Homeಮುಖಪುಟಕೊರೊನಾ ವೈರಸ್‌ ಹುಟ್ಟಿದ್ದು ಹೇಗೆ? ಅದರಿಂದ ದೂರವಿರುವುದು ಹೇಗೆ? - ಡಾ.ಕೆ.ಸಿ ರಘು

ಕೊರೊನಾ ವೈರಸ್‌ ಹುಟ್ಟಿದ್ದು ಹೇಗೆ? ಅದರಿಂದ ದೂರವಿರುವುದು ಹೇಗೆ? – ಡಾ.ಕೆ.ಸಿ ರಘು

ಕೇರಳ ಕಳೆದ ಬಾರಿ ಕಂಡು ಬಂದ ನಿಫಾ ವೈರಸ್‌ನ್ನು ಮತ್ತು ಇತ್ತೀಚೆಗೆ ಕರೋನಾ ಕಂಡುಬಂದಾಗ ವ್ಯವಹರಿಸಿದ ರೀತಿ ಇಡೀ ದೇಶಕ್ಕೆ ಮಾದರಿಯಾಗಿದೆ.

- Advertisement -
- Advertisement -

ಕೊರೊನಾ ವೈರಸ್‌ ಇದಾಗಲೇ ಜಾಗತೀಕರಣಗೊಂಡಿದೆ. 76 ದೇಶಗಳಿಗೆ ಹಬ್ಬಿ ಸುಮಾರು 3200 ಜನರನ್ನು ಬಲಿ ತೆಗೆದುಕೊಂಡಿದೆ. ಈ ಸೋಂಕು ತಗುಲಿದ 100 ಜನರಲ್ಲಿ ಸುಮಾರು 4 ಜನ ಮರಣ ಹೊಂದುತ್ತಾರೆಂದು ಅಂದಾಜುಮಾಡಲಾಗಿದೆ. ಅಂದರೆ ಉಳಿದ 96 ಜನ ಗುಣಮುಖರಾಗುತ್ತಾರೆ. 30ಕ್ಕೂ ಹೆಚ್ಚು ವಯಸ್ಸಿನವರಿಗೆ ಸಾಮಾನ್ಯವಾಗಿ ಕಾಯಿಲೆ ಕಂಡುಬರುವುದಾಗಿದೆ. 60 ದಾಟಿದವರಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿರುವುದಾಗಿದೆ. ಅದರಲ್ಲೂ ಸಿಗರೇಟ್ ಸೇವನೆಯಿಂದ ಶ್ವಾಸಕೋಶ ಹಾನಿಯಾಗಿದ್ದರೆ ಅಥವಾ ಅಸ್ತಮಾ ಮತ್ತು ಇತರೆ ಶ್ವಾಸಕೋಶದ ಕಾಯಿಲೆಗಳಿದ್ದರೆ ಸಾವಿಗೀಡಾಗುವ ಸಾಧ್ಯತೆ ಹೆಚ್ಚು.

ಈ ವೈರಾಣು ಒಂದು ಗುಂಪಿಗೆ ಸಂಬಂಧಪಟ್ಟಿದ್ದಾಗಿದ್ದರು ಇದು ಹೊಸತೇ ಆಗಿದೆ. ಗುಂಪು ಹಳೆಯದು ಅದರ ವೈರಾಣು ಇದುವರೆಗೂ ತಿಳಿದಿದ್ದಾಗಿಲ್ಲ. ಮೊನ್ನೆ ತಾನೆ ಇದಕ್ಕೆ ಕೋವಿಡ್-19 ಎಂದು ನಾಮಕರಣ ಮಾಡಲಾಗಿದೆ. ಇದರ ಹುಟ್ಟು ಚೈನಾದ ವೂಹಾನ್ ಪ್ರಾಂತ್ಯದಲ್ಲಿ ಮಾಂಸದ ಮಾರುಕಟ್ಟೆಯಲ್ಲಿ. ಅಲ್ಲಿ ಸಾಕಿದ ಪ್ರಾಣಿಗಳ ಮಾಂಸ, ಕಾಡು ಪ್ರಾಣಿಗಳ ಮಾಂಸ ಎಲ್ಲವನ್ನೂ ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲಿ ಜನಜಂಗುಳಿಯ ನಡುವೆ ಮಾರಾಟ ಮಾಡಲಾಗುತ್ತದೆ. ಕಾಡು ಪ್ರಾಣಿಗಳ ಜೊತೆ ಹೊಂದಿಕೊಂಡು ಯಾವ ಕಾಟವೂ ಕೊಡದೇ ಶತಮಾನಗಳಿಂದ ಬದುಕುವ ವೈರಾಣುಗಳು ಬೇರೆ ಪ್ರಾಣಿಗಳ ಮಾಂಸಕ್ಕೆ ಸೇರಿ ರೋಗಾಣುವಾಗಿ ಪರಿಣಮಿಸುತ್ತವೆ. ಇವುಗಳು ಇಂತಹ ಸ್ಥಳಗಳಲ್ಲಿ ಹೊಸದಾಗಿ ಮಾರ್ಪಾಡಾಗುವ ಸಾಧ್ಯತೆಗಳು ಹೆಚ್ಚು.

ರೋಗಶಾಸ್ತ್ರದ ಹಳೆಯ ಮಾತಿನಂತೆ ವಿಚ್ಛೇದನ ಪಡೆದ ಗಂಡು ಮತ್ತು ಹೆಂಗಸು ಮರುಮದುವೆಯಾಗಿ ಸಂಸಾರ ಮಾಡುತ್ತಿದ್ದಾಗ ಮನೆಯಲ್ಲೊಂದು ದಿನ ಎಲ್ಲಿಲ್ಲದ ಗಲಾಟೆ ಗದ್ದಲ. ಆಗ ಹೆಂಡತಿ ಗಂಡನಿಗೆ “ನೋಡಿ ಇಲ್ಲಿ ನನ್ನೆರಡು ಮಕ್ಕಳು ನಿಮ್ಮೆರಡು ಮಕ್ಕಳು ನಮ್ಮಿಬ್ಬರ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಾರೆ ಎನ್ನುತ್ತಾಳೆ” ಹೀಗೆ ಮಿಶ್ರಣಗೊಂಡ ವೈರಾಣುಗಳು ಹೊಸಜಾಗ, ಹೊಸತಾಣದಲ್ಲಿ ತನ್ನನ್ನು ತಾನು ಉಳುಸಿಕೊಳ್ಳಲು ಹೊಸದಾಗಿ ಮಾರ್ಪಾಟಾಗುತ್ತವೆ.

ಜಗತ್ತಿನಲ್ಲಿ ವೈರಾಣುಗಳೇ ಮೊದಲ ಜೀವಿಗಳೆಂದು ಪರಿಗಣಿಸುತ್ತಾರೆ. ಅವುಗಳು ಜೀವಿಗಳೆಂದು ಹೇಳುವುದು ಸುಲಭವಲ್ಲ. ಆದರೆ ಜೀವಕ್ಕೆ ಬೇಕಾಗಿರುವ ಮೂಲಧಾತು ಅಥವಾ Code ಎನ್ನಲಾಗುವ ಡಿಎನ್‌ಎ ಅಥವಾ ಆರ್‌ಎನ್‌ಎ ಯನ್ನು ಮಾತ್ರ ಒಳಗೊಂಡಿರುತ್ತದೆ. ಆದರೆ ಅದು ಅದರ ಸಂತಾನೋತ್ಪತ್ತಿಗೆ ಇನ್ನೊಂದು ಜೀವಿಯ ಜೀವಕೋಶಕ್ಕೆ ಹೊಕ್ಕು ಅದರ ಜೈವಿಕ ತಂತ್ರಗಾರಿಕೆಯನ್ನು ಅಪಹರಿಸಿ ತನ್ನದಾಗಿಸಿಕೊಂಡು ತನ್ನನ್ನು ತಾನೇ ಮಿಲಿಯನ್‌ ಗಟ್ಟಲೆ ವರ್ಷಗಳಲ್ಲಿ ಮರುಸೃಷ್ಟಿ ಮಾಡಿಕೊಳ್ಳುತ್ತದೆ. ಹಾಗೆ ಮಾಡಿದ ನಂತರ ತನಗೆ ಆಶ್ರಯ ಕೊಟ್ಟ ಜೀವಕೋಶವನ್ನು ಒಡೆದು ಪುಡಿ ಮಾಡುತ್ತದೆ. ಈ ಕರೋನಾ ವೈರಸ್‌ ಶ್ವಾಸಕೋಶಕ್ಕೆ ತಗುಲಿ ಅಲ್ಲಿ ದೇಹದ ರೋಗನಿರೋಧಕ ಶಕ್ತಿಯ ಹೋರಾಟದಿಂದ ದ್ರವಶ್ರಾವ್ಯ ಉಂಟಾಗಿ ಶ್ವಾಸಕೋಶದ ಮೂಲಕೆಲಸವಾದ ರಕ್ತಕ್ಕೆ ಆಮ್ಲಜನಕವನ್ನು ಪ್ರತಿ ಉಸಿರಿನಲ್ಲೂ ಒದಗಿಸುವ ಕಾರ್ಯಕ್ಕೆ ಕುತ್ತು ಬರುತ್ತದೆ. ಹಾಗೆಯೇ ವಿಷ ಅನಿಲ ಇಂಗಾಲದ ಡೈ ಆಕ್ಸೈಡನ್ನು ಹೊರಹಾಕುವ ಪ್ರಕ್ರಿಯೆಗೂ ತೊಂದರೆಯಾಗುತ್ತದೆ.

ಇಂತಹ ಸಂದರ್ಭದಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಅತ್ಯಂತ ಅವಶ್ಯಕ. ಭಾರತ ದೇಶದಲ್ಲಿ ಇದು ಹರಡಿದಲ್ಲಿ ಎಷ್ಟರ ಮಟ್ಟಿಗೆ ಆಸ್ಪತ್ರೆಯ ಹಾಸಿಗೆ, ಕೃತಕ ಉಸಿರಾಟದ ವ್ಯವಸ್ಥೆ, ರೋಗಿಗಳನ್ನು ಪ್ರತ್ಯೇಕಿಸಿ ಇಡುವ ವ್ಯವಸ್ಥೆಗೆ ನಾವು ಸಿದ್ಧರಾಗಿದ್ದೇವೆ ಎನ್ನುವುದು ದೊಡ್ಡ ಪ್ರಶ್ನೆಯೇ ಹೌದು. ಕೇರಳ ಕಳೆದ ಬಾರಿ ಕಂಡು ಬಂದ ನಿಫಾ ವೈರಸ್‌ನ್ನು ಮತ್ತು ಇತ್ತೀಚೆಗೆ ಕರೋನಾ ಕಂಡುಬಂದಾಗ ವ್ಯವಹರಿಸಿದ ರೀತಿ ಇಡೀ ದೇಶಕ್ಕೆ ಮಾದರಿಯಾಗಿದೆ.

ಕೃತಕ ಉಸಿರಾಟದ ಪ್ರಾತಿನಿಧಿಕ ಚಿತ್ರ

ಇಂತಹ ಸಂದರ್ಭದಲ್ಲಿ ಜ್ವರ, ಕೆಮ್ಮು, ಶೀತ ಅಥವಾ ಉಸಿರಾಟದ ತೊಂದರೆ ಕಂಡುಬಂದಾಗ ವೈದ್ಯರ ಬಳಿ ಹೋಗಿ ಪರೀಕ್ಷಿಸಿಕೊಳ್ಳುವುದು ಬಹಳ ಮುಖ್ಯ. ಇದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ, ಮೊನ್ನೆ ಹುಟ್ಟಿದ ಕಾಯಿಲೆಗೆ ನಮ್ಮಲ್ಲಿ ಶತಮಾನಗಳಿಂದ ಔಷಧವಿದೆ ಎಂದೂ, ಕ್ರಿಸ್ತ ಪೂರ್ವದಲ್ಲೇ ಇದು ನಮಗೆ ತಿಳಿದಿತ್ತೆಂದು ಹೇಳುವವರಿದ್ದಾರೆ. ಗೋಮೂತ್ರ ಕುಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಇವುಗಳನ್ನಾಗಲಿ ಅಥವಾ ಸಿರಿಧಾನ್ಯಗಳನ್ನು ತಿನ್ನಿ, ಕರೋನಾ ದೂರವಿಡಿ ಎನ್ನುವ ಮಾತುಗಳನ್ನು ನಂಬುವಂತದ್ದಲ್ಲ. ಆಯುರ್ವೇದ, ಹೋಮಿಯೋಪತಿ, ಇಲ್ಲವಾದಲ್ಲಿ ತಿರುಪತಿ ಎನ್ನುವ ಸಲಹೆಗಳೆಲ್ಲ ಉಂಟು.

ರೋಗ ನಿರೋಧಕ ಶಕ್ತಿಯನ್ನು ವೃದ್ಧಿಪಡಿಸಿಕೊಳ್ಳಲು ಉತ್ತಮ ಆಹಾರ, ಗಾಳಿ, ಬೆಳಕು, ಶುದ್ಧ ನೀರು ಅವಶ್ಯಕ. ಈ ಕಾಯಿಲೆ ಹರಡುವುದಕ್ಕೆ ಮುಖ್ಯ ಕಾರಣ: ಕೈ ತೊಳೆಯದೇ, ಬಾಯಿ, ಮೂಗು ಮತ್ತು ಕಣ್ಣನ್ನು ಸವರಿಕೊಳ್ಳುವುದರಿಂದ ದೇಹಕ್ಕೆ ರೋಗಾಣು ಸೇರಿಕೊಳ್ಳುವುದು. ಮಾಸ್ಕ್ ಹಾಕಿಕೊಳ್ಳುವುದು ಮುಖ್ಯವಾದರು ಕಣ್ಣಿಗೆ ಮಾಸ್ಕ್ ಹಾಕಿಕೊಳ್ಳಲಾಗುವುದಿಲ್ಲ. ಕಣ್ಣನ್ನು ಉಜ್ಜಿಕೊಂಡರು ಕಾಯಿಲೆ ತಗುಲಬಹುದು. ರೋಗ ಲಕ್ಷಣ ಚಿಹ್ನೆ ಇರುವವರು ಮಾಸ್ಕ್‌ ಹಾಕಿಕೊಳ್ಳುವುದು ಉತ್ತಮ. ಆಗಾಗ ಕೈ ತೊಳೆದುಕೊಳ್ಳುವುದು, ಹ್ಯಾಂಡ್‌ ಸ್ಯಾನಿಟೈಜರ್‌ಗಳನ್ನು ಬಳಸುವುದು ಇಲ್ಲವಾದಲ್ಲಿ ಶುದ್ಧ ನೀರಿನಲ್ಲಿ ಕೈ ತೊಳೆದರು ಸಾಕು. ಏಡ್ಸ್ ವೈರಾಣುವನ್ನು ಕಂಡು ಹಿಡಿದ ಜಾನ್‌ ಲೂಕ್ “ಇಂತಹ ವೈರಾಣು ಎಷ್ಟೇ ಭಯಾನಕವಾದರೂ ಶುದ್ಧ ನೀರಿನಲ್ಲಿ ತೊಳೆದರೆ ನಾಶವಾಗುತ್ತದೆ ಎನ್ನುತ್ತಿದ್ದ”.

ಈ ಕಾಯಿಲೆಯ ಬಗ್ಗೆ ನಾವು ನಮ್ಮ ವೈಯುಕ್ತಿಕ ಆಯ್ಕೆ, ಆಸಕ್ತಿಯನ್ನು ಮೀರಿ ಸಾಮಾಜಿಕ ಜವಬ್ದಾರಿಯಿಂದ ವರ್ತಿಸಿದಲ್ಲಿ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಬಹುದು ಎನ್ನುವುದರಲ್ಲಿ ಸಂಶಯವಿಲ್ಲ. ಇಂತಹ ಅನೇಕ ವೈರಾಣುಗಳು ಇಡೀ ಜಗತ್ತನ್ನೇ ನಡುಗಿಸಿ ನಾವು ಲಸಿಕೆ ಹುಡುಕಿಕೊಳ್ಳುವುದರೊಳಗೆ ಮಾಯವಾಗಿರುವುದು ಉಂಟು. Better be safe then sorry.

(ಲೇಖಕರು ವಿಜ್ಞಾನಿ, ಉದ್ಯಮಿ ಮತ್ತು ಚಿಂತಕರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...