Homeಮುಖಪುಟತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಆರನೇ ಬಲಿ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ನರಭಕ್ಷಕ ಚಿರತೆಗಳ ಹಾವಳಿ ಮಿತಿ ಮೀರಿದೆ. ರಕ್ತದ ರುಚಿಯನ್ನು ಕಂಡಿರುವ ಚಿರತೆಗಳು ಮನುಷ್ಯರ ಮೇಲೆ ಎರಗುತ್ತಲೇ ಇವೆ. ಚಿರತೆಗಳು ಕುಣಿಗಲ್, ತುಮಕೂರು ಮತ್ತು ಗುಬ್ಬಿ ತಾಲೂಕಿನಲ್ಲಿ ಮನುಷ್ಯರ ರಕ್ತಹೀರಿ ಕೊಂದಿದೆ. ಚಿರತೆ ದಾಳಿಗೆ ಇದುವರೆಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ. ಅರಣ್ಯ ಇಲಾಖೆಯವರು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆಯೇ ಹೊರತು ನರಭಕ್ಷ ಚಿರತೆ ಹಿಡಿಯುವ, ಅದನ್ನು ಗುರುತಿಸುವ ಗೋಜಿಗೆ ಹೋಗುತ್ತಿಲ್ಲ. ಚಿರತೆ ಮಾತ್ರ ಮರೆಸಿಮರೆಸಿ ದಾಳಿ ಮಾಡುತ್ತಲೇ ಇದೆ. ಅರಣ್ಯ ಸಿಬ್ಬಂದಿ ಹುಡುಕಿದಂತೆ ಮಾಡಿ ಮೌನವಾಗುತ್ತಿದ್ದಾರೆ. ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೂ ಕೇಳುವವರೇ ಇಲ್ಲ.

ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಚಿರತೆಗಳ ಹಾವಳಿ ಇದೆ. ನಿತ್ಯವೂ ಒಂದಿಲ್ಲೊಂದು ತಾಲೂಕಿನಲ್ಲಿ ಕುರಿ, ಮೇಕೆ, ನಾಯಿಗಳನ್ನು ಚಿರತೆಗಳು ಹೊತ್ತೊಯ್ಯುತ್ತಲೇ ಇವೆ. ತಮ್ಮ ಸಾಕು ಪ್ರಾಣಿಗಳನ್ನು ಕಳೆದುಕೊಳ್ಳುವ ರೈತರು ಹಾಗೂ ಗ್ರಾಮಸ್ಥರು ಚಿರತೆಗಳ ನಿಯಂತ್ರಣಕ್ಕೆ ಹಲವು ಬಾರಿ ಮನವಿಗಳನ್ನು ನೀಡಿದರೂ ಪ್ರಯೋಜನ ಮಾತ್ರ ಶೂನ್ಯ. ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನ, ಮೊಂಡು ಬೀಳುವಿಕೆಗೆ ಬೇಸತ್ತಿದ್ದಾರೆ. ಎಷ್ಟು ಮನವಿ ಮಾಡಿದರೂ ಕಿವಿಗೇ ಹಾಕಿಕೊಳ್ಳುವುದಿಲ್ಲ. ಯಾರ ಮಾತು ಯಾರೂ ಕೇಳುತ್ತಿಲ್ಲ. ಸುಖಾಸುಮ್ಮನೆ ವೇತನ ಪಡೆಯುತ್ತಿದ್ದಾರೆ. ಜನರ ಸಂಕಟ, ನೋವು ಕೇಳದ ಅಧಿಕಾರಿಗಳು ಇದ್ದೂ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.

ಫೆ.29ರಂದು ಸಂಜೆ 6 ಗಂಟೆಗೆ ತುಮಕೂರು ತಾಲೂಕು ಕಣಕುಪ್ಪೆ ಗ್ರಾಮದಲ್ಲಿ ಚಂದನಾ ಎಂಬ ಮೂರು ವರ್ಷದ ಮಗು ಮತ್ತು ಆಕೆಯ ತಾತ ಮತ್ತು ಗಂಗಚಿಕ್ಕಣ್ಣ ಆಟವಾಡಿಕೊಂಡು ಕುಳಿತಿದ್ದರು. ಕತ್ತಲು ಇನ್ನೂ ಆವರಿಸಿರಲಿಲ್ಲ. ಸೂರ್ಯ ಇನ್ನೂ ಮುಳುಗಿರಲಿಲ್ಲ.. ನೋಡನೋಡುತ್ತಿದ್ದಂತೆಯೇ ಬಾಲಕಿಯ ಮೇಲೆ ಚಿರತೆ ಎರಗಿತು. ಕಣಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಚಿಕ್ಕಣ್ಣ ಕೂಗಿಕೊಂಡರು. ಆದರೂ ಬಿಡದ ಚಿರತೆ ಅರ್ಧಕಿಲೋಮೀಟರ್ ದೂರದ ಪೊದೆಗೆ ಎಳೆದೊಯ್ದು ಬಾಲಕಿ ಕುತ್ತಿಗೆ ಸೀಳಿ ರಕ್ತ ಹೀರಿದೆ. ಮುಖ ಮತ್ತು  ತೊಡೆಯ ಮಾಂಸ ಖಂಡ ತಿಂದು ಹೋಗಿದೆ. ಜನರು ಕೂಗುತ್ತ ಅಲ್ಲಿಗೆ ಹೋಗದಿದ್ದರೆ ಬಾಲಕಿಯನ್ನು ಸಂಪೂರ್ಣವಾಗಿ ಮುಗಿಸಿಬಿಡುತ್ತಿತ್ತು ಎನ್ನುತ್ತಾರೆ ಘಟನೆ ಕಂಡವರು.

ದುರಂತವೆಂದರೆ ತುಮಕೂರು ತಾಲೂಕು ಹೆಬ್ಬೂರು ಹೋಬಳಿಯಲ್ಲೇ ಚಿರತೆ ಮೂರು ಬಲಿ ಪಡೆದುಕೊಂಡಿದೆ. ಪ್ರತಿ ದಾಳಿ ನಡೆದಾಗಲೂ ಜನರು ಹೆಬ್ಬೂರಿನಲ್ಲಿ ಪ್ರತಿಭಟನೆ ನಡೆಸಿ ಚಿರತೆಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಹಿಡಿಸುವ ಭರವಸೆ ನೀಡಿಯೂ ಬಂದಿದ್ದರು. ಮತ್ತೆ ಚಿರತೆ ದಾಳಿ ನಡೆಸಿದ್ದು ಜನರನ್ನು ಮತ್ತಷ್ಟು ಕೆರಳುವಂತೆ
ಮಾಡಿದೆ. ಚಿರತೆ, ಕರಡಿ, ಆನೆಗಳು ಬಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ, ಹೆಜ್ಜೆ ಗುರುತು ಫೋಟೋ ತೆಗೆದ ಕಳಿಸಿ, ಚಿರತೆಯ ಪೋಟೋ ಕಳಿಸಿ ಎಂದು ಹೇಳುತ್ತಾರೆ. ತಮ್ಮ ಕರ್ತವ್ಯ ಮರೆಯುತ್ತಾರೆ. ನಾವು ಫೋಟೋಗಳ ತೆಗೆಯಲು ಕ್ಯಾಮೆರಾಗಳನ್ನು ಎಲ್ಲಿಗೆ ಹುಡುಕಿಕೊಂಡು ಹೋಗಬೇಕು ಎನ್ನುತ್ತಾರೆ ಚಿಕ್ಕವೆಂಕಟಪ್ಪ.


ಇದನ್ನೂ ಓದಿ: ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…


ಅರಣ್ಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ರೈತರು ಸಮಸ್ಯೆ ಹೇಳಿಕೊಂಡರೂ ಕೇಳುವುದಿಲ್ಲ. ಚಿರತೆ ದಾಳಿ ಮಾಡಿದಾಗ ಕೇವಲ ಬೋನಿಟ್ಟು ಹೋಗುತ್ತಾರೆ. ಅದು ಬಿದ್ದ ಮೇಲೆ ಅರಣ್ಯಕ್ಕೆ ಬಿಟ್ಟು ಬರುತ್ತಾರೆ. ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮಾನವ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಂಡಲ್ಲಿ ಗುಂಡಿಕ್ಕು ಆದೇಶ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೆಬ್ಬರೂ ವ್ಯಾಪ್ತಿಯಲ್ಲೇ ಹೆಚ್ಚು ಇಂತಹ ದಾಳಿಗಳು ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಚಿರತೆಗಳು ಯಾವಾಗ ಮೇಲೆರಗುತ್ತವೋ ಎಂಬ ಭೀತಿಯಲ್ಲಿ ಜನ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದು ಒಂದು ಕಡೆಯಾದರೆ ಕರಡಿಗಳು ಮತ್ತು ಆನೆಗಳ ದಾಳಿಯ ಭೀತಿ ಕೂಡ ಜನರಲ್ಲಿದೆ. ವನ್ಯಜೀವಿಗಳ ಹಾವಳಿ ಹೆಚ್ಚಿದಂತೆಲ್ಲ ಬೆಳೆ ಹಾನಿ, ಜೀವಹಾನಿ ಆಗುತ್ತಲೇ ಇದ್ದು ಅರಣ್ಯ ಇಲಾಖೆ ಯಾವುದೇ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಇದುವರೆಗೂ ಆಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...