Homeಮುಖಪುಟ"ನ್ಯಾಯವು ವಿಜಯ ಸಾಧಿಸಬೇಕಾದಾಗ, ಅದು ವಿಜಯಶಾಲಿಯಾಗುತ್ತದೆ... ಸತ್ಯದೊಂದಿಗೆ ಇರಿ, ನ್ಯಾಯವು ದೊರೆಯುತ್ತದೆ." ನ್ಯಾ.ಎಸ್ ಮುರಳೀಧರ್‌

“ನ್ಯಾಯವು ವಿಜಯ ಸಾಧಿಸಬೇಕಾದಾಗ, ಅದು ವಿಜಯಶಾಲಿಯಾಗುತ್ತದೆ… ಸತ್ಯದೊಂದಿಗೆ ಇರಿ, ನ್ಯಾಯವು ದೊರೆಯುತ್ತದೆ.” ನ್ಯಾ.ಎಸ್ ಮುರಳೀಧರ್‌

ನ್ಯಾ.ಎಸ್ ಮುರಳೀಧರ್‌ಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಕಿಕ್ಕಿರಿದ ವಕೀಲರು..

- Advertisement -
- Advertisement -

ದೆಹಲಿಯಿಂದ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌‌ಗೆ ವರ್ಗಾವಣೆಯಾದ ಖ್ಯಾತ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರಿಗೆ ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ವತಿಯಿಂದ ಕಿಕ್ಕಿರದ ಸಭಾಂಗಣದಲ್ಲಿ ಅಭೂತಪೂರ್ವ ಬೀಳ್ಕೊಡುಗೆ ನೀಡಲಾಯಿತು. ಕಟ್ಟಡದ ಎಲ್ಲಾ ಅಂತಸ್ತುಗಳಲ್ಲಿಯೂ ವಕೀಲರು ಕಿಕ್ಕಿರಿದು ನೆರೆದು ಶುಭಾಶಯ ಕೋರಿದರು.

“ಯಾವುದೇ ಕಾನೂನಿನ ವಿಷಯದ ಬಗ್ಗೆ ಚರ್ಚಿಸಬಹುದಾದ ಮತ್ತು ಯಾವುದೇ ರೀತಿಯ ವಿಷಯಗಳಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಪ್ರಖ್ಯಾತ ನ್ಯಾಯಾಧೀಶರನ್ನು ನಾವು ಕಳೆದುಕೊಳ್ಳುತ್ತಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಇಂದು ಮಧ್ಯಾಹ್ನ ನಡೆದ ವಿದಾಯ ಸಮಾರಂಭದಲ್ಲಿ ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಕಾರ್ಯದರ್ಶಿ ಅಭಿಜತ್ ಮಾತನಾಡಿ “ಹೈಕೋರ್ಟ್‌ನ ಕೊಹಿನೂರ್‌, ಕೇವಲ 100 ಕಿಲೋ ಮೀಟರ್ ದೂರಕ್ಕಷ್ಟೇ ಹೋಗುತ್ತಿದೆ” ಎಂದಿದ್ದಾರೆ.

ನಂತರ ನ್ಯಾಯಮೂರ್ತಿ ಮುರಳೀಧರ್‌ರವರು ಮಾತನಾಡಿ, “ನಾನು ವಕೀಲ ಅಥವಾ ನ್ಯಾಯಾಧೀಶನಾಗಬೇಕೆಂದು ಚಿಕ್ಕವನಿದ್ದಾಗ ತೀರ್ಮಾನಿಸಿರಲಿಲ್ಲ. ಈ ನ್ಯಾಯಾಲಯಕ್ಕೆ ಬಂದಿರುವುದು ನಂಬಲಾಗದ ವ್ಯಂಗ್ಯವಾಗಿದೆ” ಎಂದಿದ್ದಾರೆ.

“ನಾನು ಕಾನೂನು ವ್ಯಾಸಂಗ ಮಾಡಲು ಉದ್ದೇಶಿಸಿರಲಿಲ್ಲ. ಎಂಎಸ್ಸಿಗೆ ಸೇರಿದ್ದ ನಾನು ವಕೀಲರ ಮಗನೊಂದಿಗೆ ಕ್ರಿಕೆಟ್ ಆಡುತ್ತಿದ್ದೆ ಮತ್ತು ನನ್ನ ಕ್ರಿಕೆಟ್ ಚೀಲವನ್ನು ಅವನ ಕೋಣೆಗಳಲ್ಲಿ ಬಿಡುತ್ತಿದ್ದೆ. ನಂತರ ನಾನು ಆತನೊಂದಿಗೆ ಕಾನೂನು ಓದಬೇಕಾಯಿತು” ಎಂದು ತಿಳಿಸಿದರು.

ಅಂತಿಮವಾಗಿ 1984 ರ ಸೆಪ್ಟೆಂಬರ್‌ನಲ್ಲಿ ಚೆನ್ನೈನಲ್ಲಿ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದ ಅವರು 1987 ರಲ್ಲಿ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಲು ದೆಹಲಿಗೆ ತೆರಳಿದರು. ಮಾಜಿ ಅಟಾರ್ನಿ ಜನರಲ್ ಜಿ ರಾಮಸ್ವಾಮಿ ಅವರ ಅಡಿಯಲ್ಲಿ ಜೂನಿಯರ್ ಆಗಿ ಕೆಲಸ ಮಾಡಿದ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ.

ಯುವ ವಕೀಲರ ಕುರಿತು ಮಾತನಾಡಿದ ಅವರು “ಯಾವುದೇ ಸಮರ್ಪಕ ದಾಖಲೆಗಳಿಲ್ಲದೆ, ಕೇವಲ ಚೀಟಿಯೊಂದನ್ನು ಇಟ್ಟುಕೊಂಡು ಕೋರ್ಟ್‌‌ಗೆ ಬರುವ ಯುವಜನರನ್ನು ನೋಡಿದರೆ ನನಗೆ ಕಿರಿಕಿರಿಯಾಗುತ್ತದೆ. ಕಿರಿಯರು ಸಮರ್ಪಕವಾಗಿ ಸಿದ್ಧರಾಗಿ ಬಂದು ವಾದಿಸಲು ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ.” ಎಂದಿದ್ದಾರೆ.

“ನ್ಯಾಯವು ವಿಜಯ ಸಾಧಿಸಬೇಕಾದಾಗ, ಅದು ವಿಜಯಶಾಲಿಯಾಗುತ್ತದೆ… ಸತ್ಯದೊಂದಿಗೆ ಇರಿ, ನ್ಯಾಯವು ದೊರೆಯುತ್ತದೆ.” ಎಂದು ಹೇಳಿ ತಮ್ಮ ಮಾತುಗಳನ್ನು ಮುಗಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...