Homeಮುಖಪುಟಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

ಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

- Advertisement -
- Advertisement -

ಕಳೆದ ವಾರ ಈಶಾನ್ಯ ದೆಹಲಿ ಹೊತ್ತಿ ಉರಿಯಿತು. 46ಜನ ಪ್ರಾಣ ಕಳೆದುಕೊಂಡರು. 500ಕ್ಕೂ ಹೆಚ್ಚು ಜನ ಗಾಯಗೊಂಡರು. ಪ್ರಕರಣ ದೆಹಲಿ ಹೈಕೋರ್ಟ್‌ ಮುಂದೆ ಬಂತು. ನ್ಯಾಯಮೂರ್ತಿ ಎಸ್‌.ಮುರಳೀಧರ್‌ ಬಿಜೆಪಿ ಮುಖಂಡರ ಕೋಮು ಪ್ರಚೋದಿತ ಹೇಳಿಕೆಗಳೇ ಗಲಭೆಗೆ ಕಾರಣ ಎಂದು ಹೇಳಿ ನಾಲ್ವರು ಬಿಜೆಪಿ ಮುಖಂಡರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿತು.

ಅದರಲ್ಲಿ ಒಬ್ಬಾತ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌. ಈಗ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರ್‍ಯಾಲಿಯೊಂದರಲ್ಲಿ ದೇಶ್‌ ಕೆ ಗದ್ದಾರೋಂಕೋ, ಗೋಲಿಮಾರೋ ಸಾಲೋಂಕೆ (ದೇಶದೊಳಗಿರುವ ದೇಶದ್ರೋಹಿಗಳಿಗೆ ಗುಂಡಿಕ್ಕಿ) ಎಂದು ನಾಲ್ಕೈದು ಬಾರಿ ಘೋಷಣೆ ಕೂಗಿದ್ದ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯುವಜನರು ಆ ಘೋಷಣೆಗೆ ಕೋರಸ್‌ ಕೊಟ್ಟಿದ್ದರು.

ಈತನ ಜೊತೆಗೆ ದೆಹಲಿ ವಿಧಾನಸಭಾ ಚುನಾವಣೆಯನ್ನು ಭಾರತ ಪಾಕಿಸ್ತಾನ ಯುದ್ಧಕ್ಕೆ ಹೋಲಿಸಿದ್ದ ಇನ್ನೊಬ್ಬ ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ. ಆತನ ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಮುನ್ನಾ ದಿನ ಪೊಲೀಸರೆದುರೆ “ಇನ್ನೆರೆಡು ದಿನದಲ್ಲಿ ಜಾಫ್ರಾಬಾದ್‌ ಮೆಟ್ರೋ ಬಳಿ ಪ್ರತಿಭಟನೆ ಮಾಡುತ್ತಿರುವ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಬೆದರಿಕೆಯ ಭಾಷಣ ಮಾಡಿದ್ದ.

ಆ ಎರಡು ದಿನದಲ್ಲಿ ಆತ ಹೇಳಿದಂತೆಯೇ ಆಯಿತು. ಗಲಭೆಗಳು ಭುಗಿಲೆದ್ದವು. ಜನರ ಆಸ್ತಿಪಾಸ್ತಿ, ಪ್ರಾಣ ಹಾನಿಯಾಯಿತು. ಪೊಲೀಸರು ಪ್ರಕರಣ ದಾಖಲಿಸದಿದ್ದಾಗ ಹೈಕೋರ್ಟ್‌ ನ್ಯಾಯಾಧೀಶರು ಈ ದ್ವೇಷ ಭಾಷಣವನ್ನು ಕೋರ್ಟ್‌ ಹಾಲಿನಲ್ಲಿ ಪ್ರಸಾರ ಮಾಡಿ ಎಫ್‌ಐಆರ್‌ ಮಾಡುವಂತೆ ಆದೇಶಿಸಿದ್ದರು.

ಸಂಸದ ಅನುರಾಗ್‌ ಠಾಕೂರ್‌ 2020 ರ ಮಾರ್ಚ್ 1 ರಂದು ಆದಾಯ ತೆರಿಗೆ ಇಲಾಖೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತದ್ದರು. ಆಗ ಪತ್ರಕರ್ತರು ನೀವು ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಘೋಷಣೆ ಕೂಗಿದ್ದರ ಬಗ್ಗೆ ಅಭಿಪ್ರಾಯವೇನು ಎಂದು ಪ್ರಶ್ನಿಸಿದರು. ಆಗ ಠಾಕೂರ್‌ ‍ “ನೀವು ಸುಳ್ಳು ಹೇಳುತ್ತಿದ್ದೀರಿ. ನಾನೆಂದೂ ಆ ಘೋಷಣೆಯನ್ನು ಕೂಗಿಲ್ಲ. ಮಾಧ್ಯಮಗಳು ಅರ್ಧ ಸತ್ಯ ಮತ್ತು ಅಪಪ್ರಚಾರವನ್ನು ಮಾಡಬಾಡರು. ಅದಕ್ಕಾಗಿ ಅವು ತನ್ನ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಸಿಟ್ಟಿನಿಂದ ಉತ್ತರಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ನಿಜವೇನೆಂದರೆ ಜನವರಿ 27 ರಂದು ಅನುರಾಗ್‌ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿ, ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂಬ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿತ್ತು.

“ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ಗಲಭೆ ಉಂಟುಮಾಡುವ ಹೇಳಿಕೆಗಳನ್ನು ನೀಡುವ ಮೂಲಕ, ನೀವು ಮಾದರಿ ನೀತಿ ಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಮೇಲಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದೀರಿ ಎಂದು ಆಯೋಗ ನೋಟಿಸ್‌ನಲ್ಲಿ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್ ಅವರು “ನಾನು ಗೋಲಿ ಮಾರೊ ಸಾಲೋ ಕೋ (ಗುಂಡಿಕ್ಕಿ)” ಎಂದು ಘೋಷಣೆ ಕೂಗಿಲ್ಲ. “ದೇಶ್ ಕೆ ಗದ್ದಾರಾಂಕೋ (ದೇಶದ ದೇಶದ್ರೋಹಿಗಳಿಗೆ)” ಎಂಬ ಘೋಷಣೆಯ ಮೊದಲಾರ್ಧವನ್ನು ಮಾತ್ರ ಕೂಗಿದ್ದೆ. ಜನರು ಕೂಗಿದ ಘೋಷಣೆಗೆ ನಾನು ಹೊಣೆಗಾರನಲ್ಲ ಎಂದಿದ್ದರು.

ಆದರೆ ಯಾರೋ ಆಗಲಿ ಜನವರಿ 27ರ ಆ ಕಾರ್ಯಕ್ರಮದ ಇಂಡಿಯನ್ ಎಕ್ಸ್‌ಪ್ರೆಸ್ ಆನ್‌ಲೈನ್ ಪ್ರಕಟಿಸಿದ ವೀಡಿಯೊವನ್ನು ನೋಡಿದರೆ ಆ ಘೋಷಣೆ ಅವರೇ ಸ್ವತಃ ಕೂಗಿದ್ದು, ಜನರೂ ಸಹ ಕೋರಸ್‌ ಕೊಡಲು ಪ್ರೇರಿಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ. ಬಹುತೇಕ ಘೋಷಣೆಗಳು ಹೀಗೆಯೇ ಇದ್ದು ನಾಯಕ ಅಥವಾ ಮುನ್ನಡೆಸುವವರು ಅರ್ಧ ಘೋಷಣೆ ಕೂಗಿದ್ದರೆ ಇನ್ನರ್ಧವನ್ನು ಉಳಿದ ಜನರು ಕೂಗುವುದು ಸಾಮಾನ್ಯ. ಆದ್ದರಿಂದ ಆ ಘೋಷಣೆಗೆ ತಾನು ಹೊಣೆಗಾರನಲ್ಲ ಎನ್ನುವುದು ಹೇಡಿತನವಷ್ಟೆ..

ಘೋಷಣೆ ಕೂಗಿದ ವಿಡಿಯೋ ನೋಡಿ

ಅಂತೂ ಸ್ಪಷ್ಟವಾಗಿ ತಾನು ಘೋಷಣೆ ಕೂಗಿದ್ದರೂ ಸಹ ಕೇಸಿಗೆ ಹೆದರಿಕೊಂಡು ತಾನು ಕೂಗೇ ಇಲ್ಲ, ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂದು ತಪ್ಪಿಸಿಕೊಳ್ಳಲು ಅನುರಾಗ್‌ ಠಾಕೂರ್‌ ಪ್ರಯತ್ನಿಸುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದನ ಸ್ಥಾನದಲ್ಲಿದ್ದುಕೊಂಡು ಹಿಂಸೆಗೆ ಪ್ರಚೋದನೆ ನೀಡುವ ಘೋಷಣೆ ಕೂಗಿದ್ದು ಅಲ್ಲದೇ ಮತ್ತೆ ಜಾರಿಕೊಳ್ಳಲು ಯತ್ನಿಸಿರುವುದು ಉತ್ತಮ ನಡವಳಿಕೆ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...