HomeಮುಖಪುಟFact-check : ವರ್ಗಾವಣೆಯಾದ ನ್ಯಾ.ಎಸ್ ಮುರಳೀಧರ್ ಕಾಂಗ್ರೆಸ್ ಸಮರ್ಥಕರೆ?

Fact-check : ವರ್ಗಾವಣೆಯಾದ ನ್ಯಾ.ಎಸ್ ಮುರಳೀಧರ್ ಕಾಂಗ್ರೆಸ್ ಸಮರ್ಥಕರೆ?

- Advertisement -
- Advertisement -

ದೆಹಲಿಯಲ್ಲಿ ಭಾರೀ ಹಿಂಸಾಚಾರ ನಡೆಯಿತು. 40ಕ್ಕೂ ಹೆಚ್ಚು ಜನ ಬಲಿಯಾಗಿ 500ರಷ್ಟು ಜನ ಗಾಯಗೊಂಡು ಕೋಟ್ಯಾಂತರ ರೂಗಳ ಸಾರ್ವಜನಿಕ ಆಸ್ತಿಪಾಸ್ತಿ ನಾಶವಾಯಿತು. ಅದಕ್ಕೂ ಮುನ್ನ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಎಂಬ ವ್ಯಕ್ತಿ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯುತ್ತೇವೆ ಎಂದು ಪೊಲೀಸರ ಎದುರೇ ಬೆದರಿಕೆ ಹಾಕಿದ್ದ. ಅದಕ್ಕೂ ಮುಂಚೆ ಅನುರಾಗ್ ಠಾಕೂರ್ ಎಂಬ ಬಿಜೆಪಿ ಸಂಸದ ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಸಾರ್ವಜನಿಕ ವೇದಿಕೆಯಲ್ಲಿ ಘೋಷಣೆ ಕೂಗಿದ್ದ. ಅದರ ವಿಡಿಯೋ ನೋಡಿ

ದೆಹಲಿ ಹಿಂಸಾಚಾರದ ಗಾಯಾಳುಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಲು ಪೊಲೀಸರು ರಕ್ಷಣೆ ನೀಡುತ್ತಿಲ್ಲ ಎಂದು ವಕೀಲರೊಬ್ಬರು ನ್ಯಾಯಾಧೀಶರಿಗೆ ಕರೆ ಮಾಡಿ ಮನವಿ ಮಾಡಿದರು. ತಡರಾತ್ರಿ ವಿಚಾರಣೆ ನಡೆಸಿದ ನ್ಯಾ.ಎಸ್ ಮುರಳೀಧರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ರಕ್ಷಣೆ ನೀಡಲು ಆದೇಶಿಸಿದರು.

ಇನ್ನು ಹಿಂಸಾಚಾರ ಪ್ರಕರಣಕ್ಕೆ ಕಾರಣವೇನೆಂದು ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂತು. ಆಗ ನ್ಯಾ.ಮುರಳೀಧರ್ ಆ ದ್ವೇಷ ಭಾಷಣದ ವಿಡಿಯೋಗಳನ್ನು ಕೋರ್ಟ್‌ನಲ್ಲಿ ಪ್ರಸಾರ ಮಾಡಿ ಬಿಜೆಪಿಯ ಕಪಿಲ್ ಮಿಶ್ರಾ, ಅನುರಾಗ್ ಠಾಕೂರ್ ಸೇರಿದಂತೆ ನಾಲ್ಕು ಜನರ ಮೇಲೆ ಎಫ್‌ಐಆರ್ ಹಾಕಬೇಕೆಂದು ತಾಕೀತು ಮಾಡಿದರು. ಆ ನ್ಯಾಯಮೂರ್ತಿಗಳ ಪರವಾಗಿ ಹಲವು ಪತ್ರಿಕೆಗಳು ವರಿದಿ ಮಾಡಿದರು. ಬಹಳಷ್ಟು ಜನ ಅವರ ಧೈರ್ಯ ಮತ್ತು ನ್ಯಾಯವಂತಿಕೆಯನ್ನು ಮೆಚ್ಚಿಕೊಂಡರು.

ಇದನ್ನೂ ಓದಿ: ಬಿಜಿಪಿ ನಾಯಕರ ವಿರುದ್ಧ FIR ದಾಖಲಿಸಲು ದೆಹಲಿ ಹೈಕೋರ್ಟ್ ಆದೇಶ

ಅದಾದ ಒಂದು ದಿನಕ್ಕೆ ಆ ನ್ಯಾಯಮೂರ್ತಿಯನ್ನು ದೆಹಲಿಯಿಂದ ಪಂಜಾಬ್ – ಹರಿಯಾಣ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಯಿತು.

ಅಷ್ಟೇ ಅಲ್ಲದೇ ಅವರು ಕಾಂಗ್ರೆಸ್ ಪಕ್ಷದ ಸಮರ್ಥಕರು, ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗಿದ್ದರು. ಹಾಗಾಗಿಯೇ ಅವರು ಶಾಹೀನ್ ಬಾಗ್ ಪ್ರತಿಭಟನಾಕಾರರ ಮೇಲೆ ಕ್ರಮ ತೆಗೆದುಕೊಳ್ಳೂವ ಬದಲು ಬಿಜೆಪಿ ಮುಖಂಡರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಹರಿಬಿಡಲಾಯಿತು.

ಈ ಕುರಿತು ಫ್ಯಾಕ್ಟ್ಚೆಕ್ ನಡೆಸಿದಾಗ ನ್ಯಾ.ಮುರಳೀಧರ್ ಕಾಂಗ್ರೆಸ್ ಬೆಂಬಲಿಗರಲ್ಲ, ಸ್ವತಂತ್ರ ನ್ಯಾಯಾಧೀಶರು ಎಂಬುದು ಸ್ಪಷ್ಟವಾಗಿದೆ. ಜೊತೆಗೆ ಸೋನಿಯಾ ಗಾಂಧಿ ಜೊತೆಗೆ ನಾಮಪತ್ರ ಸಲ್ಲಿಸುವಾಗ ಇದ್ದವರು ಕೆ.ಸಿ ಕೌಶಿಕ್ ಎಂಬುವರು ಸೋನಿಯಾರವರ ವಕೀಲರೇ ಹೊರತು ಮುರಳೀಧರ್ ಅಲ್ಲ ಎಂಬುದು ತಿಳಿದುಬಂದಿದೆ.

ಈ ಕುರಿತು ಯೂತ್‌ ಕಾಂಗ್ರೆಸ್‌ ಈ ಹಿಂದೆಯೇ ಹಲವಾರು ಫೋಟೊಗಳನ್ನು ಹಂಚಿಕೊಂಡಿದೆ.

ಆಲ್ಟ್‌ ನ್ಯೂಸ್‌ ಈ ಕುರಿತು ಸಮಗ್ರ ವರದಿ ಮಾಡಿದ್ದು ಮುರಳೀಧರ್‌ ಅಲ್ಲ ಅವರು ಕೌಶಿಕ್‌ ಎಂದು ಸ್ಪಷ್ಟಪಡಿಸಿದೆ. ಆ ಫೋಟೊ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...