Homeಅಂಕಣಗಳುಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

ಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

- Advertisement -
- Advertisement -

ಮೂರು ವಾರಗಳ ಹಿಂದೆ ಇದೇ ಪುಟದಲ್ಲಿ ‘ನಿರೀಕ್ಷಿತ ಕೀಳು ಮಟ್ಟದ ನಡವಳಿಕೆ ಮತ್ತು ಅನಿರೀಕ್ಷಿತ ಪ್ರಬುದ್ಧತೆ’ ಎಂಬ ಬರಹವನ್ನು ಬರೆಯಲಾಗಿತ್ತು. ದೆಹಲಿ ಚುನಾವಣೆಯ ಹಿನ್ನೆಲೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರೇ ಇಲ್ಲಿ ಬಟನ್ ಒತ್ತಿದರೆ ಅಲ್ಲಿ ಷಾಕ್ ಹೊಡೆಯಬೇಕು; ಅಲ್ಲಿ ಧರಣಿ ಕೂತಿರುವವರು ರೇಪ್ ಮಾಡುವವರು ಇತ್ಯಾದಿ ಮಾತುಗಳನ್ನು ಶಹೀನ್‍ಬಾಗ್‍ನ ಧರಣಿಯ ಬಗ್ಗೆ ಆಡಿದ್ದರು. ಅದೇ ಸಂದರ್ಭದಲ್ಲಿ ತಮ್ಮತ್ತ ಗುಂಡು ಹಾರಿಸಿದರೂ ಪ್ರಚೋದನೆಗೊಳಗಾಗದೇ ರಾಷ್ಟ್ರಧ್ವಜ ಹಾಗೂ ಸಂವಿಧಾನ ಹಿಡಿದು ಶಾಂತಿಯುತ ಹೋರಾಟವನ್ನು ದೇಶದೆಲ್ಲೆಡೆ ಮಾಡುತ್ತಿದ್ದ ಸಮುದಾಯದ ಪ್ರಬುದ್ಧತೆ ಎದ್ದು ಕಾಣುತ್ತಿತ್ತು.

ಆದರೆ ಇಂದಿನ ಸಂದರ್ಭ ಇನ್ನೂ ಅಪಾಯಕಾರಿಯಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದ ಸಮಾವೇಶವೊಂದರಲ್ಲಿ ಅಮೂಲ್ಯ ಎಂಬ ಎಳೆಯ ಹುಡುಗಿಯ ಮಾತುಗಳು ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಿದೆ. ‘ಆಕೆ ಏನನ್ನೋ ಹೇಳಲು ಹೊರಟಿದ್ದಳು, ವಿಶ್ವಮಾನವ ಸಂದೇಶ ಸಾರಲು ಹೊರಟಿದ್ದಳು, ಅದನ್ನು ಅರ್ಥ ಮಾಡಿಕೊಳ್ಳಲು ನಾಲ್ಕು ದಿನದ ಹಿಂದಿನ ಆಕೆಯ ಫೇಸ್‍ಬುಕ್ ಪೋಸ್ಟ್ ನೋಡಬೇಕು, ಆಕೆಯ ಮೇಲೆ ದೇಶದ್ರೋಹದ ಕೇಸನ್ನು ದಾಖಲಿಸಿರುವುದೇ ತಪ್ಪು’ ಇವೆಲ್ಲವೂ ನಿಜ. ಆದರೆ ಇಷ್ಟೇ ನಿಜವಲ್ಲ.

ಮೂರು ವಾರಗಳ ಹಿಂದೆ ಬರೆದಂತೆ ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವು ತೋರಿದ ಪ್ರಬುದ್ಧತೆಯು ಆಳುವವರನ್ನು ಕಂಗಾಲಾಗಿಸಿತ್ತು. ಅದು ತಾನು ಬಳಸಿಕೊಳ್ಳಬಹುದಾದ ಅಸ್ತ್ರವೊಂದನ್ನು ಹುಡುಕುತ್ತಿತ್ತು. ಆ ಅಸ್ತ್ರವನ್ನು ಆ ಸಮುದಾಯ ಕೊಡಲಿಲ್ಲ. ಬದಲಿಗೆ ತಾನಂದುಕೊಂಡಿದ್ದನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬುದರ ಕನಿಷ್ಠ ಪ್ರಜ್ಞೆ ಇಲ್ಲದ ಒಂದು ಎಳಸು ಹುಡುಗಿ ತಪ್ಪಾದ ಜಾಗದಲ್ಲಿ ತಪ್ಪಾದ ಮಾತುಗಳನ್ನು ಆಡಿದಳು. ಆ ಮೂಲಕ ಇದನ್ನೇ ಬಯಸುತ್ತಿದ್ದವರಿಗೆ ಅಸ್ತ್ರವನ್ನು ಒದಗಿಸಿದಳು.

ಯಾರು ಇದನ್ನು ಬಯಸುತ್ತಿದ್ದರೋ ಅವರು ಪಾಕಿಸ್ತಾನವನ್ನು ನಿರಂತರವಾಗಿ ಬಳಸಿಕೊಳ್ಳುತ್ತಾ ಬಂದಿರುವವರು. ಪಾಕಿಸ್ತಾನದಲ್ಲಿ ಆಳುವ ಎಲ್ಲರಿಗೂ ಕಾಶ್ಮೀರ ಹಾಗೂ ಭಾರತ ನಿರಂತರವಾಗಿ ರೊಚ್ಚಿಗೆಬ್ಬಿಸುವ ಅಸ್ತ್ರಗಳಾಗಿ ಬಳಕೆಯಾಗುತ್ತಾ ಬಂದಿದೆ. ಇಲ್ಲಿಯೂ ಅಂತಹ ಒಂದು ವರ್ಗವಿದೆ. ಇಲ್ಲಿ ಅಂತಹದ್ದೇನೂ ನಡೆಯದಿದ್ದಲ್ಲಿ ತಾವೇ ಪಾಕಿಸ್ತಾನದ ಧ್ವಜ ಹಾರಿಸುವವರು ಅವರು. ವಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಸಿಕ್ಕಿಕೊಂಡ ಪರಶುರಾಮ ವಾಘ್ಮೋರೆ ನಂತರ ಗೌರಿ ಲಂಕೇಶರ ಹತ್ಯೆಯ ಪ್ರಮುಖ ಆರೋಪಿಯಾದ ಎಂಬುದನ್ನು ನಾವು ಮರೆಯಲಾಗದು. ಆತ ಶ್ರೀರಾಮಸೇನೆಯವನು ಎಂಬ ಆರೋಪ ಬಂದಾಗ, ಆತ ಆರೆಸ್ಸೆಸ್ಸಿನವನು ಎಂದು ಖಚಿತ ಪಡಿಸಿದ್ದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್!

ಇದರ ಹೊಣೆಯನ್ನು ಯಾರು ಹೊರಬೇಕು? ಅಮೂಲ್ಯಳೂ ಹೊರಬೇಕು. ಅದೇ ರೀತಿಯಲ್ಲಿ ಅಪ್ರಬುದ್ಧವಾಗಿ ಆಲೋಚಿಸುವ, ದೇಶದ ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ನಾವು ಅನುಭವದ ಮಾತನ್ನೂ ಕೇಳಬೇಕು ಎಂಬ ಎಚ್ಚರವಿಲ್ಲದ ಇನ್ನೂ ಹಲವರು ಇದ್ದಾರೆ ಅವರೆಲ್ಲರೂ ಹೊರಬೇಕು. ಆಕೆಗಿರುವ ಎನರ್ಜಿ ಮತ್ತು ಅನ್ಯಾಯವನ್ನು ಯಾವ ರೀತಿಯಿಂದಲಾದರೂ ಪ್ರತಿಭಟಿಸಬೇಕು ಎಂಬ ಉಮೇದನ್ನಷ್ಟೇ ನೋಡಿ, ಬಹಿರಂಗ ಸಭೆಗಳಲ್ಲಿ ಮಾತನಾಡಲು ಪ್ರೇರೇಪಿಸಿದವರೂ ಹೊರಬೇಕು. ಯುವಜನರನ್ನು ಪ್ರೋತ್ಸಾಹಿಸಬೇಕು ಎಂಬುದು ಸರಿಯಾದರೂ, ಗರಿಷ್ಠ ಮಿತಿಗಳನ್ನು ಮೀರುವವರನ್ನು ತಲೆ ಮೇಲೆ ಹೊತ್ತುಕೊಳ್ಳಬಾರದು ಎಂಬುದೂ ಇದರಿಂದ ಕಲಿಯಬೇಕಾದ ಪಾಠವಾಗಿದೆ.

ಅದೇನೇ ಇರಲಿ, ಇದನ್ನು ಬಳಸಿಕೊಂಡು ಇಡೀ ಚಳವಳಿಯನ್ನೇ ದಮನ ಮಾಡಲು ಹೊರಟಿರುವ ಸರ್ಕಾರದ ಹುನ್ನಾರದ ವಿರುದ್ಧ ಎಲ್ಲರೂ ಎದ್ದು ನಿಲ್ಲಬೇಕಿದೆ. ಚಳವಳಿ ಇದುವರೆಗೆ ನಡೆಸಿರುವ ಸಾವಿರಾರು ಕಾರ್ಯಕ್ರಮಗಳಲ್ಲಿ ತೋರಿದ ಪ್ರಬುದ್ಧತೆಯು ಸರ್ಕಾರಕ್ಕೆ ಕಷ್ಟ ತಂದಿತ್ತು ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಚಳವಳಿಯ ಸಂದರ್ಭದಲ್ಲಿ ನಡೆದ ಒಂದು ಬಿಡಿ ಅಪ್ರಬುದ್ಧತೆಯನ್ನು ಇಟ್ಟುಕೊಂಡು ದಮನಕಾಂಡ ಹರಿಬಿಡಲು ಸರ್ಕಾರ ಸಜ್ಜಾಗಿದೆ. ಇದನ್ನು ಈ ಚಳವಳಿ ಹೇಗೆ ಎದುರಿಸುತ್ತದೆ ಎಂಬುದು ಅದರ ಪ್ರಬುದ್ಧತೆಯನ್ನು ಒರೆಗೆ ಹಚ್ಚಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...