Homeಮುಖಪುಟಯತ್ನಾಳ್‌ರವರನ್ನು ತಕ್ಷಣ ಅಮಾನತು ಮಾಡಬೇಕು: ಸಿದ್ದರಾಮಯ್ಯ ಆಗ್ರಹ

ಯತ್ನಾಳ್‌ರವರನ್ನು ತಕ್ಷಣ ಅಮಾನತು ಮಾಡಬೇಕು: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ಅಗೌರವ ತೋರಿದ್ದಾರೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬಿಜೆಪಿ ನಾಯಕರು, ಮಂತ್ರಿಗಳು ಯತ್ನಾಳ್ ಹೇಳಿಕೆಯನ್ನು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ಪಕ್ಷದ ಶಾಸಕನೊಬ್ಬ ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ? ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ತದನಂತರದ ಕಾಲದಲ್ಲೂ ಹತ್ತಾರು ಹೋರಾಟಗಳಲ್ಲಿ ಬಾಗಿಯಾಗಿ ಜೈಲುವಾಸ ಅನುಭವಿಸಿದ್ದಕ್ಕೆ ಸಾಕ್ಷಿಗಳಿವೆ. ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 14 ತಿಂಗಳು ಜೈಲುವಾಸ ಅನುಭವಿಸಿದ್ದಕ್ಕೆ ದಾಖಲೆ ಇದೆ.  ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿದ್ದರು. ದಲಿತರು, ಒಬಿಸಿ ಸೇರಿದಂತೆ ಹಲವು ಹೋರಾಟ ಮಾಡಿದವರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನನ್ನ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಅವರು ಆಡಳಿತರೂಢ ಸರ್ಕಾರದ ವಿರುದ್ಧ ಅನೇಕ ಗಮನಾರ್ಹ ಪ್ರತಿಭಟನೆಗಳನ್ನು ಹೋರಾಟಗಳನ್ನು ನಡೆಸಿರುವ ಸಾಕಷ್ಟು ಉದಾಹರಣೆಗಳಿವೆ. ದಲಿತರು ಹಿಂದುಳಿದವರಿಗಾಗಿ ನಿರಂತರ ಹೋರಾಟ ನಡೆಸಿದ್ದಾರೆ. ಅಂತಹ ವ್ಯಕ್ತಿಯ ಬಗ್ಗೆ ಶಾಸಕ ಯತ್ನಾಳ್ ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಆದರೆ, ಈ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ರೆ ಸ್ಪೀಕರ್ ಕಾನೂನು ಸಚಿವರನ್ನು ಕೇಳಬೇಕು ಎನ್ನುವ ಮೂಲಕ ಸದನವನ್ನು ತಪ್ಪು ದಾರಿಗೆ ಎಳೆದಿದ್ದಾರೆ” ಎಂದು ಸಿದ್ದು ಕಿಡಿಕಾರಿದರು.

ಇನ್ನು ಸ್ಪೀಕರ್​ಗೆ ವಿಶೇಷ ಅಧಿಕಾರ ಇದೆ. ಆದರೆ, ಕಾನೂನು ಸಚಿವರನ್ನು ಕೇಳಿ ಹೇಳುತ್ತಾರೆ. ಸಂವಿಧಾನ ಇಲ್ಲ ಅಂದಿದ್ರೆ ನಾವು ಶಾಸಕರಾಗ್ತಿರಲಿಲ್ಲ, ಇಲ್ಲಿ ದೊರೆಸ್ವಾಮಿ ಮುಖ್ಯ ಅಲ್ಲ, ಇಡೀ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಹಾಗೂ ದೇಶದ್ರೋಹದ ಕೆಲಸ, ಸದನಕ್ಕೆ ಅಗೌರವ ಕೊಡುವ ರೀತಿ ವರ್ತನೆ ಮಾಡಿದ್ರೆ ಅವರನ್ನು ಅಮಾನತು ಮಾಡಬೇಕು ಎಂದರು.

ಸದನಕ್ಕೆ ಅಗೌರವ ತೋರುವ‌ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...