Homeಮುಖಪುಟಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಈ ಹೋರಾಟ ಹತ್ತಿಕ್ಕಲಾಗದು : ಎಚ್‌.ಎಸ್‌ ದೊರೆಸ್ವಾಮಿ

ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಈ ಹೋರಾಟ ಹತ್ತಿಕ್ಕಲಾಗದು : ಎಚ್‌.ಎಸ್‌ ದೊರೆಸ್ವಾಮಿ

ಕರ್ನಾಟಕದಲ್ಲೆ ಸಿಎಎ, ಎನ್‌ಆರ್‌ಸಿ ವಿರುದ್ಧ ಇದುವರೆಗೆ 175 ದೊಡ್ಡ ಸಣ್ಣ ಹೋರಾಟಗಳೂ ವಿವಿಧ ಸ್ಥಳಗಳಲ್ಲಿ ನಡೆದಿವೆ. ಭಾರತದಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಈ ಚಳವಳಿ ನಡೆಯುತ್ತಿದೆ. ಈ ರೀತಿಯ ಬೆದರಿಕೆ ಹಾಕಿ ಹೋರಾಟವನ್ನು ಸ್ಥಗಿತ ಗೊಳಿಸುವುದು ಆಗದ ಮಾತು.

- Advertisement -
- Advertisement -

ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿಕಾಯಿದೆ ವಿರುದ್ಧವಾಗಿ ನಡೆದಿರುವ ನೂರಾರು ಹೋರಾಟ ಸಭೆಗಳು ಶಾಂತಿಯುತವಾಗಿ ನಡೆದವು. ನಾವು ಫೆಬ್ರವರಿ ತಿಂಗಳಲ್ಲಿ ನಡೆಸಿದ 4 ದಿನಗಳ ಮೋದಿ ವಿರುದ್ಧದ ಧರಣಿಯೂ ಶಾಂತಿಯುತವಾಗಿ ನಡೆಯುತ್ತಿತ್ತು ಆದರೆ ದುರದೃಷ್ಟವಶಾತ್ ಎರಡು ಕಡೆಗಳಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಹೋರಾಟದ ಸ್ಥಳಗಳಲ್ಲಿ ಇಬ್ಬರು ಅಪ್ರಬುದ್ಧ ಯುವತಿಯರು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಯ ವಿನಾಕಾರಣ ಕೂಗಿ ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದಾರೆ.

ಚಳವಳಿಯನ್ನು ಯಶಸ್ವಿಗೊಳಿಸಬೇಕೆಂಬುದು ಬೆಂಗಳೂರು ಮೊದಲುಗೊಂಡು ಇಲ್ಲಿಯವರೆಗೆ ನಡೆದಿರುವ ಎಲ್ಲಾ ಹೋರಾಟಗಳನ್ನು ರೂಪಿಸುವವರ ಆಶಯವೇ ಹೊರತು, ಚಳವಳಿಯನ್ನು ವಿಫಲಗೊಳಿಸುವುದಲ್ಲ. ರಾಷ್ಟ್ರವಿರೋಧಿ ಘೋಷಣೆ ಹಾಕುವವರನ್ನು ಮತ್ತು ಆ ರೀತಿ ಮಾತನಾಡುವವರನ್ನು ಕರೆದು ಮಾತನಾಡಿಸುವುದನ್ನು ಈ ಸಭೆಗಳನ್ನೂ ನಡೆಸುವವರು ಬಯಸುವುದೇ ಇಲ್ಲ. ಅಮೂಲ್ಯಳನ್ನೆ ತೆಗೆದುಕೋಳ್ಳಿ ಆಕೆ ಮೊದಲು ನಡೆದ ಎರಡು ಸಭೆಗಳಲ್ಲಿ ಯಾವುದೇ ರಾಷ್ಟ್ರವಿರೋಧಿ ಮಾತುಗಳನ್ನು ಆಡಿಲ್ಲ. ಆದ್ದರಿಂದಲೇ ಸ್ವಾತಂತ್ರ್ಯ ಉದ್ಯಾನದ ಸಭೆಗೆ ಸಂಘಟಿತರು ಆಕೆಯನ್ನು ಮಾತನಾಡಲು ಆಹ್ವಾನಿಸಿರಬಹುದು. ಅಂತಹದರಲ್ಲಿ ಸಂಘಟಕರನ್ನು ಅಪರಾಧಿಸ್ಥಾನದಲ್ಲಿ ನಿಲ್ಲಿಸುವುದು ಒಪ್ಪತಕ್ಕ ಮಾತಲ್ಲ.

ಸರ್ವೋಚ್ಛ ನ್ಯಾಯಾಲಯ ಹೇಳಿತು. “ಸರ್ಕಾರದ ನಿಲುವನ್ನು ವಿರೋಧಿಸುವ ಹಕ್ಕನ್ನು ನಮ್ಮ ರಾಜ್ಯಾಂಗ ಪ್ರಜೆಗೆ ನೀಡಿದೆ. ಅದಕ್ಕಾಗಿ ಸಭೆ ಸಮ್ಮೇಳನಗಳನ್ನು ಹೋರಾಟವನ್ನು ಆಯೋಜಿಸುವುದು ಪ್ರಜೆಯ ಹಕ್ಕು. 144ನೇ ಸೆಕ್ಷನ್ ಹಾಕಿ ಶಾಂತಿಯುತವಾಗಿ ನಡೆಯುವ ಹೋರಾಟವನ್ನು ಹತ್ತಿಕ್ಕುವುದು, ಲಾಠಿ ಚಾರ್ಜ್‍ ಮಾಡುವುದನ್ನು, ಬಂದೂಕು ಹಿಡಿದು ಹೋರಾಟಗಾರರ ಮೇಲೆ ಪ್ರಯೋಗ ಮಾಡುವುದನ್ನು ಪೊಲೀಸರು ಮಾಡುವಂತಿಲ್ಲ” ಎಂದೂ ತಾಕೀತು ಮಾಡಿದೆ. ಈ ತೀರ್ಪು ಸರ್ಕಾರದ ಸ್ವೇಚ್ಛಾಚಾರವನ್ನು ತಡೆಹಿಡಿದಿದೆ. ಹೀಗಾಗಿ ಅನ್ಯಮಾರ್ಗಗಳಿಂದ ಹೋರಾಟ ನಡೆಸುವುದನ್ನು ಹತ್ತಿಕ್ಕಲು ಸರ್ಕಾರ ಆಲೋಚನೆ ಮಾಡುತ್ತಿದೆ. ಕರ್ನಾಟಕ ಸರ್ಕಾರದ ಗೃಹ ಸಚಿವರು ಕೈಗೊಂಡಿರುವ ಕ್ರಮಗಳು ಕೂಡ ಇದೇ ಆಗಿದೆ.

ಚಳವಳಿಗೆ ಬರುವವರನ್ನ ಯಾರು ಕೂಡ ಬಿಜೆಪಿ ಸಭೆಗಳಿಗೆ ಕರೆತರುವಂತೆ ಲಾರಿಗಳಲ್ಲಿ ಬಸ್‍ಗಳಲ್ಲಿ ಕರೆತರುವುದಿಲ್ಲ. ಸ್ವಯಂಪ್ರೇರಣೆಯಿಂದ ಜನ ತಾವಾಗಿಯೇ ಬರುತ್ತಾರೆ. ಹೀಗೆ ಬಂದವರಲ್ಲಿ ಯಾರು, ಯಾರು ಸಾರ್ವಜನಿಕರು ಎಂಬುದನ್ನು ಪತ್ತೆ ಹಚ್ಚಿ ಅವರನ್ನು ಹೋರಾಟದ ಸ್ಥಳದಿಂದ ಹೊರಹಾಕುವುದು ಪೊಲೀಸರ ಜವಾಬ್ದಾರಿ. ಹೋರಾಟಕ್ಕೆ ಬಂದವರಲ್ಲಿ ಕೆಲ ಗಣ್ಯರನ್ನು ಹೋರಾಟ ಸಮಿತಿಯವರು ಮಾತನಾಡಲು ಪ್ರಾರ್ಥಿಸಬಹುದು. ಅವರು ಬೇರೆಕಡೆ ನಡೆಯುವ ಹೋರಾಟ ಸಭೆಗಳಲ್ಲಿ ಘನತೆಗೌರವದಿಂದ ಮಾತನಾಡಿದ್ದರೆ ಮಾತ್ರ ಅವರನ್ನ ಮಾತನಾಡಲು ಕರೆಯುತ್ತಾರೆ. ಹಾಗಿದ್ದೂ ಹೀಗೆ ಕರೆದವರಲ್ಲಿ ಯಾರಾದರು ರಾಷ್ಟ್ರದ್ರೋಹದ ಮಾತನಾಡಿದರೆ ಅವರ ಮೇಲೆ ಖಟ್ಲೆ ಹೂಡಬಹುದು. ಆದರೆ ಅವರ ತಪ್ಪಿಗೆ ಹೋರಾಟ ನಡೆಸುವ ಮುಖ್ಯಸ್ಥರನ್ನೂ ಸಮಿತಿಯ ಸದಸ್ಯರನ್ನೂ ತಪ್ಪಿತಸ್ಥರಂತೆ ಕಾಣುವುದು ಯಾವ ನ್ಯಾಯ?

ವಿವಿಧ ಕಡೆಗಳಲ್ಲಿ ಹೋರಾಟವನ್ನು ಸಂಘಟಿಸಿರುವ ಕೆಲವರನ್ನು ಅಪರಾಧಿಗಳಂತೆ ಕಾಣುತ್ತಿರುವುದು, ಆ ಮೂಲಕ ಇತರೆ ಸಂಘಟನೆ ಮಾಡುತ್ತಿರುವವರಲ್ಲಿ ಹೆದರಿಕೆ ಉಂಟುಮಾಡುವುದರ ಮೂಲಕ ಸಿಎಎ ಮುಂತಾದ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುವ ಎಲ್ಲರನ್ನು ಭಯಭೀತಿಗೆ ಒಳಪಡಿಸಿ ದೇಶಾದ್ಯಂತ ನಡೆಯುತ್ತಿರುವ ಸಾವಿರಾರು ಚಳವಳಿಗಳನ್ನು ಏಕಕಾಲಕ್ಕೆ ಸ್ಥಗಿತಗೊಳಿಸುವ ಹುನ್ನಾರಕ್ಕೆ ಕೈ ಹಾಕಿರುವ ಗೃಹಸಚಿವರ ಗೆಯ್ಮೆಗೆ ಧಿಕ್ಕಾರ.

ಕರ್ನಾಟಕದಲ್ಲೆ ಸಿಎಎ, ಎನ್‌ಆರ್‌ಸಿ ವಿರುದ್ಧ ಇದುವರೆಗೆ 175 ದೊಡ್ಡ ಸಣ್ಣ ಹೋರಾಟಗಳೂ ವಿವಿಧ ಸ್ಥಳಗಳಲ್ಲಿ ನಡೆದಿವೆ. ಭಾರತದಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಈ ಚಳವಳಿ ನಡೆಯುತ್ತಿದೆ. ಈ ರೀತಿಯ ಬೆದರಿಕೆ ಹಾಕಿ ಹೋರಾಟವನ್ನು ಸ್ಥಗಿತ ಗೊಳಿಸುವುದು ಆಗದ ಮಾತು.

ಪೌರತ್ವ ತಿದ್ದುಪಡಿಕಾಯ್ದೆ ಅಸಂಖ್ಯಾತ ಹಿಂದುಗಳು ಎಸ್.ಟಿ, ಎಸ್.ಸಿಗಳೂ, ಮಹಮದೀಯರು, ಕ್ರಿಶ್ಚಿಯನ್ನರು ಮುಂತಾದ ಭಾರತೀಯರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತದೆ. ಆ ಮೂಲಕ ಅವರನ್ನೆಲ್ಲ ಭಾರತದ ಎರಡನೆಯ ದರ್ಜೆ ಪ್ರಜೆಗಳನ್ನಾಗಿ ಪರಿಗಣಿಸಲಾಗುತ್ತದೆ. ಪೌರತ್ವವಿಲ್ಲದ ತಬ್ಬಲಿಗಳಾಗುತ್ತಾರೆ ಈ ಜನ. ಆದ್ದರಿಂದ ಈ ಹೋರಾಟ ಅವರಿಗೆ ಜೀವನ್ಮರಣದ ಹೋರಾಟ. ಸರ್ಕಾರ ಈ ಹೋರಾಟವನ್ನೂ ಹತ್ತಿಕ್ಕಲು ಏನೇ ಪ್ರಯತ್ನ ಮಾಡಿದರೂ ಈ ಹೋರಾಟ ನಿಲ್ಲದು.

ಜನತೆಗೆ ಮೋದಿ ಸರ್ಕಾರ ಅಪಾರವಾದ ಆಶ್ವಾಸನೆಗಳನ್ನು ಕೊಟ್ಟು ಮತ ಕಸಿದುಕೊಂಡಿತು. ಆ ಆಶ್ವಾಸನೆಗಳೆಲ್ಲ ಹುಸಿಯಾದವು. ಹತಾಶತಾದ ಜನ ಸರ್ಕಾರದ ವಿರುದ್ಧ ತಿರುಗಿಬಿದ್ದಾರೆಂಬ ಭಯದಿಂದ ಮೋದಿ ಮತ್ತು ಶಾ ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಈ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಸಂಚು ಹೂಡಿದ್ದಾರೆ. ಇದು ಮತದಾರರೆಲ್ಲರಿಗೆ ಮನವರಿಕೆಯಾಗಿದೆ. ಕೆಲವರನ್ನು ಕೆಲವು ಕಾಲ ಯಾಮಾರಿಸಬಹುದು, ಎಲ್ಲರನ್ನು ಎಲ್ಲಾ ಕಾಲದಲ್ಲಿ ಯಾಮಾರಿಸಲು ಸಾಧ್ಯವಿಲ್ಲ.

ಆದ್ದರಿಂದ ಮತದಾರ ಇಂದು ಕೇಳುತ್ತಿದ್ದಾನೆ, “ಪ್ರಧಾನಿ ಮೋದಿಯವರೇ ನಿಮ್ಮ ರಾಜ್ಯಭಾರದಲ್ಲಿ ಸಮಸ್ಯೆಗಳ ಸರಮಾಲೆ ತಲೆಹಾಕಿವೆ. ಅವುಗಳಿಗೆಲ್ಲಕ್ಕೂ ನೀವೆ ಜವಾಬ್ದಾರರು, ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಕೊನೆಗಾಣಿಸಿ ಜನಸಾಮಾನ್ಯರನ್ನು ಕಾಡುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಿ. ಅದಾಗದಿದ್ದರೆ ಸಿಂಹಾಸನ ತೆರವುಮಾಡಿ” ಎಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...