Homeಕರ್ನಾಟಕಟೌನ್ ಹಾಲ್ ಹೊರಗೆ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ...!!

ಟೌನ್ ಹಾಲ್ ಹೊರಗೆ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ…!!

- Advertisement -
- Advertisement -

ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಹೊರಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಬಾರದು ಎಂಬ ನಿರ್ಣಯವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದು(ಶನಿವಾರ) ಅಂಗೀಕರಿಸಿತು. ಟೌನ್ ಹಾಲ್ ನಿಂದ ಬಿಬಿಎಂಪಿ ಗೆ ಆದಾಯ ಗಳಿಸಲು ಸಾಧ್ಯವಾಗದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

“ಟೌನ್ ಹಾಲ್ ಹೊರಗಿನ ಜಾಗವನ್ನು ವಿವಿಧ ಸಂಘಟನೆಗಳು ದಿನನಿತ್ಯ ವಿವಿಧ ಪ್ರತಿಭಟನೆಗಳಿಗೆ ಬಳಸಿಕೊಳ್ಳುತ್ತಿವೆ ಇದರಿಂದಾಗಿ ಕಾರ್ಯಕ್ರಮಗಳಿಗೆ ಟೌನ್ ಹಾಲನ್ನು ಬಾಡಿಗೆಗೆ ಪಡೆಯಲು ಜನರು ಮುಂದೆ ಬರುತ್ತಿಲ್ಲ” ಎಂದು ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

ಟೌನ್ ಹಾಲ್ ನ ಹೊರಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಬಾರದು ಎಂದು ಬಿಬಿಎಂಪಿ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ಅವರು ಹೇಳಿದ್ದಾರೆ. ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್‌ನಂತಹ ಸ್ಥಳಗಳನ್ನು ಹಾಗೂ ನಗರದ ಇತರ ಗೊತ್ತುಪಡಿಸಿದ ಸ್ಥಳಗಳನ್ನು ಬಳಸಿಕೊಳ್ಳಬಹುದು ಎಂದಿದ್ದಾರೆ.

ಕಾರ್ಯಸೂಚಿಯನ್ನು ಮೇಯರ್ ಪರಿಚಯಿಸಿದರು. ಯಾವುದೆ ಚರ್ಚೆಯಿಲ್ಲದೆ ನಿರ್ಣಯವನ್ನು ಬಿಜೆಪಿ ಕೌನ್ಸಿಲರ್‌ಗಳ ಸರಳ ಬಹುಮತದೊಂದಿಗೆ ಅಂಗೀಕರಿಸಲಾಯಿತು.

ನಟ ಹಾಗೂ ಪ್ರಗತಿಪರ ಹೋರಾಟಗಾರ ಚೇತನ್ ಕುಮಾರ್ “ಟೌನ್ ಹಾಲ್ ಮುಂದೆ ಯಾವುದೇ ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲವೆಂದು ಬಿ.ಬಿ.ಎಂ.ಪಿ ಆದೇಶ ಹೊರಡಿಸಲು ಮುಂದಾಗಿದೆ. ಇದು ಪ್ರಜಾಪ್ರಭುತ್ವದ ಧ್ವನಿಗಳನ್ನು ಮತ್ತು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಹುನ್ನಾರವಾಗಿದೆ. ಪ್ರತಿಭಟನೆಯಿಂದ ಟೌನ್ ಹಾಲ್ ಗೆ ಆದಾಯ ಕಡಿಮೆ ಆಗಿದೆ ಎಂದು ಮೇಯರ್ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರ ಧ್ವನಿಯ ವಿರೋದಿಯಾಗಿರುವ ಈ ಮೇಯರ್ ಗೆ ಸರ್ಕಾರಕ್ಕೆ ಆದಾಯ ಮಾಡಿಕೊಡುವ ಉದ್ದೇಶವಿದ್ದರೆ, 1% ಜನಸಂಖ್ಯೆ ಇರುವ ಶ್ರೀಮಂತರ ಮೇಲೆ ತೆರಿಗೆಯನ್ನ ಹೆಚ್ಚಿಸಲಿ, ಸಾಂವಿಧಾನಿಕ ಹಕ್ಕುಗಳನ್ನ ಉಲ್ಲಂಘಿಸುವ ಕೆಲಸ ಬೇಡ” ಎಂದಿದ್ದಾರೆ.

ಜನರ ಪ್ರತಿಭಟಿಸುವ ಹಕ್ಕನ್ನು ಬಿಜೆಪಿ ಕಸಿದುಕೊಳ್ಳಲು ಹೊರಟಿದೆ ಎಂದು ವಿರೋಧ ಪಕ್ಷಗಳು ನಿರ್ಣಯದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮಾರ್ಚ್ 3 ಕ್ಕೆ ಪ್ರತಿಭಟನೆಯ ಎಚ್ಚರಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...