Homeಮುಖಪುಟಆತ್ಮಹತ್ಯೆಯೊಂದೇ ನಮಗಿರುವ ದಾರಿ - BSNL ನೌಕರರ ಅಳಲು : ವಿಡಿಯೋ ನೋಡಿ

ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರರ ಅಳಲು : ವಿಡಿಯೋ ನೋಡಿ

- Advertisement -
- Advertisement -

ದೇಶದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆಗಳಲ್ಲೊಂದಾದ ಬಿಎಸ್ಎನ್ಎಲ್ ಮುಳುಗುತ್ತಿರುವ ಟೈಟಾನಿಕ್. ಭಾರತವೆಂಬ ಸಮುದ್ರದಲ್ಲಿ ತೆರಳುತ್ತಿದ್ದಾಗ ಬಂಡವಾಳ ಹಿಂತೆಗೆತವೆಂಬ ಬೃಹತ್ ಹಿಮಗಲ್ಲಿಗೆ ಗುದ್ದಿ, ಆಗಲೋ ಈಗಲೋ ಉಸಿರು ಬಿಡುವಂತಹ ಸ್ಥಿತಿಯಲ್ಲಿದೆ. ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆದಿರುವ ಖಾಸಗಿ ಟೆಲಿಕಾಂ ಕಂಪನಿ ಜಿಯೋ ಅತ್ಯಂತ ಲಾಭದಲ್ಲಿದೆ. ವರ್ಷದಿಂದ ವರ್ಷಕ್ಕೆ ಅದು ಶೇ.62ರಷ್ಟು ಲಾಭ ಗಳಿಸಿದೆ ಎಂದು ವರದಿಗಳು ತಿಳಿಸುತ್ತವೆ. ಆದರೆ ಸಾರ್ವಜನಿಕ ಉದ್ಯಮ ಭಾರತ್ ಸಂಚಾರ್ ನಿಗಮ ಲಿಮಿಟೆಡ್ ತೀವ್ರ ಸಂಕಷ್ಟಕ್ಕೆ ಗುರಿಯಾಗಲು ಅಧಿಕಾರಿಗಳು ಮತ್ತು ಸರ್ಕಾರದ ಬೇಜವಾಬ್ದಾರಿತನವೇ ಕಾರಣ. ಈ ಸತ್ಯ  ಸರ್ಕಾರಕ್ಕೂ ಗೊತ್ತಿದೆ. ಅಧಿಕಾರಿಗಳಿಗೂ ತಿಳಿದಿದೆ. ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲಾರದಂತ ಸ್ಥಿತಿ ಅವರದ್ದು.

ಕೇಂದ್ರ ಸರ್ಕಾರದ ನೀತಿಗಳು ಸಾರ್ವಜನಿಕ ಉದ್ದಿಮೆಗಳನ್ನು ಸರ್ವನಾಶ ಮಾಡಲು ಹೊರಟಿವೆ. ಎಚ್.ಎಂ.ಟಿ. ಸೇರಿದಂತೆ ಹಲವು ಉದ್ದಿಮೆಗಳು ಮುಳುಗಿಹೋದವು. ಈಗ ಬಿಎಸ್ಎನ್ಎಲ್ ಕೂಡ ಅದೇ ಹಾದಿ ಹಿಡಿದಿದೆ. 92 ಸಾವಿರ ನೌಕರರ ಸ್ವಯಂ ನಿವೃತ್ತಿಯಾದರು. ವಾಸ್ತವ ಸಂಗತಿ ಏನೆಂದರೆ ಟೆಲಿಕಾಂ ಇಲಾಖೆ ಇದ್ದಾಗಿನಿಂದಲು ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ನೌಕರರ ಪಾಡು ಹೇಳತೀರದಾಗಿದೆ. ಈ ನೌಕರರು ಕಳೆದ ಅರೇಳು ತಿಂಗಳಿನಿಂದ ವೇತನ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತ ಬಿಎಸ್ಎನ್ಎಲ್ ಕೂಡ ಅವನತಿಯ ತುತ್ತ ತುದಿಯಲ್ಲಿದೆ. ಆದ್ದರಿಂದ ಗುತ್ತಿಗೆ ನೌಕರರಿಗೆ ಮುಂದೇನು ಎಂಬ ಪ್ರಶ್ನೆ ಎದುರಾಗಿದೆ.

ವಿಡಿಯೋ ನೋಡಿ:

BSNL

6-7 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರನ ಅಳಲು…

Posted by Naanu Gauri on Monday, March 2, 2020

‘ದೇಶಾದ್ಯಂತ  ಬಿಎಸ್ಎನ್ಎಲ್ ನಿಗಮದಲ್ಲಿ ಸುಮಾರು 80 ಸಾವಿರಕ್ಕು ಹೆಚ್ಚು ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಕಳೆದ 8 ತಿಂಗಳಿನಿಂದಲೂ ವೇತನ ಪಾವತಿಯಾಗಿಲ್ಲ. ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೌಸ್ ಕೀಪಿಂಗ್ ಮತ್ತು ವಾಚ್ ಅಂಡ್ ವಾರ್ಡ್ ಎಂಬ ಎರಡು ಬಗೆಯ ವಿಭಾಗಗಳು ಇವೆ. ಈ ಎರಡೂ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಗುತ್ತಿಗೆದಾರರು ವೇತನ ನೀಡುತ್ತಾರೆ. ಬಿಎಸ್ಎನ್ಎಲ್ ಈ ಗುತ್ತಿಗೆದಾರರಿಗೆ ಪ್ರತಿಯೊಬ್ಬ ನೌಕರನಿಗೆ 10 ಸಾವಿರದಂತೆ ಹಣ ನೀಡುತ್ತದೆ. ಅಂದರೆ ದೇಶಾದಾದ್ಯಂತಿ ಇರುವ 80 ಸಾವಿರ ನೌಕರರಿಗೆ ಸುಮಾರು 9.5 ಕೋಟಿ ರೂಪಾಯಿ ಗಳನ್ನು ವೇತನ ಬಾಕಿ ಉಳಿಸಿಕೊಳ್ಳಲಾಗಿದೆ.

ಹೌಸ್ ಕೀಪಿಂಗ್ ವಿಭಾಗದ ನೌಕರರಿಗೆ 8,500 ರೂಪಾಯಿ ತಿಂಗಳ ವೇತನ. ವಾಚ್ ಅಂಡ್ ವಾರ್ಡ್ ವಿಭಾಗದ ನೌಕರರಿಗೆ 10 ಸಾವಿರ ರೂಪಾಯಿ ತಿಂಗಳ ವೇತನ ನಿಗದಿಪಡಿಸಲಾಗಿದೆ. ಬಿಎಸ್ಎಸ್ಎಲ್ ಮಾತ್ರ ಪ್ರತಿಯೊಬ್ಬ ನೌಕರನಿಗೆ 10 ಸಾವಿರ ರೂಪಾಯಿ ಅಂತಲೇ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತಿದೆ. ಈಗ ಉದ್ಭವಿಸಿರುವ ಸಮಸ್ಯೆ ಎಂದರೆ ಗುತ್ತಿಗೆದಾರರು ಜಿ.ಎಸ್.ಟಿ ತೆರಿಗೆಯನ್ನು ಪಾವತಿಸಿಲ್ಲ. ಜಿ.ಎಸ್.ಟಿ. ಪಾವತಿಸಿದ ಬಿಲ್ ಗಳನ್ನು ನೀಡಿದರೆ ಮಾತ್ರ ಬಿಎಸ್ಎನ್ಎಲ್ ಹಣ ಬಿಡುಗಡೆ ಮಾಡುತ್ತಾರೆ. ಜಿ.ಎಸ್.ಟಿ. ಪಾವತಿಸಲು ಗುತ್ತಿಗೆದಾರರ ಬಳಿ ಹಣವಿಲ್ಲ. ಇದು ಗುತ್ತಿಗೆ ನೌಕರರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಪ್ರತಿ ತಿಂಗಳು ವೇತನ ಸಿಗದೆ ಗುತ್ತಿಗೆ ನೌಕರರು ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೆ ಶುಲ್ಕ ಇತರೆ ವೆಚ್ಚಗಳಿಗೆ ಹಣವಿಲ್ಲ. ಕುಟುಂಬ ನಿರ್ವಹಣೆಗೆ ಸಾಲ ಮಾಡುತ್ತಿದ್ದೇವೆ. ನಾವು ಕೆಲಸವನ್ನು ಮಾತ್ರ ಮಾಡುತ್ತಿದ್ದೇವೆ. ಬಾಕಿ ವೇತನವನ್ನು ನೀಡದಿದ್ದರೆ ಸಂಸಾರ ತೂಗಿಸುವುದು ಕಷ್ಟವಾಗಿದೆ. ಯಾರೂ ಸಾಲವನ್ನೂ ಕೊಡುತ್ತಿಲ್ಲ. ನಮ್ಮ ಭವಿಷ್ಯ ಕರಾಳವಾಗಿದೆ. ಜೀವನ ನಿರ್ವಹಣೆಗೆ ಕಷ್ಟವಾಗಿದ್ದು ಆತ್ಮಹತ್ಯೆ ಹಿಡಿಯುವುದೊಂದೇ ನಮಗೆ ಇರುವ ದಾರಿ. ಹಲವು ವರ್ಷಗಳಿಂದ ದುಡಿದರೂ ನಮ್ಮನ್ನು ಕಾಯಂ ಮಾಡಲಿಲ್ಲ. ಈಗ ನೋಡಿದರೆ 92 ಸಾವಿರ ಕಾಯಂ ನೌಕರರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ನಮಗೆ ವೇತನವೂ ಇಲ್ಲ. ಪಿಎಫ್ ಯಾವುದೂ ಇಲ್ಲ. ಸರ್ಕಾರ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಹೆಸರು ಹೇಳಲಿಚ್ಚಿಸದ ಗುತ್ತಿಗೆ ನೌಕರರು ಅಳಲುತೋಡಿಕೊಂಡರು.

ಒಂದು ಮೂಲದ ಪ್ರಕಾರ ಕಳೆದ ಮಾರ್ಚ್ ತಿಂಗಳಿಂದಲೂ ಗುತ್ತಿಗೆ ನೌಕರರಿಗೆ ವೇತನ ನೀಡಿಲ್ಲ. 80 ಸಾವಿರ ಗುತ್ತಿಗೆ ನೌಕರರು ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದಾರೆ. ಮಾನಸಿಕ ಹಿಂಸೆ ತಾಳದೆ ರಾಜ್ಯದಲ್ಲಿ ಒಬ್ಬರು ಹೃದಯಾಘಾತವಾಗಿ ತೀರಿಕೊಂಡಿದ್ದಾರೆ. ಹಲವು ಗುತ್ತಿಗೆ ನೌಕರರು ಮಾನಸಿಕ ಒತ್ತಡದಲ್ಲಿದ್ದು ಕೆಲಸ ನಿರ್ವಹಿಸುವುದು ದುಸ್ತರವಾಗಿದೆ. ಖಾಯಂ ನೌಕರರು ಸ್ವಯಂ ನಿವೃತ್ತಿ ತೆಗೆದುಕೊಂಡ ಮೇಲೆ ಗುತ್ತಿಗೆ ನೌಕರರಿಗೆ ಕೆಲಸದ ಒತ್ತಡವೂ ಹೆಚ್ಚಿದೆ. ಅವರ ಕೆಲಸವೆಲ್ಲವೂ ಗುತ್ತಿಗೆ ನೌಕರರ ಹೆಗಲಿಗೆ ವರ್ಗಾವಣೆಗೊಂಡಿದೆ. ಮೇಲಧಿಕಾರಿಗಳು ಹೇಳುವ ಪ್ರತಿಯೊಂದು ಕೆಲಸವನ್ನು ಅನಿವಾರ್ಯವಾಗಿ ಮಾಡಬೇಕಾಗಿದೆ. ಇವೆಲ್ಲವುಗಳಿಂದ ಗುತ್ತಿಗೆ ನೌಕರರು ಮಾನಸಿಕ ತೊಳಲಾಟಕ್ಕೆ ಸಿಕ್ಕಿ ಕಂಬನಿ ಮಿಡಿಯುತ್ತಿದ್ದಾರೆ. ಇವರ ಗೋಳು ಅರಣ್ಯರೋಧನವಾಗಿದೆ.

ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆಯುವ ಜಿಯೋ ಹೆಚ್ಚುಹೆಚ್ಚು ಲಾಭ ಪಡೆಯಲು ಹೇಗೆ ಸಾಧ್ಯವಾಯಿತು? ದೇಶದ ಜನರ ಸಂಪರ್ಕ ಸೇತುವೆಯಾಗಿರುವ ಬಿಎಸ್ಎನ್ಎಲ್ 4ಜಿ ಸೇವೆಯನ್ನು ಯಾಕೆ ಆರಂಭಿಸಲಿಲ್ಲ. ಸಾರ್ವಜನಿಕ ಕಂಪನಿಗಳೊಂದಿಗೆ ಪೈಪೋಟಿ ನೀಡುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಸೃಷ್ಟಿಸದೇ ಇರುವುದರಿಂದ ಎಲ್ಲವೂ ಖಾಸಗಿಯವರ ಪಾಲಾಗುತ್ತಿದೆ. ಬಿಎಸ್ಎನ್ಎಲ್ ಐಸಿಯುನಲ್ಲಿದೆ ಅದು ಯಾವಾಗ ಕಣ್ಣುಮುಚ್ಚುತ್ತದೋ ಎಂಬದನ್ನು ಜನರು ಎದುರು ನೋಡುತ್ತಿದ್ದಾರೆ. ಹೀಗಾಗಿaT ಮುಂದಿನ ದಿನಗಳಲ್ಲಿ ಜಿಯೋ ಸಂಸ್ಥೆ ಸರ್ವಾಧಿಕಾರಿಯಂತೆ ವರ್ತಿಸಿದರೆ ಅಚ್ಚರಿಪಡಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...