HomeಮುಖಪುಟNPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಾವು ನಿರ್ಧರಿಸಿದ್ದೇವೆ ಎಂದು ಜಗನ್‌ ಟ್ವೀಟ್‌ ಮಾಡಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ 2010 ರಲ್ಲಿ ಇದ್ದ ಷರತ್ತುಗಳನ್ನು ಅನುಸರಿಸುವಂತೆ ಕೇಂದ್ರವನ್ನು ಕೋರಲಿದ್ದೇನೆ ಎಂದು ಘೋಷಿಸಿದರು.

ಎನ್‌ಪಿಆರ್‌ನಲ್ಲಿ ಪ್ರಸ್ತಾಪಿಸಲಾದ ಕೆಲವು ಪ್ರಶ್ನೆಗಳು ನನ್ನ ರಾಜ್ಯದ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆಯನ್ನು ಉಂಟುಮಾಡುತ್ತಿವೆ. ನಮ್ಮ ಪಕ್ಷದೊಳಗೆ ವಿಸ್ತಾರವಾದ ಸಮಾಲೋಚನೆಗಳ ನಂತರ, 2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಾವು ನಿರ್ಧರಿಸಿದ್ದೇವೆ ಎಂದು ಜಗನ್‌ ಟ್ವೀಟ್‌ ಮಾಡಿದ್ದಾರೆ.

ಇದಕ್ಕಾಗಿ ಮುಂಬರುವ ಅಸೆಂಬ್ಲಿ ಅಧಿವೇಶನದಲ್ಲಿ ನಾವು ನಿರ್ಣಯವನ್ನು ಅಂಗೀಕರಿಸುತ್ತೇವೆ ಎಂದು ಸಹ ಜಗನ್‌ ಹೇಳಿದ್ದಾರೆ.

ಏಪ್ರಿಲ್‌ನಿಂದ ಸೆಪ್ಟಂಬರ್‌ ಒಳಗೆ ಎನ್‌ಪಿಆರ್‌ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದ ಬೆನ್ನಲ್ಲೇ ಜಗನ್‌ ಮೋಹನ್‌ ರೆಡ್ಡಿಯವರ ಈ ತೀರ್ಮಾನ ವ್ಯಕ್ತಿವಾಗಿದೆ. ಈಗಿರುವ ಎನ್‌ಪಿಆರ್‌ ಪ್ರಶ್ನಾವಳಿಗಳು ತಮ್ಮ ಪೋಷಕರ ಜನ್ಮದಿನಾಂಕ ಮತ್ತು ಹುಟ್ಟಿದ ಸ್ಥಳಗಳನ್ನು ಕೇಳುವುದರಿಂದ ಇದು ಎನ್‌ಆರ್‌ಸಿ ಜಾರಿಗೆ ಪ್ರಥಮ ಹೆಜ್ಜೆಯಾಗಿದೆ ಎಂದು ಹಲವಾರು ಜನ ಅನುಮಾನ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವರೆ ಈ ಕುರಿತು ಕೆಲವೆಡೆ ಹೇಳಿಕೆಗಳನ್ನು ಸಹ ನೀಡಿದ್ದಾರೆ.

“ಎನ್‌ಪಿಆರ್ ಜಾರಿಗೆ ಸಂಬಂಧಿಸಿದಂತೆ ಹಲವಾರು ಭಾಗಗಳಲ್ಲಿ ಹಲವಾರು ಆತಂಕಗಳು ಮತ್ತು ಅನುಮಾನಗಳು ವ್ಯಕ್ತವಾಗುತ್ತಿರುವುದರಿಂದ, ಎಲ್ಲಾ ಜಿಲ್ಲಾಧಿಕಾರಿಗಳು / ಪ್ರಧಾನ ಜನಗಣತಿ ಅಧಿಕಾರಿಗಳಿಗೆ ಈ ಕೆಳಗಿನ ಸ್ಪಷ್ಟೀಕರಣಗಳನ್ನು ‘ಪದೇ ಪದೇ ಕೇಳಲಾಗುವ ಪ್ರಶ್ನೆಗಳು’ (FAQ) ರೂಪದಲ್ಲಿ ನೀಡಲಾಗುತ್ತದೆ. ಸಂಬಂಧಪಟ್ಟ ಎಲ್ಲರಿಗೂ ಸುಲಭವಾಗಿ ಪ್ರಸಾರ ಮಾಡಲಾಗುವುದು” ಎಂದು ಸಾಮಾನ್ಯ ಆಡಳಿತ ಇಲಾಖೆ ಕಾರ್ಯದರ್ಶಿ ಶಶಿ ಭೂಷಣ್ ಕುಮಾರ್ ಜನವರಿ 22 ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದರು.

ಎನ್‌ಪಿಆರ್ ನಡೆಯುವ ಸಮಯದಲ್ಲಿ ಜನರು ಯಾವುದೇ ದಾಖಲೆಗಳನ್ನು ಎಣಿಕೆದಾರರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದರು.

“ಎನ್‌ಪಿಆರ್‌ ಮಾಡುವವರು ಜನರು ನೀಡುವ ಯಾವುದೇ ಉತ್ತರಗಳನ್ನು ದಾಖಲಿಸುವುದು ಅಗತ್ಯವಾಗಿರುತ್ತದೆ. ಯಾವುದೇ ಪ್ರಶ್ನೆಗೆ ಹೆಚ್ಚಿನ ಉತ್ತರಗಳನ್ನು ನೀಡುವಂತೆ ಒತ್ತಾಯಿಸಬಾರದು, ಅವರು ನೀಡಲು ಇಚ್ಛಿಸದಿದ್ದರೆ  ಯಾವುದೇ ದಾಖಲೆಯನ್ನು ಕೇಳಬಾರದು” ಎಂದು ಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...