Homeಮುಖಪುಟಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

ಸ್ಮಾರ್ಟ್ ಸಿಟಿ ಗುತ್ತಿಗೆದಾರರಿಗೆ ದಂಡ : ಪ್ರಾಮಾಣಿಕ ಆಯುಕ್ತ ಬೂಬಾಲನ್ ಎತ್ತಂಗಡಿಗೆ ಬಸವಜ್ಯೋತಿ ತೀವ್ರ ಯತ್ನ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಭೂಬಾಲನ್ ಅವರಿಗೆ ಗುತ್ತಿಗೆದಾರರ ಕಿರುಕುಳ ಹೆಚ್ಚಾಗಿದೆ. ತಮಗೆ ದಂಡ ಹಾಕಿದರೆಂಬ ಕಾರಣಕ್ಕೆ ಭೂಬಾಲನ್ ಅವರನ್ನು ತುಮಕೂರಿನಿಂದ ಎತ್ತಂಗಡಿ ಮಾಡಿಸಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಗುತ್ತಿಗೆದಾರರು ‘ಬಸವಜ್ಯೋತಿ’ ಮೇಲೆ ಒತ್ತಡ ತಂದು ಭೂಬಾಲನ್ ವರ್ಗಾವಣೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಭಾಗವಾಗಿಯೇ ಅವರನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಹುದ್ದೆಯಿಂದ ಬಿಡುಗಡೆಗೊಳಿಸಿ, ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗರಾಜ್ ಅವರನ್ನು ತರುವುದು ಖಚಿತವಾಗಿದೆ.

ಭೂಬಾಲನ್ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ. ಜೊತೆಗೆ ದಕ್ಷ, ಪ್ರಾಮಾಣಿಕ ಎಂಬ ಹೆಸರು ಗಳಿಸಿದ್ದಾರೆ. ಅದನ್ನು ಕಾರ್ಯತಃ ಮಾಡಿಯೂ ತೋರಿಸಿದ್ದಾರೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಬಂದಿದ್ದಾರೆ. ಸ್ಮಾಟ್ ಸಿಟಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸುವಂತಹ ಸಾಹಸಕ್ಕೆ ಕೈಹಾಕಿದವರು ಭೂಬಾಲನ್.

ತುಮಕೂರು ನಗರದ ಒಳರಸ್ತೆಗಳ ಅಭಿವೃದ್ದಿ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದ ಮೆ/ಆರ್.ಎಂ.ಎನ್ ಇನ್ ಫ್ರಾಸ್ಟ್ರಕ್ಚರ್ಸ್ ಗೆ 50,4,630 ರೂಪಾಯಿ, ಅಶೋಕ ರಸ್ತೆ ಅಭಿವೃದ್ಧಿ ಗುತ್ತಿಗೆ ಹಿಡಿದಿದ್ದ ಸಿದ್ದಾರ್ಥ ಸಿವಿಲ್ ವರ್ಕ್ಸ್ ಪ್ರೈ., ಲಿಮಿಟೆಡ್ ಗೆ 26,97,720 ರೂ, ಅಮಾನಿಕೆರೆ ಏರಿ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿ ಗುತ್ತಿಗೆ ಪಡೆದಿದ್ದ ಮೆ/ಆರ್.ಎಂ.ಎನ್. ಇನ್ ಫ್ರಾಸ್ಟ್ರಕ್ಚರ್ಸ್ ಗೆ 23,42,295 ರೂಪಾಯಿ, ಡಾ.ರಾಧಕೃಷ್ಣ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದಿದ್ದ ಶ್ರೀ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ.ಲಿ.ಗೆ 16,42,295 ರೂ. ಭಗವಾನ್ ಮಹಾವೀರ್ ರಸ್ತೆ ಅಭಿವೃದ್ಧಿ ಗುತ್ತಿಗೆ ಪಡೆದ ಶ್ರೀ ಸುಧಾಕರ ಪೆರಿಟಾಲ ಕಂಪನಿಗೆ 10,3,460 ರೂ. ಮಹಿಳಾ ಥೀಮ್ ಪಾರ್ಕ್ ಗುತ್ತಿಗೆ ತೆಗೆದುಕೊಂಡಿದ್ದ ಮೆ/ರಾಜೇಗೌಡ ಅಂಡ್ ಕೋ ಗೆ 6,77, 377 ರೂ. ಟ್ರಾಮಾ ಸೆಂಟರ್ ಅಭಿವೃದ್ಧಿಪಡಿಸುವ ಗುತ್ತಿಗೆ ಪಡೆದಿರುವ ಕೆ.ಬಿ.ಆರ್. ಇನ್ ಫ್ರಾಟಿಕ್ ಲಿ ಕಂಪನಿಗೆ 5,28,000 ರೂ ದಂಡ ವಿಧಿಸಿದ್ದರು.

ಹಾಗೆಯೇ ಫೀಲ್ಡ್ ಮಾರ್ಷಲ್ ಕರಿಯಪ್ಪ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಶ್ರೀನಿವಾಸ ಕನ್ ಸ್ಟ್ರಕ್ಷನ್ಸ್ ಪ್ರೈ., ಲಿ ಕಂಪನಿಗೆ 5,65,119 ರೂ. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಲು ಆಲದ ಮರಗಳ ವಿಶಾಲ ರಾಜಮಾರ್ಗದ ನಿರ್ಮಾಣ ಮತ್ತು ಅಭಿವೃದ್ಧಿಯ ಗುತ್ತಿಗೆ ಪಡೆದಿದ್ದ ಮೆ/ಎ1 ಕನ್ ಸ್ಟ್ರಕ್ಷನ್ 4,19, 625 ರೂ. ಮೂರು ಪಾರ್ಕ್ ಗಳ ಅಭಿವೃದ್ಧಿ ಗುತ್ತಿಗೆದಾರ ಮೆ/ಸಾಯಿತ್ರಿಷ ಇನ್ ಫ್ರಾ ಇಂಜಿನಿಯರ್ಸ್ 1,26,200 ರೂ, ಮಹಾತ್ಮ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿ (ಪಿಎಂಸಿ ವತಿಯಿಂದ ನಕ್ಷೆಗಳ ವಿಳಂಬಕ್ಕಾಗಿ) ಕ್ಯಾಡ್ ಫೋರಂ ಬೆಂಗಳೂರು ಗುತ್ತಿಗೆದಾರ ಕಂಪನಿಗೆ 3,08,060 ರೂ ದಂಡ ವಿಧಿಸಿ ಕೂಡಲೇ ಎಲ್ಲಾ ಗುತ್ತಿಗೆದಾರ ಕಂಪನಿಗಳು ದಂಡ ಪಾವತಿಸಬೇಕು ಎಂದು ಕಟ್ಟುನಿಟ್ಟಾಗಿ ಆದೇಶಿಸಿದ್ದರು..

ಅದೇ ಕಾರಣಕ್ಕೆ ಮೊದಲ ಬಾರಿಗೆ ಬಸವಜ್ಯೋತಿ ಗುತ್ತಿಗೆದಾರರ ಲಾಬಿಗೆ ಮಣಿದು ವರ್ಗಾವಣೆ ಮಾಡಿಸಿದ್ದರು. ಆಗ ವರ್ಗಾವಣೆ ವಿರೋಧಿಸಿ ತುಮಕೂರು ನಗರದ ನಾಗರಿಕರು ಪ್ರತಿಭಟನೆ ನಡೆಸಿದ್ದರು. ವರ್ಗಾವಣೆ ರದ್ದು ಗೊಳಿಸಬೇಕು ಎಂದು ಪಟ್ಟುಹಿಡಿದಿದ್ದರು.. ಜನರ ಒತ್ತಾಯಕ್ಕೆ ‘ಬಸವಜ್ಯೋತಿ’ ಮಣಿಯಲೇ ಬೇಕಾಯಿತು ಹಾಗಾಗಿ ಭೂಬಾಲನ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳಬೇಕಾಯಿತು.

ಇದೀಗ ಮತ್ತೆ ಭೂಬಾಲನ್ ಅವರಿಗೆ ಕಿರುಕುಳ ಮುಂದುವರಿದಿದೆ. ಭೂಬಾಲನ್ ಇದ್ದರೆ ನಮ್ಮ ಕೆಲಸ ನಡೆಯುವುದಿಲ್ಲವೆಂಬುದು ಅರಿತಿರುವ ಗುತ್ತಿಗೆದಾರರು ಬಸವಜ್ಯೋತಿ ಮೇಲೆ ಒತ್ತಡ ತಂದು ಆಯುಕ್ತರನ್ನು ವರ್ಗಾವಣೆ ಮಾಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

ಈಗಾಗಲೇ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ಹುದ್ದೆಯಿಂದ ಭೂಬಾಲನ್ ಅವರನ್ನು ಹೊರಗೆ ಕಳಿಸಲಾಗಿದೆ. ಅಲ್ಲಿ ಅವರಿದ್ದರೆ ನಮ್ಮ ‘ವ್ಯವಹಾರ’ ಸುಸೂತ್ರವಾಗಿ ನಡೆಯುವುದಿಲ್ಲವೆಂಬ ಸತ್ಯ ಭ್ರಷ್ಟ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ತಿಳಿದುಹೋಗಿರುವುದರಿಂದ ದಕ್ಷ ಅಧಿಕಾರಿ ಎತ್ತಂಗಡಿಗೆ ಇನ್ನಿಲ್ಲದ ಕಸರತ್ತು ತೀವ್ರಗೊಂಡಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭೂಬಾಲನ್ ಜಾಗಕ್ಕೆ ‘ಜಾತಿಬಂಧವ’ ರನ್ನೇ ಕರೆತಂದು ಕೂರಿಸಿದರೆ ಹುಲ್ಲುಗಾವಲಿನಲ್ಲಿ ಮೇಯ್ದು ದುಂಡಗಾಗಲು ಈ ಪಟಲಾಂ ತುದಿಮೇಲೆ ನಿಂತಿದ್ದಾರೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ಎತ್ತಂಗಡಿ ಮಾಡಿಸುವಲ್ಲಿ ‘ಅಮ’ ಪಾತ್ರ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ದಕ್ಷ ಅಧಿಕಾರಿಗಳನ್ನು ಕಂಡರೆ ಆಗದವರ ಪಟ್ಟಿ ದೊಡ್ಡದಾಗಿದೆ. ಮಣಿವಣ್ಣನ್ ತುಮಕೂರು ನಗರಸಭೆಯ ಆಯುಕ್ತರಾಗಿ ಕೆಲಸ ಮಾಡಿದಾಗಲೂ ಇದೇ ಬಸವಜ್ಯೋತಿ ಅವರನ್ನು ವರ್ಗಾವಣೆ ಮಾಡಿಸಿದ್ದರು ಎಂಬ ಮಾತುಗಳು ಗುಟ್ಟಾಗಿ ಉಳಿದಿಲ್ಲ. ಅಭಿವೃದ್ಧಿಯ ‘ಹರಿಕಾರ’ನೆಂಬ ಬಿರುದು ಪಡೆದಿರುವ ವ್ಯಕ್ತಿಯೂ ಕೂಡ ಭೂಬಾಲನ್ ವರ್ಗಾವಣೆಗೆ ತಂತ್ರ ಹೆಣೆಯುತ್ತಲೇ ಇದ್ದಾರೆ. ಆ ಮೂವರು ಸೇರಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮತ್ರಿಯ ಮೇಲೆ ಭೂಬಾಲನ್ ವರ್ಗಾವಣೆಗೆ ಒತ್ತಡ ಹೇರಿದ್ದಾರೆ. ಇದು ವರ್ಕೌಟ್ ಆದರೆ ಇನ್ನು ಕೆಲವೇ ದಿನಗಳಲ್ಲಿ ಭೂಬಾಲನ್ ತುಮಕೂರಿನಿಂದ ಬೇರೆಡೆ ವರ್ಗಾವಣೆಯಾಗುವುದು ಖಚಿತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....