Homeಮುಖಪುಟಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

ಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

- Advertisement -
- Advertisement -

ಕಳೆದ ವಾರ ಈಶಾನ್ಯ ದೆಹಲಿ ಹೊತ್ತಿ ಉರಿಯಿತು. 46ಜನ ಪ್ರಾಣ ಕಳೆದುಕೊಂಡರು. 500ಕ್ಕೂ ಹೆಚ್ಚು ಜನ ಗಾಯಗೊಂಡರು. ಪ್ರಕರಣ ದೆಹಲಿ ಹೈಕೋರ್ಟ್‌ ಮುಂದೆ ಬಂತು. ನ್ಯಾಯಮೂರ್ತಿ ಎಸ್‌.ಮುರಳೀಧರ್‌ ಬಿಜೆಪಿ ಮುಖಂಡರ ಕೋಮು ಪ್ರಚೋದಿತ ಹೇಳಿಕೆಗಳೇ ಗಲಭೆಗೆ ಕಾರಣ ಎಂದು ಹೇಳಿ ನಾಲ್ವರು ಬಿಜೆಪಿ ಮುಖಂಡರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿತು.

ಅದರಲ್ಲಿ ಒಬ್ಬಾತ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌. ಈಗ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರ್‍ಯಾಲಿಯೊಂದರಲ್ಲಿ ದೇಶ್‌ ಕೆ ಗದ್ದಾರೋಂಕೋ, ಗೋಲಿಮಾರೋ ಸಾಲೋಂಕೆ (ದೇಶದೊಳಗಿರುವ ದೇಶದ್ರೋಹಿಗಳಿಗೆ ಗುಂಡಿಕ್ಕಿ) ಎಂದು ನಾಲ್ಕೈದು ಬಾರಿ ಘೋಷಣೆ ಕೂಗಿದ್ದ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯುವಜನರು ಆ ಘೋಷಣೆಗೆ ಕೋರಸ್‌ ಕೊಟ್ಟಿದ್ದರು.

ಈತನ ಜೊತೆಗೆ ದೆಹಲಿ ವಿಧಾನಸಭಾ ಚುನಾವಣೆಯನ್ನು ಭಾರತ ಪಾಕಿಸ್ತಾನ ಯುದ್ಧಕ್ಕೆ ಹೋಲಿಸಿದ್ದ ಇನ್ನೊಬ್ಬ ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ. ಆತನ ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಮುನ್ನಾ ದಿನ ಪೊಲೀಸರೆದುರೆ “ಇನ್ನೆರೆಡು ದಿನದಲ್ಲಿ ಜಾಫ್ರಾಬಾದ್‌ ಮೆಟ್ರೋ ಬಳಿ ಪ್ರತಿಭಟನೆ ಮಾಡುತ್ತಿರುವ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಬೆದರಿಕೆಯ ಭಾಷಣ ಮಾಡಿದ್ದ.

ಆ ಎರಡು ದಿನದಲ್ಲಿ ಆತ ಹೇಳಿದಂತೆಯೇ ಆಯಿತು. ಗಲಭೆಗಳು ಭುಗಿಲೆದ್ದವು. ಜನರ ಆಸ್ತಿಪಾಸ್ತಿ, ಪ್ರಾಣ ಹಾನಿಯಾಯಿತು. ಪೊಲೀಸರು ಪ್ರಕರಣ ದಾಖಲಿಸದಿದ್ದಾಗ ಹೈಕೋರ್ಟ್‌ ನ್ಯಾಯಾಧೀಶರು ಈ ದ್ವೇಷ ಭಾಷಣವನ್ನು ಕೋರ್ಟ್‌ ಹಾಲಿನಲ್ಲಿ ಪ್ರಸಾರ ಮಾಡಿ ಎಫ್‌ಐಆರ್‌ ಮಾಡುವಂತೆ ಆದೇಶಿಸಿದ್ದರು.

ಸಂಸದ ಅನುರಾಗ್‌ ಠಾಕೂರ್‌ 2020 ರ ಮಾರ್ಚ್ 1 ರಂದು ಆದಾಯ ತೆರಿಗೆ ಇಲಾಖೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತದ್ದರು. ಆಗ ಪತ್ರಕರ್ತರು ನೀವು ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಘೋಷಣೆ ಕೂಗಿದ್ದರ ಬಗ್ಗೆ ಅಭಿಪ್ರಾಯವೇನು ಎಂದು ಪ್ರಶ್ನಿಸಿದರು. ಆಗ ಠಾಕೂರ್‌ ‍ “ನೀವು ಸುಳ್ಳು ಹೇಳುತ್ತಿದ್ದೀರಿ. ನಾನೆಂದೂ ಆ ಘೋಷಣೆಯನ್ನು ಕೂಗಿಲ್ಲ. ಮಾಧ್ಯಮಗಳು ಅರ್ಧ ಸತ್ಯ ಮತ್ತು ಅಪಪ್ರಚಾರವನ್ನು ಮಾಡಬಾಡರು. ಅದಕ್ಕಾಗಿ ಅವು ತನ್ನ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಸಿಟ್ಟಿನಿಂದ ಉತ್ತರಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ನಿಜವೇನೆಂದರೆ ಜನವರಿ 27 ರಂದು ಅನುರಾಗ್‌ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿ, ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂಬ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿತ್ತು.

“ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ಗಲಭೆ ಉಂಟುಮಾಡುವ ಹೇಳಿಕೆಗಳನ್ನು ನೀಡುವ ಮೂಲಕ, ನೀವು ಮಾದರಿ ನೀತಿ ಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಮೇಲಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದೀರಿ ಎಂದು ಆಯೋಗ ನೋಟಿಸ್‌ನಲ್ಲಿ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್ ಅವರು “ನಾನು ಗೋಲಿ ಮಾರೊ ಸಾಲೋ ಕೋ (ಗುಂಡಿಕ್ಕಿ)” ಎಂದು ಘೋಷಣೆ ಕೂಗಿಲ್ಲ. “ದೇಶ್ ಕೆ ಗದ್ದಾರಾಂಕೋ (ದೇಶದ ದೇಶದ್ರೋಹಿಗಳಿಗೆ)” ಎಂಬ ಘೋಷಣೆಯ ಮೊದಲಾರ್ಧವನ್ನು ಮಾತ್ರ ಕೂಗಿದ್ದೆ. ಜನರು ಕೂಗಿದ ಘೋಷಣೆಗೆ ನಾನು ಹೊಣೆಗಾರನಲ್ಲ ಎಂದಿದ್ದರು.

ಆದರೆ ಯಾರೋ ಆಗಲಿ ಜನವರಿ 27ರ ಆ ಕಾರ್ಯಕ್ರಮದ ಇಂಡಿಯನ್ ಎಕ್ಸ್‌ಪ್ರೆಸ್ ಆನ್‌ಲೈನ್ ಪ್ರಕಟಿಸಿದ ವೀಡಿಯೊವನ್ನು ನೋಡಿದರೆ ಆ ಘೋಷಣೆ ಅವರೇ ಸ್ವತಃ ಕೂಗಿದ್ದು, ಜನರೂ ಸಹ ಕೋರಸ್‌ ಕೊಡಲು ಪ್ರೇರಿಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ. ಬಹುತೇಕ ಘೋಷಣೆಗಳು ಹೀಗೆಯೇ ಇದ್ದು ನಾಯಕ ಅಥವಾ ಮುನ್ನಡೆಸುವವರು ಅರ್ಧ ಘೋಷಣೆ ಕೂಗಿದ್ದರೆ ಇನ್ನರ್ಧವನ್ನು ಉಳಿದ ಜನರು ಕೂಗುವುದು ಸಾಮಾನ್ಯ. ಆದ್ದರಿಂದ ಆ ಘೋಷಣೆಗೆ ತಾನು ಹೊಣೆಗಾರನಲ್ಲ ಎನ್ನುವುದು ಹೇಡಿತನವಷ್ಟೆ..

ಘೋಷಣೆ ಕೂಗಿದ ವಿಡಿಯೋ ನೋಡಿ

ಅಂತೂ ಸ್ಪಷ್ಟವಾಗಿ ತಾನು ಘೋಷಣೆ ಕೂಗಿದ್ದರೂ ಸಹ ಕೇಸಿಗೆ ಹೆದರಿಕೊಂಡು ತಾನು ಕೂಗೇ ಇಲ್ಲ, ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂದು ತಪ್ಪಿಸಿಕೊಳ್ಳಲು ಅನುರಾಗ್‌ ಠಾಕೂರ್‌ ಪ್ರಯತ್ನಿಸುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದನ ಸ್ಥಾನದಲ್ಲಿದ್ದುಕೊಂಡು ಹಿಂಸೆಗೆ ಪ್ರಚೋದನೆ ನೀಡುವ ಘೋಷಣೆ ಕೂಗಿದ್ದು ಅಲ್ಲದೇ ಮತ್ತೆ ಜಾರಿಕೊಳ್ಳಲು ಯತ್ನಿಸಿರುವುದು ಉತ್ತಮ ನಡವಳಿಕೆ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...