Homeಅಂಕಣಗಳುಬುಧನ ಜಾತಕ ಶಂಭಾ ಜೋಷಿ

ಬುಧನ ಜಾತಕ ಶಂಭಾ ಜೋಷಿ

- Advertisement -
- Advertisement -

“ಭಾಷೆಯೊಳಗಿನ ಪದಗಳಿಗೆ ಇತಿಹಾಸ ಉಂಟು. ಇದರಿಂದಾಗಿ, ಯಾವುದೊಂದು ಪದದ ಅರ್ಥವು ಬದಲಾಗುವುದರ ಹಿಂದಿನ ಇತಿಹಾಸವು ಅರಿಕೆಗೆ ಬರುತ್ತದೆ. ಜೀವನ ಜೀವಿತದ ಪ್ರತಿಬಿಂಬವು ಭಾಷೆಯಲ್ಲಿ ಒಡಮೂಡಿ ನಿಂತಿದೆ” ಎನ್ನುವ ಶಂಭಾ ಜೋಷಿ ಮಾನವನ ಭಾಷಾಪೂರ್ವ ಹಂತಕ್ಕೆ ಹೋಗಿ ಅಲ್ಲಿಂದ ನರನನ್ನು ರೂಪಿಸಿರುವ ಪ್ರಜ್ಞೆ ಮತ್ತು ಬುದ್ಧಿಗಳ ಮೂಲಕ್ಕೆ ಪಯಣಿಸುತ್ತಾರೆ. ಹಿಮ್ಮುಖವಾದ ಈ ಪಯಣಕ್ಕೆ ಕಾರಣವೇನು ಎನ್ನುವುದಾದರೆ ಪಾ ವೆಂ ಆಚಾರ್ಯರವರು ಗುರುತಿಸುವಂತೆ, “ಮನುಷ್ಯನ ಶ್ರೇಯಸ್ಸು ಯಾವುದರಲ್ಲಿದೆ? ಅವನ ಅಶ್ರೇಯಸ್ಸು ಯಾರಿಂದ ಆಗಿದೆ?” ಎಂಬುದು ಶಂಭಾರವರ ಪ್ರಧಾನ ತಾತ್ವಿಕ ಕಾಳಜಿ.

ಧರ್ಮ ಎಂದರೆ ವಿಶ್ವ ನಿಯಮ. ಆದರೆ, ಧರ್ಮ: ಸಂಸ್ಕೃತಿಯ ಮೂಲ ಪ್ರಚೋದನೆ ಮಾನವನ ಅಂತರಂಗದಲ್ಲಿ ಉಂಟು ಎನ್ನುವ ಬುಧನ ಜಾತಕವನ್ನು ಓದುವಾಗ “ತನ್ನ ನೇರಕ್ಕೆ ನೋಡುವ ಬುದ್ಧಿಗೆ, ಭಾಷೆಯ ಕಟ್ಟಡದ ತೊಡಕು ಅರ್ಥವಾಗುವುದಿಲ್ಲ. ಭಾಷೆಯು ವೈವೆತ್ತಿರುವಲ್ಲಿ, ಪ್ರಜ್ಞೆಯ ಅಂಗವಾದ ಮನಸ್ಸಿನ ಕೈವಾಡವಿದೆ” ಎನ್ನುವ ಅಂಶವನ್ನು ಅರಿವಿಗೆಟುಕಿಸುವಲ್ಲಿ ಶಂಭಾ ಯಶಸ್ವಿಯಾಗುತ್ತಾರೆ. ಆದರೆ ಶಂಭಾ ಜೊತೆಗೆ ತಾತ್ವಿಕವಾಗಿ ಪ್ರಯಾಣ ಮಾಡುವುದು ಅಷ್ಟೇನೂ ಸುಲಭವಲ್ಲ. ಒಬ್ಬ ಓದುಗನಿಗೆ ತಾತ್ವಿಕ ತಿಳಿವಳಿಕೆ, ಆಧ್ಯಾತ್ಮದ ತಾಂತ್ರಿಕ ತಿಳಿವಳಿಕೆ ಮತ್ತು ವೇದ ಪುರಾಣ ಇತಿಹಾಸಗಳ ಕೀಲಿ ಪ್ರಜ್ಞೆಗಳಿರಬೇಕು. ಪಾಶ್ಚಾತ್ಯ ಮತ್ತು ಪೌರಾತ್ಯಗಳೆರಡನ್ನೂ ಒಳಗೊಂಡು; ಅವುಗಳಿಂದ ಅತೀತವಾಗಿ ನಿಂತು ವಿವೇಚಿಸಲೂ ತಿಳಿದಿರಬೇಕು. ಮಾನವಶಾಸ್ತ್ರ, ಸಾಂಸ್ಕೃತಿಕ ಚರಿತ್ರೆ ಮತ್ತು ಮನೋವಿಜ್ಞಾನಗಳ ಮೂಲತತ್ವಗಳೂ ತಿಳಿದಿರಬೇಕು. ಇಲ್ಲವಾದರೆ, “ವೇದ ಸುಳ್ಳನ್ನು ನಂಬಹಚ್ಚಿದೆ. ರಾಮಾಯಣ, ಮಹಾಭಾರತ, ಪುರಾಣಾದಿಗಳು ಅಂತರ್ ವಿಸಂಗತಿಗಳಿಂದ ಕೂಡಿವೆ. ಮಾನವಧರ್ಮವನ್ನು ನಷ್ಟ ಮಾಡಿ, ಮೋಕ್ಷಕಾಮಿ ನರಧರ್ಮ ಎತ್ತಿಕಟ್ಟಲು ವ್ಯವಸ್ಥಿತ ರೀತಿಯಿಂದ ರಚನೆಗೊಂಡಿದೆ. ಜೀವನ್ಮುಕ್ತಿಯನ್ನು ಪ್ರತಿಪಾದಿಸುವ ಸನ್ಯಾಸಿ ಸಂತರು ಉನ್ಮಾದಕ್ಕೊಳಗಾಗಿ ಸತ್ಯವನ್ನು ಅರಿಯಲಾರದ ಅಜ್ಞರು; ಇಲ್ಲವೇ ವಂಚಕರು. ಪರಂಪರೆಯ ಕಣ್ಕಟ್ಟನ್ನು ಅರಿಯದೇ ತತ್ವಜ್ಞಾನ ಪ್ರತಿಪಾದಿಸಿರುವ ರಾಮಕೃಷ್ಣ ಪರಮಹಂಸ, ಅರವಿಂದ, ಟಿಳಕ್, ಗಾಂಧೀ, ರಾಧಾಕೃಷ್ಣನ್ ಮೊದಲಾದವರೆಲ್ಲ ಮರುಳರು; ಅರಿತೂ ಪ್ರತಿಪಾದಿಸಿದ್ದರೆ ಮೋಸಗಾರರು. ಭಾರತೀಯರು ಧರ್ಮಗ್ರಂಥಗಳ ಸಮ್ಮೋಹನಕ್ಕೆ ಒಳಗಾಗಿದ್ದಾರೆ. ಅವರ ತಲೆ ತಿರುಗಿಹೋಗಿದೆ ! (ಬ್ರೈನ್‍ವಾಶ್ ಆಗಿದೆ) ಅಂದರೆ, ಭಾರತದಲ್ಲಿ ಸಾಂಸ್ಕೃತಿಕ ತಿರುವುಮುರುವು ಉಂಟಾಗಿದೆ; ಸಾಂಸ್ಕೃತಿಕ ಪಲ್ಲಟವಾಗಿದೆ. ಈ ಸಾಂಸ್ಕೃತಿಕ ಪಲ್ಲಟವೇ ಭಾರತೀಯರ ಅವನತಿಗೆ ಕಾರಣವಾಗಿದೆ” ಎಂದು ನಿಷ್ಟುರಿ ತತ್ವಜ್ಞಾನಿಯೊಬ್ಬ ಗರ್ಜಿಸಿದಂತೆ ತೋರುತ್ತದೆ. ಆದರೆ, “ಭಾರತೀಯರು ತಮ್ಮ ಮೂಲ ಪರಂಪರೆಯನ್ನು ಅರಿತು, ಅದನ್ನು ಆಚರಣೆಯಲ್ಲಿ ತಂದಾಗ ಮಾತ್ರ ಅವರ ಉದ್ಧಾರ ಸಾಧ್ಯ. ‘ವೈವಸ್ವತಮನು ಪ್ರಣೀತ ಮಾನವಧರ್ಮ’ ಇದು ಭಾರತೀಯರ ಧಾರ್ಮಿಕ ಪರಂಪರೆಯ ಮೂಲ ಹೆಸರು. ಪ್ರಪಂಚದಲ್ಲಿ ಧರ್ಮ ಅನ್ನುವುದಿದ್ದರೆ, ಅದು ಮಾನವ ಧರ್ಮ ಒಂದೇ” ಎಂಬುದು ಅವರ ಗ್ರಹಿಕೆ ಮತ್ತು ಸಮರ್ಥನೆಯ ಅರಿಕೆ.

ಭಾರತೀಯರು ತಲೆಯ ಮೇಲೆ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡಿರುವ ಪವಿತ್ರಗ್ರಂಥಗಳು ಹೇಗೆ ವೈವಸ್ವತಸತ್ಯವನ್ನು ಬುದ್ಧಿಪೂರ್ವಕವಾಗಿ ಮರೆಮಾಚಿವೆಯೆಂಬುದನ್ನು ಉದಾಹರಣೆಗಳೊಂದಿಗೆ ಶಂಭಾ ಅವರು ಪ್ರತಿಪಾದಿಸಿ ವ್ಯಾಸ, ವಾಲ್ಮೀಕಿ, ವಶಿಷ್ಠಾದಿಗಳೆಲ್ಲಾ ಹೇಗೆ ಎಡವಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಾರೆ.

ಭಗವದ್ಗೀತೆಯಲ್ಲಿರುವ ಎಡವಟ್ಟುಗಳನ್ನು ತೋರುವ ಶಂಭಾ “ಉದ್ಧರೇತ್ ಆತ್ಮನಾತ್ಮಾನಂ” ಎಂದು ಉಪದೇಶ ಮಾಡುವ ಅ-ಮೃತ ಸ್ವರೂಪ ಈ ಭಗವಂತನು. ಆ ಬಳಿಕ, ನನಗೇ ಶರಣು ಬಾ ಎಂದು ಅಪ್ಪಣೆ ಕೊಡುತ್ತಾನೆ! ಎಂದು ವ್ಯಂಗ್ಯವಾಡುತ್ತಾರೆ.

ನಿಜವಾದ ದೇವರು ಯಾರು? ಅವನ ಐತಿಹಾಸಿಕ ಸ್ವರೂಪವೇನು ಎಂದೆಲ್ಲಾ ಎಳೆ ಹಿಡಿದುಹೋಗುವ ಶಂಭಾರವರ ಅಧ್ಯಯನ ಮತ್ತು ವಿಶ್ಲೇಷಣೆಗಳನ್ನು ಒಪ್ಪದ ಕೆ ಎಸ್ ನಾರಾಯಣಾಚಾರ್ಯರಂತಹ ಸಂಪ್ರದಾಯವಾದಿಗಳು ಅವರನ್ನು ಕಠೋರವಾಗಿ ಟೀಕಿಸಿದ್ದು ಉಂಟು. ಆದರೆ, ಅವರ ಟೀಕೆಯಲ್ಲಿ ವ್ಯಕ್ತಿಗತವಾಗಿ ನಿಂದನೆಯ ಮಟ್ಟಕ್ಕೆ ಹೋಗುವರೇ ಹೊರತು, ಶಂಭಾ ಎತ್ತುವ ಪ್ರಶ್ನೆಗಳಿಗೆ ಉತ್ತರಿಸಲು ಅಥವಾ ಪರ್ಯಾಯವಾಗಿ ಮತ್ತೊಂದು ಸಂಶೋಧನಾ ಶಿಸ್ತನ್ನು ತೋರಿಸಲು ವಿಫಲರಾಗುತ್ತಾರೆ.

ಬುದ್ಧಿ, ಪ್ರಜ್ಞೆ, ಮಾನವ, ನರ, ಧರ್ಮ, ಸಂಸ್ಕೃತಿ ಹೀಗೆ ಎಲ್ಲವನ್ನೂ ಪದರಪದರವಾಗಿ ಅರಿವಿಗೆ ಎಟುಕಿಸುವ ಈ ಬುಧನ ಜಾತಕ ಅರಿಯಲು ಬಹು ತಾಳ್ಮೆ ಮತ್ತು ಎಚ್ಚರಿಕೆ ಬೇಕು.

ಈ ಪುಟ್ಟ ಲೇಖನದಲ್ಲಿ ಅವನ್ನು ಸಂಗ್ರಹಿಸಿ ಒಪ್ಪಿಸಲು ಸಾಧ್ಯವೇ ಇಲ್ಲ. ಆದರೆ ಇದೊಂದು ಪರಿಚಯಾತ್ಮಕ ಲೇಖನವಾಗಿ ಓದುಗರು ಶಂಭಾ ಕೃತಿಗಳ ಕಡೆಗೆ ಹೊರಳಲಿ ಮತ್ತು ತಿಳಿಯುವ ಪ್ರಯತ್ನಗಳನ್ನು ಮಾಡಲಿ ಎಂಬ ಆಶಯವನ್ನು ಪ್ರಾಮಾಣಿಕವಾಗಿ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...