Homeಮುಖಪುಟಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

ಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಭೂಬಾಲನ್ ಅವರಿಗೆ ಗುತ್ತಿಗೆದಾರರ ಕಿರುಕುಳ ಹೆಚ್ಚಾಗಿದೆ. ತಮಗೆ ದಂಡ ಹಾಕಿದರೆಂಬ ಕಾರಣಕ್ಕೆ ಭೂಬಾಲನ್ ಅವರನ್ನು ತುಮಕೂರಿನಿಂದ ಎತ್ತಂಗಡಿ ಮಾಡಿಸಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಗುತ್ತಿಗೆದಾರರು ‘ಬಸವಜ್ಯೋತಿ’ ಮೇಲೆ ಒತ್ತಡ ತಂದು ಭೂಬಾಲನ್ ವರ್ಗಾವಣೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಭಾಗವಾಗಿಯೇ ಅವರನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಹುದ್ದೆಯಿಂದ ಬಿಡುಗಡೆಗೊಳಿಸಿ, ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗರಾಜ್ ಅವರನ್ನು ತರುವುದು ಖಚಿತವಾಗಿದೆ.

ಭೂಬಾಲನ್ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ. ಜೊತೆಗೆ ದಕ್ಷ, ಪ್ರಾಮಾಣಿಕ ಎಂಬ ಹೆಸರು ಗಳಿಸಿದ್ದಾರೆ. ಅದನ್ನು ಕಾರ್ಯತಃ ಮಾಡಿಯೂ ತೋರಿಸಿದ್ದಾರೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಬಂದಿದ್ದಾರೆ. ಸ್ಮಾಟ್ ಸಿಟಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸುವಂತಹ ಸಾಹಸಕ್ಕೆ ಕೈಹಾಕಿದವರು ಭೂಬಾಲನ್.

ತುಮಕೂರು ನಗರದ ಒಳರಸ್ತೆಗಳ ಅಭಿವೃದ್ದಿ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದ ಮೆ/ಆರ್.ಎಂ.ಎನ್ ಇನ್ ಫ್ರಾಸ್ಟ್ರಕ್ಚರ್ಸ್ ಗೆ 50,4,630 ರೂಪಾಯಿ, ಅಶೋಕ ರಸ್ತೆ ಅಭಿವೃದ್ಧಿ ಗುತ್ತಿಗೆ ಹಿಡಿದಿದ್ದ ಸಿದ್ದಾರ್ಥ ಸಿವಿಲ್ ವರ್ಕ್ಸ್ ಪ್ರೈ., ಲಿಮಿಟೆಡ್ ಗೆ 26,97,720 ರೂ, ಅಮಾನಿಕೆರೆ ಏರಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿ ಗುತ್ತಿಗೆ ಪಡೆದಿದ್ದ ಮೆ/ಆರ್.ಎಂ.ಎನ್. ಇನ್ ಫ್ರಾಸ್ಟ್ರಕ್ಚರ್ಸ್ ಗೆ 23,42,295 ರೂಪಾಯಿ, ಡಾ.ರಾಧಕೃಷ್ಣ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದಿದ್ದ ಶ್ರೀ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ.ಲಿ.ಗೆ 16,42,295 ರೂ. ಭಗವಾನ್ ಮಹಾವೀರ್ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದ ಶ್ರೀ ಸುಧಾಕರ ಪೆರಿಟಾಲ ಕಂಪನಿಗೆ 10,3,460 ರೂ. ಮಹಿಳಾ ಥೀಮ್ ಪಾರ್ಕ್ ಗುತ್ತಿಗೆ ತೆಗೆದುಕೊಂಡಿದ್ದ ಮೆ/ರಾಜೇಗೌಡ ಅಂಡ್ ಕೋ ಗೆ 6,77, 377 ರೂ. ಟ್ರಾಮಾ ಸೆಂಟರ್ ಅಭಿವೃದ್ಧಿಪಡಿಸುವ ಗುತ್ತಿಗೆ ಪಡೆದಿರುವ ಕೆ.ಬಿ.ಆರ್. ಇನ್ ಫ್ರಾಟಿಕ್ ಲಿ ಕಂಪನಿಗೆ 5,28,000 ರೂ ದಂಡ ವಿಧಿಸಿದ್ದರು.

ಹಾಗೆಯೇ ಫೀಲ್ಡ್ ಮಾರ್ಷಲ್ ಕರಿಯಪ್ಪ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ., ಲಿ ಕಂಪನಿಗೆ 5,65,119 ರೂ. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಲು ಆಲದ ಮರಗಳ ವಿಶಾಲ ರಾಜಮಾರ್ಗದ ನಿರ್ಮಾಣ ಮತ್ತು ಅಭಿವೃದ್ಧಿಯ ಗುತ್ತಿಗೆ ಪಡೆದಿದ್ದ ಮೆ/ಎ1 ಕನ್ ಸ್ಟ್ರಕ್ಷನ್ 4,19, 625 ರೂ. ಮೂರು ಪಾರ್ಕ್ ಗಳ ಅಭಿವೃದ್ಧಿ ಗುತ್ತಿಗೆದಾರ ಮೆ/ಸಾಯಿತ್ರಿಷ ಇನ್ ಫ್ರಾ ಇಂಜಿನಿಯರ್ಸ್ 1,26,200 ರೂ, ಮಹಾತ್ಮ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿ (ಪಿಎಂಸಿ ವತಿಯಿಂದ ನಕ್ಷೆಗಳ ವಿಳಂಬಕ್ಕಾಗಿ) ಕ್ಯಾಡ್ ಫೋರಂ ಬೆಂಗಳೂರು ಗುತ್ತಿಗೆದಾರ ಕಂಪನಿಗೆ 3,08,060 ರೂ ದಂಡ ವಿಧಿಸಿ ಕೂಡಲೇ ಎಲ್ಲಾ ಗುತ್ತಿಗೆದಾರ ಕಂಪನಿಗಳು ದಂಡ ಪಾವತಿಸಬೇಕು ಎಂದು ಕಟ್ಟುನಿಟ್ಟಾಗಿ ಆದೇಶಿಸಿದ್ದರು..

ಅದೇ ಕಾರಣಕ್ಕೆ ಮೊದಲ ಬಾರಿಗೆ ಬಸವಜ್ಯೋತಿ ಗುತ್ತಿಗೆದಾರರ ಲಾಬಿಗೆ ಮಣಿದು ವರ್ಗಾವಣೆ ಮಾಡಿಸಿದ್ದರು. ಆಗ ವರ್ಗಾವಣೆ ವಿರೋಧಿಸಿ ತುಮಕೂರು ನಗರದ ನಾಗರಿಕರು ಪ್ರತಿಭಟನೆ ನಡೆಸಿದ್ದರು. ವರ್ಗಾವಣೆ ರದ್ದು ಗೊಳಿಸಬೇಕು ಎಂದು ಪಟ್ಟುಹಿಡಿದಿದ್ದರು.. ಜನರ ಒತ್ತಾಯಕ್ಕೆ ‘ಬಸವಜ್ಯೋತಿ’ ಮಣಿಯಲೇ ಬೇಕಾಯಿತು ಹಾಗಾಗಿ ಭೂಬಾಲನ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳಬೇಕಾಯಿತು.

ಇದೀಗ ಮತ್ತೆ ಭೂಬಾಲನ್ ಅವರಿಗೆ ಕಿರುಕುಳ ಮುಂದುವರಿದಿದೆ. ಭೂಬಾಲನ್ ಇದ್ದರೆ ನಮ್ಮ ಕೆಲಸ ನಡೆಯುವುದಿಲ್ಲವೆಂಬುದು ಅರಿತಿರುವ ಗುತ್ತಿಗೆದಾರರು ಬಸವಜ್ಯೋತಿ ಮೇಲೆ ಒತ್ತಡ ತಂದು ಆಯುಕ್ತರನ್ನು ವರ್ಗಾವಣೆ ಮಾಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

ಈಗಾಗಲೇ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ಹುದ್ದೆಯಿಂದ ಭೂಬಾಲನ್ ಅವರನ್ನು ಹೊರಗೆ ಕಳಿಸಲಾಗಿದೆ. ಅಲ್ಲಿ ಅವರಿದ್ದರೆ ನಮ್ಮ ‘ವ್ಯವಹಾರ’ ಸುಸೂತ್ರವಾಗಿ ನಡೆಯುವುದಿಲ್ಲವೆಂಬ ಸತ್ಯ ಭ್ರಷ್ಟ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ತಿಳಿದುಹೋಗಿರುವುದರಿಂದ ದಕ್ಷ ಅಧಿಕಾರಿ ಎತ್ತಂಗಡಿಗೆ ಇನ್ನಿಲ್ಲದ ಕಸರತ್ತು ತೀವ್ರಗೊಂಡಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭೂಬಾಲನ್ ಜಾಗಕ್ಕೆ ‘ಜಾತಿಬಂಧವ’ ರನ್ನೇ ಕರೆತಂದು ಕೂರಿಸಿದರೆ ಹುಲ್ಲುಗಾವಲಿನಲ್ಲಿ ಮೇಯ್ದು ದುಂಡಗಾಗಲು ಈ ಪಟಲಾಂ ತುದಿಮೇಲೆ ನಿಂತಿದ್ದಾರೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ಎತ್ತಂಗಡಿ ಮಾಡಿಸುವಲ್ಲಿ ‘ಅಮ’ ಪಾತ್ರ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ದಕ್ಷ ಅಧಿಕಾರಿಗಳನ್ನು ಕಂಡರೆ ಆಗದವರ ಪಟ್ಟಿ ದೊಡ್ಡದಾಗಿದೆ. ಮಣಿವಣ್ಣನ್ ತುಮಕೂರು ನಗರಸಭೆಯ ಆಯುಕ್ತರಾಗಿ ಕೆಲಸ ಮಾಡಿದಾಗಲೂ ಇದೇ ಬಸವಜ್ಯೋತಿ ಅವರನ್ನು ವರ್ಗಾವಣೆ ಮಾಡಿಸಿದ್ದರು ಎಂಬ ಮಾತುಗಳು ಗುಟ್ಟಾಗಿ ಉಳಿದಿಲ್ಲ. ಅಭಿವೃದ್ಧಿಯ ‘ಹರಿಕಾರ’ನೆಂಬ ಬಿರುದು ಪಡೆದಿರುವ ವ್ಯಕ್ತಿಯೂ ಕೂಡ ಭೂಬಾಲನ್ ವರ್ಗಾವಣೆಗೆ ತಂತ್ರ ಹೆಣೆಯುತ್ತಲೇ ಇದ್ದಾರೆ. ಆ ಮೂವರು ಸೇರಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮತ್ರಿಯ ಮೇಲೆ ಭೂಬಾಲನ್ ವರ್ಗಾವಣೆಗೆ ಒತ್ತಡ ಹೇರಿದ್ದಾರೆ. ಇದು ವರ್ಕೌಟ್ ಆದರೆ ಇನ್ನು ಕೆಲವೇ ದಿನಗಳಲ್ಲಿ ಭೂಬಾಲನ್ ತುಮಕೂರಿನಿಂದ ಬೇರೆಡೆ ವರ್ಗಾವಣೆಯಾಗುವುದು ಖಚಿತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...