Homeಮುಖಪುಟಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ನೇತೃತ್ವದಲ್ಲಿ ರಾಜ್ಯದ ಹಲವಾರು ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿ ವರ್ಷ ನಡೆಯುವ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಈ ಬಾರಿ ಮಂಡ್ಯದಲ್ಲಿ ನಾಳೆ ಮತ್ತು ನಾಳಿದ್ದು (ಮಾರ್ಚ್‌ 07 & 08) ನಡೆಯಲಿದೆ.

2013ರಲ್ಲಿ ಉಡುಪಿಯಿಂದ ಆರಂಭವಾದ ಎಲ್ಲಾ ಸಂಘಟನೆಗಳು ಕೂಡಿ ಆಚರಿಸುವ ಈ ಪ್ರಕ್ರಿಯೆ ಪ್ರತಿ ವರ್ಷಕ್ಕೂ ವಿಭಿನ್ನವಾಗಿ ನಡೆದುಕೊಂಡು ಬರುತ್ತಿದೆ. 2014ರಲ್ಲಿ ಮೈಸೂರು, 2015ರಲ್ಲಿ ಬೆಂಗಳೂರು, 2016ರಲ್ಲಿ ವಿಜಯಪುರ, 2017ರಲ್ಲಿ ಕೊಪ್ಪಳ, 2018ರಲ್ಲಿ ಶಿವಮೊಗ್ಗ ಮತ್ತು 2019ರಲ್ಲಿ ಧಾರವಾಡದಲ್ಲಿ ಯಶಸ್ವಿಯಾಗಿ ಮಹಿಳಾ ದಿನ ನಡೆದಿದೆ.

ಕೊಪ್ಪಳದಲ್ಲಿ 2017ರಲ್ಲಿ ನಡೆದ ಮಹಿಳಾ ದಿನಾಚರಣೆ

ಉಡುಪಿಯ ಕಾರ್ಯಕ್ರಮಕ್ಕೆ 2013ರಲ್ಲಿ ದಿಟ್ಟ ಹೋರಾಟಗಾರ್ತಿ ಭಂವ್ರಿದೇವಿ ಚಾಲನೆ ನೀಡಿದ್ದರು. ಮಣಿಪುರದ ಹೋರಾಟಗಾರ್ತಿಯರು, ಕವಿತಾ ಕೃಷ್ಣನ್‌ ಸೇರಿದಂತೆ ಹಲವು ಚಿಂತಕರು, ಹೋರಾಟಗಾರ್ತಿಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಹಿಳಾ ದಿನದ ಮಹತ್ವವನ್ನು ಹೆಚ್ಚಿಸಿದ್ದರು. ಈ ಬಾರಿ ಮಂಡ್ಯದ ಕಾರ್ಯಕ್ರಮಕ್ಕೆ ದೆಹಲಿ ಸಾಮಾಜಿಕ ಹೋರಾಟಗಾರ್ತಿ ಮತ್ತು ಚಿಂತಕಿ ಶಬ್ನಂ ಹಶ್ಮಿ ಮತ್ತು ಹೈದರಾಬಾದ್‌ನ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ರೂಪುಗೊಳ್ಳುವ ಮೊದಲು ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಸಂಘಟನೆಗಳ ವ್ಯಾಪ್ತಿಯಲ್ಲಿ ಮಾತ್ರ ಮಹಿಳಾ ದಿನಾಚರಣೆ ಆಚರಿಸುತ್ತಿದ್ದರು. ಆದರೆ ಈಗ ಅವರೆಲ್ಲರೂ ಒಟ್ಟಾಗಿ ಭಾಗವಹಿಸುವುದಲ್ಲದೇ ಅವರ ಸಂಘಟನೆಗಳ ವ್ಯಾಪ್ತಿಯಲ್ಲಿಯೂ ಸಹ ಆಚರಿಸುತ್ತಿದ್ದಾರೆ. ಎಲ್ಲರನ್ನು ಒಂದು ವೇದಿಕೆಗೆ ತಂದ ಶ್ರೇಯ ಈ ವೇದಿಕೆಗೆ ಸಲ್ಲುತ್ತದೆ.

ಪ್ರತಿ ವರ್ಷವೂ ಎರಡು ದಿನ ಕಾರ್ಯಕ್ರಮ ನಡೆಯುತ್ತಿದೆ. ಅದಕ್ಕು ಮೊದಲೇ ಆರು ತಿಂಗಳಿನಿಂದ ಕಾರ್ಯಕ್ರಮದ ತಯಾರಿ ನಡೆದಿರುತ್ತದೆ. ಯಾವ ಊರಿನಲ್ಲಿ ಕಾರ್ಯಕ್ರಮ ನಡೆಯುತ್ತದೆಯೇ ಅಲ್ಲಿಯ ಸಂಘಟನೆಗಳೊಂದಿಗೆ ಸಭೆ, ಆ ಊರಿನ ಮಹಿಳಾ ಸಮಸ್ಯೆಯ ಕುರಿತು ಚರ್ಚೆ, ಕಾರ್ಯಗಾರ, ಪ್ರಚಾರಾಂದೋಲನಗಳು ನಡೆಯುತ್ತವೆ. ಸಾಮಾನ್ಯವಾಗಿ ಕಾರ್ಯಕ್ರಮದ ಮೊದಲ ದಿನ ಮಹಿಳಾ ಸಮಸ್ಯೆಗಳ ಪ್ರಚಲಿತ ವಿಚಾರದ ಕುರಿತು ವಿಚಾರ ಸಂಕಿರಣ ಮತ್ತು ಕಪ್ಪುಡುಗೆಯಲ್ಲಿ ಮಹಿಳೆಯರು ಮೌನ ಪ್ರತಿಭಟನೆ ನಡೆಯುತ್ತದೆ. ಎರಡನೆಯ ದಿನ ಮೆರವಣಿಗೆ ಮತ್ತು ಬಹಿರಂಗ ಸಮಾವೇಶ ಜರುಗುತ್ತದೆ.

ಪ್ರಚಾರಾಂದೋಲನ

ಸಮತೆಯೆಡೆಗೆ ನಮ್ಮ ನಡಿಗೆ, ನನ್ನ ಮತ ನನ್ನ ಆಯ್ಕೆ, ಇರಲಿ ಹೆಣ್ಣೋಟಕ್ಕೆ ಹೆಗ್ಗಳಿಕೆ ಎಂಬ ವಿಷಯದ ಸುತ್ತಾ ಧಾರವಾಡದ ಮಹಿಳಾ ದಿನ ನಡೆದರೆ, ಕೊಪ್ಪಳದಲ್ಲಿ ಸಮತೆಯೆಡೆಗೆ ನಮ್ಮ ನಡಿಗೆ, ನಮ್ಮ ಮಗಳು ಜಗದ ಬೆಳಕು, ನಮ್ಮ ದೇಹ ನಮ್ಮ ಹಕ್ಕು ಎಂಬ ವಿಷಯದ ಸುತ್ತಾ ಕೇಂದ್ರೀಕರಿಸಿತ್ತು. ಈ ಬಾರಿಯ ಮಂಡ್ಯದ ಮಹಿಳಾ ದಿನಾಚರಣೆಯಲ್ಲಿ ಗಟ್ಟಿ ದನಿ, ದಿಟ್ಟ ನಡೆ, ಘನತೆವೆತ್ತ ಬದುಕು ವಿಷಯದ ಕುರಿತು ನಡೆಯುತ್ತಿದೆ.

ಪ್ರತಿ ವರ್ಷವೂ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಮುಟ್ಟು, ಮಹಿಳಾ ಮೀಸಲಾತಿ, ಇತ್ಯಾದಿ ವಿಚಾರಗಳ ಕುರಿತು ಚಿಕ್ಕ ಪುಸ್ತಿಕೆಗಳನ್ನು ಮುದ್ರಿಸಿ ಜನರಿಗೆ ತಲುಪಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಬೀದಿನಾಟಕಗಳು, ಹಾಡುಗಳ ಮೂಲಕ ಜಾಗೃತಿ ಮೂಡಿಸುತ್ತಾ ಕೇವಲ ಎರಡು ದಿನ ಮಹಿಳಾ ದಿನಚರಣೆ ಮಾಡದೇ ಇದನ್ನೊಂದು ನಿರಂತರ ತಿಳಿವಿನ ಪ್ರಕ್ರಿಯೆಯಾಗಿ ವೇದಿಕೆ ಕೆಲಸ ಮಾಡುತ್ತಿದೆ.

ದುಡಿಯುವ ಮಹಿಳೆಯರ ದಿನ ಎಂದೇ ಖ್ಯಾತಿಯಾದ ಅಂತರಾಷ್ಟ್ರೀಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸುತ್ತಾ, ಜಾಗೃತಿ ಮೂಡಿಸುತ್ತಾ ವೇದಿಕೆ ಆಚರಿಸುತ್ತಿದೆ. ಸಾವಿರಾರು ಜನ ಪಾಲ್ಗೊಂಡು ಅರಿವಿನ ಪಯಣದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಈ ಬಾರಿಯ ಮಾರ್ಚ್‌ 07ರ ಶನಿವಾರ ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ “ಮಹಿಳಾ ಬದುಕು ಪಲ್ಲಟಗಳು” ವಿಷಯದ ಕುರಿತು ವಿಚಾರ ಸಂಕಿರಣ ನಡೆಯುತ್ತಿದೆ. ಮಾರ್ಚ್‌ 08ರ ಭಾನುವಾರ ನಗರದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಲಿದ್ದು, ರೈಲ್ವೇ ನಿಲ್ದಾಣದ ಬಳಿಯ ಸಿಲ್ವರ್‌ ಜ್ಯುಬಿಲಿ ಪಾರ್ಕ್‌‌ನಲ್ಲಿ ಬಹಿರಂಗ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಹ್ವಾನ ಪತ್ರಿಕೆ ಕೆಳಗಿವೆ ಓದಿ.

ಎಲ್ಲರೂ ತಪ್ಪದೇ ಬಂದು ಭಾಗವಹಿಸಿ… ನಿಮ್ಮ ಆಗಮನದ ನಿರೀಕ್ಷೆಯಲ್ಲಿದ್ದೇವೆ#international_women's_day#march_7_8_Mandya#ಅಂತಾರಾಷ್ಟ್ರೀಯ_ಮಹಿಳಾ_ದಿನಾಚರಣೆ

Posted by Karnataka Rajya Mahila Dourjanya virodhi Okkuta on Saturday, February 29, 2020

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...