Homeಮುಖಪುಟವಿಚಾರವಾದಿ ದಾಭೋಲ್ಕರ್ ಹತ್ಯೆ: ಪಿಸ್ತೂಲ್ ಪತ್ತೆ

ವಿಚಾರವಾದಿ ದಾಭೋಲ್ಕರ್ ಹತ್ಯೆ: ಪಿಸ್ತೂಲ್ ಪತ್ತೆ

- Advertisement -
- Advertisement -

ಆಗಸ್ಟ್ 2013ರಂದು ಪುಣೆಯಲ್ಲಿ ಅಪರಿಚಿತ ವ್ಯಕ್ತಿಗಳಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ ವಿಚಾರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ ನರೇಂದ್ರ ದಾಭೋಲ್ಕರ್ ಅವರ ಹತ್ಯೆಯಲ್ಲಿ ಸಿಬಿಐ ಮಹತ್ವದ ಪ್ರಗತಿ ಸಾಧಿಸಿದೆ. ಕೇಂದ್ರ ತನಿಖಾ ದಳವು ಹತ್ಯೆಯಲ್ಲಿ ಬಳಸಿರಬಹುದಾದ ಪಿಸ್ತೂಲ್ ಅನ್ನು  ಅರೇಬಿಯನ್ ಸಮುದ್ರದಿಂದ ನಾರ್ವೇಜಿಯನ್ ಆಳ ಸಮುದ್ರ ಪರಿಶೋಧಕರು ಮತ್ತು ತಂತ್ರಜ್ಞಾನದ ಸಹಾಯದಿಂದ ವಶಪಡಿಸಿಕೊಂಡಿದೆ ಎಂದು “ಹಿಂದುಸ್ತಾನ್ ಟೈಮ್ಸ್” ವರದಿಮಾಡಿದೆ .

ಶಸ್ತ್ರಾಸ್ತ್ರವನ್ನು ದಬೋಲ್ಕರ್ ಹತ್ಯೆಯಲ್ಲಿ ಬಳಸಲಾಗಿದೆಯೆ ಎಂದು ತಿಳಿಯಲು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಶಸ್ತ್ರಾಸ್ತ್ರವನ್ನು ಹುಡುಕಲು ಥಾಣೆ ಬಳಿಯ ಖರೆಗಾಂವ್ ಕೊಲ್ಲಿಯನ್ನು ಸೋಸುವ ಅಗತ್ಯವಿದೆ ಎಂದು ಸಿಬಿಐ, ಆಗಸ್ಟ್ 2019 ರಲ್ಲಿ ಪುಣೆ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು.

ಕಿವಿ, ಮೂಗು ಮತ್ತು ಗಂಟಲು ಶಸ್ತ್ರಚಿಕಿತ್ಸಕ ವೀರೇಂದ್ರ ತಡೆ, ವಕೀಲ ಸಂಜೀವ್ ಪುಣಲೇಕರ್, ವಿಕ್ರಮ್ ಭಾವೆ, ಶರದ್ ಕಲಾಸ್ಕರ್ ಮತ್ತು ಸಚಿನ್ ಅಂಡುರೆ ಸೇರಿದಂತೆ ಏಳು ಜನರನ್ನು ಸಿಬಿಐ ಪ್ರಮುಖ ಆರೋಪಿಗಳೆಂದು ಹೆಸರಿಸಿದೆ.

“ನಾವು ಹಲವಾರು ದಿನಗಳ ಹುಡುಕಾಟದ ನಂತರ ಪಿಸ್ತೂಲ್ ಅನ್ನು ಕಂಡುಕೊಂಡಿದ್ದೇವೆ. ಬ್ಯಾಲಿಸ್ಟಿಕ್ಸ್ ತಜ್ಞರು ಈಗ ಅದನ್ನು ದಾಭೋಲ್ಕರ್ ಅವರ ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಿರುವ ಬುಲೆಟ್ ಗಾತ್ರ ಹಾಗೂ ಪ್ರಕಾರದೊಂದಿಗೆ ಪರಿಶೀಲಿಸುತ್ತಾರೆ ”ಎಂದು ಹೆಸರು ಹೇಳಲಿಚ್ಚಿಸದ ಅಧಿಕಾರಿಯೊಬ್ಬರು ತಿಳಿದ್ದಾರೆ.

ತನಿಖೆಯಲ್ಲಿ ಬಳಸುವ ನಾರ್ವೇ ತಂತ್ರಜ್ಞಾನಕ್ಕೆ ಸಿಬಿಐ, ಕರ್ನಾಟಕ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳಗಳು (ಎಟಿಎಸ್) ಜಂಟಿಯಾಗಿ ವೆಚ್ಚವನ್ನು ಭರಿಸಲಿದೆ. ಪುಣೆಯ ದಾಭೋಲ್ಕರ್, ಮತ್ತು ಕರ್ನಾಟಕದ ಗೌರಿ ಲಂಕೇಶ್ ಮತ್ತು ಎಂಎಂ ಕಲ್ಬುರ್ಗಿ ಹೀಗೆ ಎರಡು ರಾಜ್ಯಗಳ ಮೂರು ಕೊಲೆ ಪ್ರಕರಣಗಳು ಒಂದಕ್ಕೊಂದು ಸಂಬಂಧ ಹೊಂದಿವೆ.

ದಾಬೋಲ್ಕರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಸತ್ಯರಂಜನ್ ಧರ್ಮಧಿಕಾರಿ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಕಳೆದ ತಿಂಗಳು ರಾಜೀನಾಮೆ ನೀಡಿದ್ದರು.

ಆಗಸ್ಟ್ 20, 2013 ರಂದು ಬೆಳಿಗ್ಗೆ 7.30 ರ ಸುಮಾರಿಗೆ ಪುಣೆಯ ಓಂಕಾರೇಶ್ವರ ಸೇತುವೆಯಲ್ಲಿ ದಾಭೋಲ್ಕರ್ ಅವರನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇದರ ತನಿಖೆಯನ್ನು 2014 ರಲ್ಲಿ ಸಿಬಿಐಗೆ ಹಸ್ತಾಂತರಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...