Homeಮುಖಪುಟಭಜರಂಗದಳ ಒತ್ತಡಕ್ಕೆ ಮಣಿದ ತಹಶೀಲ್ದಾರ್ : ಏಕಾಏಕಿ ಏಸು ಪ್ರತಿಮೆ ಮತ್ತು ಶಿಲುಬೆಗಳ ಧ್ವಂಸ

ಭಜರಂಗದಳ ಒತ್ತಡಕ್ಕೆ ಮಣಿದ ತಹಶೀಲ್ದಾರ್ : ಏಕಾಏಕಿ ಏಸು ಪ್ರತಿಮೆ ಮತ್ತು ಶಿಲುಬೆಗಳ ಧ್ವಂಸ

- Advertisement -
- Advertisement -

ಕ್ರಿಶ್ಚಿಯನ್ ಸಮುದಾಯಕ್ಕೆ ನೀಡಲಾಗಿದ್ದ ಸ್ಮಶಾನ ಭೂಮಿಯ ಸಣ್ಣಗುಡ್ಡದ ಮೇಲೆ ನಿಲ್ಲಿಸಲಾಗಿದ್ದ ಏಸು ಪ್ರತಿಮೆ ಮತ್ತು 14 ಶಿಲುಬೆಗಳನ್ನು ತಹಶೀಲ್ದಾರ್ ನೇತೃತ್ವದಲ್ಲಿ ಜೆಸಿಬಿಯಿಂದ ಏಕಾಏಕಿ ಧ್ವಂಸಗೊಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಯಾವುದೇ ನೋಟಿಸ್ ನೀಡದೆ, ಸಮಯವನ್ನು ಕೊಡದೆ ಏಸು ಪ್ರತಿಮೆ ಮತ್ತು ಶಿಲುಬೆಗಳನ್ನು ಧ್ವಂಸಗೊಳಿಸಿರುವ ತಾಲೂಕು ಆಡಳಿತದ ಬಗ್ಗೆ ಕ್ರಿಶ್ಚಿಯನ್ ಸಮುದಾಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಯೊಂದು ಸ್ಮಶಾನಗಳಲ್ಲೂ ಏಸು ಮತ್ತು ಶಿಲುಬೆಗಳು ಇರುವುದು ಸಾಮಾನ್ಯ. ಇಲ್ಲಿಯೂ ಹಾಗೆಯೇ ನಿಲ್ಲಿಸಲಾಗಿತ್ತು. ಯಾರೋ ದೂರಿದದರೆಂಬ ಕಾರಣಕ್ಕೆ ಏಕಾಏಕಿ ದಾಳಿ ನಡೆಸಿರುವುದು ಕ್ರಿಶ್ಚಿಯನ್‌ ಸಮುದಾಯದ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯ ಸೇಂಟ್ ಜೋಸೆಫ್ ಚರ್ಚ್ ಸಮೀಪವೇ ಇರುವ 120 ಎಕರೆ ಸರ್ಕಾರಿ ಭೂಮಿಯಲ್ಲಿ ಸಣ್ಣ ಭಾಗವನ್ನು ಸ್ಮಶಾನಕ್ಕೆ ಜಾಗ ನೀಡುವಂತೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು 2012ರಲ್ಲಿ ದೇವನಹಳ್ಳಿಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಹೊತ್ತುಹಾಕಿದರು. ಕೆಲಸ ಮಾತ್ರ ಆಗಿರಲಿಲ್ಲ. ಹೀಗಾಗಿ 2018ರಲ್ಲಿ ಮತ್ತೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಆಗ ಮತ್ತೆ ತಹಶೀಲ್ದಾರ್ ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನು ಕಳುಹಿಸಿದರು.

ಕ್ರಿಶ್ಚಿಯನ್ ಸಮುದಾಯವರು ನೀಡಿದ ಪತ್ರವನ್ನು ಪರಿಶೀಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸ್ಮಶಾನಕ್ಕೆ ಭೂಮಿ ನೀಡಬಹುದೆಂದು ಸೂಚಿಸಿದರು. ತಹಶೀಲ್ದಾರ್ ಸ್ಥಳೀಯ ಗ್ರಾಮ ಪಂಚಾಯಿತಿಯ ಪಿಡಿಓಗೆ ಪತ್ರ ಬರೆದು ಸ್ಮಶಾನ ಜಾಗಕ್ಕೆ ಭೂಮಿ ನೀಡಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.  ಈ ಹಿನ್ನೆಲೆಯಲ್ಲಿ 2019ರ ಸೆಪ್ಟೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿಯು ಎಲ್ಲರಿಗೂ ಸ್ಮಶಾನ ಭೂಮಿ ಇದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಇಲ್ಲ. ಹಾಗಾಗಿ 120 ಎಕರೆಯಲ್ಲಿ 4.2 ಎಕರೆ ಭೂಮಿಯನ್ನು ಸ್ಮಶಾನಕ್ಕೆ ನೀಡಿತ್ತು. ಇದಕ್ಕೆ ದೊಡ್ಡಸಾಗರಹಳ್ಳಿ ಗ್ರಾಮಸ್ಥರೂ ಸಂಪೂರ್ಣ ಒಪ್ಪಿಗೆ ನೀಡಿದ್ದರು.

ಕ್ರಿಶ್ಚಿಯನ್ನರ ಸ್ನಶಾನಕ್ಕೆ ನೀಡಿರುವ 4.2 ಎಕರೆ ಜಾಗದಲ್ಲಿ ಸಣ್ಣದೊಂದು ಗುಡ್ಡವಿದೆ. ಆ ಗುಡ್ಡದ ಮೇಲೆ ಏಸುಕ್ರಿಸ್ತನ ಪ್ರತಿಮೆ ಮತ್ತು ಶಿಲುಬೆಗಳನ್ನು ಇಟ್ಟಿದ್ದೆವು. ‘ಮೌಂಟ್ ಕಲ್ವರಿ’ ಕ್ರಿಶ್ಚಿಯನ್ ಸಮುದಾಯಕ್ಕೆ ಪವಿತ್ರ ವಾದುದು. ಈಸ್ಟರ್ ಸಂದರ್ಭದಲ್ಲಿ ನಾವು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸುತ್ತೇವೆ. ಅಂತಹ ಪವಿತ್ರ ಸ್ಥಳವನ್ನು ಧ್ವಂಸ ಮಾಡಲಾಗಿದೆ. ಕ್ರೈಸ್ತ ಸಮುದಾಯದ ಸ್ಮಶಾನ ಜಾಗದಲ್ಲಿ ಶಿಲುಬೆ ಮತ್ತು ಏಸುಕ್ರಿಸ್ತನ ಪ್ರತಿಮೆ ಇರುವುದು ಸಾಮಾನ್ಯ. ಇಲ್ಲಿ ನಾವು ಯಾವುದೇ ವಾಣಿಜ್ಯ ಸಂಕೀರ್ಣ ನಿರ್ಮಿಸಿರಲಿಲ್ಲ. ಆದರೂ ತಹಶೀಲ್ದಾರ್ ಜೆಸಿಬಿಯೊಂದಿಗೆ ಬಂದು ಶಿಲುಬೆಗಳು ಮತ್ತು ಏಸು ಪ್ರತಿಮೆಯನ್ನು ಧ್ವಂಸಗೊಳಿಸಿದರು. ಇದರಿಂದ ನಮಗೆ ನೋವಾಗಿದೆ. ಭಾವನೆಗಳಿಗೆ ಧಕ್ಕೆಯಾಗಿದೆ. ಇದನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ನಮ್ಮ ಬಳಿ ಎಲ್ಲಾ ದಾಖಲೆಗಳು ಇವೆ. ಹೋರಾಟ ಮುಂದುವರಿಯಲಿದೆ ಎಂದು ಬೆಂಗಳೂರಿನ ಬಿಶಪ್‌ ಚರ್ಚ್ ಸಾರ್ವಜನಿಕ ಸಂಪರ್ಕಾಧಿಕಾರಿ ಕಾಂತರಾಜು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ಮುಖ್ಯವಾದ ವಿಷಯವೆಂದರೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಮತ್ತ ಗ್ರಾಮ ಪಂಚಾಯಿತಿ ಸ್ಮಶಾನಕ್ಕೆ ಜಾಗ ನೀಡಿರುವುದು ಸ್ಪಷ್ಟ. ಎಲ್ಲಾ ದಾಖಲೆಗಳು ಕೂಡ ಇವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗ ದಿಢೀರನೇ ಈ ರೀತಿ ಪ್ರತಿಮೆ ಮತ್ತು ಶಿಲುಬೆಗಳನ್ನು ಧ್ವಂಸಗೊಳಿಸಿರುವುದು ಸರಿಯಾದ ಕ್ರಮವಲ್ಲ. ಅಲ್ಲಿನ ಶ್ಮಶಾನದ ಪ್ರತಿಮೆಗೆ ಗ್ರಾಮಸ್ಥರ ಒಪ್ಪಿಗೆ ಮತ್ತು ಸಹಕಾರವೂ ಇದೆ. ಗ್ರಾಮಸ್ಥರ ಸಭೆ ಕರೆದಿದ್ದ ಸಂದರ್ಭದಲ್ಲೂ ಯಾರೊಬ್ಬರೂ ತಕರಾರು ಮಾಡಿಲ್ಲ. ಆದರೆ ಬಲಪಂಥೀಯ ಸಂಘಟನೆಗಳಾದ ಹಿಂದೂ ರಕ್ಷಣಾ ವೇದಿಕೆ ಮತ್ತು ಭಜರಂಗದಳದ ಮುಖಂಡರು ಪ್ರತಿಭಟನೆ ಮಾಡಿದ ಮೇಲೆ ಇಂತಹ ಕ್ರಮಕ್ಕೆ ಮುಂದಾಗಿರುವುದು ನ್ಯಾಯ ಸಮ್ಮತವಲ್ಲ. ಸುಖಾಸುಮ್ಮನೆ ನಮ್ಮ ಮೇಲೆ ಮತಾಂತರದ ಆರೋಪ ಮಾಡುವುದು ಸರಿಯಲ್ಲ ಎನ್ನುತ್ತಾರೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು.

ಈ ಕುರಿತು ದೇವನಹಳ್ಳಿ ತಹಶೀಲ್ದಾರ್ ಅಜಿತ್‌ ಕುಮಾರ್‌ ರೈ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಲಾಯಿತು. ಆದರೆ ಸಾಧ್ಯವಾಗಲಿಲ್ಲ. ಇಲ್ಲಿ ಭಜರಂಗದಳ ಮತ್ತು ಹಿಂದೂ ರಕ್ಷಣ ವೇದಿಕೆಯ ಒತ್ತಡಕ್ಕೆ ತಹಶೀಲ್ದಾರ್ ಮಣಿದಿರುವುದು ಸ್ಪಷ್ಟವಾಗಿದೆ. ನೋಟೀಸ್ ನೀಡದೆ ಯಾವುದೇ ಮಾಹಿತಿಯನ್ನು ನೀಡದೆ ಪ್ರತಿಮೆಗಳ ಧ್ವಂಸ ಮಾಡಿರುವುದು ಆಡಳಿತ ಎತ್ತ ಸಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಪುಂಡುಪೋಕರಿಗಳ ಒತ್ತಡಕ್ಕೆ ತಾಲೂಕು ಆಡಳಿತ ಮಣಿಯುವಂತಾಗಿರುವುದು ದುರಂತವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...