Homeಮುಖಪುಟಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಸರಳ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರವು ಬಿಕ್ಕಟ್ಟಿನಲ್ಲಿದ್ದು ಆಪರೇಷನ್‌ ಕಮಲಕ್ಕೊಳಗಾಗುವ ಭೀತಿ ಎದುರಿಸುತ್ತಿದೆ.

ತಡರಾತ್ರಿ ದೆಹಲಿ ಬಳಿಯ ಗುರ್ಗಾವ್‌ ಹೋಟೆಲ್‌ನಿಂದ ಕಾಂಗ್ರೆಸ್‌ ಶಾಸಕನೊಬ್ಬನನ್ನು ಹೊರತರಲಾಗಿದ್ದು ಇನ್ನು ನಾಲ್ಕು ಜನ ಹೊಟೇಲ್‌ನಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಎಸ್‌ಪಿ ಶಾಸಕಿ ರಾಮ್‌ ಬಾಯಿಯವರ ನೇತೃತ್ವದಲ್ಲಿ ಬಿಜೆಪಿಯು ಕಾಂಗ್ರೆಸ್‌ನ ಹಲವಾರು ಶಾಸಕರನ್ನು ಹೋಟೆಲ್‌ನಲ್ಲಿಟ್ಟಿದೆ ಎಂಬ ಆರೋಪಿ ದಟ್ಟವಾಗಿ ಕೇಳಿಬಂದಿದೆ. ಒಟ್ಟು 230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸದಸ್ಯರು ಬೇಕಾಗಿದ್ದು, ಇದುವರೆಗೂ ಕಾಂಗ್ರೆಸ್‌ 120 ಸದಸ್ಯರ ಬೆಂಬಲವನ್ನು ಪಡೆದಿತ್ತು. ಈಗಿನ ಬೆಳವಳಣಿಗೆಗಳನ್ನು ಗಮನಿಸಿದರೆ ಕರ್ನಾಟಕದ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿಯೂ ಆಪರೇಷನ್‌ ಕಮಲ ನಡೆಯಬಹುದು ಎಂಬ ಭೀತಿ ಉಂಟಾಗಿದೆ.

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

“ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಮಾಜಿ ಮಂತ್ರಿಗಳಾದ ನರೋತ್ತಮ್ ಮಿಶ್ರಾ, ಭೂಪೇಂದ್ರ ಸಿಂಗ್ ಮತ್ತು ರಾಂಪಾಲ್ ಸಿಂಗ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಪಿತೂರಿಯ ಭಾಗವಾಗಿ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ಕಾಂಗ್ರೆಸ್‌ನ ಪಟ್ವಾರಿ ಎಂಬುವವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್, ಬಿಎಸ್ಪಿ ಮತ್ತು ಸಮಾಜವಾದಿ ಪಕ್ಷದ ಶಾಸಕರನ್ನು ದೆಹಲಿಗೆ ಕರೆದೊಯ್ಯುವ ಪ್ರಕ್ರಿಯೆಯನ್ನು ಬಿಜೆಪಿ ಪ್ರಾರಂಭಿಸಿದೆ. ಬಿಜೆಪಿ ಮಾಜಿ ಸಚಿವ ಭೂಪೇಂದ್ರ ಸಿಂಗ್ ಅವರು ಚಾರ್ಟರ್ಡ್ ಫ್ಲೈಟ್ ಮೂಲಕ ಬಿಎಸ್ಪಿ ಶಾಸಕಿ ರಾಮ್‌ ಬಾಯಿ ಅವರನ್ನು ದೆಹಲಿಗೆ ಕರೆದೊಯ್ಯಲಿಲ್ಲವೇ? ಶಿವರಾಜ್ ಸಿಂಗ್ ಚೌಹಾನ್ ಏನಾದರೂ ಹೇಳಲು ಇಷ್ಟಪಡುತ್ತಾರೆಯೇ? ” ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, “ನಾವು ರಾಮ್ ಬಾಯಿಯನ್ನು ಸಂಪೂರ್ಣವಾಗಿ ನಂಬುತ್ತೇವೆ. ಅವರು ಮುಖ್ಯಮಂತ್ರಿ ಕಮಲ್ ನಾಥ್‌ರವರ ಅಭಿಮಾನಿಯಾಗಿದ್ದು, ಅವರನ್ನು ಬೆಂಬಲಿಸುತ್ತಲೇ ಇರುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಮಲ್ ನಾಥ್, “ದಿಗ್ವಿಜಯ ಸಿಂಗ್ ಅವರ ಆರೋಪವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಬಿಜೆಪಿಯ 15 ವರ್ಷಗಳ ಆಡಳಿತದಲ್ಲಿ ನಡೆದ ಹಗರಣಗಳು ಶೀಘ್ರದಲ್ಲೇ ಬಹಿರಂಗಗೊಳ್ಳುತ್ತವೆ ಎಂದು ತಿಳಿದಿರುವ ಕಾರಣ ಬಿಜೆಪಿ ಭಯಭೀತವಾಗಿ ಈ ಕೃತ್ಯದಲ್ಲಿ ತೊಡಗಿದೆ” ಎಂದಿದ್ದಾರೆ.

“ಅವರು ಹಣದ ಬಲದ ಮೇಲೆ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಅವರು ಇಷ್ಟು ಹಣವನ್ನು ಎಲ್ಲಿಂದ ಪಡೆದಿದ್ದಾರೆಂದು ನನಗೆ ತಿಳಿಯಬಹುದೇ? ಎಂದು ಪ್ರಶ್ನಿಸಿರುವ ಅವರು ಶಾಸಕರು ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂಬ ವದಂತಿಗಳ ಮಧ್ಯೆ, “ಸರ್ಕಾರದ ಸ್ಥಿರತೆಗೆ ಯಾವುದೇ ಬೆದರಿಕೆ ಇಲ್ಲ” ಎಂದು ಸಿಎಂ ಒತ್ತಿಹೇಳಿದ್ದಾರೆ.

ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಮಗಳ ಚಿಕಿತ್ಸೆಗಾಗಿ ತಾನು ದೆಹಲಿಯಲ್ಲಿದ್ದೇನೆ ಎಂದು ಬಿಎಸ್ಪಿ ಶಾಸಕಿ ರಾಮ್ ಬಾಯಿ ಪತಿ ಗೋವಿಂದ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಬಿಜೆಪಿ ನಾಯಕ ಭೂಪೇಂದ್ರ ಸಿಂಗ್ ಕೂಡ ರಾಮ್ ಬಾಯಿ ದೆಹಲಿಗೆ ಹೋದ ಅದೇ ವಿಮಾನದಲ್ಲಿ ಪ್ರಯಾಣಿಸಿದರೆ ಅವನು, ಅವಳನ್ನು ದೆಹಲಿಗೆ ಕರೆದೊಯ್ದನೆಂದು ಅರ್ಥವಲ್ಲ. ಇವೆಲ್ಲ ವದಂತಿಗಳು ಮತ್ತು ಇದನ್ನು ನಂಬಬಾರದು ಎಂದು ಅವರು ತಿಳಿಸಿದ್ದಾರೆ.

ಆದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜೇಶ್ ಲುನಾವಾತ್, “ದಿಗ್ವಿಜಯ ಸಿಂಗ್ ಅವರ ರಾಜ್ಯಸಭಾ ಅವಧಿ ಮುಂದಿನ ತಿಂಗಳು ಅವಧಿ ರಾಜ್ಯಸಭೆಗೆ ಮರು ನಾಮನಿರ್ದೇಶನಗೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ಇಲ್ಲದ ಸಂದರ್ಭವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

230 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ, ಕಾಂಗ್ರೆಸ್ 113 ಶಾಸಕರನ್ನು ಹೊಂದಿದೆ. ಬಿಜೆಪಿಯು 107 ಶಾಸಕರನ್ನು ಹೊಂದಿದೆ. 4 ಸ್ವತಂತ್ರ, 2 ಬಿಎಸ್ಪಿ ಮತ್ತು ಒಬ್ಬ ಎಸ್ಪಿ ಶಾಸಕರು ಕಾಂಗ್ರೆಸ್‌ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಪ್ರಸ್ತುತ ಎರಡು ಸ್ಥಾನಗಳು ಖಾಲಿ ಉಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...