು. ಅವರು ಬೇರೆಕಡೆ ನಡೆಯುವ ಹೋರಾಟ ಸಭೆಗಳಲ್ಲಿ ಘನತೆಗೌರವದಿಂದ ಮಾತನಾಡಿದ್ದರೆ ಮಾತ್ರ ಅವರನ್ನ ಮಾತನಾಡಲು ಕರೆಯುತ್ತಾರೆ. ಹಾಗಿದ್ದೂ ಹೀಗೆ ಕರೆದವರಲ್ಲಿ ಯಾರಾದರು ರಾಷ್ಟ್ರದ್ರೋಹದ ಮಾತನಾಡಿದರೆ ಅವರ ಮೇಲೆ ಖಟ್ಲೆ ಹೂಡಬಹುದು. ಆದರೆ ಅವರ ತಪ್ಪಿಗೆ ಹೋರಾಟ ನಡೆಸುವ ಮುಖ್ಯಸ್ಥರನ್ನೂ ಸಮಿತಿಯ ಸದಸ್ಯರನ್ನೂ ತಪ್ಪಿತಸ್ಥರಂತೆ ಕಾಣುವುದು ಯಾವ ನ್ಯಾಯ?

ವಿವಿಧ ಕಡೆಗಳಲ್ಲಿ ಹೋರಾಟವನ್ನು ಸಂಘಟಿಸಿರುವ ಕೆಲವರನ್ನು ಅಪರಾಧಿಗಳಂತೆ ಕಾಣುತ್ತಿರುವುದು, ಆ ಮೂಲಕ ಇತರೆ ಸಂಘಟನೆ ಮಾಡುತ್ತಿರುವವರಲ್ಲಿ ಹೆದರಿಕೆ ಉಂಟುಮಾಡುವುದರ ಮೂಲಕ ಸಿಎಎ ಮುಂತಾದ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುವ ಎಲ್ಲರನ್ನು ಭಯಭೀತಿಗೆ ಒಳಪಡಿಸಿ ದೇಶಾದ್ಯಂತ ನಡೆಯುತ್ತಿರುವ ಸಾವಿರಾರು ಚಳವಳಿಗಳನ್ನು ಏಕಕಾಲಕ್ಕೆ ಸ್ಥಗಿತಗೊಳಿಸುವ ಹುನ್ನಾರಕ್ಕೆ ಕೈ ಹಾಕಿರುವ ಗೃಹಸಚಿವರ ಗೆಯ್ಮೆಗೆ ಧಿಕ್ಕಾರ.

ಕರ್ನಾಟಕದಲ್ಲೆ ಸಿಎಎ, ಎನ್‌ಆರ್‌ಸಿ ವಿರುದ್ಧ ಇದುವರೆಗೆ 175 ದೊಡ್ಡ ಸಣ್ಣ ಹೋರಾಟಗಳೂ ವಿವಿಧ ಸ್ಥಳಗಳಲ್ಲಿ ನಡೆದಿವೆ. ಭಾರತದಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಈ ಚಳವಳಿ ನಡೆಯುತ್ತಿದೆ. ಈ ರೀತಿಯ ಬೆದರಿಕೆ ಹಾಕಿ ಹೋರಾಟವನ್ನು ಸ್ಥಗಿತ ಗೊಳಿಸುವುದು ಆಗದ ಮಾತು.

ಪೌರತ್ವ ತಿದ್ದುಪಡಿಕಾಯ್ದೆ ಅಸಂಖ್ಯಾತ ಹಿಂದುಗಳು ಎಸ್.ಟಿ, ಎಸ್.ಸಿಗಳೂ, ಮಹಮದೀಯರು, ಕ್ರಿಶ್ಚಿಯನ್ನರು ಮುಂತಾದ ಭಾರತೀಯರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತದೆ. ಆ ಮೂಲಕ ಅವರನ್ನೆಲ್ಲ ಭಾರತದ ಎರಡನೆಯ ದರ್ಜೆ ಪ್ರಜೆಗಳನ್ನಾಗಿ ಪರಿಗಣಿಸಲಾಗುತ್ತದೆ. ಪೌರತ್ವವಿಲ್ಲದ ತಬ್ಬಲಿಗಳಾಗುತ್ತಾರೆ ಈ ಜನ. ಆದ್ದರಿಂದ ಈ ಹೋರಾಟ ಅವರಿಗೆ ಜೀವನ್ಮರಣದ ಹೋರಾಟ. ಸರ್ಕಾರ ಈ ಹೋರಾಟವನ್ನೂ ಹತ್ತಿಕ್ಕಲು ಏನೇ ಪ್ರಯತ್ನ ಮಾಡಿದರೂ ಈ ಹೋರಾಟ ನಿಲ್ಲದು.

ಜನತೆಗೆ ಮೋದಿ ಸರ್ಕಾರ ಅಪಾರವಾದ ಆಶ್ವಾಸನೆಗಳನ್ನು ಕೊಟ್ಟು ಮತ ಕಸಿದುಕೊಂಡಿತು. ಆ ಆಶ್ವಾಸನೆಗಳೆಲ್ಲ ಹುಸಿಯಾದವು. ಹತಾಶತಾದ ಜನ ಸರ್ಕಾರದ ವಿರುದ್ಧ ತಿರುಗಿಬಿದ್ದಾರೆಂಬ ಭಯದಿಂದ ಮೋದಿ ಮತ್ತು ಶಾ ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಈ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಸಂಚು ಹೂಡಿದ್ದಾರೆ. ಇದು ಮತದಾರರೆಲ್ಲರಿಗೆ ಮನವರಿಕೆಯಾಗಿದೆ. ಕೆಲವರನ್ನು ಕೆಲವು ಕಾಲ ಯಾಮಾರಿಸಬಹುದು, ಎಲ್ಲರನ್ನು ಎಲ್ಲಾ ಕಾಲದಲ್ಲಿ ಯಾಮಾರಿಸಲು ಸಾಧ್ಯವಿಲ್ಲ.

ಆದ್ದರಿಂದ ಮತದಾರ ಇಂದು ಕೇಳುತ್ತಿದ್ದಾನೆ, “ಪ್ರಧಾನಿ ಮೋದಿಯವರೇ ನಿಮ್ಮ ರಾಜ್ಯಭಾರದಲ್ಲಿ ಸಮಸ್ಯೆಗಳ ಸರಮಾಲೆ ತಲೆಹಾಕಿವೆ. ಅವುಗಳಿಗೆಲ್ಲಕ್ಕೂ ನೀವೆ ಜವಾಬ್ದಾರರು, ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಕೊನೆಗಾಣಿಸಿ ಜನಸಾಮಾನ್ಯರನ್ನು ಕಾಡುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಿ. ಅದಾಗದಿದ್ದರೆ ಸಿಂಹಾಸನ ತೆರವುಮಾಡಿ” ಎಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...