Homeಮುಖಪುಟದೊರೆಸ್ವಾಮಿ ಎಂಬ ರಾಕ್‍ಸ್ಟಾರ್ !! ಆರು ವರ್ಷದ ಹಿಂದೆ ಗೌರಿ ಲಂಕೇಶ್‌ ಬರೆದ ಲೇಖನ

ದೊರೆಸ್ವಾಮಿ ಎಂಬ ರಾಕ್‍ಸ್ಟಾರ್ !! ಆರು ವರ್ಷದ ಹಿಂದೆ ಗೌರಿ ಲಂಕೇಶ್‌ ಬರೆದ ಲೇಖನ

- Advertisement -
- Advertisement -

ಎಚ್.ಎಸ್ ದೊರೆಸ್ವಾಮಿಯವರಿಗೆ ಈಗ ವಯಸ್ಸು 97. ಆದರೆ ಅವರಿಗೆ ಅದೊಂದು ಮಿತಿಯೂ ಅಲ್ಲ ಅಡೆತಡೆಯೂ ಅಲ್ಲ! ಈಗಲೂ ಎಂತಹ ಸಾಹಸಕ್ಕೂ ಜೈ ಎನ್ನುವ ಜಾಯಮಾನ, ಯಾವ ಅಂಶವನ್ನೂ ಮರೆಯದ ಚುರುಕು ಬುದ್ಧಿ ಅವರದ್ದು. ಅವರಿಗಿರುವ ರಾಜಕೀಯ ಸಹೃದಯತೆ, ಪ್ರಾಮಾಣಿಕತೆ, ಚುರುಕುತನ, ಹಾಸ್ಯ ಮನೋವತ್ತಿ ಒಂದಿಷ್ಟೂ ಬೇಸರಪಟ್ಟುಕೊಳ್ಳದ, ಎಲ್ಲರನ್ನೂ ಆತ್ಮೀಯವಾಗಿ ಮಾತನಾಡಿಸುವ ಅವರ ಮನೋಭಾವವನ್ನು ಮೆಚ್ಚದೆ ಇರಲು ಸಾಧ್ಯವೇ ಇಲ್ಲ. ಈಗಲೂ ಓದಲು ಕನ್ನಡಕ ಬಳಸದೆ, ಕಾಫಿ ಜೊತೆ ಸಕ್ಕರೆ ಬೇಕೇಬೇಕೆನ್ನುವ, ರುಚಿಕರವಾದ ಆಹಾರವನ್ನು ಇಷ್ಟ ಪಡುವ, ಪುಟ್ಟ ಮಕ್ಕಳಂತೆ ಸ್ವೀಟ್ಸ್ ಮತ್ತು ಐಸ್‍ಕ್ರೀಮ್ ಇಷ್ಟ ಪಡುವ, ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯಾದಂತ ಸುತ್ತಾಡುವ ಅವರ ಜೀವನೋತ್ಸಾಹ ಬೆರಗು ಮೂಡಿಸುವಂತಹವು.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ದೊರೆಸ್ವಾಮಿಯವರನ್ನು ಚಿಕ್ಕಮಗಳೂರಿಗೆ ಕರೆದುಕೊಂಡು ಹೋದರೆ ಅವರಿಗೆ ದಣಿವಾಗಬಹುದು ಎಂಬ ಕಾರಣಕ್ಕೇ ಮೊದಲು ನಾವು ಆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದೆವು. ಆದರೆ ಅದಕ್ಕೆ ಹಲವು ತಾಂತ್ರಿಕ ಕಾರಣಗಳು ಅಡ್ಡಿಯಾದಾಗ ಚಿಕ್ಕಮಗಳೂರಿನಲ್ಲಿ ಅದನ್ನು ಏರ್ಪಸುವುದು ಅನಿವಾರ್ಯವಾಯಿತು. ಶಿವಸುಂದರ್ ಅವರು ಹಿಂಜರಿಕೆಯಿಂದಲೇ .

“ಸಾರ್ ಇದಕ್ಕೆ ಚಿಕ್ಕಮಗಳೂರಿಗೇ ಹೋಗಬೇಕಾಗುತ್ತದೆ” ಎಂದು ದೊರೆಸ್ವಾಮಿಯವರ ಮುಂದೆ ಪ್ರಸ್ತಾಪಿಸಿದಾಗ ಅವರು “ನಡೀರಿ ಹೋಗೋಣ” ಎಂದು ಎಲ್ಲರಿಗಿಂತ ಮೊದಲು ಸಜ್ಜಾದರು!

ದೊರೆಸ್ವಾಮಿಯವರನ್ನು ಆರಾಮಾಗಿ ಚಿಕ್ಕಮಗಳೂರಿಗೆ ಕರೆದುಕೊಂಡು ಹೋಗಲೆಂದು ನನ್ನ ಪುಟ್ಟ ಸ್ಯಾಂಟ್ರೊ ಕಾರ್ ಬದಲಾಗಿ ನನ್ನ ತಂಗಿಯ ಇನ್ನೋವಾ ಕಾರ್ ಪಡೆದೆ. ಅವತ್ತು ಭಾನುವಾರ ಬೆಳಗ್ಗೆ ದೊರೆಸ್ಟಾಮಿಯವರ ಸಂಬಂಧಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತಾದ್ದರಿಂದ ಅವರು ಬೆಳಗ್ಗೆಯೇ ಮನೆಯಿಂದ ತಮ್ಮ ಬ್ಯಾಗ್ ಹಿಡಿದು ಹೊರಟಿದ್ದರು. ಮಧ್ಯಾಹ್ನ ಬನಶಂಕರಿಯ ಸುಚಿತ್ರಾ ಫಿಲಂ ಸೊಸೈಟಿ ಆವರಣದಿಂದ ನಾನು ಮತ್ತು ಶಿವಸುಂದರ್ ದೊರೆಸ್ವಾಮಿಯವರನ್ನು ಕರೆದುಕೊಂಡು ಚಿಕ್ಕಮಗಳೂರಿಗೆ ಹೊರಟೆವು.

ನೆಲಮಂಗಲ ದಾಟುವ ಹೊತ್ತಿಗೆ ಊಟದ ಸಮಯವಾಗಿತ್ತು. ದುರದೃಷ್ಟವಶಾತ್ ಆ ಹೆದ್ದಾರಿಯಲ್ಲಿ ಅಚ್ಚುಕಟ್ಟಾದ ಸಸ್ಕಾಹಾರಿ ಹೋಟೆಲ್‍ಗಳಿಗಿಂತ ಹೆಚ್ಚಾಗಿ ಡಾಬಾಗಳೇ ಇವೆ. ಒಂದು ಡಾಬಾದ ಮುಂದೆ ಕಾರ್ ನಿಲ್ಲಿಸಿ ದೊರೆಸ್ವಾಮಿಯವರಿಗೆ ಅನ್ನ-ಸಾರು, ಮೊಸರನ್ನ ಇದೆಯೇ ಎಂದು ವಿಚಾರಿಸಿದೆವು. ಆಗ ದೊರೆಸ್ವಾಮಿಯವರು “ನನಗೆ ಪರೋಟ, ಮೊಸರನ್ನ ಮತ್ತು ಪುಟ್ಟ ಐಸ್‍ಕ್ರೀಮ್ ಬೇಕು” ಎಂದರು. ಡಾಬಾಗಳಲ್ಲಿ ‘ಗುಂಡು ಮತ್ತು ತುಂಡು’ ಸಾಮಾನ್ಯವಾದ್ದರಿಂದ ಅವರು ಕಾರಿನಲ್ಲೇ ಊಟ ಮಾಡುವುದಾಗಿ ಹೇಳಿದರು. ಒಳಗೆ ಹೋದ ನಾನು ವೈಟರ್ ಒಬ್ಬನಿಗೆ “ಹೊರಗೆ ಕಾರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ಟಾಮಿಯವರಿದ್ದಾರೆ. ಅವರಿಗೆ ಬೇಕಿದ್ದನ್ನು ಕೊಡು” ಎಂದೆ. ಹೊರಕ್ಕೆ ದೌಡಾಯಿಸಿದ ಆತ ದೊರೆಸ್ವಾಮಿಯವರ ಪಾದಗಳಿಗೆ ನಮಸ್ಕರಿಸಿ, ನಿಮ್ಮನ್ನು ಟಿವಿಯಲ್ಲಿ ನೋಡಿದ್ದೆ. ಇವತ್ತು ನಿಮ್ಮ ದರ್ಶನದ ಜೊತೆಗೆ ನಿಮ್ಮ ಸೇವೆ ಮಾಡುವ ಅವಕಾಶ ನನಗೆ ಸಿಕ್ಕಿದೆ. ಏನು ಬೇಕು ಹೇಳಿ ಸಾರ್” ಎಂದು ಅವರ ನೆರವಿಗೆ ನಿಂತ.

ನಾವು ಊಟ ಮುಗಿಸಿ ಹೊರಗೆಬಂದಾಗ ಬಹಳಷ್ಟು ಜನ ದೊರೆಸ್ವಾಮಿಯವರನ್ನು ಮುತ್ತಿಕೊಂಡಿದ್ದರು. ಎಲ್ಲರೂ ಅಭಿಮಾನದಿಂದ, ಗೌರವದಿಂದ ದೊರೆಸ್ವಾಮಿಯವರನ್ನು ಮಾತನಾಡಿಸುತ್ತಿದ್ದರು. “ಬೀಡಾ ಬೇಕಾ ಸಾರ್?” ಎಂದು ಕೇಳಿದೆ. “ಸ್ವೀಟ್ ಬೀಡಾ ಬೇಕು ಆದರೆ ಅದರಲ್ಲಿ ತಂಬಾಕು ಇರಬಾರದು” ಎಂದರು. ಬೀಡಾ ಅಂಗಡಿ ಮುಂದೆ ಇಬ್ಬರು ಯುವಕರು ನಿಂತಿದ್ದರು. “ದೊರೆಸ್ವಾಮಿಯವರ ಬಗ್ಗೆ ಕೇಳಿದ್ದೀರಾ, ಅವರು ಕಾರ್‍ನಲ್ಲಿ ಕೂತಿದ್ದಾರೆ. ಅಂತಹವರನ್ನು ಭೇಟಿ ಆಗುವ ಅವಕಾಶ ನಿಮಗೆ ಮುಂದೆ ಸಿಗಲಾರದು, ಹೋಗಿ ಮಾತನಾಡಿಸಿ” ಎಂದೆ. ಇಬ್ಬರೂ ಮಾತನಾಡಿಸಿ ಬಂದಾಗ “ಇವರೇ ಅಲ್ವಾ ಮೇಡಂ ಡಿ.ಕೆ.ಶಿವಕುಮಾರ್ ವಿರುದ್ಧ ಹೋರಾಟ ಮಾಡುತ್ತಿರುವುದು, ಟಿವಿಯಲ್ಲಿ ನೋಡಿದ್ವಿ ಎಂದರು.

ಮಾರ್ಗಮಧ್ಯದಲ್ಲಿ ನಾನು ಒಂದಿಷ್ಟು ಹೊತ್ತು ತೂಕಡಿಸಿದರೂ, ದೊರೆಸ್ವಾಮಿಯವರು ಮಾತ್ರ ಎಚ್ಚರವಾಗಿಯೇ ಇದ್ದರು.

ಚಿಕ್ಕಮಗಳೂರಿನಲ್ಲಿ ನಮ್ಮೆಲ್ಲರಿಗೆ ಐಬಿಯಲ್ಲಿ ರೂಮುಗಳನ್ನು ಕಾದಿರಿಸಿದ್ದೆವು. ಆದರೂ ದೊರೆಸ್ವಾಮಿಯವರು ತಮ್ಮ ಅಣ್ಣನ ಅಳಿಯನ ಮನೆಯಲ್ಲಿ ತಂಗುವುದಾಗಿ ಹೇಳಿದರು. ಆ ಅಳಿಯನ ಮನೆ ಶಂಕರಮಠದ ಹತ್ತಿರವಿದೆ ಎಂಬುದು ಅವರಿಗೆ ಗೊತ್ತಿತ್ತೇ ಹೊರತು ಸರಿಯಾದ ಅಡೆಸ್ ಆಗಲಿ, ಫೋನ್ ನಂಬರ್ ಆಗಲಿ ಅವರಿಗೆ ಗೊತ್ತಿರಲಿಲ್ಲಿ ಕಾರ್ ನಿಲ್ಲಿಸಿ ಡೈರೆಕ್ಷನ್ ಕೇಳಿದ ಕಡೆಯೆಲ್ಲ ಜನ ದೊರೆಸ್ವಾಮಿಯವರನ್ನು ಗುರುತಿಸಿ ಮಾತನಾಡಿಸುತ್ತಿದ್ದರು.

ಕೊನೆಗೂ ಆ ಮನೆ ಸಿಕ್ಕಿತು. “ಬೆಳಗ್ಗೆ ಎಲ್ಲರೂ ಇಲ್ಲಿಗೆ ತಿಂಡಿಗೆ ಬನ್ನಿ” ಎಂದ ದೊರೆಸ್ವಾಮಿಯವರು ನಮ್ಮನ್ನು ಬೀಳ್ಕೊಟ್ಟರು: ಅವತ್ತು ಬೆಂಗಳೂರಿನಲ್ಲಿ ಕಾರ್ ಹತ್ತಿದ್ದ ಅವರು ಎಲ್ಲೂ ಇಳಿದಿರಲಿಲ್ಲ. ಆದರೂ ಅವರಿಗೆ ಒಂದಿಷ್ಟೂ ದಣಿವಾಗಿರಲಿಲ್ಲ!

ಮಾರನೆ ದಿನ ಬೆಳಗ್ಗೆ ಒಂಭತ್ತೂವರೆಗೆ ಅವರನ್ನು ಅಲ್ಲಿಂದ ಕರೆದುಕೊಂಡು ಡಿಸಿ ಆಫೀಸಿಗೆ ಹೋದೆವು. ಅಲ್ಲಿ ಡಿಸಿ ಮತ್ತು ಎಸ್‍ಪಿ ಅವರೊಂದಿಗೆ ಚರ್ಚಿಸಿದ ನಂತರ ಐಬಿಗೆ ಬಂದೆವು.

ನೂರ್ ಮತ್ತು ಸಿರಿಮನೆ ಅವರು ಬರುತಿದ್ದಂತೆ ನೂಕುನುಗ್ಗಲು ಶುರುವಾಯಿತು. ಒಂದೆಡೆ ಎಲ್ಲರಿಗೂ ಅವರನ್ನು ಸ್ವಾಗತಿಸುವ ಆಸೆ, ಇನ್ನೊಂದೆಡೆ ಮಾಧ್ಯಮದವರಿಗೆ ಹತ್ತಿರದಿಂದ ಫೋಟೋ ಮತ್ತು ವೀಡಿಯೋ ಹಿಡಿಯುವ ತವಕ. ಆ ನೂಕಾಟದಲ್ಲಿ ಮಾಧ್ಯಮದವರೇ ಪರಸ್ಪರ ಜಗಳ ಪ್ರಾರಂಭಿಸಿದರು. ಎಷ್ಟೇ ಪ್ರಯತ್ನಪಟ್ಟರೂ ಮಾಧ್ಯಮದವರನ್ನು ನಿಯಂತ್ರಿಸಲಾಗಲಿಲ್ಲ. ಇದೆಲ್ಲ ನಡೆಯುತ್ತಿದ್ದಾಗ ಒಬ್ಬರು ಬಂದು “ದತ್ತಣ್ಣ (ವೈ.ಎಸ್.ವಿ.ದತ್ತ) ನಿಮಗೆ ಅಭಿನಂದನೆಗಳನ್ನು ಕಳುಹಿಸಿದ್ದಾರೆ” ಎಂದು ನನ್ನ ಕೈಗೆ ಒಂದು ಹೂವಿನಹಾರವನ್ನು ಕೊಟ್ಟರು. ಅದನ್ನು ನೂರ್ ಝುಲ್ಫಿಕರ್ ಅವರಿಗೆ ಕೊಟ್ಟು “ದೊರೆಸ್ವಾಮಿಯವರಿಗೆ ಥ್ಯಾಂಕ್ಸ್ ಹೇಳಿ” ಎಂದೆ. ಅವರು ಹಾರವನ್ನು ದೊರೆಸ್ಟಾಮಿಯವರಿಗೆ ಹಾಕಿ ಥ್ಯಾಂಕ್ಸ್ ಹೇಳಿದರು.

ಆಮೇಲೆ ಎಲ್ಲರೂ ಡಿಸಿ ಕಚೇರಿಗೆ ಹೋಗಿ ನಿಯಮದ ಪ್ರಕಾರ ನೂರ್ ಹಾಗು ಸಿರಿಮನೆಯವರನ್ನು ಜಿಲ್ಲಾಡಳಿತಕ್ಕೆ ಒಪ್ಪಿಸಿದೆವು. ನೂರ್ ಮತ್ತು ಸಿರಿಮನೆಯವರ ಪತ್ರಿಕಾಹೇಳಿಕೆ ಪ್ರಕ್ರಿಯೆಗಳು ಮುಗಿದನಂತರ ನಾನು “ಸರ್, ಒಂದು ಚರ್ಚಾಸಭೆಯನ್ನು ಏರ್ಪಡಿಸಿದ್ದಾರೆ. ಅದನ್ನು ಮುಗಿಸಿದಕೂಡಲೇ ಬೆಂಗಳೂರಿಗೆ ಹೊರಡೋಣ” ಎಂದೆ. ಆಗ ದೊರೆಸ್ವಾಮಿಯವರು ’ಇಲ್ಲ ನಾನು ಬಳ್ಳಾರಿಗೆ ಹೋಗುತ್ತೇನೆ ಎಂದು ಬಾಂಬ್’ ಸಿಡಿಸಿದರು. “ಅಲ್ಲಾ ಸಾರ್, ನೀವು ಹೇಗೆ ಬಳ್ಳಾರಿಗೆ ಹೋಗುತ್ತೀರಿ?” ಎಂದು ಅಚ್ಚರಿಯಿಂದ ಕೇಳಿದೆ. “ನನ್ನನ್ನ ಕರೆದುಕೊಂಡು ಹೋಗಲು ಬಂದಿದ್ದಾರೆ” ಎಂದರು. “ಅವರು ಯಾರು? ಯಾವುದರಲ್ಲಿ ನಿಮ್ಮನ್ನು ಕರೆದುಕೊಂಡು ಹೋಗುತ್ತಾರೆ ಎಂದೆಲ್ಲ ಗೊತ್ತಾದ ಮೇಲೇ ನಾನು ನಿಮ್ಮನ್ನು ಅವರ ಜೊತೆ ಕಳಿಸೋದು” ಎಂದೆ. ಅದಕ್ಕೆ ದೊರೆಸ್ವಾಮಿಯವರು “ಓಹೋ, ಇವರಿಬ್ಬರನ್ನು ಹಸ್ತಾಂತರಿಸಿದ್ದು ಆಯಿತು. ಈಗ ನನ್ನನ್ನೂ ಹಸ್ತಾಂತರಿಸುತ್ತೀಯಾ!” ಎಂದು ಜೋಕ್ ಮಾಡಿದರು. “ಸರ್, ನೀವು ಇವತ್ತು ನಮ್ಮೊಂದಿಗೆ ಬೆಂಗಳೂರಿಗೆ ವಾಪಾಸ್ ಹೋಗಬೇಕಿತ್ತು ಆದರೆ ನೀವೀಗ ಬೇರೆಲ್ಲಿಗೋ ಹೊರಟಿದ್ದೀರಿ. ಮನೆಯವರು ಏನಂತಾರೆ?” ಅಂದೆ. “ಅವಳು ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಟ್ಟಿದ್ದಾಳೆ” ಎಂದ ಅವರು ಜೋರಾಗಿ ನಕ್ಕರು.

ಐಬಿಗೆ ಹಿಂದಿರುಗಿದಾಗ ದೊರೆಸ್ವಾಮಿಯವರು ಮಂಚದ ಮೇಲೆ ಕಾಲು ಚಾಚಿಕೊಂಡು ಕೂತಿದ್ದಾಗ, ಸುತ್ತುವರಿದಿದ್ದ ಜನರೊಂದಿಗೆ ಮತ್ತೆ ಹರಟಲಾರಂಭಿಸಿದರು. ಆಗ ಶಿವಸುಂದರ್‍ಗೆ ದೊರೆಸ್ವಾಮಿಯವರು ಬಳ್ಳಾರಿಗೆ ಹೊರಟಿದ್ದ ವಿಚಾರ ತಿಳಿಸಿದೆ. “ನನ್ನ ಮನೆಯವರಿಗೆ ಫೋನ್ ಮಾಡಿ ನಾನು ಬಳ್ಳಾರಿಗೆ ಹೋಗಿದ್ದೀನಿ ಅಂತ ತಿಳಿಸಿ ಎಂದರು. ಶಿವಸುಂದರ್ ಅವರು “ಸಾರ್ ಅವರು ಬೈಯಲ್ಲವಾ?” ಎಂದು ಕೇಳಿದರೆ “ಬೈದರೆ ನೀವು ತಾನೆ ಬೈಸಿಕೊಳ್ಳುವುದು, ಬೈಯಿಸಿಕೊಳ್ಳಿ” ಎಂದು ಗಹಗಹಿಸಿ ನಕ್ಕರು.

ದೊರೆಸ್ವಾಮಿಯವರು ಹೊರಡಲು ಸಿದ್ಧರಾಗಿ ನಿಂತಿದರೂ ಸುತ್ತುವರಿದಿದ್ದ ಹಲವಾರು ಅಭಿಮಾನಿಗಳು ಮತ್ತು ಮಾಧ್ಯಮದವರು ಅವರನ್ನು ಮಾತನಾಡಿಸುತ್ತಲೇ ಇದ್ದರು. “ನೀವು ಒಬ್ಬ ರಾಕ್‍ಸ್ಟಾರ್. ನಿಮ್ಮನ್ನ ಜನ ಸುತ್ತುವರಿದೇ ಇರುತ್ತಾರೆ” ಎಂದು ತಮಾಷೆ ಮಾಡುತ್ತಾ ಅವರನ್ನು ಐಬಿಯಿಂದ ಕರೆದುಕೊಂಡು ಹೊರಟೆ.

ಬಳ್ಳಾರಿಯಿಂದ ಬಂದಿದ್ದವರ ಕಾರ್ ಹತ್ತುತ್ತಾ “ನನ್ನ ಜೊತೆ ನನ್ನ ಬ್ಯಾಗನ್ನೂ ಹಸ್ತಾಂತರಿಸಿದ್ದೀ ಏನಮ್ಮ?” ಎಂದು ನಗುನಗುತ್ತಾ ಕೇಳಿದರು. ದೊರೆಸ್ವಾಮಿ ನಿಜಕ್ಕೂ ಅಪರಂಜಿಯಂತಹ ಮನುಷ್ಯ.

ಡಿಸೆಂಬರ್ 24, 2014.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...