Homeಮುಖಪುಟಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ನೇತೃತ್ವದಲ್ಲಿ ರಾಜ್ಯದ ಹಲವಾರು ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿ ವರ್ಷ ನಡೆಯುವ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಈ ಬಾರಿ ಮಂಡ್ಯದಲ್ಲಿ ನಾಳೆ ಮತ್ತು ನಾಳಿದ್ದು (ಮಾರ್ಚ್‌ 07 & 08) ನಡೆಯಲಿದೆ.

2013ರಲ್ಲಿ ಉಡುಪಿಯಿಂದ ಆರಂಭವಾದ ಎಲ್ಲಾ ಸಂಘಟನೆಗಳು ಕೂಡಿ ಆಚರಿಸುವ ಈ ಪ್ರಕ್ರಿಯೆ ಪ್ರತಿ ವರ್ಷಕ್ಕೂ ವಿಭಿನ್ನವಾಗಿ ನಡೆದುಕೊಂಡು ಬರುತ್ತಿದೆ. 2014ರಲ್ಲಿ ಮೈಸೂರು, 2015ರಲ್ಲಿ ಬೆಂಗಳೂರು, 2016ರಲ್ಲಿ ವಿಜಯಪುರ, 2017ರಲ್ಲಿ ಕೊಪ್ಪಳ, 2018ರಲ್ಲಿ ಶಿವಮೊಗ್ಗ ಮತ್ತು 2019ರಲ್ಲಿ ಧಾರವಾಡದಲ್ಲಿ ಯಶಸ್ವಿಯಾಗಿ ಮಹಿಳಾ ದಿನ ನಡೆದಿದೆ.

ಕೊಪ್ಪಳದಲ್ಲಿ 2017ರಲ್ಲಿ ನಡೆದ ಮಹಿಳಾ ದಿನಾಚರಣೆ

ಉಡುಪಿಯ ಕಾರ್ಯಕ್ರಮಕ್ಕೆ 2013ರಲ್ಲಿ ದಿಟ್ಟ ಹೋರಾಟಗಾರ್ತಿ ಭಂವ್ರಿದೇವಿ ಚಾಲನೆ ನೀಡಿದ್ದರು. ಮಣಿಪುರದ ಹೋರಾಟಗಾರ್ತಿಯರು, ಕವಿತಾ ಕೃಷ್ಣನ್‌ ಸೇರಿದಂತೆ ಹಲವು ಚಿಂತಕರು, ಹೋರಾಟಗಾರ್ತಿಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಹಿಳಾ ದಿನದ ಮಹತ್ವವನ್ನು ಹೆಚ್ಚಿಸಿದ್ದರು. ಈ ಬಾರಿ ಮಂಡ್ಯದ ಕಾರ್ಯಕ್ರಮಕ್ಕೆ ದೆಹಲಿ ಸಾಮಾಜಿಕ ಹೋರಾಟಗಾರ್ತಿ ಮತ್ತು ಚಿಂತಕಿ ಶಬ್ನಂ ಹಶ್ಮಿ ಮತ್ತು ಹೈದರಾಬಾದ್‌ನ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ರೂಪುಗೊಳ್ಳುವ ಮೊದಲು ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಸಂಘಟನೆಗಳ ವ್ಯಾಪ್ತಿಯಲ್ಲಿ ಮಾತ್ರ ಮಹಿಳಾ ದಿನಾಚರಣೆ ಆಚರಿಸುತ್ತಿದ್ದರು. ಆದರೆ ಈಗ ಅವರೆಲ್ಲರೂ ಒಟ್ಟಾಗಿ ಭಾಗವಹಿಸುವುದಲ್ಲದೇ ಅವರ ಸಂಘಟನೆಗಳ ವ್ಯಾಪ್ತಿಯಲ್ಲಿಯೂ ಸಹ ಆಚರಿಸುತ್ತಿದ್ದಾರೆ. ಎಲ್ಲರನ್ನು ಒಂದು ವೇದಿಕೆಗೆ ತಂದ ಶ್ರೇಯ ಈ ವೇದಿಕೆಗೆ ಸಲ್ಲುತ್ತದೆ.

ಪ್ರತಿ ವರ್ಷವೂ ಎರಡು ದಿನ ಕಾರ್ಯಕ್ರಮ ನಡೆಯುತ್ತಿದೆ. ಅದಕ್ಕು ಮೊದಲೇ ಆರು ತಿಂಗಳಿನಿಂದ ಕಾರ್ಯಕ್ರಮದ ತಯಾರಿ ನಡೆದಿರುತ್ತದೆ. ಯಾವ ಊರಿನಲ್ಲಿ ಕಾರ್ಯಕ್ರಮ ನಡೆಯುತ್ತದೆಯೇ ಅಲ್ಲಿಯ ಸಂಘಟನೆಗಳೊಂದಿಗೆ ಸಭೆ, ಆ ಊರಿನ ಮಹಿಳಾ ಸಮಸ್ಯೆಯ ಕುರಿತು ಚರ್ಚೆ, ಕಾರ್ಯಗಾರ, ಪ್ರಚಾರಾಂದೋಲನಗಳು ನಡೆಯುತ್ತವೆ. ಸಾಮಾನ್ಯವಾಗಿ ಕಾರ್ಯಕ್ರಮದ ಮೊದಲ ದಿನ ಮಹಿಳಾ ಸಮಸ್ಯೆಗಳ ಪ್ರಚಲಿತ ವಿಚಾರದ ಕುರಿತು ವಿಚಾರ ಸಂಕಿರಣ ಮತ್ತು ಕಪ್ಪುಡುಗೆಯಲ್ಲಿ ಮಹಿಳೆಯರು ಮೌನ ಪ್ರತಿಭಟನೆ ನಡೆಯುತ್ತದೆ. ಎರಡನೆಯ ದಿನ ಮೆರವಣಿಗೆ ಮತ್ತು ಬಹಿರಂಗ ಸಮಾವೇಶ ಜರುಗುತ್ತದೆ.

ಪ್ರಚಾರಾಂದೋಲನ

ಸಮತೆಯೆಡೆಗೆ ನಮ್ಮ ನಡಿಗೆ, ನನ್ನ ಮತ ನನ್ನ ಆಯ್ಕೆ, ಇರಲಿ ಹೆಣ್ಣೋಟಕ್ಕೆ ಹೆಗ್ಗಳಿಕೆ ಎಂಬ ವಿಷಯದ ಸುತ್ತಾ ಧಾರವಾಡದ ಮಹಿಳಾ ದಿನ ನಡೆದರೆ, ಕೊಪ್ಪಳದಲ್ಲಿ ಸಮತೆಯೆಡೆಗೆ ನಮ್ಮ ನಡಿಗೆ, ನಮ್ಮ ಮಗಳು ಜಗದ ಬೆಳಕು, ನಮ್ಮ ದೇಹ ನಮ್ಮ ಹಕ್ಕು ಎಂಬ ವಿಷಯದ ಸುತ್ತಾ ಕೇಂದ್ರೀಕರಿಸಿತ್ತು. ಈ ಬಾರಿಯ ಮಂಡ್ಯದ ಮಹಿಳಾ ದಿನಾಚರಣೆಯಲ್ಲಿ ಗಟ್ಟಿ ದನಿ, ದಿಟ್ಟ ನಡೆ, ಘನತೆವೆತ್ತ ಬದುಕು ವಿಷಯದ ಕುರಿತು ನಡೆಯುತ್ತಿದೆ.

ಪ್ರತಿ ವರ್ಷವೂ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಮುಟ್ಟು, ಮಹಿಳಾ ಮೀಸಲಾತಿ, ಇತ್ಯಾದಿ ವಿಚಾರಗಳ ಕುರಿತು ಚಿಕ್ಕ ಪುಸ್ತಿಕೆಗಳನ್ನು ಮುದ್ರಿಸಿ ಜನರಿಗೆ ತಲುಪಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಬೀದಿನಾಟಕಗಳು, ಹಾಡುಗಳ ಮೂಲಕ ಜಾಗೃತಿ ಮೂಡಿಸುತ್ತಾ ಕೇವಲ ಎರಡು ದಿನ ಮಹಿಳಾ ದಿನಚರಣೆ ಮಾಡದೇ ಇದನ್ನೊಂದು ನಿರಂತರ ತಿಳಿವಿನ ಪ್ರಕ್ರಿಯೆಯಾಗಿ ವೇದಿಕೆ ಕೆಲಸ ಮಾಡುತ್ತಿದೆ.

ದುಡಿಯುವ ಮಹಿಳೆಯರ ದಿನ ಎಂದೇ ಖ್ಯಾತಿಯಾದ ಅಂತರಾಷ್ಟ್ರೀಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸುತ್ತಾ, ಜಾಗೃತಿ ಮೂಡಿಸುತ್ತಾ ವೇದಿಕೆ ಆಚರಿಸುತ್ತಿದೆ. ಸಾವಿರಾರು ಜನ ಪಾಲ್ಗೊಂಡು ಅರಿವಿನ ಪಯಣದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಈ ಬಾರಿಯ ಮಾರ್ಚ್‌ 07ರ ಶನಿವಾರ ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ “ಮಹಿಳಾ ಬದುಕು ಪಲ್ಲಟಗಳು” ವಿಷಯದ ಕುರಿತು ವಿಚಾರ ಸಂಕಿರಣ ನಡೆಯುತ್ತಿದೆ. ಮಾರ್ಚ್‌ 08ರ ಭಾನುವಾರ ನಗರದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಲಿದ್ದು, ರೈಲ್ವೇ ನಿಲ್ದಾಣದ ಬಳಿಯ ಸಿಲ್ವರ್‌ ಜ್ಯುಬಿಲಿ ಪಾರ್ಕ್‌‌ನಲ್ಲಿ ಬಹಿರಂಗ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಹ್ವಾನ ಪತ್ರಿಕೆ ಕೆಳಗಿವೆ ಓದಿ.

ಎಲ್ಲರೂ ತಪ್ಪದೇ ಬಂದು ಭಾಗವಹಿಸಿ… ನಿಮ್ಮ ಆಗಮನದ ನಿರೀಕ್ಷೆಯಲ್ಲಿದ್ದೇವೆ#international_women's_day#march_7_8_Mandya#ಅಂತಾರಾಷ್ಟ್ರೀಯ_ಮಹಿಳಾ_ದಿನಾಚರಣೆ

Posted by Karnataka Rajya Mahila Dourjanya virodhi Okkuta on Saturday, February 29, 2020

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...