Homeಅಂಕಣಗಳುಮುದ್ದೆ ರಫ್ತು ಮಾಡಿದ್ರೆ ಹೆಂಗೆ?

ಮುದ್ದೆ ರಫ್ತು ಮಾಡಿದ್ರೆ ಹೆಂಗೆ?

- Advertisement -
- Advertisement -

ಕರ್ನಾಟಕದಲ್ಲಿ ಚುನಾವಣೆ ಸಂಭವಿಸಲಿದೆ ಅಂದರೆ ಅಪ್ಪಳಿಸಲಿದೆ. ಈ ಹಿಂದಿನವೆಲ್ಲಾ ಚುನಾವಣೆಗಳಾದರೆ, ಈಗಿನದ್ದು ಸಮರ ಚುನಾವಣಾ ಸಾಮಗ್ರಿಗಳೊಡಗೂಡಿದ ಸಮರ. ಇಲ್ಲಿ ಬಳಕೆಯಾಗುವ ಎಲ್ಲ ಆಯುಧಗಳಿಗಿಂತಲೂ ಮತೀಯವಾದ ಆಯುಧ ಭಯಾನಕವಾದದ್ದು. ಮೂರು ಪಾರ್ಟಿಗಳೂ ಈ ಆಯುಧಗಳನ್ನು ಕೈಗೆತ್ತಿಕೊಂಡಿವೆ. ಕಾಂಗ್ರೆಸ್ ಪಾರ್ಟಿ ಅಹಿಂದ ಜಪ ಕಡಿಮೆ ಮಾಡಿ ಅಹಿಂದದ ಜೊತೆಗೆ ಲಿಂಗ ಸೇರಿಸಿಕೊಂಡಿದೆ. ಆದರೆ ಒಲ್ಲದ ಗಂಡನೊಡನೆ ಬಾಳುವೆ ಮಾಡಿದಂತೆ ವೀರಶೈವರೊಟ್ಟಿಗಿದ್ದ ಲಿಂಗಾಯತರು ತಮ್ಮಸ್ಥಾನದಿಂದ ಕೆಳಗಿಳಿದು ಅಹಿಂದರೊಟ್ಟಿಗೆ ನಿಲ್ಲುವುದು ಸಾಧ್ಯವೇ ಎಂದು ಸಮಾಜ ವಿಜ್ಞಾನಿಗಳು ಚರ್ಚೆ ಮಾಡುತ್ತಿರುವಾಗಲೇ, ಶಾ ಎಂಬ ಭಾರತದ ಶನಿ ಹೆದರಬೇಡಿ ಬೇರೆ ಧರ್ಮ ಮಾನ್ಯತೆ ಕೊಡುವುದಿಲ್ಲ ಎಂದುಬಿಟ್ಟಿದ್ದಾನಲ್ಲಾ.
ಈತನ ಅಜ್ಞಾನದ ಮುಸುಡಿಗೆ ಇಕ್ಕಿರುವ ಮಾತೆಮಾದೇವಿ ನಿನ್ನ ಬುದ್ಧಿ ದಾರಿದ್ರ್ಯಕ್ಕಿಷ್ಟು ಬೆಂಕಿಹಾಕ. ನೀನು ಮಾತ್ರ ಜೈನ ಧರ್ಮ ಪಡಕೊಂಡಿ, ನಮಗೆ ಲಿಂಗಧರ್ಮ ಬೇಡವೆ ಎಂದರಂತಲ್ಲಾ, ಥೂತ್ತೇರಿ!

*******

ಕರ್ನಾಟಕದ ಮತದಾರರ ಎದುರು ಮೂರು ಪಾರ್ಟಿಗಳು ತಮ್ಮತಮ್ಮ ಸಾಧನೆಗಳನ್ನು ಅನಾವರಣ ಮಾಡಿಕೊಳ್ಳುತ್ತಿವೆಯಲ್ಲಾ. ಆ ಪೈಕಿ ಕಾಂಗ್ರೆಸ್ ಈ ಐದು ವರ್ಷ ತಾನು ಮಾಡಿದ ಸಾಧನೆಗಳನ್ನು ಸಾರಲು ಹೆಣಗುತ್ತಿರುವಾಗ, ಅತ್ತ ಬಿಜೆಪಿ ಹೇಳಿಕೊಳ್ಳಲು ಏನೂ ಇಲ್ಲದ ಕಾರಣ ಸಿದ್ದು ಸರ್ಕಾರ ಶುದ್ಧ ಭ್ರಷ್ಟ ಸರ್ಕಾರ. ಅದರಲ್ಲೂ ನಂ. 1 ಭ್ರಷ್ಟ ಸರ್ಕಾರ ಎಂದು ಹೇಳುತ್ತಲೇ `ಶಾ’ರವರು ಸಿದ್ದು ಹೆಸರಿನ ಜಾಗಕ್ಕೆ ಎಡೂರಪ್ಪನನ್ನು ತಂದು ಕೂರಿಸಿದ್ದು ಕರ್ನಾಟಕವನ್ನೆ ನಗಿಸಿತಂತಲ್ಲಾ. ಇನ್ನು ಜೆಡಿಎಸ್‍ನಿಂದ ಇಂತಹ ಪ್ರಮಾದಗಳಿಲ್ಲವಿದ್ದರೂ ಮಾನ್ಯ ಮಾಜಿ ಪ್ರಧಾನಿ ದೇವೇಗೌಡರು ಸಿರಾಮಯ್ಯನಂಥ ನೀಚನನ್ನು ನಾನು ಬೆಳೆಸಿ ಉಪಮುಖ್ಯಮಂತ್ರಿ ಮಾಡಿದ್ದೇ ತಪ್ಪು ಎಂದು ಹಲುಬಿದ್ದಾರಂತಲ್ಲಾ. ಆಗ ಅಲ್ಲೇ ಇದ್ದ ಅಡಗೂರಿನ ಬುಂಡೆಖ್ಯಾತ ಅಂದರೆ ಎಚ್. ವಿಶ್ವನಾಥ್ ನಾನು ಸಿದ್ದರಾಮಯ್ಯನ ಕೊರಳಿಗೆ ಹಗ್ಗಹಾಕಿ ಸೋನಿಯಾ ಮನೆಗೆ ಎಳೆದುಕೊಂಡು ಹೋಗಿದ್ದು ಈ ಶತಮಾನದಲ್ಲಿ ನಾನು ಮಾಡಿದ ಘೋರ ತಪ್ಪು ಎಂದರಂತಲ್ಲಾ ಥೂತ್ತೇರಿ.

*******

“ಸಿದ್ದುವನ್ನು ನಾನು ಬೆಳೆಸಿದೆ” ಎಂಬ ದೇವೇಗೌಡರ ಮಾತಿಗೆ ಸಾಕ್ಷಿಯೊದಗಿಸಿರುವ ಕೊಳ್ಳೇಗಾಲದ ಪ್ರಸಾದ ಎಂಬ ಸಿದ್ದು ಸೇವಕ. ಗೌಡರು ಹೇಳಿದ್ದು ನೂರಕ್ಕೆ ನೂರಮೂರು ಸತ್ಯ.
ಸಿದ್ದರಾಮನ ಹುಂಡಿಯಲ್ಲಿ, ಹರುಕಲು ಅಂಗಿ, ತೂತಾದ ಚೆಡ್ಡಿ, ಇಕ್ಕಿಕೊಂಡು ಎಣ್ಣೆಗಾಣದ ತಲೆ ಕೆದರಿಕೊಂಡು ಕುರಿ ಕಾಯುತ್ತಿದ್ದ ಸಿದ್ದುವನ್ನು ಹಿಡಿದು ತಂದ ದೇವೇಗೌಡರು, ರೇವಣ್ಣನಿಗಿಂತಲೂ ಹಿರಿಯವನೆಂದು ಸಾಕಿ ಎಲ್‍ಎಲ್‍ಬಿ ಮಾಡಿಸಿ, ಲಾಯರ್ ಮಾಡಿ, ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿ, ಕನ್ನಡ ಅಭಿವೃದ್ಧಿ ಅಧ್ಯಕ್ಷನನ್ನಾಗಿ ಮಾಡಿ, ನಂತರ ಆಡುಕುರಿ ದನಗಳ ಮಂತ್ರಿ ಮಾಡಿ, ಆರಾಣೆ ಎಣಿಸಲು ಬಾರದಿದ್ದರೂ ಅರ್ಥಮಂತ್ರಿ ಮಾಡಿ, ಉಪಮುಖ್ಯಮಂತ್ರಿ ಮಾಡಿದ್ದೂ ಅಲ್ಲದೆ, ಚಾಮುಂಡೇಶ್ವರಿ ಚುನಾವಣೆಯಲ್ಲಿ ಕೇವಲ 274 ಮತಗಳ ಅಂತರದಲ್ಲಿ ಗೆಲ್ಲಿಸಿ ಕೊಟ್ಟ ದೇವೇಗೌಡರು ಸಿದ್ದು ಪಾಲಿಗೆ ದೇವರಾಗಬೇಕಿತ್ತು. ಅದುಬಿಟ್ಟು ಕರ್ನಾಟಕವನ್ನು ಕಾಡುತ್ತಿರುವ ದೆವ್ವನಂತೆ ಪರಿಗಣಿಸಬಾರದಿತ್ತು. ಯಾರಾದರಾಗಲಿ ದೆವ್ವನನ್ನು ಆರಾಧಿಸಬೇಕೆ ಹೊರತು ಸಿಟ್ಟು ತರಿಸಬಾರದು ಎನ್ನುತ್ತಿದ್ದಾರಂತಲ್ಲಾ, ಥೂತ್ತೇರಿ.

*******

ಸಿದ್ದು ಸರ್ಕಾರ ಮರಳಿ ಬಂದುದಾದರೆ ಕರುಣಿಸಿರುವ ಭಾಗ್ಯಗಳು ಮುಂದುವರಿಯುತ್ತವಂತೆ. ಅದೇ ಬಿಜೆಪಿ ಸರ್ಕಾರ ಬಂದರೆ ಹಿಂದಿನ ಸಾಧನೆಗಳು ಮುಂದುವರಿಯುತ್ತವಂತೆ! ಹಾಗೆಯೇ ಇಪ್ಪತ್ತೇ ತಿಂಗಳಿದ್ದು ಇಬ್ಬರು ಹೆಂಡಿರ ಮನೆ ಮರೆತು ಗ್ರಾಮ ವಾಸ್ತವ್ಯ ಮಾಡಿದ ಕುಮಾರಣ್ಣನ ಕೆಲಸಗಳೂ ಮುಂದುವರಿಯುತ್ತವಂತೆ. ಜೊತೆಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ತೆಗೆದುಕೊಂಡ 25 ಗಂಟೆ ಅವಧಿಯಲ್ಲಿ ರೈತರ 51 ಸಾವಿರ ಕೋಟಿ ಸಾಲಮನ್ನ, ಗರ್ಭಿಣಿಯರು. ಗರ್ಭಿಣಿಯಾಗುವ ತಿಂಗಳಿನಿಂದಲೇ ಮಾಸಾಶನ ಮಾಡುತ್ತೇನೆ. ಇದೆಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರು ಮನೆಯಿಂದ ಈಚೆ ಬರದಂತಹ ಕೆಲಸ ಕೊಡುತ್ತೇನೆ. ಅಂದರೆ ಮನೆ ಕೈಗಾರಿಕೆಗಳು ಜಾರಿಯಾಗುತ್ತವೆ. ಮುಖ್ಯವಾಗಿ ನಮ್ಮ ತಂದೆಯವರಿಗೆ ಪ್ರಿಯವಾದ ಮುದ್ದೆ ತಯಾರಿಸುವಂತೆ ಮಾಡಿ. ಅದರ ಜೊತೆಗೆ ರೊಟ್ಟಿಯನ್ನು ತಯಾರಿಸಿ ಮಾರ್ಕೆಟಿಂಗ್ ವ್ಯವಸ್ಥೆ ಮಾಡುತ್ತೇನೆ. ಮುದ್ದೆ ಖರ್ಚಾಗದಿದ್ದರೆ ಬೃಹತ್ ಶೀತಲೀಕರಣ ನಿರ್ಮಿಸಿ ಕೆಡದಂತೆ ಸಂಗ್ರಹಿಸಿ ರಫ್ತು ಮಾಡುತ್ತೇವೆ ಎಂದು ಇನ್ನು ಹೇಳಿಲ್ಲವಂತಲ್ಲಾ, ಥೂತ್ತೇರಿ.

*******

ಹಸುವಿನಿಂದ ಬೇರೆಯಾದ ಕರುವಿನಂತೆ ಕರ್ನಾಟಕವನ್ನು ಸುತ್ತುತ್ತ. ಇವನಾರ್ವ ಇವನಾರ್ವ ಎನ್ನುತ್ತಿರುವ ರಾಹುಲ್ ಗಾಂಧಿಯನ್ನು ನೋಡಿ ಪಾಪ ಪಾಂಡು ಎಂದು ಆಡಿಕೊಂಡಿರುವ ಅಡುಕುರಿ ವಿಶ್ವನಾಥ್‍ನನ್ನು ನೋಡಿ, ಕೆರಳಿದ ಕಾಂಗೈಗಳೂ ಬುಂಡೆಕ್ಯಾತನೆಂದು ನಾಮಕರಣ ಮಾಡಿವೆಯಲ್ಲಾ. ಅಷ್ಟಕ್ಕೂ ಈ ಬುಂಡೆಕ್ಯಾತ ಮಗ ಅಯ್ಯು ಚಿತ್ರದ್ದು. ಆ ಚಿತ್ರದಲ್ಲಿ ಬುಂಡೇಕ್ಯಾತನ ಯಾರೆಂದು ಇತಿಹಾಸವನ್ನು ಕೆದಕಿದಾಗ ಬುಂಡೆಕ್ಯಾತ ಎಂಬ ಪಾತ್ರ ಬೂತಯ್ಯನ ಕೆಲಸವೇನೆಂದರೆ, ಭೂತಯ್ಯನ ಜೊತೆಗಿದ್ದೇ ವಿರೋಧಿಗಳಿಗೆ ಭೂತಯ್ಯನ ನಾಶ ಸಂಚನ್ನು ಹೇಳಿಕೊಡುವುದು. ನಾಯಕನ ಹಿಂದಿರುತ್ತಲೇ ಎದುರಾಳಿಗೆ ಕಣ್ಸನ್ನೆ ಮಾಡುವ ಈ ಪಾತ್ರಗಳಿಗೆ ದೊಡ್ಡ ಇತಿಹಾಸವೇ ಇದೆ. ಅದೇನಾದರಾಗಲಿ ದೇವೇಗೌಡರು ಟೀಕೆ ಮಾಡುವ ಯಾವ ಅವಕಾಶವನ್ನು ಕಳೆದುಕೊಳ್ಳದೇ ಟೀಕಿಸಿ ಚಪ್ಪಾಳೆ ಗಿಟ್ಟಿಸಿದ್ದ ವಿಶ್ವನಾಥ್, ಈಗ ದೇವೇಗೌಡರ ಹಿಂದೆ ಇದ್ದು,ಈ ಬುರುಡೆ ಅವರೇದ್ದೊ ಇವರದ್ದೊ ಎಂಬ ಅನುಮಾನ ಹುಟ್ಟಿಸುವಂತೆ ಹತ್ತಿರದಲ್ಲೇ ಇರುವುದು ಮೌಲ್ಯಗಳನ್ನು ಕುರಿತು ಚಿಂತಿಸುವವರ ಮನಕರಗಿಸುವಂತಿದೆಯಲ್ಲಾ ಥೂತ್ತೇರಿ!!!

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...