Homeಮುಖಪುಟದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ನಾನು "ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ" ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ನಾಯಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಕುರಿತು ಸಚಿವ ಸುರೇಶ್‌ ಕುಮಾರ್‌ರವರು ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಅದನ್ನು ವಿರೋಧಿಸಿ ದೇವನೂರು ಮಹಾದೇವರು ಬಹಿರಂತ ಪತ್ರವನ್ನು ಬರೆದಿದ್ದರು. ಅದಕ್ಕೆ ಸುರೇಶ್‌ ಕುಮಾರ್‌ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಚಿಂತಕ-ಸಾಹಿತಿ ಶ್ರೀ ದೇವನೂರು ಮಹಾದೇವ ರು ನನಗೆ ಬರೆದ ಪತ್ರಕ್ಕೆ ನನ್ನ ಪ್ರತಿಕ್ರಿಯೆ.

ಹಿರಿಯರಾದ ಮಾನ್ಯ ದೇವನೂರು ಮಹಾದೇವ ರವರೇ,

ಈ “ನಿಮ್ಮಸುರೇಶ್ ನನ್ನು “ನಮ್ಮ ಸುರೇಶ್” ಎಂದು‌ ಪರಿಗಣಿಸಿ ನನಗೆ ಪತ್ರ ಬರೆದಿರುವುದಕ್ಕಾಗಿ ನನ್ನ ಧನ್ಯವಾದಗಳು.

ನಿಮ್ಮ ಪತ್ರವನ್ನು ನಾಲ್ಕೈದು ಬಾರಿ ವಿವರವಾಗಿ ಓದಿದೆ. ನೀವು ವ್ಯಕ್ತ‌‌ಪಡಿಸಿರುವ ಅಭಿಪ್ರಾಯಗಳ‌ ಪೈಕಿ ಕೆಲವದರ ಬಗ್ಗೆ ನನ್ನ ಸಹಮತವಿಲ್ಲದಿದ್ದರೂ ನಿಮ್ಮ ಭಾವನೆಯನ್ನು ನಾನು ಪೂರ್ಣ ಗೌರವಿಸುತ್ತೇನೆ.

ಶ್ರೀ‌ ಹೆಚ್.ಎಸ್.ದೊರೆಸ್ವಾಮಿಯವರನ್ನು ನಾನು ಅನೇಕ‌ ದಶಕಗಳಿಂದ‌ ನೋಡಿಕೊಂಡು ಬಂದಿದ್ದೇನೆ, ಬೆಳೆದಿದ್ದೇನೆ. ಅವರ ಹಿರಿತನ, ಸಾಮಾಜಿಕ ಕಾಳಜಿಯ ಕುರಿತು ನನಗೆ ಗೌರವವಿದೆ. ಅವರೂ ಸಹ ನನ್ನ ಬಗ್ಗೆ ಅನೇಕ ಬಾರಿ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅವರೊಡನೆ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳೂ ನನಗೆ ಸಿಕ್ಕಿವೆ.

#ಆದರೆ….

ಅಂತಹ ಹಿರಿಯ ಸ್ಥಾನದ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನು‌ ವ್ಯಕ್ತಪಡಿಸುವಾಗ ಉಪಯೋಗಿಸುವ ಪದಗಳು ಬಹುಮುಖ್ಯವಾಗುತ್ತವೆ. ಸೈದ್ಧಾಂತಿಕವಾಗಿ ತಾವು ವಿರೋಧಿಸುವರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತ‌ಪಡಿಸಲು ಹಿರಿಯರಾದ ದೊರೆಸ್ವಾಮಿಯವರಿಗೆ ಪೂರ್ಣ ಸ್ವಾತಂತ್ರ್ಯವಿದೆ. ಆದರೆ ಅದನ್ನು ವ್ಯಕ್ತಪಡಿಸುವ ಪರಿಭಾಷೆಯ ಕುರಿತು ಸ್ವಲ್ಪ ಅವರು ಗಮನ ಹರಿಸಬೇಕಿತ್ತು.

“ಆಡಬಾರದ್ದನ್ನು ಆಡಿದರೆ ಕೇಳಬಾರದ್ದನ್ನು ಕೇಳಬೇಕಾಗುತ್ತದೆ‌” ಎಂದು ನಾನು ಹೇಳಿರುವುದು ಇಂದಿನ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಸಂಬೋಧಿಸಿ ಹೇಳಿರುವ ಮಾತು ಎಂದು ತಮಗೆ ಅನಿಸುತ್ತಿಲ್ಲವೇ? ರಾಜಕೀಯ, ಸಾಮಾಜಿಕ, ಧಾರ್ಮಿಕ… ಈ ಎಲ್ಲ ವಲಯಗಳಲ್ಲಿಯೂ‌ ಹೆಚ್ಚಾಗಿ ಆಡಬಾರದ‌ ಮಾತುಗಳು, ಅದಕ್ಕೆ ಪ್ರತಿಕ್ರಿಯೆಯಾಗಿ ಕೇಳಬಾರದ ಮಾತುಗಳೇ ಬರುತ್ತಿವೆ. ಮುಂಚೆಯಿಂದ ಈ ಸಮಾಜವು – ವಾದ, ಪ್ರತಿವಾದಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.
(Thesis ಮತ್ತು‌ Anti thesis ಸಂಘರ್ಷದಿಂದ synthesis ಹುಟ್ಟುತ್ತದೆ ಎಂಬುದೂ ಒಂದು ವಾದ.).

ಆದರೆ, ವಾದ ಪ್ರತಿಸಲ ವಿವಾದಕ್ಕೇ ಆಸ್ಪದ ಕೊಡಬಾರದು. ದುರದೃಷ್ಟವಶಾತ್ ವಾದವನ್ನು ಮಾಡುವಾಗ, ಬಹಳ ಗಟ್ಟಿಯಾಗಿ ತಮ್ಮ‌ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ಬಳಕೆಯಾಗುತ್ತಿರುವ ರೀತಿಯಲ್ಲಿಯೂ ಇಂದು‌ ಕೆಟ್ಟ ಮೇಲ್ಪಂಕ್ತಿಯನ್ನು ನಾವೆಲ್ಲಾ ಕಾಣುತ್ತಿದ್ದೇವೆ. ಅತ್ಯಂತ ಅಗತ್ಯವಿರುವ ಉತ್ತಮ ಮೇಲ್ಪಂಕ್ತಿ ಬಹಳ ಅಪರೂಪವಾಗುತ್ತಿದೆ. ವಿರೋಧದ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರೂ‌ ಅದನ್ನು ಕೇಳಿದ ವಿರೋಧಿಗಳು‌ ಸಹಾ ಅಹುದಹುದೆನ್ನಬೇಕು.

ನರೇಂದ್ರ ಮೋದಿಯವರ ಕುರಿತು, ಸಾವರ್ಕರ್ ಕುರಿತು ನಿಮಗೆ ನಿಮ್ಮದೇ ಆದ ಅಭಿಪ್ರಾಯ ‌ಇರುವುದು‌ ಎಷ್ಟು‌ ಸಹಜವೋ ಹಾಗೆಯೇ‌ ನನಗೂ ನನ್ನದೇ ಆದ ಅಭಿಪ್ರಾಯ ಇರುವುದೂ ಸಹಜ‌. ನಾನು ಗೌರವಿಸುವ ಸಾವರ್ಕರ್ ಕುರಿತು, ನನ್ನ ನಾಯಕರಾದ ಮೋದಿಯವರ ಕುರಿತು ಯಾರಾದರೂ ಏನಾದರೂ ನನಗೆ ಸರಿಯಲ್ಲದ್ದನ್ನು ಹೇಳಿದರೆ‌ ಪ್ರತಿಕ್ರಿಯಿಸಬೇಕಾದ್ದು ನನ್ನ ಧರ್ಮ. ಹಾಗೆ ಪ್ರತಿಕ್ರಿಯಿಸುವಾಗ ನನ್ನ ಮಾತುಗಳ ಮೇಲೆ ನಿಯಂತ್ರಣ ವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತ ಪಡಿಸುವಾಗಲೂ ಇರಬೇಕಲ್ಲವೇ?

ಸಾಮಾಜಿಕ ಜಾಲತಾಣಗಳಲ್ಲಿ ಬಳಸುವ ಮಾತುಗಳಿಗೆ ಲಂಗುಲಗಾಮೇ ಇರದ ಈ ಕಾಲದಲ್ಲಿ ಪ್ರಮುಖರು ಉಪಯೋಗಿಸುವ ಪದಗಳು ಇನ್ನಷ್ಟು ಸ್ವೇಚ್ಛಾಚಾರಕ್ಕೆ ಇಂಬು ನೀಡಬಾರದು.‌

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಭಾಪ್ರಜ್ಞೆ, ಸಂದರ್ಭಪ್ರಜ್ಞೆ ಗಳಿಗೆ ಮಹತ್ವವಿರಬೇಕು.

ಒಟ್ಟಿನಲ್ಲಿ, ಇಂದಿನ‌ ಸಾರ್ವಜನಿಕ‌‌ ಜೀವನದಲ್ಲಿ ಕೇಳಿಬರುತ್ತಿರುವ ಪದಪುಂಜಗಳು ಯಾರಿಗೂ ಸಮಾಧಾನ ತರುತ್ತಿಲ್ಲ ಮತ್ತು ಸಮಾಜಕ್ಕೆ ಒಳಿತನ್ನೂ ಮಾಡುತ್ತಿಲ್ಲ.

ನಾನು “ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ” ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

ನನಗಾಗಿ ಮಾರ್ಗದರ್ಶಕ‌ ಮಾತುಗಳನ್ನು ಆಡಿರುವ ತಮಗೆ ಧನ್ಯವಾದಗಳು.

ವಿಶ್ವಾಸದಿಂದ

ಎಸ್.ಸುರೇಶ್ ಕುಮಾರ್.


ಇದನ್ನೂ ಓದಿ: ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...