Homeಮುಖಪುಟಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ದಿಲ್ಲಿ ಪೊಲೀಸರು ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಕಲಿಯಬೇಕು ಮತ್ತು ಕಾನೂನು ಹೇಗೆ ಹೇಳುತ್ತದೆಯೋ ತಪ್ಪದೇ ಅದಕ್ಕನುಗುಣವಾಗಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಹೇಳಿದ್ದಾರೆ.

- Advertisement -
- Advertisement -

-ಅಪರ್ಣಾ ಮಂಧಾನಿ

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾ. ಮುರಳೀಧರ್ ಅವರ ನಡುವಿನ ಆಕರ್ಣೀಯ ಸಂಭಾಷಣೆಗೆ ಸಾಕ್ಷಿಯಾಯಿತು.

ದಿಲ್ಲಿ ಹೈಕೋರ್ಟ್ ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 23,24,25ರಂದು ನಡೆದ ಯೋಜಿತ ಗಲಭೆಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆ ನಡೆಯಬೇಕು ಮತ್ತು ಬಿಜೆಪಿ ನಾಯಕರಾದ ಪರ್ವೇಶ್ ವರ್ಮಾ, ಅನುರಾಗ್ ಠಾಕೂರ್, ಕಪಿಲ್ ಮಿಶ್ರಾ ಮುಂತಾದವರ ಮೇಲೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಹರೀಶ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆಯ ವೇಳೆ ಅಧಿಕಾರಿಗಳ ಮೇಲೆ ಕಟುವಾಗಿ ದಾಳಿ ನಡೆಸಿದ ನ್ಯಾ. ಮುರಳೀಧರ್, “ತನಿಖೆಯು ಲಲಿತಾ ಕುಮಾರಿ ವಿರುದ್ಧ  ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿರುವ ತೀರ್ಪಿನಿಂದ ನಿರ್ದೇಶಿತವಾಗಬೇಕು ಮತ್ತು ಪೊಲೀಸರು ಕಾನೂನಿನಲ್ಲಿ ಹೇಳಿರುವಂತೆಯೇ ಕೆಲಸ ಮಾಡಬೇಕು” ಎಂದು ಹೇಳಿದರು.

ಪ್ರಕರಣವು ಹೈಕೋರ್ಟಿನ ಇನ್ನೊಂದು ಪೀಠದಲ್ಲಿ ವಿಚಾರಣೆಗೆ ಬಂದಾಗಲೂ ಹರೀಶ್ ಮಂದರ್ ಪರ ವಾದಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ತನ್ನ ವಾದದಲ್ಲಿ 2013ರ ಲಲಿತಾ ಕುಮಾರಿ ಪ್ರಕರಣವನ್ನು ಬಹುವಾಗಿ ಅವಲಂಬಿಸಿದರು. ಈ ಪ್ರಕರಣವು ಎಪ್ರಿಲ್‌ನಲ್ಲಿ ಮತ್ತೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ‘ದಿ ಪ್ರಿಂಟ್’ ಲಲಿತಾ ಕುಮಾರಿ ಪ್ರಕರಣದ ತೀರ್ಪನ್ನು ವಿವರಿಸಿದೆ.

ಲಲಿತಾ ಕುಮಾರಿ ಯಾರು?

ಲಲಿತಾ ಕುಮಾರಿ ಅಪ್ರಾಪ್ತ ವಯಸ್ಸಿನ ಒಬ್ಬಳು ಬಾಲಕಿಯಾಗಿದ್ದು, ಆಕೆಯನ್ನು ಅಪಹರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಭೋಲಾ ಕಮತ್ ಸುಪ್ರೀಂಕೋರ್ಟಿನಲ್ಲಿ ಹೇಬಿಯಸ್ ಕೋರ್ಪಸ್ ಅರ್ಜಿ ಸಲ್ಲಿಸಿದ್ದರು. ತಾನು ಸಂಬಂಧಪಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದರು. ವಿಷಯ ಪೊಲೀಸ್ ಸುಪರಿಂಟೆಂಟ್‌ಗೆ ತಲುಪಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇಶದ ಉದ್ದಗಲಕ್ಕೂ ಪ್ರಕರಣದಿಂದ ಪ್ರಕರಣಕ್ಕೆ ಎಫ್ಐಆರ್ ನೋಂದಣಿಯಲ್ಲಿ ವ್ಯತ್ಯಯವಿರುವುದನ್ನು ಗಮನಿಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟೀಸು ಜಾರಿ ಮಾಡಿತು. ಕ್ರಿಮಿನಲ್ ಪ್ರೊಸಿಜರ್ ಕೋಡ್ (ಸಿಆರ್‌ಪಿಸಿ)ನ ವಿಧಿ 154ರ ಅನ್ವಯ ಗಂಭೀರ (ಗುರುತರ) ದಂಡನಾರ್ಹ ಅಪರಾಧವೊಂದು (cognisable offence) ಘಟಿಸಿರುವ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸ್ ಅಧಿಕಾರಿಗಳು ಎಫ್ಐಆರ್ ದಾಖಲಿಸುವುದಕ್ಕೆ ಬದ್ಧರೇ ಎಂಬ ಕುರಿತು ವಿವಿಧ ನ್ಯಾಯಾಲಯಗಳು ತದ್ವಿರುದ್ಧವಾದ ತೀರ್ಪುಗಳನ್ನು ನೀಡಿವುದನ್ನೂ ಮೂವರು ಸದಸ್ಯರ ಸಂವಿಧಾನ ಪೀಠ ಪರಿಶೀಲಿಸಿತು.

ಗಂಭೀರ ದಂಡನಾರ್ಹ ಅಪರಾಧವೆಂದರೆ, ಪೊಲೀಸರು ಯಾವುದೇ ವಾರಂಟ್ ಇಲ್ಲದೆಯೇ ವ್ಯಕ್ತಿಯನ್ನು ಬಂಧಿಸಬಹುದಾದ ಅಪರಾಧ. ಇವುಗಳಲ್ಲಿ ಕೊಲೆ, ಅತ್ಯಾಚಾರ, ವರದಕ್ಷಿಣೆ ಸಾವು, ಅಪಹರಣ ಇತ್ಯಾದಿಗಳು ಬರುತ್ತವೆ. ಗುರುತರವಾದ ಅಪರಾಧದ ಕುರಿತಾಗಿ ಪಡೆದ ಮಾಹಿತಿಯನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಿಆರ್‌ಪಿಸಿಯ ವಿಧಿ 154ರಲ್ಲಿ ವಿವರಿಸಲಾಗಿದೆ. ಎಫ್ಐಆರ್‌ನ ಕಡ್ಡಾಯ ನೋಂದಣಿಯ ಪ್ರಶ್ನೆಯನ್ನು ನಂತರ ಐವರು ನ್ಯಾಯಾಧೀಶರ ಪೀಠಕ್ಕೆ ಸಲ್ಲಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ

ಲಲಿತಾ ಕುಮಾರಿ ಪ್ರಕರಣದಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಎಂಟು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿತ್ತು.

ಪಡೆದ ಮಾಹಿತಿಯು ಗುರುತರವಾದ ಅಪರಾಧ ಘಟಿಸಿರುವುದನ್ನು ಸೂಚಿಸುತ್ತಿದ್ದರೆ, ಸಿಆರ್‌ಪಿಸಿ ವಿಧಿ 154ರ ಅನ್ವಯ ಎಫ್ಐಆರ್ ದಾಖಲಿಸುವುದು ಕಡ್ಡಾಯ ಎಂದು ಪೀಠವು ತೀರ್ಪು ನೀಡಿತು. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ತನಿಖೆಗೆ ಅವಕಾಶವಿಲ್ಲ ಎಂದು ಅದು ಹೇಳಿತು.  “ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಬಹಿರಂಗಗೊಳಿಸಲಾದಾಗ ಪೊಲೀಸ್ ಅಧಿಕಾರಿಯು ತನ್ನ ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ. ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಪಡೆದ ತಕ್ಷಣ ಎಫ್‌ಐಆರ್ ದಾಖಲಿಸದೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪೂರ್ವಭಾವಿ ತನಿಖೆ ನಡೆಸಬಹುದಾದಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅದು ವಾಸ್ತವಾಂಶಗಳು ಮತ್ತು ಸಂದರ್ಭಗಳ ಮೇಲೆ ಅವಲಂಬಿಸಿದೆ ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಇಂತಹಾ ಪ್ರಕರಣಗಳ ಒಂದು ವಿವರವಾದ ಯಾದಿಯನ್ನೇ ನೀಡಿದೆ. ಅವುಗಳಲ್ಲಿ ದಾಂಪತ್ಯ/ ಕೌಟುಂಬಿಕ ಕಲಹಗಳು, ವಾಣಿಜ್ಯ ಅಪರಾಧಗಳು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳು, ಭ್ರಷ್ಟಾಚಾರದ ಪ್ರಕರಣಗಳು ಇತ್ಯಾದಿಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೊದಲು ಪೂರ್ವಭಾವಿ ತನಿಖೆಯ ಅಗತ್ಯವಿದ್ದು, ಎಫ್‌ಐಆರ್ ದಾಖಲೆಯಲ್ಲಿ ವಿಳಂಬವಾಗಬಹುದು.

ಯಾವುದೇ ಪ್ರಕರಣದಲ್ಲಿ ಏಳು ದಿನಗಳ ಒಳಗಾಗಿ ತನಿಖೆಯನ್ನು ಆರಂಭಿಸಬೇಕು ಎಂದು ಕೂಡಾ ಸುಪ್ರೀಂಕೋರ್ಟ್ ಆದೇಶಿಸಿತ್ತು. 2014ರ ಮಾರ್ಚ್ ತಿಂಗಳಲ್ಲಿ ಇದನ್ನು ಬದಲಿಸಿ ಸಾಮಾನ್ಯ ಪ್ರಕರಣಗಳಲ್ಲಿ ಸಮಯದ ಮಿತಿಯನ್ನು 15 ದಿನಗಳಿಗೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಆರು ವಾರಗಳಿಗೆ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...