Homeಅಂಕಣಗಳುರಾಷ್ಟ್ರ ಸಾಗಿದ ದೂರವೆಷ್ಟು?

ರಾಷ್ಟ್ರ ಸಾಗಿದ ದೂರವೆಷ್ಟು?

- Advertisement -
- Advertisement -

ಮಹಾತ್ಮಗಾಂಧಿಯವರ ನೇತೃತ್ವದಲ್ಲಿ ಭಾರತದ ಪ್ರಜೆಗಳು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ದೇಶ ಕೊನೆಗೂ ಸ್ವತಂತ್ರವಾಯಿತು. ನಮ್ಮದೇ ರಾಜ್ಯಾಂಗ ರಚನೆಯಾಯಿತು. ಭಾರತ ಒಂದು ರಿಪಬ್ಲಿಕ್ ಆಯಿತು, ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿ ಎಲ್ಲ ರಾಜ್ಯಗಳು ಸ್ವತಂತ್ರವಾಗಿ ರಾಜ್ಯಾಂಗದ ಆಶಯಗಳಿಗನುಸಾರ ಕಾರ್ಯನಿರ್ವಹಿಸುತ್ತಾ ಅಧಿಕಾರ ಪಡೆದವು. ಸ್ವಾತಂತ್ರ್ಯ ಬಂದಾಗ ಭಾರತದ ಶೇ.20ರಷ್ಟು ಜನ ಮಾತ್ರ ಅಕ್ಷರಜ್ಞಾನ ಉಳ್ಳವರಾಗಿದ್ದರು. ಆದರೂ ಭಾರತದ 18 ವರ್ಷಕ್ಕೆ ಮೇಲ್ಪಟ್ಟ ಎಲ್ಲ ಪುರುಷರಿಗೂ ಸ್ತ್ರೀಯರಿಗೂ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ಕಲ್ಪಿಸಲಾಯಿತು. ಭಾರತದ ಈ ಮತದಾರರು ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವುದರಲ್ಲಿ ಯಶಸ್ವಿಯಾದರು. ಅಂದು ಭಾರತದ 10 ಜನರಲ್ಲಿ 8 ಜನ ಬಡತನದ ಸೀಮಾರೇಖೆಯ ತಳಗಿದ್ದರು.
ಈ 70 ವರ್ಷಗಳಲ್ಲಿ ಅನೇಕ ವಿಚಾರಗಳಲ್ಲಿ ಭಾರತ ಪ್ರಗತಿ ಹೊಂದಿದೆ. ಚಂದ್ರಮಂಡಲಕ್ಕೆ ಲಗ್ಗೆ ಹಾಕಿದ್ದೇವೆ. ಸೂರ್ಯನ ಹೊರವಲಯದವರೆಗೆ ಹೋಗಿ ಅಧ್ಯಯನ ನಡೆಸುವ ಸಾಹಸಕ್ಕೆ ಕೈಹಾಕಿದ್ದೇವೆ. ಇಂದಿಗೂ ಭಾರತದಲ್ಲಿ ಶೇ.18ರಷ್ಟು ಜನ ಬಡತನದ ಸೀಮಾರೇಖೆಯ ತಳಗೆ ವಾಸಿಸುತ್ತಿದ್ದಾರೆ. ಅಂದರೆ ಇವರಿಗೆ ಎರಡು ಹೊತ್ತಿನ ಊಟ ಕೂಡ ದೊರೆಯುತ್ತಿಲ್ಲ. 13 ಪಂಚವಾರ್ಷಿಕ ಯೋಜನೆಗಳು ಜಾರಿಗೊಂಡಂತಾದರೂ ಬಡವ ಮತ್ತಷ್ಟು ಬಡವನಾಗಿದ್ದಾನೆ. ಶೇ.10ರಷ್ಟು ಜನರಿಗೆ ಪಂಚವಾರ್ಷಿಕ ಯೋಜನೆಗಳ ಲಾಭ ಲಭ್ಯವಾಗಿದೆ. ಪ್ರಧಾನಿ ಜವಾಹರಲಾಲ್ ನೆಹರು ಅವರು 1964ರಲ್ಲಿ ಹೋಮಿಬಾಬಾ ಅವರ ಮುಂದಾಳತ್ವದಲ್ಲಿ ಭಾರತ ಸ್ಪರ್ಧಾತ್ಮಕವಾಗಿ ಅನುಕೂಲಗಳನ್ನು ಪಡೆಯಲು ಸಮಿತಿಯೊಂದನ್ನು ರಚಿಸಿದರು. ಹಾರ್ಡ್‍ವೇರ್ ಮತ್ತು ಸಾಫ್ಟ್‍ವೇರ್‍ಗಳನ್ನು ಅಭಿವೃದ್ಧಿಪಡಿಸಲು ಸಮಿತಿ ನಿರ್ಧರಿಸಿತು. ಆ ಮೂಲಕ ಭಾರತ ಆರ್ಥಿಕವಾಗಿ ಸದÀೃಢ ರಾಷ್ಟ್ರವಾಗುವ ಅವಕಾಶವಿದೆಯೆಂದು ಸಮಿತಿ ಅಭಿಪ್ರಾಯಪಟ್ಟಿತು. ಭಾರತ ಸಾಫ್ಟ್‍ವೇರ್ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಯಿತು. ಸಾಫ್ಟ್‍ವೇರ್ ಉದ್ಯಮದಲ್ಲಿ ಭಾರತ ದಾಪುಗಾಲು ಹಾಕಿತು. ಲಕ್ಷಾಂತರ ಯುವಕ ಯುವತಿಯರಿಗೆ ಈ ಮೂಲಕ ಉದ್ಯೋಗಾವಕಾಶ ದೊರೆಯಿತು.
1947ರಲ್ಲಿ ನಮಗೆ ಸ್ವಾತಂತ್ರ್ಯ ಸಿಕ್ಕಿತು. ಅದೇ ಕಾಲದಲ್ಲಿ ತುಳಿತಕ್ಕೆ ಒಳಗಾಗಿದ್ದ ಇಂಡೋನೇಷಿಯಾ, ಮೈನ್‍ಮಾರ್, ಶ್ರೀಲಂಕಾ, ದಕ್ಷಿಣ ಕೊರಿಯಾ, ಜೋರ್ಡಾನ್, ಇಸÉ್ರೀಲ್, ಚೈನಾ ಸ್ವಾತಂತ್ರ್ಯ ಪಡೆದವು. ಎರಡನೇ ಮಹಾಯುದ್ಧದಿಂದ ಜಪಾನ್ ಮತ್ತು ಜರ್ಮನಿ ಸಂಪೂರ್ಣ ನೆಲಕಚ್ಚಿದ್ದವು. ಮುಂದಿನ ದಶಕದಲ್ಲಿ ಸಿಂಗಪೂರ್ ಮತ್ತು ಮಲೇಷಿಯಾಗಳಲ್ಲಿ ಸ್ವತಂತ್ರ ದೇಶಗಳಾದವು.
ಭಾರತೀಯರ ಸರಾಸರಿ ಆಯಸ್ಸು ಈಗ 60 ವರ್ಷಗಳಾದರೆ ಇಂಡೋನೇಷಿಯಾದಲ್ಲಿ ಸರಾಸರಿ ಆಯಸ್ಸು ಈಗ 80ಕ್ಕೆ ಮೇಲ್ಪಟ್ಟು. ಮಾನವ ಸಂಪನ್ಮೂಲ ಅಭಿವೃದ್ಧಿಯ ವಿಚಾರದಲ್ಲಿ ಇಂಡೋನೇಷಿಯಾ, ದಕ್ಷಿಣ ಕೊರಿಯಾ, ಮಲೇಷಿಯಾ ಮತ್ತು ಸಿಂಗಪುರ್‍ಗಳಿಗಿಂತ ಭಾರತ ಬಹಳ ಹಿಂದೆ ಬಿದ್ದಿದೆ. 168 ರಾಷ್ಟ್ರಗಳ ಪೈಕಿ ಭಾರತ 131ನೇ ಸ್ಥಾನದಲ್ಲಿದೆ. ಸಿಂಗಾಪುರದ ಸರಾಸರಿ ಆದಾಯ ಭಾರತದ 25 ಪಟ್ಟು. ಏಷ್ಯಾದಲ್ಲಿ ಅತಿಕಡಿಮೆ ಬಡತನವಿರುವ ರಾಷ್ಟ್ರ ಮಲೇಷಿಯಾ. 1990ರವರೆಗೆ ಇಂಡೋನೇಷಿಯಾ ಶಿಕ್ಷಣ ಮತ್ತು ಆರೋಗ್ಯ ಬಾಬಿನಲ್ಲಿ ತುಂಬ ಹಣ ವ್ಯಯಮಾಡಿತು. ಅದರ ಫಲವಾಗಿ ಈಗ ಬಡತನ ಶೇ.10ಕ್ಕೆ ಇಳಿದಿದೆ. 70ರ ದಶಕದಲ್ಲಿ ಭಾರತ ಮತ್ತು ಚೈನಾದ ಸರಾಸರಿ ಆದಾಯ ಒಂದೇ ಆಗಿತ್ತು. ಈಗ ಚೈನಾದ ಸರಾಸರಿ ಆದಾಯ ಆಗಿನ ಹೋಲಿಕೆಯಲ್ಲಿ ಹನ್ನೆರಡು ಪಟ್ಟು ಹೆಚ್ಚಿದೆ. ಬೆಟ್ಟದ ತುದಿ ಮುಟ್ಟಬೇಕೆಂಬ ಕನವರಿಕೆಯೇ ಬೇರೆ, ಬೆಟ್ಟದ ಶಿಖರ ಏರಿ ಅದರ ಸುಖ ಅನುಭವಿಸುವುದೇ ಬೇರೆ.
ಕಾನೂನಿಗೆ ವಿರುದ್ಧವಾಗಿ ಜಮೀನು ಕಬಳಿಸುವುದು, ಅಕ್ರಮದ ಡಿನೋಟಿಫಿಕೇಷನ್ ಹೊರಡಿಸುವುದು, ಸೈನ್ಯಕ್ಕೆ ಆಯುಧಗಳನ್ನು ಕೊಳ್ಳುವುದರಲ್ಲೂ ಲಂಚ ನುಂಗುವುದು, ತರಂಗಾಂತರಗಳನ್ನು ನೀತಿ ನಿಯಮವಿಲ್ಲದೆ ಮಾರಾಟ ಮಾಡುವುದು. ಆಟ, ಮನರಂಜನೆ, ಕ್ರೀಡೆಗಳ ಹೆಸರಿನಲ್ಲಿ ಸಾರ್ವಜನಿಕ ಹಣವನ್ನು ಸೂರೆಮಾಡುವುದು. ಅದಾನಿ, ಅಂಬಾನಿ ಮುಂತಾದ ಭ್ರಷ್ಟ ಉದ್ಯಮಿಗಳ ಸಾಲಮನ್ನಾ ಮಾಡುವುದು… ಇವು ಇಂದಿನ ಪ್ರಚಲಿತ ವಿದ್ಯಮಾನಗಳು. ಬಡತನ ನಿವಾರಣೆಯ ಯೋಜನೆಗಳ ಹೆಸರಿನಲ್ಲಿ ಲೂಟಿ ಅವ್ಯಾಹತವಾಗಿ ನಡೆಯುತ್ತಿದ್ದು, ಪ್ರತಿವರ್ಷ ಅಧಿಕಾರಿಗಳು ಸುಮಾರು 90000 ಕೋಟಿ ರೂ.ಗಳ ಲೂಟಿ ಮಾಡುತ್ತಾರೆ. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಹೆಸರಿನಲ್ಲಿ ಒಂದು ಸಾವಿರ ಕೋಟಿಗಿಂತ ಹೆಚ್ಚಿಗೆ ರಾಷ್ಟ್ರ ಖರ್ಚು ಮಾಡುತ್ತದೆ. ರಾಷ್ಟೀಯ ಆರೋಗ್ಯ ಯೋಜನೆ ನೆಪದಲ್ಲಿ 1000 ಕೋಟಿ ಖರ್ಚು ಬೀಳುತ್ತದೆ. ಬಂಡವಾಳ ಪರದೇಶಗಳಿಗೆ ಹಾರಿಹೋಗುವುದು 462 ಬಿಲಿಯನ್ ರೂಗಳು. ಭ್ರಷ್ಟ ಉನ್ನತಾಧಿಕಾರಿಗಳು ಕದಿಯುವುದು 92000 ಕೋಟಿ ರೂಗಳು. ಇವೆಲ್ಲ ಕಪ್ಪು ಹಣವಾಗಿ ಪರಿವರ್ತನೆಯಾಗುತ್ತದೆ. ಅಧಿಕಾರದ ದುರುಪಯೋಗದ ಕಾರಣದಿಂದ, ಮಂತ್ರಿಗಳು, ಅಧಿಕಾರಿಗಳು, ಶಾಸಕರುಗಳ ಲೂಟಿಯ ಕಾರಣದಿಂದ ದೇಶದ ಆರ್ಥಿಕ ಪ್ರಗತಿ ಹಿಮ್ಮೆಟ್ಟುತ್ತಿದೆ. ಇದು ವಾಸ್ತವ.
ಹಣಕಾಸಿನ ವಹಿವಾಟನ್ನು ನಮ್ಮ ಸರ್ಕಾರಗಳು ಸರಿಯಾಗಿ ನಿರ್ವಹಿಸುತ್ತಿಲ್ಲ. ರಾಷ್ಟ್ರದ ಆದಾಯದ 1/6ರಷ್ಟು ಹಣ ಭಾರತದ 2/3ರಷ್ಟು ಜನಸಂಖ್ಯೆಗೆ ಹಂಚಿಕೆಯಾಗುತ್ತಿದೆ. 5/6ರಷ್ಟು ಆದಾಯ 1/3 ರಷ್ಟು ಜನರ ಪಾಲಾಗುತ್ತದೆ. ಸರ್ಕಾರದ ಒಟ್ಟು ಆದಾಯಕ್ಕೂ ಮಾಡುವ ಖರ್ಚಿಗೂ ಮಧ್ಯೆ ದೊಡ್ಡ ಕಂದರ ನಿರ್ಮಾಣವಾಗಿದೆ. ಸರ್ಕಾರದ ಸಾಧನೆಗೂ ವ್ಯಕ್ತಿಗಳ ನಿರೀಕ್ಷೆಗಳಿಗೂ ಅಜಗಜಾಂತರ. ಆಹಾರಧಾನ್ಯಗಳ ಬೆಲೆ ಗಗನಕ್ಕೇರುತ್ತಿದೆ. ಸರ್ಕಾರಕ್ಕೆ ಸಾಮಾನ್ಯರ ಕಷ್ಟ ಅರ್ಥವಾಗುತ್ತಲೇ ಇಲ್ಲ. ಈಚೆಗೆ ಸರ್ಕಾರದ ಸಾಲದ ಪಟ್ಟಿ ಹೆಚ್ಚಿದೆ. ಬಡ್ಡಿ ಕಟ್ಟಲು ಬಜೆಟ್‍ನಲ್ಲಿ ಪ್ರತಿವರ್ಷ ಬಜೆಟ್‍ನ ಶೇ.23ರಷ್ಟು ಹಣವನ್ನು ತೆಗೆದಿಡುತ್ತದೆ. ಸರ್ಕಾರ ದಿನಕ್ಕೆ 1600 ಕೋಟಿ ಸಾಲ ಮಾಡುತ್ತದೆ. ಆಹಾರ ಪದಾರ್ಥಗಳ ಹಂಚಿಕೆಯಲ್ಲಿ ಮೋಸ, ಅಳತೆಯಲ್ಲಿ ಮೋಸ, ಆಹಾರಧಾನ್ಯಗಳ ಕಳ್ಳ ಸಾಗಾಣಿಕೆಯಿಂದ ಸರ್ಕಾರಕ್ಕೆ 40000 ಕೋಟಿ ರುಪಾಯಿಗಳ ನಷ್ಟವಾಗುತ್ತದೆ. ಕಳೆದ 10 ವರ್ಷಗಳಿಂದಲೂ ಪ್ರತಿ ವರ್ಷ ಇಷ್ಟೊಂದು ನಷ್ಟವುಂಟಾಗುತ್ತಿದೆ.
ಈ ಎಲ್ಲ ಅನಿಷ್ಟಗಳನ್ನು ನಿವಾರಣೆ ಮಾಡಿಕೊಳ್ಳಬೇಕಾದ ತುರ್ತು ನಮ್ಮ ಕಣ್ಣೆದುರಿಗಿರುವಾಗಲೇ, ಈಗ ಹಿಂದು ಸೇವಾಸಂಸ್ಥೆಯ ಹೆಸರಿನಲ್ಲಿ ಭಯೋತ್ಪಾದಕರನ್ನು ಬೆಳೆಸಲಾಗುತ್ತಿದೆ. ಅವರಿಗೆ ಧರ್ಮದ ಅಫೀಮು ತಿನ್ನಿಸಿ ಯುವಕರ ತಲೆಕೆಡಿಸಿ ಸಮಾಜದಲ್ಲಿ ದ್ವೇಷಭಾವನೆ ಬೆಳೆಸಲು ಅನೇಕ ಸಂಘ ಸಂಸ್ಥೆಗಳನ್ನು ಹುಟ್ಟುಹಾಕಲಾಗಿದೆ. ಇದೊಂದು ಅತ್ಯಂತ ಅಪಾಯಕಾರಿ ಬೆಳವಣಿಗೆ. ದೇಶದಾದ್ಯಂತ ಅಶಾಂತಿ, ಗೊಂದಲ, ಹಿಂಸೆ, ಭಯೋತ್ಪಾದನೆ ಹರಡಲು ಮತಾಂಧ ಸಂಸ್ಥೆಗಳು ಹಿಂದೂ ಹೆಸರಿನಲ್ಲಿ ರೂಪತಾಳಿರುವುದು ಒಂದು ಭಯಾನಕ ಬೆಳವಣಿಗೆ.
ಒಟ್ಟಿನಲ್ಲಿ ಸಮಾಜದಲ್ಲಿ ಒಂದು ಅಲ್ಲೋಲಕಲ್ಲೋಲ ಪರಿಸ್ಥಿತಿ ಉದ್ಭವವಾಗುತ್ತಿದೆ. ಸಮಾಜದ ಇತರ ಪಿಡುಗುಗಳ ವಿರುದ್ಧ ಹೋರಾಡುವುದರ ಜೊತೆಗೆ ಈ ದುಷ್ಟ ಭಯೋತ್ಪಾದನೆಯ ಪ್ರವೃತ್ತಿಯನ್ನು ತಡೆಗಟ್ಟುವುದು ಎಲ್ಲ ಭಾರತೀಯರ ಆದ್ಯ ಕರ್ತವ್ಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...