Homeಅಂಕಣಗಳುಬುಧನ ಜಾತಕ ಶಂಭಾ ಜೋಷಿ

ಬುಧನ ಜಾತಕ ಶಂಭಾ ಜೋಷಿ

- Advertisement -
- Advertisement -

“ಭಾಷೆಯೊಳಗಿನ ಪದಗಳಿಗೆ ಇತಿಹಾಸ ಉಂಟು. ಇದರಿಂದಾಗಿ, ಯಾವುದೊಂದು ಪದದ ಅರ್ಥವು ಬದಲಾಗುವುದರ ಹಿಂದಿನ ಇತಿಹಾಸವು ಅರಿಕೆಗೆ ಬರುತ್ತದೆ. ಜೀವನ ಜೀವಿತದ ಪ್ರತಿಬಿಂಬವು ಭಾಷೆಯಲ್ಲಿ ಒಡಮೂಡಿ ನಿಂತಿದೆ” ಎನ್ನುವ ಶಂಭಾ ಜೋಷಿ ಮಾನವನ ಭಾಷಾಪೂರ್ವ ಹಂತಕ್ಕೆ ಹೋಗಿ ಅಲ್ಲಿಂದ ನರನನ್ನು ರೂಪಿಸಿರುವ ಪ್ರಜ್ಞೆ ಮತ್ತು ಬುದ್ಧಿಗಳ ಮೂಲಕ್ಕೆ ಪಯಣಿಸುತ್ತಾರೆ. ಹಿಮ್ಮುಖವಾದ ಈ ಪಯಣಕ್ಕೆ ಕಾರಣವೇನು ಎನ್ನುವುದಾದರೆ ಪಾ ವೆಂ ಆಚಾರ್ಯರವರು ಗುರುತಿಸುವಂತೆ, “ಮನುಷ್ಯನ ಶ್ರೇಯಸ್ಸು ಯಾವುದರಲ್ಲಿದೆ? ಅವನ ಅಶ್ರೇಯಸ್ಸು ಯಾರಿಂದ ಆಗಿದೆ?” ಎಂಬುದು ಶಂಭಾರವರ ಪ್ರಧಾನ ತಾತ್ವಿಕ ಕಾಳಜಿ.

ಧರ್ಮ ಎಂದರೆ ವಿಶ್ವ ನಿಯಮ. ಆದರೆ, ಧರ್ಮ: ಸಂಸ್ಕೃತಿಯ ಮೂಲ ಪ್ರಚೋದನೆ ಮಾನವನ ಅಂತರಂಗದಲ್ಲಿ ಉಂಟು ಎನ್ನುವ ಬುಧನ ಜಾತಕವನ್ನು ಓದುವಾಗ “ತನ್ನ ನೇರಕ್ಕೆ ನೋಡುವ ಬುದ್ಧಿಗೆ, ಭಾಷೆಯ ಕಟ್ಟಡದ ತೊಡಕು ಅರ್ಥವಾಗುವುದಿಲ್ಲ. ಭಾಷೆಯು ವೈವೆತ್ತಿರುವಲ್ಲಿ, ಪ್ರಜ್ಞೆಯ ಅಂಗವಾದ ಮನಸ್ಸಿನ ಕೈವಾಡವಿದೆ” ಎನ್ನುವ ಅಂಶವನ್ನು ಅರಿವಿಗೆಟುಕಿಸುವಲ್ಲಿ ಶಂಭಾ ಯಶಸ್ವಿಯಾಗುತ್ತಾರೆ. ಆದರೆ ಶಂಭಾ ಜೊತೆಗೆ ತಾತ್ವಿಕವಾಗಿ ಪ್ರಯಾಣ ಮಾಡುವುದು ಅಷ್ಟೇನೂ ಸುಲಭವಲ್ಲ. ಒಬ್ಬ ಓದುಗನಿಗೆ ತಾತ್ವಿಕ ತಿಳಿವಳಿಕೆ, ಆಧ್ಯಾತ್ಮದ ತಾಂತ್ರಿಕ ತಿಳಿವಳಿಕೆ ಮತ್ತು ವೇದ ಪುರಾಣ ಇತಿಹಾಸಗಳ ಕೀಲಿ ಪ್ರಜ್ಞೆಗಳಿರಬೇಕು. ಪಾಶ್ಚಾತ್ಯ ಮತ್ತು ಪೌರಾತ್ಯಗಳೆರಡನ್ನೂ ಒಳಗೊಂಡು; ಅವುಗಳಿಂದ ಅತೀತವಾಗಿ ನಿಂತು ವಿವೇಚಿಸಲೂ ತಿಳಿದಿರಬೇಕು. ಮಾನವಶಾಸ್ತ್ರ, ಸಾಂಸ್ಕೃತಿಕ ಚರಿತ್ರೆ ಮತ್ತು ಮನೋವಿಜ್ಞಾನಗಳ ಮೂಲತತ್ವಗಳೂ ತಿಳಿದಿರಬೇಕು. ಇಲ್ಲವಾದರೆ, “ವೇದ ಸುಳ್ಳನ್ನು ನಂಬಹಚ್ಚಿದೆ. ರಾಮಾಯಣ, ಮಹಾಭಾರತ, ಪುರಾಣಾದಿಗಳು ಅಂತರ್ ವಿಸಂಗತಿಗಳಿಂದ ಕೂಡಿವೆ. ಮಾನವಧರ್ಮವನ್ನು ನಷ್ಟ ಮಾಡಿ, ಮೋಕ್ಷಕಾಮಿ ನರಧರ್ಮ ಎತ್ತಿಕಟ್ಟಲು ವ್ಯವಸ್ಥಿತ ರೀತಿಯಿಂದ ರಚನೆಗೊಂಡಿದೆ. ಜೀವನ್ಮುಕ್ತಿಯನ್ನು ಪ್ರತಿಪಾದಿಸುವ ಸನ್ಯಾಸಿ ಸಂತರು ಉನ್ಮಾದಕ್ಕೊಳಗಾಗಿ ಸತ್ಯವನ್ನು ಅರಿಯಲಾರದ ಅಜ್ಞರು; ಇಲ್ಲವೇ ವಂಚಕರು. ಪರಂಪರೆಯ ಕಣ್ಕಟ್ಟನ್ನು ಅರಿಯದೇ ತತ್ವಜ್ಞಾನ ಪ್ರತಿಪಾದಿಸಿರುವ ರಾಮಕೃಷ್ಣ ಪರಮಹಂಸ, ಅರವಿಂದ, ಟಿಳಕ್, ಗಾಂಧೀ, ರಾಧಾಕೃಷ್ಣನ್ ಮೊದಲಾದವರೆಲ್ಲ ಮರುಳರು; ಅರಿತೂ ಪ್ರತಿಪಾದಿಸಿದ್ದರೆ ಮೋಸಗಾರರು. ಭಾರತೀಯರು ಧರ್ಮಗ್ರಂಥಗಳ ಸಮ್ಮೋಹನಕ್ಕೆ ಒಳಗಾಗಿದ್ದಾರೆ. ಅವರ ತಲೆ ತಿರುಗಿಹೋಗಿದೆ ! (ಬ್ರೈನ್‍ವಾಶ್ ಆಗಿದೆ) ಅಂದರೆ, ಭಾರತದಲ್ಲಿ ಸಾಂಸ್ಕೃತಿಕ ತಿರುವುಮುರುವು ಉಂಟಾಗಿದೆ; ಸಾಂಸ್ಕೃತಿಕ ಪಲ್ಲಟವಾಗಿದೆ. ಈ ಸಾಂಸ್ಕೃತಿಕ ಪಲ್ಲಟವೇ ಭಾರತೀಯರ ಅವನತಿಗೆ ಕಾರಣವಾಗಿದೆ” ಎಂದು ನಿಷ್ಟುರಿ ತತ್ವಜ್ಞಾನಿಯೊಬ್ಬ ಗರ್ಜಿಸಿದಂತೆ ತೋರುತ್ತದೆ. ಆದರೆ, “ಭಾರತೀಯರು ತಮ್ಮ ಮೂಲ ಪರಂಪರೆಯನ್ನು ಅರಿತು, ಅದನ್ನು ಆಚರಣೆಯಲ್ಲಿ ತಂದಾಗ ಮಾತ್ರ ಅವರ ಉದ್ಧಾರ ಸಾಧ್ಯ. ‘ವೈವಸ್ವತಮನು ಪ್ರಣೀತ ಮಾನವಧರ್ಮ’ ಇದು ಭಾರತೀಯರ ಧಾರ್ಮಿಕ ಪರಂಪರೆಯ ಮೂಲ ಹೆಸರು. ಪ್ರಪಂಚದಲ್ಲಿ ಧರ್ಮ ಅನ್ನುವುದಿದ್ದರೆ, ಅದು ಮಾನವ ಧರ್ಮ ಒಂದೇ” ಎಂಬುದು ಅವರ ಗ್ರಹಿಕೆ ಮತ್ತು ಸಮರ್ಥನೆಯ ಅರಿಕೆ.

ಭಾರತೀಯರು ತಲೆಯ ಮೇಲೆ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡಿರುವ ಪವಿತ್ರಗ್ರಂಥಗಳು ಹೇಗೆ ವೈವಸ್ವತಸತ್ಯವನ್ನು ಬುದ್ಧಿಪೂರ್ವಕವಾಗಿ ಮರೆಮಾಚಿವೆಯೆಂಬುದನ್ನು ಉದಾಹರಣೆಗಳೊಂದಿಗೆ ಶಂಭಾ ಅವರು ಪ್ರತಿಪಾದಿಸಿ ವ್ಯಾಸ, ವಾಲ್ಮೀಕಿ, ವಶಿಷ್ಠಾದಿಗಳೆಲ್ಲಾ ಹೇಗೆ ಎಡವಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಾರೆ.

ಭಗವದ್ಗೀತೆಯಲ್ಲಿರುವ ಎಡವಟ್ಟುಗಳನ್ನು ತೋರುವ ಶಂಭಾ “ಉದ್ಧರೇತ್ ಆತ್ಮನಾತ್ಮಾನಂ” ಎಂದು ಉಪದೇಶ ಮಾಡುವ ಅ-ಮೃತ ಸ್ವರೂಪ ಈ ಭಗವಂತನು. ಆ ಬಳಿಕ, ನನಗೇ ಶರಣು ಬಾ ಎಂದು ಅಪ್ಪಣೆ ಕೊಡುತ್ತಾನೆ! ಎಂದು ವ್ಯಂಗ್ಯವಾಡುತ್ತಾರೆ.

ನಿಜವಾದ ದೇವರು ಯಾರು? ಅವನ ಐತಿಹಾಸಿಕ ಸ್ವರೂಪವೇನು ಎಂದೆಲ್ಲಾ ಎಳೆ ಹಿಡಿದುಹೋಗುವ ಶಂಭಾರವರ ಅಧ್ಯಯನ ಮತ್ತು ವಿಶ್ಲೇಷಣೆಗಳನ್ನು ಒಪ್ಪದ ಕೆ ಎಸ್ ನಾರಾಯಣಾಚಾರ್ಯರಂತಹ ಸಂಪ್ರದಾಯವಾದಿಗಳು ಅವರನ್ನು ಕಠೋರವಾಗಿ ಟೀಕಿಸಿದ್ದು ಉಂಟು. ಆದರೆ, ಅವರ ಟೀಕೆಯಲ್ಲಿ ವ್ಯಕ್ತಿಗತವಾಗಿ ನಿಂದನೆಯ ಮಟ್ಟಕ್ಕೆ ಹೋಗುವರೇ ಹೊರತು, ಶಂಭಾ ಎತ್ತುವ ಪ್ರಶ್ನೆಗಳಿಗೆ ಉತ್ತರಿಸಲು ಅಥವಾ ಪರ್ಯಾಯವಾಗಿ ಮತ್ತೊಂದು ಸಂಶೋಧನಾ ಶಿಸ್ತನ್ನು ತೋರಿಸಲು ವಿಫಲರಾಗುತ್ತಾರೆ.

ಬುದ್ಧಿ, ಪ್ರಜ್ಞೆ, ಮಾನವ, ನರ, ಧರ್ಮ, ಸಂಸ್ಕೃತಿ ಹೀಗೆ ಎಲ್ಲವನ್ನೂ ಪದರಪದರವಾಗಿ ಅರಿವಿಗೆ ಎಟುಕಿಸುವ ಈ ಬುಧನ ಜಾತಕ ಅರಿಯಲು ಬಹು ತಾಳ್ಮೆ ಮತ್ತು ಎಚ್ಚರಿಕೆ ಬೇಕು.

ಈ ಪುಟ್ಟ ಲೇಖನದಲ್ಲಿ ಅವನ್ನು ಸಂಗ್ರಹಿಸಿ ಒಪ್ಪಿಸಲು ಸಾಧ್ಯವೇ ಇಲ್ಲ. ಆದರೆ ಇದೊಂದು ಪರಿಚಯಾತ್ಮಕ ಲೇಖನವಾಗಿ ಓದುಗರು ಶಂಭಾ ಕೃತಿಗಳ ಕಡೆಗೆ ಹೊರಳಲಿ ಮತ್ತು ತಿಳಿಯುವ ಪ್ರಯತ್ನಗಳನ್ನು ಮಾಡಲಿ ಎಂಬ ಆಶಯವನ್ನು ಪ್ರಾಮಾಣಿಕವಾಗಿ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...