Homeಮುಖಪುಟಆತ್ಮಹತ್ಯೆಯೊಂದೇ ನಮಗಿರುವ ದಾರಿ - BSNL ನೌಕರರ ಅಳಲು : ವಿಡಿಯೋ ನೋಡಿ

ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರರ ಅಳಲು : ವಿಡಿಯೋ ನೋಡಿ

- Advertisement -
- Advertisement -

ದೇಶದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆಗಳಲ್ಲೊಂದಾದ ಬಿಎಸ್ಎನ್ಎಲ್ ಮುಳುಗುತ್ತಿರುವ ಟೈಟಾನಿಕ್. ಭಾರತವೆಂಬ ಸಮುದ್ರದಲ್ಲಿ ತೆರಳುತ್ತಿದ್ದಾಗ ಬಂಡವಾಳ ಹಿಂತೆಗೆತವೆಂಬ ಬೃಹತ್ ಹಿಮಗಲ್ಲಿಗೆ ಗುದ್ದಿ, ಆಗಲೋ ಈಗಲೋ ಉಸಿರು ಬಿಡುವಂತಹ ಸ್ಥಿತಿಯಲ್ಲಿದೆ. ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆದಿರುವ ಖಾಸಗಿ ಟೆಲಿಕಾಂ ಕಂಪನಿ ಜಿಯೋ ಅತ್ಯಂತ ಲಾಭದಲ್ಲಿದೆ. ವರ್ಷದಿಂದ ವರ್ಷಕ್ಕೆ ಅದು ಶೇ.62ರಷ್ಟು ಲಾಭ ಗಳಿಸಿದೆ ಎಂದು ವರದಿಗಳು ತಿಳಿಸುತ್ತವೆ. ಆದರೆ ಸಾರ್ವಜನಿಕ ಉದ್ಯಮ ಭಾರತ್ ಸಂಚಾರ್ ನಿಗಮ ಲಿಮಿಟೆಡ್ ತೀವ್ರ ಸಂಕಷ್ಟಕ್ಕೆ ಗುರಿಯಾಗಲು ಅಧಿಕಾರಿಗಳು ಮತ್ತು ಸರ್ಕಾರದ ಬೇಜವಾಬ್ದಾರಿತನವೇ ಕಾರಣ. ಈ ಸತ್ಯ  ಸರ್ಕಾರಕ್ಕೂ ಗೊತ್ತಿದೆ. ಅಧಿಕಾರಿಗಳಿಗೂ ತಿಳಿದಿದೆ. ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲಾರದಂತ ಸ್ಥಿತಿ ಅವರದ್ದು.

ಕೇಂದ್ರ ಸರ್ಕಾರದ ನೀತಿಗಳು ಸಾರ್ವಜನಿಕ ಉದ್ದಿಮೆಗಳನ್ನು ಸರ್ವನಾಶ ಮಾಡಲು ಹೊರಟಿವೆ. ಎಚ್.ಎಂ.ಟಿ. ಸೇರಿದಂತೆ ಹಲವು ಉದ್ದಿಮೆಗಳು ಮುಳುಗಿಹೋದವು. ಈಗ ಬಿಎಸ್ಎನ್ಎಲ್ ಕೂಡ ಅದೇ ಹಾದಿ ಹಿಡಿದಿದೆ. 92 ಸಾವಿರ ನೌಕರರ ಸ್ವಯಂ ನಿವೃತ್ತಿಯಾದರು. ವಾಸ್ತವ ಸಂಗತಿ ಏನೆಂದರೆ ಟೆಲಿಕಾಂ ಇಲಾಖೆ ಇದ್ದಾಗಿನಿಂದಲು ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ನೌಕರರ ಪಾಡು ಹೇಳತೀರದಾಗಿದೆ. ಈ ನೌಕರರು ಕಳೆದ ಅರೇಳು ತಿಂಗಳಿನಿಂದ ವೇತನ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತ ಬಿಎಸ್ಎನ್ಎಲ್ ಕೂಡ ಅವನತಿಯ ತುತ್ತ ತುದಿಯಲ್ಲಿದೆ. ಆದ್ದರಿಂದ ಗುತ್ತಿಗೆ ನೌಕರರಿಗೆ ಮುಂದೇನು ಎಂಬ ಪ್ರಶ್ನೆ ಎದುರಾಗಿದೆ.

ವಿಡಿಯೋ ನೋಡಿ:

BSNL

6-7 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರನ ಅಳಲು…

Posted by Naanu Gauri on Monday, March 2, 2020

‘ದೇಶಾದ್ಯಂತ  ಬಿಎಸ್ಎನ್ಎಲ್ ನಿಗಮದಲ್ಲಿ ಸುಮಾರು 80 ಸಾವಿರಕ್ಕು ಹೆಚ್ಚು ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಕಳೆದ 8 ತಿಂಗಳಿನಿಂದಲೂ ವೇತನ ಪಾವತಿಯಾಗಿಲ್ಲ. ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೌಸ್ ಕೀಪಿಂಗ್ ಮತ್ತು ವಾಚ್ ಅಂಡ್ ವಾರ್ಡ್ ಎಂಬ ಎರಡು ಬಗೆಯ ವಿಭಾಗಗಳು ಇವೆ. ಈ ಎರಡೂ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಗುತ್ತಿಗೆದಾರರು ವೇತನ ನೀಡುತ್ತಾರೆ. ಬಿಎಸ್ಎನ್ಎಲ್ ಈ ಗುತ್ತಿಗೆದಾರರಿಗೆ ಪ್ರತಿಯೊಬ್ಬ ನೌಕರನಿಗೆ 10 ಸಾವಿರದಂತೆ ಹಣ ನೀಡುತ್ತದೆ. ಅಂದರೆ ದೇಶಾದಾದ್ಯಂತಿ ಇರುವ 80 ಸಾವಿರ ನೌಕರರಿಗೆ ಸುಮಾರು 9.5 ಕೋಟಿ ರೂಪಾಯಿ ಗಳನ್ನು ವೇತನ ಬಾಕಿ ಉಳಿಸಿಕೊಳ್ಳಲಾಗಿದೆ.

ಹೌಸ್ ಕೀಪಿಂಗ್ ವಿಭಾಗದ ನೌಕರರಿಗೆ 8,500 ರೂಪಾಯಿ ತಿಂಗಳ ವೇತನ. ವಾಚ್ ಅಂಡ್ ವಾರ್ಡ್ ವಿಭಾಗದ ನೌಕರರಿಗೆ 10 ಸಾವಿರ ರೂಪಾಯಿ ತಿಂಗಳ ವೇತನ ನಿಗದಿಪಡಿಸಲಾಗಿದೆ. ಬಿಎಸ್ಎಸ್ಎಲ್ ಮಾತ್ರ ಪ್ರತಿಯೊಬ್ಬ ನೌಕರನಿಗೆ 10 ಸಾವಿರ ರೂಪಾಯಿ ಅಂತಲೇ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತಿದೆ. ಈಗ ಉದ್ಭವಿಸಿರುವ ಸಮಸ್ಯೆ ಎಂದರೆ ಗುತ್ತಿಗೆದಾರರು ಜಿ.ಎಸ್.ಟಿ ತೆರಿಗೆಯನ್ನು ಪಾವತಿಸಿಲ್ಲ. ಜಿ.ಎಸ್.ಟಿ. ಪಾವತಿಸಿದ ಬಿಲ್ ಗಳನ್ನು ನೀಡಿದರೆ ಮಾತ್ರ ಬಿಎಸ್ಎನ್ಎಲ್ ಹಣ ಬಿಡುಗಡೆ ಮಾಡುತ್ತಾರೆ. ಜಿ.ಎಸ್.ಟಿ. ಪಾವತಿಸಲು ಗುತ್ತಿಗೆದಾರರ ಬಳಿ ಹಣವಿಲ್ಲ. ಇದು ಗುತ್ತಿಗೆ ನೌಕರರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಪ್ರತಿ ತಿಂಗಳು ವೇತನ ಸಿಗದೆ ಗುತ್ತಿಗೆ ನೌಕರರು ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೆ ಶುಲ್ಕ ಇತರೆ ವೆಚ್ಚಗಳಿಗೆ ಹಣವಿಲ್ಲ. ಕುಟುಂಬ ನಿರ್ವಹಣೆಗೆ ಸಾಲ ಮಾಡುತ್ತಿದ್ದೇವೆ. ನಾವು ಕೆಲಸವನ್ನು ಮಾತ್ರ ಮಾಡುತ್ತಿದ್ದೇವೆ. ಬಾಕಿ ವೇತನವನ್ನು ನೀಡದಿದ್ದರೆ ಸಂಸಾರ ತೂಗಿಸುವುದು ಕಷ್ಟವಾಗಿದೆ. ಯಾರೂ ಸಾಲವನ್ನೂ ಕೊಡುತ್ತಿಲ್ಲ. ನಮ್ಮ ಭವಿಷ್ಯ ಕರಾಳವಾಗಿದೆ. ಜೀವನ ನಿರ್ವಹಣೆಗೆ ಕಷ್ಟವಾಗಿದ್ದು ಆತ್ಮಹತ್ಯೆ ಹಿಡಿಯುವುದೊಂದೇ ನಮಗೆ ಇರುವ ದಾರಿ. ಹಲವು ವರ್ಷಗಳಿಂದ ದುಡಿದರೂ ನಮ್ಮನ್ನು ಕಾಯಂ ಮಾಡಲಿಲ್ಲ. ಈಗ ನೋಡಿದರೆ 92 ಸಾವಿರ ಕಾಯಂ ನೌಕರರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ನಮಗೆ ವೇತನವೂ ಇಲ್ಲ. ಪಿಎಫ್ ಯಾವುದೂ ಇಲ್ಲ. ಸರ್ಕಾರ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಹೆಸರು ಹೇಳಲಿಚ್ಚಿಸದ ಗುತ್ತಿಗೆ ನೌಕರರು ಅಳಲುತೋಡಿಕೊಂಡರು.

ಒಂದು ಮೂಲದ ಪ್ರಕಾರ ಕಳೆದ ಮಾರ್ಚ್ ತಿಂಗಳಿಂದಲೂ ಗುತ್ತಿಗೆ ನೌಕರರಿಗೆ ವೇತನ ನೀಡಿಲ್ಲ. 80 ಸಾವಿರ ಗುತ್ತಿಗೆ ನೌಕರರು ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದಾರೆ. ಮಾನಸಿಕ ಹಿಂಸೆ ತಾಳದೆ ರಾಜ್ಯದಲ್ಲಿ ಒಬ್ಬರು ಹೃದಯಾಘಾತವಾಗಿ ತೀರಿಕೊಂಡಿದ್ದಾರೆ. ಹಲವು ಗುತ್ತಿಗೆ ನೌಕರರು ಮಾನಸಿಕ ಒತ್ತಡದಲ್ಲಿದ್ದು ಕೆಲಸ ನಿರ್ವಹಿಸುವುದು ದುಸ್ತರವಾಗಿದೆ. ಖಾಯಂ ನೌಕರರು ಸ್ವಯಂ ನಿವೃತ್ತಿ ತೆಗೆದುಕೊಂಡ ಮೇಲೆ ಗುತ್ತಿಗೆ ನೌಕರರಿಗೆ ಕೆಲಸದ ಒತ್ತಡವೂ ಹೆಚ್ಚಿದೆ. ಅವರ ಕೆಲಸವೆಲ್ಲವೂ ಗುತ್ತಿಗೆ ನೌಕರರ ಹೆಗಲಿಗೆ ವರ್ಗಾವಣೆಗೊಂಡಿದೆ. ಮೇಲಧಿಕಾರಿಗಳು ಹೇಳುವ ಪ್ರತಿಯೊಂದು ಕೆಲಸವನ್ನು ಅನಿವಾರ್ಯವಾಗಿ ಮಾಡಬೇಕಾಗಿದೆ. ಇವೆಲ್ಲವುಗಳಿಂದ ಗುತ್ತಿಗೆ ನೌಕರರು ಮಾನಸಿಕ ತೊಳಲಾಟಕ್ಕೆ ಸಿಕ್ಕಿ ಕಂಬನಿ ಮಿಡಿಯುತ್ತಿದ್ದಾರೆ. ಇವರ ಗೋಳು ಅರಣ್ಯರೋಧನವಾಗಿದೆ.

ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆಯುವ ಜಿಯೋ ಹೆಚ್ಚುಹೆಚ್ಚು ಲಾಭ ಪಡೆಯಲು ಹೇಗೆ ಸಾಧ್ಯವಾಯಿತು? ದೇಶದ ಜನರ ಸಂಪರ್ಕ ಸೇತುವೆಯಾಗಿರುವ ಬಿಎಸ್ಎನ್ಎಲ್ 4ಜಿ ಸೇವೆಯನ್ನು ಯಾಕೆ ಆರಂಭಿಸಲಿಲ್ಲ. ಸಾರ್ವಜನಿಕ ಕಂಪನಿಗಳೊಂದಿಗೆ ಪೈಪೋಟಿ ನೀಡುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಸೃಷ್ಟಿಸದೇ ಇರುವುದರಿಂದ ಎಲ್ಲವೂ ಖಾಸಗಿಯವರ ಪಾಲಾಗುತ್ತಿದೆ. ಬಿಎಸ್ಎನ್ಎಲ್ ಐಸಿಯುನಲ್ಲಿದೆ ಅದು ಯಾವಾಗ ಕಣ್ಣುಮುಚ್ಚುತ್ತದೋ ಎಂಬದನ್ನು ಜನರು ಎದುರು ನೋಡುತ್ತಿದ್ದಾರೆ. ಹೀಗಾಗಿaT ಮುಂದಿನ ದಿನಗಳಲ್ಲಿ ಜಿಯೋ ಸಂಸ್ಥೆ ಸರ್ವಾಧಿಕಾರಿಯಂತೆ ವರ್ತಿಸಿದರೆ ಅಚ್ಚರಿಪಡಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...