ಕುಂದಾಪುರ ಮಿನಿ ವಿಧಾನ ಸೌಧದ ಒಳಗೆ ವ್ಯಕ್ತಿಯೊಬ್ಬರು “ಪಾಕಿಸ್ತಾನ್ ಜಿಂದಾಬಾದ್” ಎನ್ನುತ್ತಾ ಘೋಷಣೆ ಕೂಗಿದ ಘಟನೆ ನಡೆದಿದೆ. ಘೋಷಣೆ ಕೂಗಿದ ವ್ಯಕ್ತಿಯನ್ನು ಬಿ.ಎಸ್. ರಾಘವೇಂದ್ರ(43) ಎಂದು ಗುರುತಿಸಲಾಗಿದೆ. ಕುಂದಾಪುರ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಳಿಗ್ಗೆ ಸುಮಾರು 9.45ರ ಹೊತ್ತಿಗೆ ಮಿನಿ ವಿಧಾನಸೌಧಕ್ಕೆ ಬಂದ ಆರೋಪಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆಗಳನ್ನು ಕೂಗುತ್ತಾ ಮಿನಿವಿಧಾನಸೌಧದ ವರಾಂಡ ಹಾಗೂ ವಿಧಾನಸೌಧದ ಒಳಗಡೆ ಓಡಾಡಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಅದನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡು ಕುಂದಾಪುರ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ರಾಘವೇಂದ್ರರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಆರೋಪಿ ಬಿ.ಎಸ್. ರಾಘವೇಂದ್ರ ಬಿಎಡ್ ಪದವಿಧರರಾದಗಿದ್ದು, ಈ ಹಿಂದೆ ಸ್ಥಳೀಯ ಖಾಸಗಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದರು ಎಂಬ ಮಾಹಿತಿಯಿದೆ. ವಿವಾಹಿತರಾದ ರಾಘವೇಂದ್ರರಿಗೆ ಒಂದು ಮಗುವಿದೆ ಆದರೆ ಸಧ್ಯ ಪತ್ನಿ ಹಾಗೂ ಮಗುವನ್ನು ತ್ಯಜಿಸಿ ತಾಯಿಯೊಂದಿಗೆ ವಾಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂತಲೂ ಹಲವರು ಆರೋಪಿಸಿದ್ದಾರೆ.