Homeಮುಖಪುಟಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ...

- Advertisement -
- Advertisement -

ಬೀದರ್‌ನ ಶಾಹಿನ್‌ ಶಾಲೆಯ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ನಡೆಸಿದ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸಿಎಎ- ಎನ್‌ಪಿಆರ್ ವಿರೋಧಿ ನಾಟಕ ಆಡಿದ್ದಕ್ಕೆ ದೇಶದ್ರೋಹದ ಕೇಸಿನ ಪ್ರಕರಣದಲ್ಲಿ, ಶಾಹೀನ್ ಹಿರಿಯ ಪ್ರಾಥಮಿಕ ಶಾಲೆಯ ವ್ಯವಸ್ಥಾಪಕ, ಅಲ್ಲಮ್‌ ಇಕ್ಬಾಲ್ ಶಿಕ್ಷಣ ಸೊಸೈಟಿಯ ಅಧ್ಯಕ್ಷ ಮತ್ತು ಶಾಹೀನ್ ಸಂಸ್ಥೆಗಳ ಸಂಸ್ಥಾಪಕ ಅಬ್ದುಲ್ ಖಾದೀರ್ ಅವರಿಗೆ ಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಖಾದೀರ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿ ಆದೇಶ ನೀಡಿದ ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮನಗೋಲಿ ಪ್ರೇಮಾವತಿ ಅವರು, ಬಂಧನದ ಎದುರಿಸಬೇಕಾದ ಅವಶ್ಯಕತೆ ಬಂದರೆ, ಎರಡು ಲಕ್ಷ ವೈಯಕ್ತಿಕ ಬಾಂಡ್ ಮತ್ತು ಮೂರು ಜನರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ದೇಶದ್ರೋಹದ ಆರೋಪಕ್ಕೆ ಒದಗಿಸಿರುವ ಮಾಹಿತಿಯ ಬಗ್ಗೆ ಕೋರ್ಟ್ ಪ್ರತಿಕ್ರಿಯಿಸಿದ್ದು “ಈ ನಾಟಕ ನಡೆಯುವಾಗ ಆರೋಪಿ ಸ್ಥಳದಲ್ಲಿರುವುದಕ್ಕೆ ದಾಖಲೆಗಳಿಲ್ಲ. ಆ ನಾಟಕ ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿಲ್ಲ. ಈ ಮಾಹಿತಿಯನ್ನು ಪರಿಗಣಿಸಿ, ಸೆಕ್ಷನ್ 124 ಎಗೆ ಬೇಕಾದ ಅಂಶಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ” ಎಂದು ತಿಳಿಸಿದೆ.

ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಹೊಂದಿರುವ ನಾಟಕದಲ್ಲಿ ಶಾಲಾ ಬಾಲಕಿಯೊಬ್ಬಳು ಅಭಿನಯಿಸಿದ್ದಾಳೆ ಎಂಬ ದೂರಿನ ಮೇರೆಗೆ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.

“ಸಂಭಾಷಣೆಯನ್ನು ಇಡಿಯಾಗಿ ಓದಿದ ಮೇಲೆ ಅವು ಎಲ್ಲಿಯೂ ಸರ್ಕಾರದ ವಿರುದ್ಧ ದೇಶದ್ರೋಹದಂತೆ ಕಂಡುಬರುವುದಿಲ್ಲ. ಭಾರತೀಯ ದಂಡ ಸಂಹಿತೆ 124 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಮೇಲ್ನೋಟಕ್ಕೆ ಯಾವುದೇ ಆಧಾರಗಳು ಕಂಡುಬರುತ್ತಿಲ್ಲ. ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ. ನನ್ನ ಅಭಿಪ್ರಾಯದಲ್ಲಿ ಆ ಸಂಭಾಷಣೆ ಸರ್ಕಾರದ ವಿರುದ್ಧ ಯಾವುದೇ ದ್ವೇಷ ಹುಟ್ಟಿಸುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ಇಡೀ ದೇಶದಲ್ಲಿ ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಪ್ರತಿಭಟನೆಗಳು ಮತ್ತು ರ್‍ಯಾಲಿಗಳು ಜರುಗುತ್ತಿವೆ ಮತ್ತು ಸರ್ಕಾರದ ಕ್ರಮಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸುವ ಮತ್ತು ನ್ಯಾಯಯುತವಾಗಿ ಅವುಗಳನ್ನು ಸರಿಪಡಿಸಿಕೊಳ್ಳುವ ಹಕ್ಕು ನಾಗರಿಕರಿಗೆ ಇದೆ. ಶಾಲೆಯಲ್ಲಿ ನಾಟಕ ಆಡುವಾಗ ಹೇಳಿದ ಸಂಭಾಷಣೆಗಳು ಅವು. ಜನವರಿ 21ರಂದು ನಾಟಕವನ್ನು ಆಡಲಾಗಿದೆ, ಜನವರಿ 26ರಂದು ಇದರ ಮಾಹಿತಿ ಸಿಕ್ಕಿದೆ. ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡದೆ ಹೋಗಿದ್ದರೆ ನಾಟಕದ ಬಗ್ಗೆ ಆಗಲಿ ಆ ಸಂಭಾಷಣೆಯ ಬಗ್ಗೆ ಆಗಲಿ ಸಾರ್ವಜನಿಕರಿಗೆ ತಿಳಿಯುತ್ತಲೇ ಇರಲಿಲ್ಲ” ಎಂದು ಕೋರ್ಟ್‌ ಹೇಳಿದೆ.

ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬಗೆಗಿನ ಆರೋಪಕ್ಕೆ “ಯಾವುದೇ ಸಮುದಾಯದ ಬಗ್ಗೆ ನಾಟಕದಲ್ಲಿ ಸೂಚಿಸಿಲ್ಲ. ಆದರೆ ಸಿಎಎ, ಎನ್ ಆರ್ ಸಿ ಕಾಯ್ದೆಯಡಿ ಅಗತ್ಯ ದಾಖಲೆ ತೋರಿಸದೆ ಇದ್ದರೆ ಎಲ್ಲ ಮುಸ್ಲಿಮರು ದೇಶ ಬಿಡಬೇಕಾಗುತ್ತದೆ ಎಂದು ಎಲ್ಲ ಕಲಾವಿದರು ಹೇಳಿದ್ದಾರೆ. ಬೇರೆ ಯಾವುದೇ ಧರ್ಮದ ಬಗ್ಗೆ ಹೇಳಿಕೆ ನಾಟಕದಲ್ಲಿ ಇಲ್ಲದೆ ಹೋದಾಗ, ಶಿಕ್ಷೆಗೆ ಅಗತ್ಯ ಮಾನಡಂಡವಾದ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಶ್ನೆಯೇ ನಾಟಕದಲ್ಲಿ ಮೂಡುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಶಾಹೀನ್ ಶಿಕ್ಷಣ ಸಂಥೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದ್ದು, ಶಿಕ್ಷಣ ಕ್ಷೆತ್ರದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಂಸ್ಥೆ ಹಲವು ಸಾಧನೆಗಳನ್ನು ಮಾಡಿರುವುದನ್ನು ಹಲವು ಪ್ರಶಸ್ತಿಗಳನ್ನು ಸ್ವೀಕರಿಸಿರುವುದನ್ನು ಕೋರ್ಟ್ ಗಮನಿಸಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ, ನಾಟಕದಲ್ಲಿ ಪಾಲ್ಗೊಂಡಿದ್ದ ಬಾಲಕಿಯ ತಾಯಿ ಮತ್ತು ಶಾಲೆಯ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದರು. 16 ದಿನಗಳ ಬಂಧನದ ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಬಾಲಾಪರಾಧ ನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿ ಪೊಲೀಸರು ವಿದ್ಯಾರ್ಥಿಗಳನ್ನು ತನಿಖೆ ಮಾಡಿದ್ದಾರೆ ಎಂದು ಆರೊಪಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಇನ್ನಷ್ಟೆ ವಿಚಾರಣೆಗೆ ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...