Homeಮುಖಪುಟಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲಿ ಬಿಜೆಪಿಯ ಕುಲದೀಪ್‌ ಸೆಂಗಾರ್‌ಗೆ ಶಿಕ್ಷೆ..

ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲಿ ಬಿಜೆಪಿಯ ಕುಲದೀಪ್‌ ಸೆಂಗಾರ್‌ಗೆ ಶಿಕ್ಷೆ..

- Advertisement -
- Advertisement -

ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಉನ್ನಾವ್‌ನ ಅಪ್ತಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ ತಂದೆಯನ್ನು ಕೊಂದ ಆರೋಪದ ಮೇಲೆ ಶಿಕ್ಷೆಗೆ ಒಳಗಾಗಿದ್ದಾನೆ.

ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಮತ್ತು ಆತನ ಸಹೋದರ ಎರಡು ವರ್ಷಗಳ ಹಿಂದೆ 15 ವರ್ಷ ವಯಸ್ಸಿನ ಉನ್ನಾವೊ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಈಗಾಗಲೇ ಶಿಕ್ಷೆಗೊಳಗಾಗಿದ್ದಾನೆ. ಅಲ್ಲದೇ ಆ ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ, ಕೊಲೆಗೈದ ಆರೋಪದಲ್ಲಿಯೂ ಸಹ ಈಗ ಶಿಕ್ಷೆ ಘೋಷಣೆಯಾಗಿದೆ.

ಈ ಅತ್ಯಾಚಾರ ಪ್ರಕರಣವು ಆರೋಪಿ ಬಲಾಢ್ಯನಾದ (ಬಿಜೆಪಿ ಶಾಸಕ) ಕಾರಣಕ್ಕೆ ಮುಚ್ಚಿಹೋಗುವ ಹಂತದಲ್ಲಿತ್ತು. ಆದರೆ ಸಂತ್ರಸ್ತೆ ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೆಯ ಹೊರಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ದೊಡ್ಡ ಸುದ್ದಿಯಾಯಿತು.

ನಂತರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಆದರೆ ಅದೇ ಸಮಯದಲ್ಲಿ ಕೇಸನ್ನು ವಾಪಸ್‌ ಪಡೆಯುವಂತೆ ಆರೋಪಿ ಒತ್ತಾಯ ಹಾಕುತ್ತಲೇ ಬಂದಿದ್ದ. ಪೊಲೀಸರನ್ನು ಬಳಿಸಿಕೊಂಡು ಆಕೆಯ ತಂದೆಯ ಮೇಲೆ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆಗ ಆತನ ಮೇಲೆ ತೀವ್ರತರವಾಗಿ ಹಲ್ಲೆ ನಡೆದುದರಿಂದ ಬಂಧನದಲ್ಲಿರುವಾಗಲೇ ಸ್ಥಳೀಯ ಆಸ್ಪತ್ರೆಯಲ್ಲಿ ಆಕೆಯ ತಂದೆ ನಿಧನರಾದರು.

ಸಾಯುವ ಕೆಲವೇ ಗಂಟೆಗಳ ಮೊದಲು, ವ್ಯಕ್ತಿಯನ್ನು ಹೊಟ್ಟೆ ನೋವಿನ ದೂರುಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಸಮಯದಲ್ಲಿ, ಅವನ ಮುಖವು ಅನೇಕ ಮೂಗೇಟುಗಳಿಗೆ ಒಳಗಾಗಿತ್ತು. ಕರುಳಿನಲ್ಲಾದ ರಂಧ್ರದ ರಕ್ತದ ವಿಷದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮರಣೋತ್ತರ ವರದಿ ತಿಳಿಸಿದೆ. ಇದು ಅವನ ದೇಹದಾದ್ಯಂತ 14 ಮೂಗೇಟುಗಳನ್ನು ಸಹ ಪಟ್ಟಿಮಾಡಿದೆ.

ತದನಂತರ ಹೋರಾಟ ತೀವ್ರವಾಯಿತು. ಅತ್ಯಾಚಾರ ಸಂತ್ರಸ್ತೆ ಕೋರ್ಟಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿಹೊಡೆದಿತ್ತು. ಅದರಲ್ಲಿ ಆಕೆ ತನ್ನ ಚಿಕ್ಕಮ್ಮನನ್ನು ಕಳೆದುಕೊಳ್ಳಬೇಕಾಯಿತು. ಸಂತ್ರಸ್ತೆ ಮತ್ತು ಆಕೆಯ ವಕೀಲರು ತೀವ್ರ ಗಾಯಗಳಿಗೆ ಒಳಗಾಗಿದ್ದರು. ಇದು ಸಹ ಕೊಲೆ ಆರೋಪವೆಂದು ಆಕೆ ದೂರಿದ್ದಳು. ನಂತರವಷ್ಟೇ ಬಿಜೆಪಿ ಪಕ್ಷವು ಆರೋಪಿ ಕುಲದೀಪ್‌ ಸೆಂಗಾರ್‌ನನ್ನು ಪಕ್ಷದಿಂದ ಉಚ್ಛಾಟಿಸಿತ್ತು.

“ಶಾಸಕರ ಸಹೋದರ ಅತುಲ್ ಸಿಂಗ್ ನನ್ನನ್ನು ಥಳಿಸಿದರು. ಅವರು ನನ್ನನ್ನು ಹೊಡೆಯುತ್ತಲೇ ಇದ್ದರು. ಯಾರೂ ನನ್ನನ್ನು ಉಳಿಸಲು ಪ್ರಯತ್ನಿಸಲಿಲ್ಲ” ಎಂದು ಆಕೆಯ ತಂದೆ ವೀಡಿಯೊದಲ್ಲಿ ಹೇಳುವುದನ್ನು ಕೇಳಲಾಯಿತು. ಪೊಲೀಸರು ಸುಮ್ಮನೆ ನಿಂತಿದ್ದರು ಎಂದು ಆತ ದೂರಿದ್ದ.

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತೆಯ ತಂದೆಯ ಕೊಲೆಯು “ಅವರನ್ನು ತಡೆಯಲು, ಮೌನಗೊಳಿಸಲು ಮತ್ತು ದೂರನ್ನು ಮುಂದುವರಿಸದಂತೆ ತಡೆಯುವ ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿರುವ ಮೂವರು ಪೊಲೀಸರ ಮೇಲೂ ಕೊಲೆ ಆರೋಪವಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...