Homeಮುಖಪುಟಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಈ ಹೋರಾಟ ಹತ್ತಿಕ್ಕಲಾಗದು : ಎಚ್‌.ಎಸ್‌ ದೊರೆಸ್ವಾಮಿ

ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಈ ಹೋರಾಟ ಹತ್ತಿಕ್ಕಲಾಗದು : ಎಚ್‌.ಎಸ್‌ ದೊರೆಸ್ವಾಮಿ

ಕರ್ನಾಟಕದಲ್ಲೆ ಸಿಎಎ, ಎನ್‌ಆರ್‌ಸಿ ವಿರುದ್ಧ ಇದುವರೆಗೆ 175 ದೊಡ್ಡ ಸಣ್ಣ ಹೋರಾಟಗಳೂ ವಿವಿಧ ಸ್ಥಳಗಳಲ್ಲಿ ನಡೆದಿವೆ. ಭಾರತದಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಈ ಚಳವಳಿ ನಡೆಯುತ್ತಿದೆ. ಈ ರೀತಿಯ ಬೆದರಿಕೆ ಹಾಕಿ ಹೋರಾಟವನ್ನು ಸ್ಥಗಿತ ಗೊಳಿಸುವುದು ಆಗದ ಮಾತು.

- Advertisement -
- Advertisement -

ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿಕಾಯಿದೆ ವಿರುದ್ಧವಾಗಿ ನಡೆದಿರುವ ನೂರಾರು ಹೋರಾಟ ಸಭೆಗಳು ಶಾಂತಿಯುತವಾಗಿ ನಡೆದವು. ನಾವು ಫೆಬ್ರವರಿ ತಿಂಗಳಲ್ಲಿ ನಡೆಸಿದ 4 ದಿನಗಳ ಮೋದಿ ವಿರುದ್ಧದ ಧರಣಿಯೂ ಶಾಂತಿಯುತವಾಗಿ ನಡೆಯುತ್ತಿತ್ತು ಆದರೆ ದುರದೃಷ್ಟವಶಾತ್ ಎರಡು ಕಡೆಗಳಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಹೋರಾಟದ ಸ್ಥಳಗಳಲ್ಲಿ ಇಬ್ಬರು ಅಪ್ರಬುದ್ಧ ಯುವತಿಯರು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಯ ವಿನಾಕಾರಣ ಕೂಗಿ ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದಾರೆ.

ಚಳವಳಿಯನ್ನು ಯಶಸ್ವಿಗೊಳಿಸಬೇಕೆಂಬುದು ಬೆಂಗಳೂರು ಮೊದಲುಗೊಂಡು ಇಲ್ಲಿಯವರೆಗೆ ನಡೆದಿರುವ ಎಲ್ಲಾ ಹೋರಾಟಗಳನ್ನು ರೂಪಿಸುವವರ ಆಶಯವೇ ಹೊರತು, ಚಳವಳಿಯನ್ನು ವಿಫಲಗೊಳಿಸುವುದಲ್ಲ. ರಾಷ್ಟ್ರವಿರೋಧಿ ಘೋಷಣೆ ಹಾಕುವವರನ್ನು ಮತ್ತು ಆ ರೀತಿ ಮಾತನಾಡುವವರನ್ನು ಕರೆದು ಮಾತನಾಡಿಸುವುದನ್ನು ಈ ಸಭೆಗಳನ್ನೂ ನಡೆಸುವವರು ಬಯಸುವುದೇ ಇಲ್ಲ. ಅಮೂಲ್ಯಳನ್ನೆ ತೆಗೆದುಕೋಳ್ಳಿ ಆಕೆ ಮೊದಲು ನಡೆದ ಎರಡು ಸಭೆಗಳಲ್ಲಿ ಯಾವುದೇ ರಾಷ್ಟ್ರವಿರೋಧಿ ಮಾತುಗಳನ್ನು ಆಡಿಲ್ಲ. ಆದ್ದರಿಂದಲೇ ಸ್ವಾತಂತ್ರ್ಯ ಉದ್ಯಾನದ ಸಭೆಗೆ ಸಂಘಟಿತರು ಆಕೆಯನ್ನು ಮಾತನಾಡಲು ಆಹ್ವಾನಿಸಿರಬಹುದು. ಅಂತಹದರಲ್ಲಿ ಸಂಘಟಕರನ್ನು ಅಪರಾಧಿಸ್ಥಾನದಲ್ಲಿ ನಿಲ್ಲಿಸುವುದು ಒಪ್ಪತಕ್ಕ ಮಾತಲ್ಲ.

ಸರ್ವೋಚ್ಛ ನ್ಯಾಯಾಲಯ ಹೇಳಿತು. “ಸರ್ಕಾರದ ನಿಲುವನ್ನು ವಿರೋಧಿಸುವ ಹಕ್ಕನ್ನು ನಮ್ಮ ರಾಜ್ಯಾಂಗ ಪ್ರಜೆಗೆ ನೀಡಿದೆ. ಅದಕ್ಕಾಗಿ ಸಭೆ ಸಮ್ಮೇಳನಗಳನ್ನು ಹೋರಾಟವನ್ನು ಆಯೋಜಿಸುವುದು ಪ್ರಜೆಯ ಹಕ್ಕು. 144ನೇ ಸೆಕ್ಷನ್ ಹಾಕಿ ಶಾಂತಿಯುತವಾಗಿ ನಡೆಯುವ ಹೋರಾಟವನ್ನು ಹತ್ತಿಕ್ಕುವುದು, ಲಾಠಿ ಚಾರ್ಜ್‍ ಮಾಡುವುದನ್ನು, ಬಂದೂಕು ಹಿಡಿದು ಹೋರಾಟಗಾರರ ಮೇಲೆ ಪ್ರಯೋಗ ಮಾಡುವುದನ್ನು ಪೊಲೀಸರು ಮಾಡುವಂತಿಲ್ಲ” ಎಂದೂ ತಾಕೀತು ಮಾಡಿದೆ. ಈ ತೀರ್ಪು ಸರ್ಕಾರದ ಸ್ವೇಚ್ಛಾಚಾರವನ್ನು ತಡೆಹಿಡಿದಿದೆ. ಹೀಗಾಗಿ ಅನ್ಯಮಾರ್ಗಗಳಿಂದ ಹೋರಾಟ ನಡೆಸುವುದನ್ನು ಹತ್ತಿಕ್ಕಲು ಸರ್ಕಾರ ಆಲೋಚನೆ ಮಾಡುತ್ತಿದೆ. ಕರ್ನಾಟಕ ಸರ್ಕಾರದ ಗೃಹ ಸಚಿವರು ಕೈಗೊಂಡಿರುವ ಕ್ರಮಗಳು ಕೂಡ ಇದೇ ಆಗಿದೆ.

ಚಳವಳಿಗೆ ಬರುವವರನ್ನ ಯಾರು ಕೂಡ ಬಿಜೆಪಿ ಸಭೆಗಳಿಗೆ ಕರೆತರುವಂತೆ ಲಾರಿಗಳಲ್ಲಿ ಬಸ್‍ಗಳಲ್ಲಿ ಕರೆತರುವುದಿಲ್ಲ. ಸ್ವಯಂಪ್ರೇರಣೆಯಿಂದ ಜನ ತಾವಾಗಿಯೇ ಬರುತ್ತಾರೆ. ಹೀಗೆ ಬಂದವರಲ್ಲಿ ಯಾರು, ಯಾರು ಸಾರ್ವಜನಿಕರು ಎಂಬುದನ್ನು ಪತ್ತೆ ಹಚ್ಚಿ ಅವರನ್ನು ಹೋರಾಟದ ಸ್ಥಳದಿಂದ ಹೊರಹಾಕುವುದು ಪೊಲೀಸರ ಜವಾಬ್ದಾರಿ. ಹೋರಾಟಕ್ಕೆ ಬಂದವರಲ್ಲಿ ಕೆಲ ಗಣ್ಯರನ್ನು ಹೋರಾಟ ಸಮಿತಿಯವರು ಮಾತನಾಡಲು ಪ್ರಾರ್ಥಿಸಬಹುದು. ಅವರು ಬೇರೆಕಡೆ ನಡೆಯುವ ಹೋರಾಟ ಸಭೆಗಳಲ್ಲಿ ಘನತೆಗೌರವದಿಂದ ಮಾತನಾಡಿದ್ದರೆ ಮಾತ್ರ ಅವರನ್ನ ಮಾತನಾಡಲು ಕರೆಯುತ್ತಾರೆ. ಹಾಗಿದ್ದೂ ಹೀಗೆ ಕರೆದವರಲ್ಲಿ ಯಾರಾದರು ರಾಷ್ಟ್ರದ್ರೋಹದ ಮಾತನಾಡಿದರೆ ಅವರ ಮೇಲೆ ಖಟ್ಲೆ ಹೂಡಬಹುದು. ಆದರೆ ಅವರ ತಪ್ಪಿಗೆ ಹೋರಾಟ ನಡೆಸುವ ಮುಖ್ಯಸ್ಥರನ್ನೂ ಸಮಿತಿಯ ಸದಸ್ಯರನ್ನೂ ತಪ್ಪಿತಸ್ಥರಂತೆ ಕಾಣುವುದು ಯಾವ ನ್ಯಾಯ?

ವಿವಿಧ ಕಡೆಗಳಲ್ಲಿ ಹೋರಾಟವನ್ನು ಸಂಘಟಿಸಿರುವ ಕೆಲವರನ್ನು ಅಪರಾಧಿಗಳಂತೆ ಕಾಣುತ್ತಿರುವುದು, ಆ ಮೂಲಕ ಇತರೆ ಸಂಘಟನೆ ಮಾಡುತ್ತಿರುವವರಲ್ಲಿ ಹೆದರಿಕೆ ಉಂಟುಮಾಡುವುದರ ಮೂಲಕ ಸಿಎಎ ಮುಂತಾದ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುವ ಎಲ್ಲರನ್ನು ಭಯಭೀತಿಗೆ ಒಳಪಡಿಸಿ ದೇಶಾದ್ಯಂತ ನಡೆಯುತ್ತಿರುವ ಸಾವಿರಾರು ಚಳವಳಿಗಳನ್ನು ಏಕಕಾಲಕ್ಕೆ ಸ್ಥಗಿತಗೊಳಿಸುವ ಹುನ್ನಾರಕ್ಕೆ ಕೈ ಹಾಕಿರುವ ಗೃಹಸಚಿವರ ಗೆಯ್ಮೆಗೆ ಧಿಕ್ಕಾರ.

ಕರ್ನಾಟಕದಲ್ಲೆ ಸಿಎಎ, ಎನ್‌ಆರ್‌ಸಿ ವಿರುದ್ಧ ಇದುವರೆಗೆ 175 ದೊಡ್ಡ ಸಣ್ಣ ಹೋರಾಟಗಳೂ ವಿವಿಧ ಸ್ಥಳಗಳಲ್ಲಿ ನಡೆದಿವೆ. ಭಾರತದಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಈ ಚಳವಳಿ ನಡೆಯುತ್ತಿದೆ. ಈ ರೀತಿಯ ಬೆದರಿಕೆ ಹಾಕಿ ಹೋರಾಟವನ್ನು ಸ್ಥಗಿತ ಗೊಳಿಸುವುದು ಆಗದ ಮಾತು.

ಪೌರತ್ವ ತಿದ್ದುಪಡಿಕಾಯ್ದೆ ಅಸಂಖ್ಯಾತ ಹಿಂದುಗಳು ಎಸ್.ಟಿ, ಎಸ್.ಸಿಗಳೂ, ಮಹಮದೀಯರು, ಕ್ರಿಶ್ಚಿಯನ್ನರು ಮುಂತಾದ ಭಾರತೀಯರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತದೆ. ಆ ಮೂಲಕ ಅವರನ್ನೆಲ್ಲ ಭಾರತದ ಎರಡನೆಯ ದರ್ಜೆ ಪ್ರಜೆಗಳನ್ನಾಗಿ ಪರಿಗಣಿಸಲಾಗುತ್ತದೆ. ಪೌರತ್ವವಿಲ್ಲದ ತಬ್ಬಲಿಗಳಾಗುತ್ತಾರೆ ಈ ಜನ. ಆದ್ದರಿಂದ ಈ ಹೋರಾಟ ಅವರಿಗೆ ಜೀವನ್ಮರಣದ ಹೋರಾಟ. ಸರ್ಕಾರ ಈ ಹೋರಾಟವನ್ನೂ ಹತ್ತಿಕ್ಕಲು ಏನೇ ಪ್ರಯತ್ನ ಮಾಡಿದರೂ ಈ ಹೋರಾಟ ನಿಲ್ಲದು.

ಜನತೆಗೆ ಮೋದಿ ಸರ್ಕಾರ ಅಪಾರವಾದ ಆಶ್ವಾಸನೆಗಳನ್ನು ಕೊಟ್ಟು ಮತ ಕಸಿದುಕೊಂಡಿತು. ಆ ಆಶ್ವಾಸನೆಗಳೆಲ್ಲ ಹುಸಿಯಾದವು. ಹತಾಶತಾದ ಜನ ಸರ್ಕಾರದ ವಿರುದ್ಧ ತಿರುಗಿಬಿದ್ದಾರೆಂಬ ಭಯದಿಂದ ಮೋದಿ ಮತ್ತು ಶಾ ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಈ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಸಂಚು ಹೂಡಿದ್ದಾರೆ. ಇದು ಮತದಾರರೆಲ್ಲರಿಗೆ ಮನವರಿಕೆಯಾಗಿದೆ. ಕೆಲವರನ್ನು ಕೆಲವು ಕಾಲ ಯಾಮಾರಿಸಬಹುದು, ಎಲ್ಲರನ್ನು ಎಲ್ಲಾ ಕಾಲದಲ್ಲಿ ಯಾಮಾರಿಸಲು ಸಾಧ್ಯವಿಲ್ಲ.

ಆದ್ದರಿಂದ ಮತದಾರ ಇಂದು ಕೇಳುತ್ತಿದ್ದಾನೆ, “ಪ್ರಧಾನಿ ಮೋದಿಯವರೇ ನಿಮ್ಮ ರಾಜ್ಯಭಾರದಲ್ಲಿ ಸಮಸ್ಯೆಗಳ ಸರಮಾಲೆ ತಲೆಹಾಕಿವೆ. ಅವುಗಳಿಗೆಲ್ಲಕ್ಕೂ ನೀವೆ ಜವಾಬ್ದಾರರು, ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಕೊನೆಗಾಣಿಸಿ ಜನಸಾಮಾನ್ಯರನ್ನು ಕಾಡುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಿ. ಅದಾಗದಿದ್ದರೆ ಸಿಂಹಾಸನ ತೆರವುಮಾಡಿ” ಎಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...