Homeಮುಖಪುಟಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ "ಅಪರೇಷನ್ ಹೋಳಿ" ಮಾಡುತ್ತಿದೆ: ಕಾಂಗ್ರೆಸ್ ಆರೋಪ

ಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ “ಅಪರೇಷನ್ ಹೋಳಿ” ಮಾಡುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು “ಆಪರೇಷನ್ ಹೋಳಿ” ಎಂದು ಕರೆದು 14 ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಅಪಹರಿಸಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಬೆಂಬಲದ ನಾಲ್ಕು ಶಾಸಕರಾದ ಹರ್ದೀಪ್ ಡಾಂಗ್, ರಘುರಾಜ್ ಕನ್ಸಾನಾ ಮತ್ತು ಬಿಸಾಹುಲಾಲ್ ಸಿಂಗ್ ಮತ್ತು ಸ್ವತಂತ್ರ ಸದಸ್ಯೆ ಶೇರಾ ಭೈಯಾರನ್ನು ಕರ್ನಾಟಕದ ಪಂಚತಾರಾ ಹೋಟೆಲ್ ನಲ್ಲಿಟ್ಟಿದ್ದಾರೆ ಎಂಬ ವದಂತಿಗಳಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ ಕಾಂಗ್ರೆಸ್ ಮುಖಂಡರು ಬಿಜೆಪಿಯು “ರಾಜ್ಯದಿಂದ ರಾಜ್ಯ”ದ ಮೇಲೆ ಆಕ್ರಮಣ ಮಾಡುತ್ತಿದೆ. ರಾಜ್ಯಸಭೆಯ ಚುನಾವಣೆಗೆ ಹತ್ತಿರವಿರುವಾಗ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳವಾರ ಸಂಜೆ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ಕೆಲವು ಶಾಸಕರು ದೆಹಲಿ ಬಳಿಯ ಗುರಗಾಂವ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ಬಿಜೆಪಿ ತಮ್ಮ ಪಕ್ಷದ ಶಾಸಕರಿಗೆ 25-35 ಕೋಟಿ ರೂ. ಲಂಚ ನೀಡಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.

ಶಾಸಕರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿರುವ ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ಆಡಳಿತದ ಹರಿಯಾಣದ ಪೊಲೀಸರು ಹೋಟೆಲ್‌ಗೆ ಅನುಮತಿಸುತ್ತಿಲ್ಲ ಎಂದು ಕಾಂಗ್ರೆಸ್ ದೂರಿದೆ.

ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಬಿಎಸ್‌ಪಿ ಶಾಸಕಿ ರಮಾಬಾಯಿ ದಿಗ್ವಿಜಯ ಸಿಂಗ್ ಅವರ ಪುತ್ರ ಸೇರಿದಂತೆ ಕಾಂಗ್ರೆಸ್ ಮಂತ್ರಿಗಳ ಬೆಂಗಾವಲಿನೊಂದಿಗೆ ಐಟಿಸಿ ಗ್ರ್ಯಾಂಡ್ ಭಾರತ್‌ ಹೋಟೆಲ್‌ನಿಂದ ತನ್ನ ಬ್ಯಾಗುಗಳೊಂದಿಗೆ ಹೊರಬಂದಿದ್ದರು.

“ಕಾಂಗ್ರೆಸ್ ಸರ್ಕಾರವು 15 ವರ್ಷಗಳಿಂದ ನಡೆಯುತ್ತಿರುವ ಲ್ಯಾಂಡ್ ಮಾಫಿಯಾ, ಚಿಟ್ ಫಂಡ್ ಮಾಫಿಯಾ, ಸುಲಿಗೆ ಮಾಫಿಯಾದಂತಹ ಮಾಫಿಯಾಗಳನ್ನು ನಿಲ್ಲಿಸಿದೆ, ಅವುಗಳ ಕುರಿತು ಸಾಕ್ಷ್ಯ ಸಂಗ್ರಹಿಸಿದೆ. ಇದರಿಂದ ಜೈಲಿನ ಕಂಬಿಗಳಿಗೆ ಹೆದರಿ ಮಧ್ಯಪ್ರದೇಶದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಅಮಿತ್ ಶಾ, ಶಿವರಾಜ್ ಸಿಂಗ್‌ ಚೌಹಾಣ್‌ ಮತ್ತು ಎಂಎಲ್ ಖಟ್ಟರ್ ಅವರೇ, 12 ಶಾಸಕರನ್ನು ವಿಶೇಷ ವಿಮಾನದಲ್ಲಿ ಗುರಗಾಂವ್ ಗೆ ಕರೆದೊಯ್ದವರು ಯಾರು ಎಂದು ದಯವಿಟ್ಟು ಹೇಳುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ಮಧ್ಯಪ್ರದೇಶದ ಪ್ರಮುಖ ಬಿಜೆಪಿ ಮುಖಂಡ ನರೋತ್ತಮ್ ಮಿಶ್ರಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಇದು ರಾಜ್ಯಸಭಾ ಸದಸ್ಯರಾಗಿ ದಿಗ್ವಿಜಯ್‌ ಸಿಂಗ್‌ ಮುಂದುವರೆಯಲು ಆಡುತ್ತಿರು ನಾಟಕ ಎಂದು ಕರೆದಿದ್ದಾರೆ.

ವಿಶೇಷ ವಿಮಾನದ ಮೂಲಕ ತನ್ನನ್ನು ಮತ್ತು ಇತರರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ರಮಾಬಾಯಿ ನಿರಾಕರಿಸಿದ್ದಾರೆ. ಅಲ್ಲದೆ ತಾನು ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. “ರಾಜ್ಯ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ. ಅವರು ನನ್ನನ್ನು ಮಂತ್ರಿಯನ್ನಾಗಿ ಮಾಡಲು ಬಯಸಿದರೆ ನಾನು ತಯಾರಿದ್ದೇನೆ” ಎಂದೂ ಸಹ ಅವರು ಹೇಳಿದ್ದಾರೆ.

230 ಸದಸ್ಯರ ಮದ್ಯಪ್ರದೇಶದ ವಿಧಾನಸಭೆಯಲ್ಲಿ ಕಮಲ್ ನಾಥ್ ಸರ್ಕಾರವು 120 ಶಾಸಕರನ್ನು ಹೊಂದಿದೆ. ಈ ಪೈಕಿ 114 ಶಾಸಕರು ಕಾಂಗ್ರೆಸ್, ಇಬ್ಬರು ಬಿಎಸ್ಪಿ, ಒಬ್ಬರು ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರು. ಬಿಜೆಪಿಗೆ 107 ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...