Homeಮುಖಪುಟಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಈ ಬಾರಿ ನಡೆಯುವ ಜನಗಣತಿ ಮತ್ತು ಎನ್‌ಪಿಆರ್ ಪಕ್ರಿಯೆಗಳನ್ನು ಪ್ರತ್ಯೇಕವಾಗಿ ನಡೆಸುವಂತೆ ಒತ್ತಾಯಿಸಿ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್ ಪಿ ಆರ್ ಮುಂದೆ ನಡೆಯಲಿರುವ ಎನ್ ಸಿ ಆರ್ (ರಾಷ್ಟ್ರೀಯ ಪೌರತ್ವ ನೊಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಎನ್ ಪಿ ಆರ್ ಪ್ರಕ್ರಿಯೆಯಲ್ಲಿ, ಕೆಲವು ನಾಗರಿಕರ ಪೌರತ್ವದ ಬಗ್ಗೆ ಸಂದೇಹವನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಕೂಡ ಹಲವು ನಾಗರಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ. ಈ ಎರಡೂ ಪ್ರಕ್ರಿಯೆಗಳನ್ನು ಒಟ್ಟಿಗೆ ನಡೆಸಿದರೆ, ಭಾರತೀಯ ದತ್ತಾಂಶ ವ್ಯವಸ್ಥೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರತಿ ಮನೆಗಳಲ್ಲಿ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸುವ ಜನಗಣತಿ ಮಾಹಿತಿ ಬಹಳ ಗೌಪ್ಯವಾದದ್ದು ಮತ್ತು ಇದನ್ನು ಕಾಯ್ದುಕೊಳ್ಳುವುದು ಅತಿ ಮುಖ್ಯ. ಈ ಮಾಹಿತಿಯನ್ನು ಸುರಕ್ಷಿತವಾಗಿ ಕಾಪಡಿಕೊಳ್ಳುವುದು ಮತ್ತು ಅದು ಇತರ ಪ್ರಕ್ರಿಯೆಗಳಿಂದ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕಿದೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

NPR ಮಾಹಿತಿ ಸಂಗ್ರಹದ ಸಮಯದಲ್ಲಿ ನಾಗರಿಕರ ಪೌರತ್ವದ ಬಗ್ಗೆ “ಸಂಶಯ” ವ್ಯಕ್ತಪಡಿಸಲು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಸಮಾಜದ ಹಲವು ವಲಯಗಳಲ್ಲಿ ಆತಂಕ ಬೆಳೆಯುತ್ತಿದೆ. ಇದು ದೇಶದ ಹಲವೆಡೆ ಸಾರ್ವಜನಿಕ ಸಂಶಯಕ್ಕೆ ಎಡೆಮಾಡಿಕೊಟ್ಟಿರುವುದಲ್ಲದೆ, NPR ನಿಂದ ಇರುವ ಹೆಚ್ಚಿನ ಉಪಯೋಗಗಳ ಬಗ್ಗೆ ಯಾವುದೇ ಸ್ಪಷ್ಟತೆ ಕೂಡ ಇಲ್ಲ ಎಂದು ತಿಳಿಸಿದ್ದಾರೆ.

ಎನ್ ಪಿ ಆರ್ ಪ್ರಕ್ರಿಯೆಯನ್ನು 2021ರ ಜನಗಣತಿ ಜೊತೆಗೆ ನಡೆಸುವುದು ಸೆನ್ಸಸ್ ಕಾಯ್ದೆ 1948ರ 15ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಆ ವಿಧಿ ಜನಗಣತಿ ಅಧಿಕಾರಿ ಕಾರ್ಯ ನಿರ್ವಹಿಸುವಾಗ ಸಿದ್ಧಪಡಿಸುವ ಪುಸ್ತಕ, ನೊಂದಣಿ ಅಥವಾ ದಾಖಲೆಯನ್ನು ಮತ್ಯಾರೂ ಉಪಯೋಗಿಸದಂತೆ ತಡೆಯುತ್ತದೆ ಎಂದು ಕೂಡ ತಿಳಿಸಿದ್ದಾರೆ.

ಹರ್ಷಮಂದರ್, ಜೆ ಎನ್ ಯು ನ ಹಿಮಾಂಶು, ಲಂಡನ್ ವಿಶ್ವವಿದ್ಯಾಲಯದ ಜಾನ್ ಹ್ಯಾರಿಸ್, ದೆಹಲಿ ವಿಶ್ವವಿದ್ಯಾಲಯದ ನಂದಿನಿ ಸುಂದರ್, ಪ್ರಭಾತ್ ಪಟ್ನಾಯಕ್, ಉಮಾ ಚಕ್ರವರ್ತಿ ಹೀಗೆ 190 ಸಮಾಜ ವಿಜ್ಞಾನಿ ಮತ್ತು ಆರ್ಥಿಕ ತಜ್ಞರು ಪತ್ರಕ್ಕೆ ಸಹಿ ಮಾಡಿದ್ದು, 2021ರ ಜನಗಣತಿಯ ಸಮಗ್ರತೆಯನ್ನು ಉಳಿಸಿಕೊಳ್ಳಲು NPR ಪ್ರಕ್ರಿಯ ಜೊತೆಗೆ ಅದನ್ನು ಬೇರ್ಪಡಿಸಬೇಕು ಎಂದು ಆಗ್ರಹಿಸಿರುವುದಲ್ಲದೆ, ಸದ್ಯಕ್ಕೆ ಎನ್‌ಪಿಆರ್ ಅಡಿ ಮಾಹಿತಿ ಸಂಗ್ರಹವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...