Homeಮುಖಪುಟಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಸರಳ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರವು ಬಿಕ್ಕಟ್ಟಿನಲ್ಲಿದ್ದು ಆಪರೇಷನ್‌ ಕಮಲಕ್ಕೊಳಗಾಗುವ ಭೀತಿ ಎದುರಿಸುತ್ತಿದೆ.

ತಡರಾತ್ರಿ ದೆಹಲಿ ಬಳಿಯ ಗುರ್ಗಾವ್‌ ಹೋಟೆಲ್‌ನಿಂದ ಕಾಂಗ್ರೆಸ್‌ ಶಾಸಕನೊಬ್ಬನನ್ನು ಹೊರತರಲಾಗಿದ್ದು ಇನ್ನು ನಾಲ್ಕು ಜನ ಹೊಟೇಲ್‌ನಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಎಸ್‌ಪಿ ಶಾಸಕಿ ರಾಮ್‌ ಬಾಯಿಯವರ ನೇತೃತ್ವದಲ್ಲಿ ಬಿಜೆಪಿಯು ಕಾಂಗ್ರೆಸ್‌ನ ಹಲವಾರು ಶಾಸಕರನ್ನು ಹೋಟೆಲ್‌ನಲ್ಲಿಟ್ಟಿದೆ ಎಂಬ ಆರೋಪಿ ದಟ್ಟವಾಗಿ ಕೇಳಿಬಂದಿದೆ. ಒಟ್ಟು 230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸದಸ್ಯರು ಬೇಕಾಗಿದ್ದು, ಇದುವರೆಗೂ ಕಾಂಗ್ರೆಸ್‌ 120 ಸದಸ್ಯರ ಬೆಂಬಲವನ್ನು ಪಡೆದಿತ್ತು. ಈಗಿನ ಬೆಳವಳಣಿಗೆಗಳನ್ನು ಗಮನಿಸಿದರೆ ಕರ್ನಾಟಕದ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿಯೂ ಆಪರೇಷನ್‌ ಕಮಲ ನಡೆಯಬಹುದು ಎಂಬ ಭೀತಿ ಉಂಟಾಗಿದೆ.

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

“ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಮಾಜಿ ಮಂತ್ರಿಗಳಾದ ನರೋತ್ತಮ್ ಮಿಶ್ರಾ, ಭೂಪೇಂದ್ರ ಸಿಂಗ್ ಮತ್ತು ರಾಂಪಾಲ್ ಸಿಂಗ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಪಿತೂರಿಯ ಭಾಗವಾಗಿ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ಕಾಂಗ್ರೆಸ್‌ನ ಪಟ್ವಾರಿ ಎಂಬುವವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್, ಬಿಎಸ್ಪಿ ಮತ್ತು ಸಮಾಜವಾದಿ ಪಕ್ಷದ ಶಾಸಕರನ್ನು ದೆಹಲಿಗೆ ಕರೆದೊಯ್ಯುವ ಪ್ರಕ್ರಿಯೆಯನ್ನು ಬಿಜೆಪಿ ಪ್ರಾರಂಭಿಸಿದೆ. ಬಿಜೆಪಿ ಮಾಜಿ ಸಚಿವ ಭೂಪೇಂದ್ರ ಸಿಂಗ್ ಅವರು ಚಾರ್ಟರ್ಡ್ ಫ್ಲೈಟ್ ಮೂಲಕ ಬಿಎಸ್ಪಿ ಶಾಸಕಿ ರಾಮ್‌ ಬಾಯಿ ಅವರನ್ನು ದೆಹಲಿಗೆ ಕರೆದೊಯ್ಯಲಿಲ್ಲವೇ? ಶಿವರಾಜ್ ಸಿಂಗ್ ಚೌಹಾನ್ ಏನಾದರೂ ಹೇಳಲು ಇಷ್ಟಪಡುತ್ತಾರೆಯೇ? ” ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, “ನಾವು ರಾಮ್ ಬಾಯಿಯನ್ನು ಸಂಪೂರ್ಣವಾಗಿ ನಂಬುತ್ತೇವೆ. ಅವರು ಮುಖ್ಯಮಂತ್ರಿ ಕಮಲ್ ನಾಥ್‌ರವರ ಅಭಿಮಾನಿಯಾಗಿದ್ದು, ಅವರನ್ನು ಬೆಂಬಲಿಸುತ್ತಲೇ ಇರುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಮಲ್ ನಾಥ್, “ದಿಗ್ವಿಜಯ ಸಿಂಗ್ ಅವರ ಆರೋಪವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಬಿಜೆಪಿಯ 15 ವರ್ಷಗಳ ಆಡಳಿತದಲ್ಲಿ ನಡೆದ ಹಗರಣಗಳು ಶೀಘ್ರದಲ್ಲೇ ಬಹಿರಂಗಗೊಳ್ಳುತ್ತವೆ ಎಂದು ತಿಳಿದಿರುವ ಕಾರಣ ಬಿಜೆಪಿ ಭಯಭೀತವಾಗಿ ಈ ಕೃತ್ಯದಲ್ಲಿ ತೊಡಗಿದೆ” ಎಂದಿದ್ದಾರೆ.

“ಅವರು ಹಣದ ಬಲದ ಮೇಲೆ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಅವರು ಇಷ್ಟು ಹಣವನ್ನು ಎಲ್ಲಿಂದ ಪಡೆದಿದ್ದಾರೆಂದು ನನಗೆ ತಿಳಿಯಬಹುದೇ? ಎಂದು ಪ್ರಶ್ನಿಸಿರುವ ಅವರು ಶಾಸಕರು ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂಬ ವದಂತಿಗಳ ಮಧ್ಯೆ, “ಸರ್ಕಾರದ ಸ್ಥಿರತೆಗೆ ಯಾವುದೇ ಬೆದರಿಕೆ ಇಲ್ಲ” ಎಂದು ಸಿಎಂ ಒತ್ತಿಹೇಳಿದ್ದಾರೆ.

ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಮಗಳ ಚಿಕಿತ್ಸೆಗಾಗಿ ತಾನು ದೆಹಲಿಯಲ್ಲಿದ್ದೇನೆ ಎಂದು ಬಿಎಸ್ಪಿ ಶಾಸಕಿ ರಾಮ್ ಬಾಯಿ ಪತಿ ಗೋವಿಂದ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಬಿಜೆಪಿ ನಾಯಕ ಭೂಪೇಂದ್ರ ಸಿಂಗ್ ಕೂಡ ರಾಮ್ ಬಾಯಿ ದೆಹಲಿಗೆ ಹೋದ ಅದೇ ವಿಮಾನದಲ್ಲಿ ಪ್ರಯಾಣಿಸಿದರೆ ಅವನು, ಅವಳನ್ನು ದೆಹಲಿಗೆ ಕರೆದೊಯ್ದನೆಂದು ಅರ್ಥವಲ್ಲ. ಇವೆಲ್ಲ ವದಂತಿಗಳು ಮತ್ತು ಇದನ್ನು ನಂಬಬಾರದು ಎಂದು ಅವರು ತಿಳಿಸಿದ್ದಾರೆ.

ಆದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜೇಶ್ ಲುನಾವಾತ್, “ದಿಗ್ವಿಜಯ ಸಿಂಗ್ ಅವರ ರಾಜ್ಯಸಭಾ ಅವಧಿ ಮುಂದಿನ ತಿಂಗಳು ಅವಧಿ ರಾಜ್ಯಸಭೆಗೆ ಮರು ನಾಮನಿರ್ದೇಶನಗೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ಇಲ್ಲದ ಸಂದರ್ಭವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

230 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ, ಕಾಂಗ್ರೆಸ್ 113 ಶಾಸಕರನ್ನು ಹೊಂದಿದೆ. ಬಿಜೆಪಿಯು 107 ಶಾಸಕರನ್ನು ಹೊಂದಿದೆ. 4 ಸ್ವತಂತ್ರ, 2 ಬಿಎಸ್ಪಿ ಮತ್ತು ಒಬ್ಬ ಎಸ್ಪಿ ಶಾಸಕರು ಕಾಂಗ್ರೆಸ್‌ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಪ್ರಸ್ತುತ ಎರಡು ಸ್ಥಾನಗಳು ಖಾಲಿ ಉಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...