Homeಮುಖಪುಟಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ...

- Advertisement -
- Advertisement -

ಬೀದರ್‌ನ ಶಾಹಿನ್‌ ಶಾಲೆಯ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ನಡೆಸಿದ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸಿಎಎ- ಎನ್‌ಪಿಆರ್ ವಿರೋಧಿ ನಾಟಕ ಆಡಿದ್ದಕ್ಕೆ ದೇಶದ್ರೋಹದ ಕೇಸಿನ ಪ್ರಕರಣದಲ್ಲಿ, ಶಾಹೀನ್ ಹಿರಿಯ ಪ್ರಾಥಮಿಕ ಶಾಲೆಯ ವ್ಯವಸ್ಥಾಪಕ, ಅಲ್ಲಮ್‌ ಇಕ್ಬಾಲ್ ಶಿಕ್ಷಣ ಸೊಸೈಟಿಯ ಅಧ್ಯಕ್ಷ ಮತ್ತು ಶಾಹೀನ್ ಸಂಸ್ಥೆಗಳ ಸಂಸ್ಥಾಪಕ ಅಬ್ದುಲ್ ಖಾದೀರ್ ಅವರಿಗೆ ಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಖಾದೀರ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿ ಆದೇಶ ನೀಡಿದ ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮನಗೋಲಿ ಪ್ರೇಮಾವತಿ ಅವರು, ಬಂಧನದ ಎದುರಿಸಬೇಕಾದ ಅವಶ್ಯಕತೆ ಬಂದರೆ, ಎರಡು ಲಕ್ಷ ವೈಯಕ್ತಿಕ ಬಾಂಡ್ ಮತ್ತು ಮೂರು ಜನರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ದೇಶದ್ರೋಹದ ಆರೋಪಕ್ಕೆ ಒದಗಿಸಿರುವ ಮಾಹಿತಿಯ ಬಗ್ಗೆ ಕೋರ್ಟ್ ಪ್ರತಿಕ್ರಿಯಿಸಿದ್ದು “ಈ ನಾಟಕ ನಡೆಯುವಾಗ ಆರೋಪಿ ಸ್ಥಳದಲ್ಲಿರುವುದಕ್ಕೆ ದಾಖಲೆಗಳಿಲ್ಲ. ಆ ನಾಟಕ ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿಲ್ಲ. ಈ ಮಾಹಿತಿಯನ್ನು ಪರಿಗಣಿಸಿ, ಸೆಕ್ಷನ್ 124 ಎಗೆ ಬೇಕಾದ ಅಂಶಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ” ಎಂದು ತಿಳಿಸಿದೆ.

ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಹೊಂದಿರುವ ನಾಟಕದಲ್ಲಿ ಶಾಲಾ ಬಾಲಕಿಯೊಬ್ಬಳು ಅಭಿನಯಿಸಿದ್ದಾಳೆ ಎಂಬ ದೂರಿನ ಮೇರೆಗೆ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.

“ಸಂಭಾಷಣೆಯನ್ನು ಇಡಿಯಾಗಿ ಓದಿದ ಮೇಲೆ ಅವು ಎಲ್ಲಿಯೂ ಸರ್ಕಾರದ ವಿರುದ್ಧ ದೇಶದ್ರೋಹದಂತೆ ಕಂಡುಬರುವುದಿಲ್ಲ. ಭಾರತೀಯ ದಂಡ ಸಂಹಿತೆ 124 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಮೇಲ್ನೋಟಕ್ಕೆ ಯಾವುದೇ ಆಧಾರಗಳು ಕಂಡುಬರುತ್ತಿಲ್ಲ. ದಾಖಲೆಗಳನ್ನು ತೋರಿಸದೆ ಇದ್ದರೆ ದೇಶ ಬಿಡುವ ಪರಿಸ್ಥಿತಿ ಬರಬಹುದು ಎಂದು ವಿದ್ಯಾರ್ಥಿಗಳು ಅಭಿನಯಿಸಿ ವ್ಯಕ್ತಪಡಿಸಿದ್ದಾರೆ, ಅದನ್ನು ಬಿಟ್ಟರೆ ದೇಶದ್ರೋಹ ಎಸಗಿರುವುದಕ್ಕೆ ಎಲ್ಲಿಯೂ ಆಧಾರ ಇಲ್ಲ. ನನ್ನ ಅಭಿಪ್ರಾಯದಲ್ಲಿ ಆ ಸಂಭಾಷಣೆ ಸರ್ಕಾರದ ವಿರುದ್ಧ ಯಾವುದೇ ದ್ವೇಷ ಹುಟ್ಟಿಸುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ಇಡೀ ದೇಶದಲ್ಲಿ ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಪ್ರತಿಭಟನೆಗಳು ಮತ್ತು ರ್‍ಯಾಲಿಗಳು ಜರುಗುತ್ತಿವೆ ಮತ್ತು ಸರ್ಕಾರದ ಕ್ರಮಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸುವ ಮತ್ತು ನ್ಯಾಯಯುತವಾಗಿ ಅವುಗಳನ್ನು ಸರಿಪಡಿಸಿಕೊಳ್ಳುವ ಹಕ್ಕು ನಾಗರಿಕರಿಗೆ ಇದೆ. ಶಾಲೆಯಲ್ಲಿ ನಾಟಕ ಆಡುವಾಗ ಹೇಳಿದ ಸಂಭಾಷಣೆಗಳು ಅವು. ಜನವರಿ 21ರಂದು ನಾಟಕವನ್ನು ಆಡಲಾಗಿದೆ, ಜನವರಿ 26ರಂದು ಇದರ ಮಾಹಿತಿ ಸಿಕ್ಕಿದೆ. ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡದೆ ಹೋಗಿದ್ದರೆ ನಾಟಕದ ಬಗ್ಗೆ ಆಗಲಿ ಆ ಸಂಭಾಷಣೆಯ ಬಗ್ಗೆ ಆಗಲಿ ಸಾರ್ವಜನಿಕರಿಗೆ ತಿಳಿಯುತ್ತಲೇ ಇರಲಿಲ್ಲ” ಎಂದು ಕೋರ್ಟ್‌ ಹೇಳಿದೆ.

ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬಗೆಗಿನ ಆರೋಪಕ್ಕೆ “ಯಾವುದೇ ಸಮುದಾಯದ ಬಗ್ಗೆ ನಾಟಕದಲ್ಲಿ ಸೂಚಿಸಿಲ್ಲ. ಆದರೆ ಸಿಎಎ, ಎನ್ ಆರ್ ಸಿ ಕಾಯ್ದೆಯಡಿ ಅಗತ್ಯ ದಾಖಲೆ ತೋರಿಸದೆ ಇದ್ದರೆ ಎಲ್ಲ ಮುಸ್ಲಿಮರು ದೇಶ ಬಿಡಬೇಕಾಗುತ್ತದೆ ಎಂದು ಎಲ್ಲ ಕಲಾವಿದರು ಹೇಳಿದ್ದಾರೆ. ಬೇರೆ ಯಾವುದೇ ಧರ್ಮದ ಬಗ್ಗೆ ಹೇಳಿಕೆ ನಾಟಕದಲ್ಲಿ ಇಲ್ಲದೆ ಹೋದಾಗ, ಶಿಕ್ಷೆಗೆ ಅಗತ್ಯ ಮಾನಡಂಡವಾದ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಶ್ನೆಯೇ ನಾಟಕದಲ್ಲಿ ಮೂಡುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಶಾಹೀನ್ ಶಿಕ್ಷಣ ಸಂಥೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದ್ದು, ಶಿಕ್ಷಣ ಕ್ಷೆತ್ರದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಂಸ್ಥೆ ಹಲವು ಸಾಧನೆಗಳನ್ನು ಮಾಡಿರುವುದನ್ನು ಹಲವು ಪ್ರಶಸ್ತಿಗಳನ್ನು ಸ್ವೀಕರಿಸಿರುವುದನ್ನು ಕೋರ್ಟ್ ಗಮನಿಸಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ, ನಾಟಕದಲ್ಲಿ ಪಾಲ್ಗೊಂಡಿದ್ದ ಬಾಲಕಿಯ ತಾಯಿ ಮತ್ತು ಶಾಲೆಯ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದರು. 16 ದಿನಗಳ ಬಂಧನದ ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಬಾಲಾಪರಾಧ ನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿ ಪೊಲೀಸರು ವಿದ್ಯಾರ್ಥಿಗಳನ್ನು ತನಿಖೆ ಮಾಡಿದ್ದಾರೆ ಎಂದು ಆರೊಪಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಇನ್ನಷ್ಟೆ ವಿಚಾರಣೆಗೆ ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...