Homeಮುಖಪುಟದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ.

- Advertisement -
- Advertisement -

ಮಾನ್ಯ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ

ವಂದನೆಗಳು

ನಿಮ್ಮ ಇ-ಮೇಲ್ ಐಡಿ nimmasuresh (ನಿಮ್ಮ ಸುರೇಶ್) ಎಂದಿದೆ. ನೀವು ನಮ್ಮ ಸುರೇಶ್ ಅಂದುಕೊಂಡಿದ್ದರಿಂದಲೇ ತಮಗೆ ಈ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಹೇಳಿಕೆ, “ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ ”-ನೋಡಿ ನನಗೆ ಶಾಕ್ ಆಯಿತು.

ಶ್ರೀ ಎಚ್.ಎಸ್.ದೊರೆಸ್ವಾಮಿಯವರು ಕಳೆದ ಚುನಾವಣೆಯ ಹಿಂದಿನ ದಿನ ಯಾರಿಗೆ ಮತನೀಡಬೇಕೆಂದು ಕರೆ ನೀಡುತ್ತಾ, ಮೋದಿಯವರ ವೈಫಲ್ಯಗಳನ್ನು ಹಾಗೂ ಸರ್ವಾಧಿಕಾರಿ ಪ್ರವೃತ್ತಿಯನ್ನು ವಿವರಿಸುತ್ತಾ, “ಆತ ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ. ಯಾವ ಕೆಲಸ ಮಾಡಿಲ್ಲ. ಕರ್ನಾಟಕವನ್ನು ತೆಗೆದುಕೊಂಡು ಬಿಟ್ರೆ ಇಡೀ ದೇಶವನ್ನು ತಗೋಬಹುದು ಎನ್ನುವ ಆಲೋಚನೆ ಇದೆ. ಆದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು” ಎಂದು ಹೇಳುತ್ತಾರೆ. ಇದರ ಅರ್ಥ ಸಾಯಿಸಬೇಕು ಎಂದಾಗುವುದೇ? ಅವರ ಮಾತುಗಳಲ್ಲಿ ಎತ್ತಿದ ಸಮಸ್ಯೆಗಳತ್ತ ಕಣ್ಣೆತ್ತೂ ನೋಡುವ ಧೈರ್ಯವಿಲ್ಲದೆ, ಅದನ್ನು ಅಪಾರ್ಥ ಮಾಡಿ, ನೂರು ವರ್ಷಕ್ಕೂ ಮಿಗಿಲಾಗಿ ಅಹಿಂಸೆಯ ವ್ರತ ಪಾಲಿಸಿಕೊಂಡು, ಯಾವುದೋ ಯುಗದ ಮನುಷ್ಯನೊಬ್ಬ ನಮ್ಮ ನಡುವೆ ಬದುಕಿರುವ ಸೋಜಿಗ ಕಾಣದೆ ಸದೆಬಡಿಯುವುದಾದರೆ ನಾವು ಲಿಲ್ಲಿ ಪುಟ್ಟರಂತಾಗಿಬಿಡುತ್ತೇವೆ.

ಸ್ಪಷ್ಟತೆಗಾಗಿ ಒಂದು ಉದಾಹರಣೆ ನೋಡೋಣ: ಇಂದಿನ ಓಲೈಕೆ, ಅವಕಾಶವಾದಿ ರಾಜಕಾರಣದಲ್ಲಿ ಇದೇ ಶ್ರೀ ಬಸವನಗೌಡ ಯತ್ನಾಳ್, ಶ್ರೀ ಈಶ್ವರಪ್ಪ ಅಥವಾ ಮತ್ತಾರೋ ಮೋದಿಯವರ ವಿರೋಧಿಗಳಾಗಿದ್ದರೆ ಅವರು ತಮ್ಮ ಸ್ವಭಾವಕ್ಕೆ ತಕ್ಕಂತೆ ಏನು ಹೇಳುತ್ತಿದ್ದರು? ಮೋದಿಯವರ ತಲೆಗೆ ಹತ್ತಿಪ್ಪತ್ತು ಕೋಟಿ ಫತ್ವಾ ಹೊರಡಿಸುತ್ತಿದ್ದರೇನೋ! ಇಂಥವರು ದೊರೆಸ್ವಾಮಿ ಅವರನ್ನು “ನಕಲಿ ಸ್ವಾತಂತ್ರ್ಯ ಹೋರಾಟಗಾರ” ಎನ್ನುತ್ತಾರೆ! ಅಂದರೆ, ರಾಜಕಾರಣವೆಂಬುದು ಅದೇನು ಜಾದೂ, ಕಣ್ಕಟ್ಟು ವಿದ್ಯೆಯೇ? ಅಸಲಿಯನ್ನು ನಕಲಿ ಮಾಡುವುದಕ್ಕೆ, ನಕಲಿಯನ್ನು ಅಸಲಿ ಮಾಡುವುದಕ್ಕೆ? ದೊರೆಸ್ವಾಮಿ ಅವರನ್ನು “ಪಾಕ್ ಏಜೆಂಟ್” ಎನ್ನುವುದಕ್ಕೆ ಇವರ ನಾಲಿಗೆ ಹೇಗೆ ಹೊರಳಿತು? ಇಂದಿನ ನಮ್ಮ ಬಹುತೇಕ ರಾಜಕಾರಣಿಗಳಲ್ಲಿ ಕೆಲವರಿಗೆ ನಾಲಿಗೆ ಇಲ್ಲ. ಇನ್ನೂ ಕೆಲವರಿಗೆ ನಾಕಾರು ನಾಲಿಗೆಗಳು. ಇಲ್ಲಿದ್ದಾಗ ಮಾತನಾಡಲು ಒಂದು, ಇನ್ನೊಂದು ಕಡೆ ಹೋದಾಗ ಮತ್ತೊಂದು, ನುಂಗಲು ಮಗದೊಂದು-ಹೀಗೆ.

ಇಂದು ಜನಪ್ರತಿನಿಧಿಗಳು ತಮ್ಮನ್ನು ಜನಪ್ರತಿನಿಧಿಗಳು ಅಂದುಕೊಂಡಿಲ್ಲ. ಶಾಸಕರು ಶಾಸಕ ಅಂದುಕೊಂಡಿಲ್ಲ. ಯಾರೂ ತಮ್ಮ ಸ್ಥಾನಕ್ಕೆ ಹೊಣೆಗಾರರಾಗಿಲ್ಲ. ಇದು ಇಂದಿನ ಸಮಸ್ಯೆಯಾಗಿದೆ. ಉದಾಹರಣೆಗೆ, ಶ್ರೀ ಯತ್ನಾಳ್ ಅವರ ವಿಜಯಪುರ ಜಿಲ್ಲೆಯಲ್ಲಿ ನಿರುದ್ಯೋಗ ತಾಂಡವವಾಡುತ್ತಾ ಅದು ‘ಗುಳೆ ಜಿಲ್ಲೆ’ ಎನ್ನಿಸಿಕೊಂಡುಬಿಟ್ಟಿದೆ. ಯತ್ನಾಳರನ್ನು ಆಯ್ಕೆ ಮಾಡಿದ ‘ಮತದಾರ ಪ್ರಭುಗಳು’ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಕೆಲಸ ಅರಸುತ್ತಾ ಗೋವಾ, ಮಹಾರಾಷ್ಟ್ರದ ಕಡೆಗೆ ಗುಳೆ ಹೋಗುವುದು ದಿನೇದಿನೇ ಹೆಚ್ಚುತ್ತಿದೆ. ಅದೇ ವಿಜಯಪುರದಲ್ಲಿ ಒಂದು ದೊಡ್ಡದಾದ ಕೈಗಾರಿಕಾ ಪ್ರದೇಶವಿದೆ. ಆದರೆ, ಆ ಕೈಗಾರಿಕಾ ಪ್ರದೇಶವು ವಿದ್ಯುತ್ ಮತ್ತಿತರ ಮೂಲಸೌಲಭ್ಯಗಳಿಲ್ಲದೆ ನೊಣ ಹೊಡೆಯುತ್ತಿದೆ. ಇಂತಹ ಕಡೆ ಶಾಸಕನಾದವನು ಮಾತಾಡಲೂ ಪುರುಸೊತ್ತಿಲ್ಲದವನಂತೆ ಆ ಕೈಗಾರಿಕಾ ಕ್ಷೇತ್ರಕ್ಕೆ ವಿದ್ಯುತ್ ಮತ್ತಿತರ ಸೌಲಭ್ಯ ಕಲ್ಪಿಸಲು ಕಾರ್ಯಪ್ರವೃತ್ತನಾಗಿರಬೇಕಿತ್ತು. ಆದರೇನಾಗಿದೆ? ಜನಪ್ರತಿನಿಧಿಗಳು ಹೊಣೆಗೇಡಿಯಾಗಿದ್ದಾರೆ. ಜನಪ್ರತಿನಿಧಿಗಳನ್ನು ಎಚ್ಚರಿಸಬೇಕಿರುವ ಜನರು ಅವಜ್ಞೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವ ಪಕ್ಷದಲ್ಲೇ ಇರಲಿ ತಮ್ಮಂಥವರಿಂದ ಹೆಚ್ಚಿನದನ್ನು ನಿರೀಕ್ಷಿಸುವುದು ತಪ್ಪಲ್ಲ ಎಂದುಕೊಂಡಿದ್ದೇನೆ.

ತುಂಬಾ ಹೆಚ್ಚಾಗಿ ಬರೆದುಬಿಟ್ಟೆ. ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ. ಕ್ಷಮೆ ಇರಲಿ.

ನಿಮ್ಮ ವಿಶ್ವಾಸಿ

ದೇವನೂರ ಮಹಾದೇವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...