Homeಮುಖಪುಟಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

ಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

- Advertisement -
- Advertisement -

ಕಳೆದ ವಾರ ಈಶಾನ್ಯ ದೆಹಲಿ ಹೊತ್ತಿ ಉರಿಯಿತು. 46ಜನ ಪ್ರಾಣ ಕಳೆದುಕೊಂಡರು. 500ಕ್ಕೂ ಹೆಚ್ಚು ಜನ ಗಾಯಗೊಂಡರು. ಪ್ರಕರಣ ದೆಹಲಿ ಹೈಕೋರ್ಟ್‌ ಮುಂದೆ ಬಂತು. ನ್ಯಾಯಮೂರ್ತಿ ಎಸ್‌.ಮುರಳೀಧರ್‌ ಬಿಜೆಪಿ ಮುಖಂಡರ ಕೋಮು ಪ್ರಚೋದಿತ ಹೇಳಿಕೆಗಳೇ ಗಲಭೆಗೆ ಕಾರಣ ಎಂದು ಹೇಳಿ ನಾಲ್ವರು ಬಿಜೆಪಿ ಮುಖಂಡರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿತು.

ಅದರಲ್ಲಿ ಒಬ್ಬಾತ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌. ಈಗ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರ್‍ಯಾಲಿಯೊಂದರಲ್ಲಿ ದೇಶ್‌ ಕೆ ಗದ್ದಾರೋಂಕೋ, ಗೋಲಿಮಾರೋ ಸಾಲೋಂಕೆ (ದೇಶದೊಳಗಿರುವ ದೇಶದ್ರೋಹಿಗಳಿಗೆ ಗುಂಡಿಕ್ಕಿ) ಎಂದು ನಾಲ್ಕೈದು ಬಾರಿ ಘೋಷಣೆ ಕೂಗಿದ್ದ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯುವಜನರು ಆ ಘೋಷಣೆಗೆ ಕೋರಸ್‌ ಕೊಟ್ಟಿದ್ದರು.

ಈತನ ಜೊತೆಗೆ ದೆಹಲಿ ವಿಧಾನಸಭಾ ಚುನಾವಣೆಯನ್ನು ಭಾರತ ಪಾಕಿಸ್ತಾನ ಯುದ್ಧಕ್ಕೆ ಹೋಲಿಸಿದ್ದ ಇನ್ನೊಬ್ಬ ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ. ಆತನ ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಮುನ್ನಾ ದಿನ ಪೊಲೀಸರೆದುರೆ “ಇನ್ನೆರೆಡು ದಿನದಲ್ಲಿ ಜಾಫ್ರಾಬಾದ್‌ ಮೆಟ್ರೋ ಬಳಿ ಪ್ರತಿಭಟನೆ ಮಾಡುತ್ತಿರುವ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಬೆದರಿಕೆಯ ಭಾಷಣ ಮಾಡಿದ್ದ.

ಆ ಎರಡು ದಿನದಲ್ಲಿ ಆತ ಹೇಳಿದಂತೆಯೇ ಆಯಿತು. ಗಲಭೆಗಳು ಭುಗಿಲೆದ್ದವು. ಜನರ ಆಸ್ತಿಪಾಸ್ತಿ, ಪ್ರಾಣ ಹಾನಿಯಾಯಿತು. ಪೊಲೀಸರು ಪ್ರಕರಣ ದಾಖಲಿಸದಿದ್ದಾಗ ಹೈಕೋರ್ಟ್‌ ನ್ಯಾಯಾಧೀಶರು ಈ ದ್ವೇಷ ಭಾಷಣವನ್ನು ಕೋರ್ಟ್‌ ಹಾಲಿನಲ್ಲಿ ಪ್ರಸಾರ ಮಾಡಿ ಎಫ್‌ಐಆರ್‌ ಮಾಡುವಂತೆ ಆದೇಶಿಸಿದ್ದರು.

ಸಂಸದ ಅನುರಾಗ್‌ ಠಾಕೂರ್‌ 2020 ರ ಮಾರ್ಚ್ 1 ರಂದು ಆದಾಯ ತೆರಿಗೆ ಇಲಾಖೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತದ್ದರು. ಆಗ ಪತ್ರಕರ್ತರು ನೀವು ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಘೋಷಣೆ ಕೂಗಿದ್ದರ ಬಗ್ಗೆ ಅಭಿಪ್ರಾಯವೇನು ಎಂದು ಪ್ರಶ್ನಿಸಿದರು. ಆಗ ಠಾಕೂರ್‌ ‍ “ನೀವು ಸುಳ್ಳು ಹೇಳುತ್ತಿದ್ದೀರಿ. ನಾನೆಂದೂ ಆ ಘೋಷಣೆಯನ್ನು ಕೂಗಿಲ್ಲ. ಮಾಧ್ಯಮಗಳು ಅರ್ಧ ಸತ್ಯ ಮತ್ತು ಅಪಪ್ರಚಾರವನ್ನು ಮಾಡಬಾಡರು. ಅದಕ್ಕಾಗಿ ಅವು ತನ್ನ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಸಿಟ್ಟಿನಿಂದ ಉತ್ತರಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ನಿಜವೇನೆಂದರೆ ಜನವರಿ 27 ರಂದು ಅನುರಾಗ್‌ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿ, ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂಬ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿತ್ತು.

“ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ಗಲಭೆ ಉಂಟುಮಾಡುವ ಹೇಳಿಕೆಗಳನ್ನು ನೀಡುವ ಮೂಲಕ, ನೀವು ಮಾದರಿ ನೀತಿ ಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಮೇಲಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದೀರಿ ಎಂದು ಆಯೋಗ ನೋಟಿಸ್‌ನಲ್ಲಿ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್ ಅವರು “ನಾನು ಗೋಲಿ ಮಾರೊ ಸಾಲೋ ಕೋ (ಗುಂಡಿಕ್ಕಿ)” ಎಂದು ಘೋಷಣೆ ಕೂಗಿಲ್ಲ. “ದೇಶ್ ಕೆ ಗದ್ದಾರಾಂಕೋ (ದೇಶದ ದೇಶದ್ರೋಹಿಗಳಿಗೆ)” ಎಂಬ ಘೋಷಣೆಯ ಮೊದಲಾರ್ಧವನ್ನು ಮಾತ್ರ ಕೂಗಿದ್ದೆ. ಜನರು ಕೂಗಿದ ಘೋಷಣೆಗೆ ನಾನು ಹೊಣೆಗಾರನಲ್ಲ ಎಂದಿದ್ದರು.

ಆದರೆ ಯಾರೋ ಆಗಲಿ ಜನವರಿ 27ರ ಆ ಕಾರ್ಯಕ್ರಮದ ಇಂಡಿಯನ್ ಎಕ್ಸ್‌ಪ್ರೆಸ್ ಆನ್‌ಲೈನ್ ಪ್ರಕಟಿಸಿದ ವೀಡಿಯೊವನ್ನು ನೋಡಿದರೆ ಆ ಘೋಷಣೆ ಅವರೇ ಸ್ವತಃ ಕೂಗಿದ್ದು, ಜನರೂ ಸಹ ಕೋರಸ್‌ ಕೊಡಲು ಪ್ರೇರಿಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ. ಬಹುತೇಕ ಘೋಷಣೆಗಳು ಹೀಗೆಯೇ ಇದ್ದು ನಾಯಕ ಅಥವಾ ಮುನ್ನಡೆಸುವವರು ಅರ್ಧ ಘೋಷಣೆ ಕೂಗಿದ್ದರೆ ಇನ್ನರ್ಧವನ್ನು ಉಳಿದ ಜನರು ಕೂಗುವುದು ಸಾಮಾನ್ಯ. ಆದ್ದರಿಂದ ಆ ಘೋಷಣೆಗೆ ತಾನು ಹೊಣೆಗಾರನಲ್ಲ ಎನ್ನುವುದು ಹೇಡಿತನವಷ್ಟೆ..

ಘೋಷಣೆ ಕೂಗಿದ ವಿಡಿಯೋ ನೋಡಿ

ಅಂತೂ ಸ್ಪಷ್ಟವಾಗಿ ತಾನು ಘೋಷಣೆ ಕೂಗಿದ್ದರೂ ಸಹ ಕೇಸಿಗೆ ಹೆದರಿಕೊಂಡು ತಾನು ಕೂಗೇ ಇಲ್ಲ, ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂದು ತಪ್ಪಿಸಿಕೊಳ್ಳಲು ಅನುರಾಗ್‌ ಠಾಕೂರ್‌ ಪ್ರಯತ್ನಿಸುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದನ ಸ್ಥಾನದಲ್ಲಿದ್ದುಕೊಂಡು ಹಿಂಸೆಗೆ ಪ್ರಚೋದನೆ ನೀಡುವ ಘೋಷಣೆ ಕೂಗಿದ್ದು ಅಲ್ಲದೇ ಮತ್ತೆ ಜಾರಿಕೊಳ್ಳಲು ಯತ್ನಿಸಿರುವುದು ಉತ್ತಮ ನಡವಳಿಕೆ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...