Homeಅಂಕಣಗಳುಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

ಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

- Advertisement -
- Advertisement -

ಮೂರು ವಾರಗಳ ಹಿಂದೆ ಇದೇ ಪುಟದಲ್ಲಿ ‘ನಿರೀಕ್ಷಿತ ಕೀಳು ಮಟ್ಟದ ನಡವಳಿಕೆ ಮತ್ತು ಅನಿರೀಕ್ಷಿತ ಪ್ರಬುದ್ಧತೆ’ ಎಂಬ ಬರಹವನ್ನು ಬರೆಯಲಾಗಿತ್ತು. ದೆಹಲಿ ಚುನಾವಣೆಯ ಹಿನ್ನೆಲೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರೇ ಇಲ್ಲಿ ಬಟನ್ ಒತ್ತಿದರೆ ಅಲ್ಲಿ ಷಾಕ್ ಹೊಡೆಯಬೇಕು; ಅಲ್ಲಿ ಧರಣಿ ಕೂತಿರುವವರು ರೇಪ್ ಮಾಡುವವರು ಇತ್ಯಾದಿ ಮಾತುಗಳನ್ನು ಶಹೀನ್‍ಬಾಗ್‍ನ ಧರಣಿಯ ಬಗ್ಗೆ ಆಡಿದ್ದರು. ಅದೇ ಸಂದರ್ಭದಲ್ಲಿ ತಮ್ಮತ್ತ ಗುಂಡು ಹಾರಿಸಿದರೂ ಪ್ರಚೋದನೆಗೊಳಗಾಗದೇ ರಾಷ್ಟ್ರಧ್ವಜ ಹಾಗೂ ಸಂವಿಧಾನ ಹಿಡಿದು ಶಾಂತಿಯುತ ಹೋರಾಟವನ್ನು ದೇಶದೆಲ್ಲೆಡೆ ಮಾಡುತ್ತಿದ್ದ ಸಮುದಾಯದ ಪ್ರಬುದ್ಧತೆ ಎದ್ದು ಕಾಣುತ್ತಿತ್ತು.

ಆದರೆ ಇಂದಿನ ಸಂದರ್ಭ ಇನ್ನೂ ಅಪಾಯಕಾರಿಯಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದ ಸಮಾವೇಶವೊಂದರಲ್ಲಿ ಅಮೂಲ್ಯ ಎಂಬ ಎಳೆಯ ಹುಡುಗಿಯ ಮಾತುಗಳು ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಿದೆ. ‘ಆಕೆ ಏನನ್ನೋ ಹೇಳಲು ಹೊರಟಿದ್ದಳು, ವಿಶ್ವಮಾನವ ಸಂದೇಶ ಸಾರಲು ಹೊರಟಿದ್ದಳು, ಅದನ್ನು ಅರ್ಥ ಮಾಡಿಕೊಳ್ಳಲು ನಾಲ್ಕು ದಿನದ ಹಿಂದಿನ ಆಕೆಯ ಫೇಸ್‍ಬುಕ್ ಪೋಸ್ಟ್ ನೋಡಬೇಕು, ಆಕೆಯ ಮೇಲೆ ದೇಶದ್ರೋಹದ ಕೇಸನ್ನು ದಾಖಲಿಸಿರುವುದೇ ತಪ್ಪು’ ಇವೆಲ್ಲವೂ ನಿಜ. ಆದರೆ ಇಷ್ಟೇ ನಿಜವಲ್ಲ.

ಮೂರು ವಾರಗಳ ಹಿಂದೆ ಬರೆದಂತೆ ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವು ತೋರಿದ ಪ್ರಬುದ್ಧತೆಯು ಆಳುವವರನ್ನು ಕಂಗಾಲಾಗಿಸಿತ್ತು. ಅದು ತಾನು ಬಳಸಿಕೊಳ್ಳಬಹುದಾದ ಅಸ್ತ್ರವೊಂದನ್ನು ಹುಡುಕುತ್ತಿತ್ತು. ಆ ಅಸ್ತ್ರವನ್ನು ಆ ಸಮುದಾಯ ಕೊಡಲಿಲ್ಲ. ಬದಲಿಗೆ ತಾನಂದುಕೊಂಡಿದ್ದನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬುದರ ಕನಿಷ್ಠ ಪ್ರಜ್ಞೆ ಇಲ್ಲದ ಒಂದು ಎಳಸು ಹುಡುಗಿ ತಪ್ಪಾದ ಜಾಗದಲ್ಲಿ ತಪ್ಪಾದ ಮಾತುಗಳನ್ನು ಆಡಿದಳು. ಆ ಮೂಲಕ ಇದನ್ನೇ ಬಯಸುತ್ತಿದ್ದವರಿಗೆ ಅಸ್ತ್ರವನ್ನು ಒದಗಿಸಿದಳು.

ಯಾರು ಇದನ್ನು ಬಯಸುತ್ತಿದ್ದರೋ ಅವರು ಪಾಕಿಸ್ತಾನವನ್ನು ನಿರಂತರವಾಗಿ ಬಳಸಿಕೊಳ್ಳುತ್ತಾ ಬಂದಿರುವವರು. ಪಾಕಿಸ್ತಾನದಲ್ಲಿ ಆಳುವ ಎಲ್ಲರಿಗೂ ಕಾಶ್ಮೀರ ಹಾಗೂ ಭಾರತ ನಿರಂತರವಾಗಿ ರೊಚ್ಚಿಗೆಬ್ಬಿಸುವ ಅಸ್ತ್ರಗಳಾಗಿ ಬಳಕೆಯಾಗುತ್ತಾ ಬಂದಿದೆ. ಇಲ್ಲಿಯೂ ಅಂತಹ ಒಂದು ವರ್ಗವಿದೆ. ಇಲ್ಲಿ ಅಂತಹದ್ದೇನೂ ನಡೆಯದಿದ್ದಲ್ಲಿ ತಾವೇ ಪಾಕಿಸ್ತಾನದ ಧ್ವಜ ಹಾರಿಸುವವರು ಅವರು. ವಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಸಿಕ್ಕಿಕೊಂಡ ಪರಶುರಾಮ ವಾಘ್ಮೋರೆ ನಂತರ ಗೌರಿ ಲಂಕೇಶರ ಹತ್ಯೆಯ ಪ್ರಮುಖ ಆರೋಪಿಯಾದ ಎಂಬುದನ್ನು ನಾವು ಮರೆಯಲಾಗದು. ಆತ ಶ್ರೀರಾಮಸೇನೆಯವನು ಎಂಬ ಆರೋಪ ಬಂದಾಗ, ಆತ ಆರೆಸ್ಸೆಸ್ಸಿನವನು ಎಂದು ಖಚಿತ ಪಡಿಸಿದ್ದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್!

ಇದರ ಹೊಣೆಯನ್ನು ಯಾರು ಹೊರಬೇಕು? ಅಮೂಲ್ಯಳೂ ಹೊರಬೇಕು. ಅದೇ ರೀತಿಯಲ್ಲಿ ಅಪ್ರಬುದ್ಧವಾಗಿ ಆಲೋಚಿಸುವ, ದೇಶದ ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ನಾವು ಅನುಭವದ ಮಾತನ್ನೂ ಕೇಳಬೇಕು ಎಂಬ ಎಚ್ಚರವಿಲ್ಲದ ಇನ್ನೂ ಹಲವರು ಇದ್ದಾರೆ ಅವರೆಲ್ಲರೂ ಹೊರಬೇಕು. ಆಕೆಗಿರುವ ಎನರ್ಜಿ ಮತ್ತು ಅನ್ಯಾಯವನ್ನು ಯಾವ ರೀತಿಯಿಂದಲಾದರೂ ಪ್ರತಿಭಟಿಸಬೇಕು ಎಂಬ ಉಮೇದನ್ನಷ್ಟೇ ನೋಡಿ, ಬಹಿರಂಗ ಸಭೆಗಳಲ್ಲಿ ಮಾತನಾಡಲು ಪ್ರೇರೇಪಿಸಿದವರೂ ಹೊರಬೇಕು. ಯುವಜನರನ್ನು ಪ್ರೋತ್ಸಾಹಿಸಬೇಕು ಎಂಬುದು ಸರಿಯಾದರೂ, ಗರಿಷ್ಠ ಮಿತಿಗಳನ್ನು ಮೀರುವವರನ್ನು ತಲೆ ಮೇಲೆ ಹೊತ್ತುಕೊಳ್ಳಬಾರದು ಎಂಬುದೂ ಇದರಿಂದ ಕಲಿಯಬೇಕಾದ ಪಾಠವಾಗಿದೆ.

ಅದೇನೇ ಇರಲಿ, ಇದನ್ನು ಬಳಸಿಕೊಂಡು ಇಡೀ ಚಳವಳಿಯನ್ನೇ ದಮನ ಮಾಡಲು ಹೊರಟಿರುವ ಸರ್ಕಾರದ ಹುನ್ನಾರದ ವಿರುದ್ಧ ಎಲ್ಲರೂ ಎದ್ದು ನಿಲ್ಲಬೇಕಿದೆ. ಚಳವಳಿ ಇದುವರೆಗೆ ನಡೆಸಿರುವ ಸಾವಿರಾರು ಕಾರ್ಯಕ್ರಮಗಳಲ್ಲಿ ತೋರಿದ ಪ್ರಬುದ್ಧತೆಯು ಸರ್ಕಾರಕ್ಕೆ ಕಷ್ಟ ತಂದಿತ್ತು ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಚಳವಳಿಯ ಸಂದರ್ಭದಲ್ಲಿ ನಡೆದ ಒಂದು ಬಿಡಿ ಅಪ್ರಬುದ್ಧತೆಯನ್ನು ಇಟ್ಟುಕೊಂಡು ದಮನಕಾಂಡ ಹರಿಬಿಡಲು ಸರ್ಕಾರ ಸಜ್ಜಾಗಿದೆ. ಇದನ್ನು ಈ ಚಳವಳಿ ಹೇಗೆ ಎದುರಿಸುತ್ತದೆ ಎಂಬುದು ಅದರ ಪ್ರಬುದ್ಧತೆಯನ್ನು ಒರೆಗೆ ಹಚ್ಚಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...