Homeಮುಖಪುಟಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ವಿಶ್ವದ ನಾಯಕರ ಮುಂದೆ ಗಾಂಧಿಯನ್ನು ಹೊಗಳುವ, ಅವರದೇ ಬೈಠಕ್‍ಗಳಲ್ಲಿ ಗೋಡ್ಸೆ ಮತ್ತು ಸಾವರ್ಕರ್ ಅವರುಗಳನ್ನು ಆರಾಧಿಸುವ ಮಂದಿಗೆ ದೊರೆಸ್ವಾಮಿಯವರು ಸತ್ಯದ ದಾಖಲೆಗಳೊಂದಿಗೆ ಕಟ್ಟಿಕೊಡುವ ಇತಿಹಾಸ ಸಮಸ್ಯೆ ಸೃಷ್ಟಿಸಿದೆ.

- Advertisement -
- Advertisement -

ಮೌಲ್ಯಾಧಾರಿತ ಜೀವನವನ್ನು ನಡೆಸಿಕೊಂಡು ಬಂದು ನೈತಿಕ ವ್ಯಕ್ತಿತ್ವವನ್ನು ಉಸಿರಾಡಿದವರ ಸಿಟ್ಟಿಗೆ ನೂರಾರು ಉರಿನಾಲಗೆ ಇರುತ್ತದೆ. ಅಂತಹವರ ಸಿಟ್ಟನ್ನು ತಣಿಸಲು, ಸರ್ಕಾರಗಳು ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬೇಕಷ್ಟೇ. ಸುಳ್ಳಿನ ಮಾರ್ಗವನ್ನು ತೊರೆದು ಸತ್ಯದ ಮಾರ್ಗವನ್ನು ಮತ್ತೆ ತುಳಿಯಬೇಕಷ್ಟೇ. ಅದನ್ನು ಬಿಟ್ಟು ಅಂತಹ ನೈತಿಕ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಹುನ್ನಾರ ಫಲ ಕೊಡುವುದು ಅನುಮಾನವೇ.

ಸ್ವಾತಂತ್ರ್ಯ ಹೋರಾಟಗಾರ, ಚಳವಳಿಗಳ ಮುಂದಾಳು, ಗಾಂಧೀವಾದಿ, ಶತಾಯುಷಿ ಎಚ್.ಎಸ್.ದೊರೆಸ್ವಾಮಿಯವರು ‘ನಕಲಿ ಸ್ವಾತಂತ್ರ್ಯ ಹೋರಾಟಗಾರ, ಅವರು ಪಾಕಿಸ್ತಾನಿ ಏಜೆಂಟ್’ ಎಂಬಿತ್ಯಾದಿಯಾಗಿ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಳ್ಳಿನ ಅಸಹನೆಯ ಕಂತೆಯನ್ನು ಸುರುಳಿಸುರುಳಿಯಾಗಿ ಹರಿಬಿಟ್ಟಿರುವುದು ರಾಜ್ಯದ ಜನತೆಗೆ ಆಘಾತ ಮತ್ತು ಆಕ್ರೋಶವನ್ನು ತಂದಿದೆ. ಇದರ ಬೆನ್ನಿನಲ್ಲೆ ಸಚಿವ ವಿ.ಸೋಮಣ್ಣ ಮತ್ತು ಎಸ್.ಸುರೇಶ್ ಕುಮಾರ್‌ರವರಂತಹ ಇನ್ನಿತರ ಬಿಜೆಪಿ ಮತ್ತು ಆರ್.ಎಸ್.ಎಸ್ ಮುಖಂಡರು ಯತ್ನಾಳ್ ಅವರ ಶುದ್ಧ ಸುಳ್ಳಿನ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳಲು ಹರಸಾಹಸ ಪಡುತ್ತಿರುವುದು ಏಕೆ? ಶತಾಯುಷಿ ಎಚ್.ಎಸ್.ದೊರೆಸ್ವಾಮಿಯೇ ಇವರುಗಳ ಟಾರ್ಗೆಟ್ ಆಗಿರುವುದು ಏಕೆ?

ಎಚ್.ಎಸ್.ದೊರೆಸ್ವಾಮಿಯವರು ಕರ್ನಾಟಕವಷ್ಟೇ ಅಲ್ಲ, ಇಡೀ ದೇಶದ ಸಾಕ್ಷಿಪ್ರಜ್ಞೆಯಾಗಿ ನಾಗರಿಕರ ಹಕ್ಕುಗಳನ್ನು ಕಾಯ್ದುಕೊಳ್ಳಲು ಸದಾ ಹೋರಾಟಕ್ಕೆ ಮುಂದಾಗಿರುವುದು ಸರ್ಕಾರಗಳ ಅಸಹನೆಗೆ ಮುಖ್ಯ ಕಾರಣವಾಗಿ ಕಾಣುತ್ತಿದೆ. ಸ್ವಾತಂತ್ರ್ಯಪೂರ್ವದಲ್ಲಿ ಬ್ರಿಟಿಷ್ ಸರ್ಕಾರ, ತುರ್ತುಪರಿಸ್ಥಿತಿಯ ಸಮಯದಲ್ಲಿ ಇಂದಿರಾ ಗಾಂಧಿಯವರ ಸರ್ಕಾರ, ಹಲವು ಕರ್ನಾಟಕದ ರಾಜ್ಯ ಸರ್ಕಾರಗಳು ಮತ್ತು ಈಗಿನ ಕೇಂದ್ರ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದ್ದಾರೆ. ಹಿಂದೆ ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಭುತ್ವದ ಸಂಸ್ಥೆಗಳೇ ದೊರೆಸ್ವಾಮಿಯವರ ಮೇಲೆ ಮುಗಿಬಿದ್ದಿದ್ದರೆ, ಈಗಿನ ಪ್ರಭುತ್ವ ತಮ್ಮ ನೆಚ್ಚಿನ ಅಸ್ತ್ರವಾದ ನಕಲಿ ಸುದ್ದಿಗಳ ಪ್ರಚಾರದ ಮೊರೆ ಹೋಗಿದೆ. ಅದಕ್ಕಾಗಿ ಯತ್ನಾಳ್ ಅಂತಹವರ ಬೆಂಬಲ ತೆಗೆದುಕೊಂಡು ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದುಬಿಡಲು ಹಲವು ಐಟಿ ಸೆಲ್‍ಗಳು ತೊಡಗಿಸಿಕೊಂಡಿವೆ.

ಸದ್ಯಕ್ಕೆ ಎಚ್.ಎಸ್.ದೊರೆಸ್ವಾಮಿ ಅವರು ಸದರಿ ಕೇಂದ್ರ ಸರ್ಕಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿರುವುದು, ಸಿಎಎ ವಿರೋಧ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿರುವುದರಿಂದ. ದೇಶದಾದ್ಯಂತ ಸಿಎಎ, ಎನ್‍ಪಿಆರ್ ಮತ್ತು ಎನ್‍ಆರ್‌ಸಿ ವಿರೋಧಿ ಚಳವಳಿಗಳು ಚುರುಕು ಪಡೆದುಕೊಂಡು, ದೇಶದ ಆರ್ಥಿಕ ಪರಿಸ್ಥಿತಿಯ ಹಿನ್ನಡೆಯ ಸಂದರ್ಭದಲ್ಲಿ ಸರ್ಕಾರಕ್ಕೆ ಹೆಚ್ಚೆಚ್ಚು ಮುಜುಗರ ತಂದಿವೆ. ರಾಜಧಾನಿ ದೆಹಲಿಯಲ್ಲಿಯೇ ಬಿಜೆಪಿ ಪಕ್ಷದ ಕೆಲವು ಮುಖಂಡರ ಪ್ರಚೋದನಕಾರಿ ಹೇಳಿಕೆಗಳಿಂದ ಪ್ರೇರಣೆಯಾಗಿ ಗಲಭೆಗಳಾಗಿ ಹತ್ತಾರು ಸಾವುಗಳು ಸಂಭವಿಸಿವೆ. ಇಂತಹ ಮುಖಂಡರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಕೋರ್ಟ್ ಹಾಲಿನಲ್ಲಿಯೇ ಪೊಲೀಸರಿಗೆ ವಿಡಿಯೋ ತೋರಿಸಿ ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಮುರುಳೀಧರ್ ಅವರ ವರ್ಗಾವಣೆ ರಾತ್ರೋರಾತ್ರಿ ನಡೆದಿದೆ. ನ್ಯಾಯಮೂರ್ತಿ ಮುರುಳೀಧರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾಗಾಂಧಿ ಅವರಿಗೆ ಆಪ್ತರು ಎಂಬ ನಕಲಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದುಬಿಡಲಾಗುತ್ತಿದೆ. ಹೀಗೆ ನಕಲಿ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುವ ಗುಂಪು ಈಗ ದೊರೆಸ್ವಾಮಿ ಅವರ ವಿರುದ್ಧ ಕೂಡ ಸೆಣೆಸಲು ತನ್ನೆಲ್ಲಾ ಬತ್ತಳಿಕೆಯನ್ನು ಬಳಸುತ್ತಿದೆ. ಎಚ್.ಎಸ್.ದೊರೆಸ್ವಾಮಿ ಅವರು ಈಗಿನ ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ಸಿಡಿದು ಜೈಲೋ ಭರೋ ಚಳವಳಿಗೆ ಕರೆ ಕೊಡುವ ಮುನ್ಸೂಚನೆ ಇವರನ್ನೆಲ್ಲ ಅಲುಗಾಡಿಸಿದೆ. ಸಂವಾದ ಮಾಡುವುದು ಇರಲಿ ಸಣ್ಣ ಟೀಕೆಯನ್ನೂ ಕೇಳಿಸಿಕೊಳ್ಳದ ಸರ್ಕಾರ ಮತ್ತು ಅದನ್ನು ಬೆಂಬಲಿಸುವ ಮುಖೇಡಿ ಐಟಿಸೆಲ್‍ಗಳು ಈಗ ಜಾಗೃತವಾಗಿವೆ.

ಇತ್ತೀಚೆಗಷ್ಟೇ ಕ್ಯಾರವಾನ್ ಪತ್ರಿಕೆ ಮಹಾತ್ಮ ಗಾಂಧಿ ಹತ್ಯೆಯ ಮುಖ್ಯ ರೂವಾರಿ ನಾಥೂರಾಮ್ ಗೋಡ್ಸೆ, ಆರ್‌ಎಸ್‍ಎಸ್ ತೊರೆದೇ ಇರಲಿಲ್ಲ ಎಂಬುದಕ್ಕೆ ಹೊಸ ಪುರಾವೆಗಳು ಸಿಕ್ಕಿವೆ ಎಂಬ ಒಂದು ದೀರ್ಘ ಲೇಖನವನ್ನು ಪ್ರಕಟ ಮಾಡಿತ್ತು. ಗಾಂಧಿ ಹತ್ಯೆಯಾದಾಗಲಿಂದಲೂ ಆರ್‌ಎಸ್‍ಎಸ್, ಗೋಡ್ಸೆಯಿಂದ ದೂರ ಸರಿಯಲು ಪ್ರಯತ್ನಿಸಿದೆ. ಆದರೆ ಪತ್ರಕರ್ತರೂ ಆಗಿದ್ದ ಎಚ್.ಎಸ್.ದೊರೆಸ್ವಾಮಿ ಅವರು ಗಾಂಧಿ ಹತ್ಯೆಯ ಮುಂಚಿನ ಇತಿಹಾಸವನ್ನೂ ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿದ್ದರು. ಇತಿಹಾಸವನ್ನು ನಿಖರವಾಗಿ ಅರಿತಿರುವ ಎಚ್.ಎಸ್.ದೊರೆಸ್ವಾಮಿ, ನಾಥೂರಾಮ್ ಗೋಡ್ಸೆ ಮತ್ತು ಆರ್‌ಎಸ್‍ಎಸ್ ಸಂಬಂಧದ ಬಗ್ಗೆ ಹಲವಾರು ವರ್ಷಗಳಿಂದ ಹೇಳುತ್ತಾ, ಬರೆಯುತ್ತಾ ಬಂದಿದ್ದಾರೆ. ಅಲ್ಲದೆ ಗಾಂಧಿ ಹತ್ಯೆಯಲ್ಲಿ ಆರೋಪಿಯಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಯಾದ ವಿ.ಡಿ.ಸಾವರ್ಕರ್ ಅವರ ವಿರುದ್ಧ, ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರವನ್ನು ಬರೆದು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಇದ್ದುದರ ಬಗ್ಗೆ ಬಹಳ ನಿಷ್ಠುರವಾಗಿ ನುಡಿಯುವ ಗಾಂಧಿವಾದಿ ದೊರೆಸ್ವಾಮಿಯವರ ಬಗ್ಗೆ ಕೋಪ, ದ್ವೇಷ, ಅಸೂಯೆಗಳು ಸಂಘ ಪರಿವಾರದವರಿಗೆ ಹುಟ್ಟಿರುವುದರಲ್ಲಿ ಯಾವುದೇ ಆಶ್ಚರ್ಯ ಇಲ್ಲದೆ ಹೋದರೂ ಆತಂಕಕಾರಿ ವಿಷಯವಾಗಿದೆ. ವಿಶ್ವದ ನಾಯಕರ ಮುಂದೆ ಗಾಂಧಿಯನ್ನು ಹೊಗಳುವ, ಅವರದೇ ಬೈಠಕ್‍ಗಳಲ್ಲಿ ಗೋಡ್ಸೆ ಮತ್ತು ಸಾವರ್ಕರ್ ಅವರುಗಳನ್ನು ಆರಾಧಿಸುವ ಮಂದಿಗೆ ದೊರೆಸ್ವಾಮಿಯವರು ಸತ್ಯದ ದಾಖಲೆಗಳೊಂದಿಗೆ ಕಟ್ಟಿಕೊಡುವ ಇತಿಹಾಸ ಸಮಸ್ಯೆ ಸೃಷ್ಟಿಸಿದೆ.

ಸ್ವ್ವಾತಂತ್ರ್ಯ ಚಳವಳಿಯಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ, ತುರ್ತು ಪರಿಸ್ಥಿತಿಯಲ್ಲಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಬರೆದು ಜೈಲಿಗೆ ಸೇರಿದ್ದ ದೊರೆಸ್ವಾಮಿಯವರಿಗೆ ಹೆದರಿಸಿ ಮೂಲೆಗುಂಪು ಮಾಡಲು ಸರ್ಕಾರಗಳಿಗೆ ಬೇರೆ ಯಾವುದೇ ಮಾರ್ಗ ಇಲ್ಲವಾಗಿದೆ. ಪ್ರಜಾಪ್ರಭುತ್ವವಾದಿಯಾಗಿರುವ ಶತಾಯುಷಿಗಳಿಗೆ ಯಾವುದೇ ಸರ್ಕಾರದ ಸರ್ವಾಧಿಕಾರದ ಧೋರಣೆಯನ್ನು ಸುಮ್ಮನೆ ನೋಡಿಕೊಂಡು, ಸಹಿಸಿಕೊಂಡು ಅಥವಾ ಕೇವಲ ಬಾಯಿಮಾತಿನಲ್ಲಿ ಟೀಕಿಸಿಕೊಂಡು ನಂತರ ಹೊಂದಾಣಿಕೆ ಮಾಡಿಕೊಳ್ಳುವ ಮನೋಭಾವ ಇರುವುದಿಲ್ಲ. ಬೀದಿಗಿಳಿದು ಹೋರಾಟ ಮಾಡುವುದು, ಜನಾಭಿಪ್ರಾಯ ಮೂಡಿಸುವುದು ಅವರ ಮೂಲಗುಣ. ಗಾಂಧಿಯವರ ಜೊತೆಗಿನ ಹೋರಾಟದಲ್ಲಿ ಅವರು ರೂಢಿಸಿಕೊಂಡ ಧೋರಣೆ. ಬಹುಶಃ ಇದನ್ನು ಒಬ್ಬ ಅಥವಾ ಇಂತಹ ಸಾವಿರಾರು ಯತ್ನಾಳ್‍ಗಳಿಂದ ಬದಲಿಸಲು ಅಥವಾ ಬೆದರಿಸಲು ಸಾಧ್ಯವಿಲ್ಲವೇನೋ.

ಟಿಪ್ಪುವಿನ ಬ್ರಿಟಿಷರ ವಿರುದ್ಧದ ಹೋರಾಟದ ಸಂಗತಿಗಳನ್ನು ತಿರುಚುವುದು, ಕೋಮುವಾದಿಗಳ ವಿರೋಧಿಗಳಾಗಿದ್ದ ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಅಂತಹ ನಾಯಕರನ್ನು ತಮ್ಮ ತೆಕ್ಕೆಗೆ ಸೇರಿಸಿಕೊಳ್ಳಲು ತಂತ್ರ ಮಾಡುವುದು, ಗಾಂಧಿ ಹತ್ಯೆಯ ಸಂದರ್ಭದಲ್ಲಿ ಆರ್‍ಎಸ್‍ಎಸ್ ನಾಯಕರನ್ನು ಬಂಧಿಸಿ, ಆರ್‍ಎಸ್‍ಎಸ್ ನಿಷೇಧಿಸಲು ಅಂದಿನ ಪ್ರಧಾನಿ ಪಂಡಿತ್ ಜವಹರ್‌ಲಾಲ್ ನೆಹರು ಅವರಿಗೆ ಪತ್ರ ಬರೆದಿದ್ದ ಅಂದಿನ ಗೃಹಮಂತ್ರಿ ಸರ್ದಾರ್ ವಲ್ಲಭಾಯಿ ಪಟೇಲ್ ನೆಹರೂರ ವಿರೋಧಿಗಳಾಗಿದ್ದರು ಎಂಬಂತೆ ಬಿಂಬಿಸುವುದು, ನೆಹರೂವಿನಿಂದ ಹಿಡಿದು ಪ್ರಮುಖ ಪ್ರಗತಿಪರ ಮುಖಂಡರ ಕುರಿತು ಸುಳ್ಳು ವೈಯಕ್ತಿಕ ಸಂಗತಿಗಳನ್ನು ಸೃಷ್ಟಿಸಿ ಖಳನಾಯಕರಂತೆ ಬಿಂಬಿಸುವುದು, ದೇಶದ ಸಾಮರಸ್ಯಕ್ಕೆ ಧಕ್ಕೆ ಆಗುವಂತೆ ಸೈದ್ಧಾಂತಿಕ ಪೊಲರೈಸೇಶನ್‍ಅನ್ನು ವಿಪರೀತಕ್ಕೆ ತೆಗೆದುಕೊಂಡು ಹೋಗುವುದು, ಸಂವಿಧಾನ ಬರೆದದ್ದು ಅಂಬೇಡ್ಕರ್ ಅಲ್ಲ ಎಂಬಂತಹ ಸುಳ್ಳು ಸುದ್ದಿಗಳನ್ನು ಹರಿದುಬಿಡುವುದು ಇಂತಹ ಪ್ರೊಪಗಾಂಡದ ಭಾಗವಾಗಿಯೇ.

ಈಗ ನಮ್ಮೆಲ್ಲರ ನಡುವೆ ತಮ್ಮ 103ನೇ ವಯಸ್ಸಿನಲ್ಲಿ ಪ್ರತಿರೋಧದ ಮಹಾಮೂರ್ತಿಯಂತೆ ಬದುಕುತ್ತಿರುವ ದೊರೆಸ್ವಾಮಿ ಅವರ ವಿರುದ್ಧ ಕೆಸರೆರಚಾಟಕ್ಕೆ ಸಂಘಪರಿವಾರದ ಹಲವು ಮುಖಂಡರು ಎದ್ದುಕೂತಿದ್ದಾರೆ. ನೈತಿಕವಾಗಿ ಗಟ್ಟಿಯಿಲ್ಲದ ವ್ಯಕ್ತಿಯ ವಿರುದ್ಧ ಆಗಿದ್ದರೆ ಸಫಲರಾಗುತ್ತಿದ್ದರೇನೋ, ಆದರೆ ಈ ಬಾರಿ ಅವರು ತಮ್ಮ ಪ್ರಯೋಗಕ್ಕೆ ಆಯ್ಕೆ ಮಾಡಿಕೊಂಡಿರುವ ವ್ಯಕ್ತಿತ್ವ ಮತ್ತು ಅವರನ್ನು ಗೌರವಿಸುವ ಲಕ್ಷಾಂತರ ನಾಗರಿಕರು ತಿರುಗಿಬಿದ್ದರೆ ತಾವು ಕಟ್ಟುವ ಸುಳ್ಳಿನ ಸೌಧ ನೆಲಸಮವಾಗಿ ಬೂದಿಯಾದೀತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...