Homeಮುಖಪುಟಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

ಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

- Advertisement -
- Advertisement -

ಕೋಲ್ಕತ್ತಾದಲ್ಲಿಲ ಅಮಿತ್ ಷಾ ಅವರ ರ್‍ಯಾಲಿಯಲ್ಲಿ‘ ಗೋಲಿ ’ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಇದು ದೆಹಲಿಯಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ  ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ತಮ್ಮ ಟಿಎಂಸಿ ಪಕ್ಷವು ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿನ ಹಿಂಸಾಚಾರವು “ಯೋಜಿತ ನರಮೇಧ”ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಪೊಲೀಸರು ಕೇಂದ್ರದ ಅಡಿಯಲ್ಲಿದ್ದಾರೆ. ದೆಹಲಿ ಪೊಲೀಸರು, ಸಿಆರ್‌ಪಿಎಫ್ ಮತ್ತು ಸಿಐಎಸ್‌ಎಫ್ ಇದ್ದರೂ ಸಹ ಗಲಭೆ ತಡೆಯಲು ಏನೂ ಮಾಡಲಿಲ್ಲ. ಎಷ್ಟು ನಾಚಿಕೆಗೇಡಿನ ಸಂಗತಿಯೆಂದರೆ ಇದಕ್ಕೆ ಬಿಜೆಪಿ ಕ್ಷಮೆ ಕೂಡ ಕೋರಿಲ್ಲ ಎಂದು ಅವರು ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ದೆಹಲಿ ಗಲಭೆ ಪೀಡಿತರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸುವಂತೆ ಬ್ಯಾನರ್ಜಿ ತನ್ನ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಗಲಭೆಯಲ್ಲಿ ಕೊಲ್ಲಲ್ಪಟ್ಟವರ ಆತ್ಮಕ್ಕಾಗಿ ಒಂದು ನಿಮಿಷದ ಮೌನಾಚರಣೆ ಮಾಡಿದ ಅವರು, ಬಿಜೆಪಿಯ ಕ್ರಮವನ್ನು ಖಂಡಿಸಿ ಪ್ರತಭಟನೆಗಳನ್ನು ಆಯೋಜಿಸಲು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗೋಲಿಮಾರೋ ಘೋಷಣೆಗಳ ಕುರಿತು ಮಾತನಾಡಿದ ಅವರು ಬೆಂಕಿಯುಗುಳುವ ಪ್ರಚೋದನಕಾರಿ ಘೋಷಣೆಗಳು ಕಾನೂನುಬಾಹಿರವಾಗಿವೆ. ಅದನ್ನು ಕೂಗಿದ ಎಲ್ಲರಿಗೂ ದಂಡ ವಿಧಿಸಲಾಗುತ್ತದೆ. ಇದು ಕೋಲ್ಕತಾ, ದೆಹಲಿಯಲ್ಲ. ಇದು ಬಂಗಾಳ. ನಾವು ಒಬ್ಬ ವ್ಯಕ್ತಿಯನ್ನು ಉಳಿಸಿದರೆ, ಇತರರು ಅವರನ್ನು ಪ್ರೋತ್ಸಾಹಿಸುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಬಂಗಾಳದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುವವರು, ದೆಹಲಿ ಘರ್ಷಣೆಗೆ ಪ್ರಚೋದನೆ ಮತ್ತು ಕುಮ್ಮಕ್ಕು ನೀಡಿದವರನ್ನು ಏಕೆ ಬಂಧಿಸಲಾಗಿಲ್ಲ ಎಂದು ಪ್ರಶ್ನಿಸಿದ ಅವರು, ನಿನ್ನೆ ಘೋಷನೆ ಕೂಗಿದವರನ್ನು ಇಂದು ನಾವು ಬಂಧಿಸಿದ್ದೇವೆ ಎಂದಿದ್ದಾರೆ.

“ಯಾರು ದೇಶದ್ರೋಹಿಗಳು ಎಂಬುದನ್ನು ಜನರು ನಿರ್ಧರಿಸುತ್ತಾರೆ. ಅದನ್ನು ನಿರ್ಧರಿಸಲು ನೀವು ಯಾರು? ” ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಈಗಾಗಲೇ ಕೆಲವು ಜನರನ್ನು ಬಂಧಿಸಲಾಗಿದೆ ಮತ್ತು ಇತರರನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದ ಅವರು, ಘೋಷಣೆ ಕೂಗಿದವರನ್ನು ಗುರುತಿಸಲು ಸಹಾಯ ಮಾಡುವಂತೆ ಅವರು ಪಕ್ಷದ ಕಾರ್ಯಕರ್ತರನ್ನು ಕೇಳಿದ್ದಾರೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿ ಆದರೆ ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಗೋಲಿ ಮಾರೊ ಘೋಷಣೆಗಳನ್ನು ಕೂಗಿದ ಘಟನೆಗೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಸೋಮವಾರ ಬೆಳಿಗ್ಗೆ ಮೂವರು ಬಿಜೆಪಿ ಬೆಂಬಲಿಗರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಅವುಗಳಲ್ಲಿ ಜಾಮೀನು ರಹಿತ ವಿಭಾಗಗಳಿವೆ.

ಅಮಿತ್‌ ಶಾ ಭಾನುವಾರದ ರ್‍ಯಾಲಿಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ನಂತರ  “ಅಮಿತ್‌ ಶಾರವರೆ, ಬಂಗಾಳಕ್ಕೆ ಬಂದು ಉಪದೇಶಿಸುವ ಬದಲು ನಿಮ್ಮ ಮೂಗಿನ ಕೆಳಗಿರುವ ಡೆಲ್ಹಿ ಹಿಂಸಾಚಾರದಲ್ಲಿ 50 ಕ್ಕೂ ಹೆಚ್ಚು ಮುಗ್ಧ ಜೀವಗಳನ್ನು ಉಳಿಸುವಲ್ಲಿ ವಿಫಲರಾದದ್ದಕ್ಕೆ ಕಾರಣ ನೀಡಬೇಕು ಮತ್ತು ಕ್ಷಮೆಯಾಚಿಸಬೇಕು. ಬಿಜೆಪಿ ಹರಡಲು ಪ್ರಯತ್ನಿಸುತ್ತಿರುವ ಧರ್ಮಾಂಧತೆ ಮತ್ತು ದ್ವೇಷವಿಲ್ಲದೆ ಬಂಗಾಳ ಉತ್ತಮವಾಗಿದೆ” ಎಂದು ಮುಖ್ಯಮಂತ್ರಿಯ ಸೋದರಳಿಯ ಮತ್ತು ಟಿಎಂಸಿ ಯುವ ವಿಭಾಗದ ಮುಖ್ಯಸ್ಥ ಅಭಿಷೇಕ್ ಬ್ಯಾನರ್ಜಿ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಪರ ಅಭಿಯಾನದ ಭಾಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ರಾಜ್ಯಾದ್ಯಂತ ಸಂಚರಿಸಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಮತ್ತು ಅದರ ಕೋಮು ಸೌಹಾರ್ದತೆಯನ್ನು ಕಾಪಾಡಲು ಮಮತಾ ಬ್ಯಾನರ್ಜಿ ಏಕೆ ಮಹತ್ವ ಎಂಬುದನ್ನು ಜನರಿಗೆ ಅರ್ಥವಾಗುವಂತೆ ಮಾಡುತ್ತಾರೆ ಎಂದು ಪಕ್ಷ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...