Homeಮುಖಪುಟಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಈ ಬಾರಿಯ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಾಳೆ ಮತ್ತು ನಾಳಿದ್ದು ಮಂಡ್ಯದಲ್ಲಿ..

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ನೇತೃತ್ವದಲ್ಲಿ ರಾಜ್ಯದ ಹಲವಾರು ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿ ವರ್ಷ ನಡೆಯುವ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಈ ಬಾರಿ ಮಂಡ್ಯದಲ್ಲಿ ನಾಳೆ ಮತ್ತು ನಾಳಿದ್ದು (ಮಾರ್ಚ್‌ 07 & 08) ನಡೆಯಲಿದೆ.

2013ರಲ್ಲಿ ಉಡುಪಿಯಿಂದ ಆರಂಭವಾದ ಎಲ್ಲಾ ಸಂಘಟನೆಗಳು ಕೂಡಿ ಆಚರಿಸುವ ಈ ಪ್ರಕ್ರಿಯೆ ಪ್ರತಿ ವರ್ಷಕ್ಕೂ ವಿಭಿನ್ನವಾಗಿ ನಡೆದುಕೊಂಡು ಬರುತ್ತಿದೆ. 2014ರಲ್ಲಿ ಮೈಸೂರು, 2015ರಲ್ಲಿ ಬೆಂಗಳೂರು, 2016ರಲ್ಲಿ ವಿಜಯಪುರ, 2017ರಲ್ಲಿ ಕೊಪ್ಪಳ, 2018ರಲ್ಲಿ ಶಿವಮೊಗ್ಗ ಮತ್ತು 2019ರಲ್ಲಿ ಧಾರವಾಡದಲ್ಲಿ ಯಶಸ್ವಿಯಾಗಿ ಮಹಿಳಾ ದಿನ ನಡೆದಿದೆ.

ಕೊಪ್ಪಳದಲ್ಲಿ 2017ರಲ್ಲಿ ನಡೆದ ಮಹಿಳಾ ದಿನಾಚರಣೆ

ಉಡುಪಿಯ ಕಾರ್ಯಕ್ರಮಕ್ಕೆ 2013ರಲ್ಲಿ ದಿಟ್ಟ ಹೋರಾಟಗಾರ್ತಿ ಭಂವ್ರಿದೇವಿ ಚಾಲನೆ ನೀಡಿದ್ದರು. ಮಣಿಪುರದ ಹೋರಾಟಗಾರ್ತಿಯರು, ಕವಿತಾ ಕೃಷ್ಣನ್‌ ಸೇರಿದಂತೆ ಹಲವು ಚಿಂತಕರು, ಹೋರಾಟಗಾರ್ತಿಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಹಿಳಾ ದಿನದ ಮಹತ್ವವನ್ನು ಹೆಚ್ಚಿಸಿದ್ದರು. ಈ ಬಾರಿ ಮಂಡ್ಯದ ಕಾರ್ಯಕ್ರಮಕ್ಕೆ ದೆಹಲಿ ಸಾಮಾಜಿಕ ಹೋರಾಟಗಾರ್ತಿ ಮತ್ತು ಚಿಂತಕಿ ಶಬ್ನಂ ಹಶ್ಮಿ ಮತ್ತು ಹೈದರಾಬಾದ್‌ನ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ರೂಪುಗೊಳ್ಳುವ ಮೊದಲು ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಸಂಘಟನೆಗಳ ವ್ಯಾಪ್ತಿಯಲ್ಲಿ ಮಾತ್ರ ಮಹಿಳಾ ದಿನಾಚರಣೆ ಆಚರಿಸುತ್ತಿದ್ದರು. ಆದರೆ ಈಗ ಅವರೆಲ್ಲರೂ ಒಟ್ಟಾಗಿ ಭಾಗವಹಿಸುವುದಲ್ಲದೇ ಅವರ ಸಂಘಟನೆಗಳ ವ್ಯಾಪ್ತಿಯಲ್ಲಿಯೂ ಸಹ ಆಚರಿಸುತ್ತಿದ್ದಾರೆ. ಎಲ್ಲರನ್ನು ಒಂದು ವೇದಿಕೆಗೆ ತಂದ ಶ್ರೇಯ ಈ ವೇದಿಕೆಗೆ ಸಲ್ಲುತ್ತದೆ.

ಪ್ರತಿ ವರ್ಷವೂ ಎರಡು ದಿನ ಕಾರ್ಯಕ್ರಮ ನಡೆಯುತ್ತಿದೆ. ಅದಕ್ಕು ಮೊದಲೇ ಆರು ತಿಂಗಳಿನಿಂದ ಕಾರ್ಯಕ್ರಮದ ತಯಾರಿ ನಡೆದಿರುತ್ತದೆ. ಯಾವ ಊರಿನಲ್ಲಿ ಕಾರ್ಯಕ್ರಮ ನಡೆಯುತ್ತದೆಯೇ ಅಲ್ಲಿಯ ಸಂಘಟನೆಗಳೊಂದಿಗೆ ಸಭೆ, ಆ ಊರಿನ ಮಹಿಳಾ ಸಮಸ್ಯೆಯ ಕುರಿತು ಚರ್ಚೆ, ಕಾರ್ಯಗಾರ, ಪ್ರಚಾರಾಂದೋಲನಗಳು ನಡೆಯುತ್ತವೆ. ಸಾಮಾನ್ಯವಾಗಿ ಕಾರ್ಯಕ್ರಮದ ಮೊದಲ ದಿನ ಮಹಿಳಾ ಸಮಸ್ಯೆಗಳ ಪ್ರಚಲಿತ ವಿಚಾರದ ಕುರಿತು ವಿಚಾರ ಸಂಕಿರಣ ಮತ್ತು ಕಪ್ಪುಡುಗೆಯಲ್ಲಿ ಮಹಿಳೆಯರು ಮೌನ ಪ್ರತಿಭಟನೆ ನಡೆಯುತ್ತದೆ. ಎರಡನೆಯ ದಿನ ಮೆರವಣಿಗೆ ಮತ್ತು ಬಹಿರಂಗ ಸಮಾವೇಶ ಜರುಗುತ್ತದೆ.

ಪ್ರಚಾರಾಂದೋಲನ

ಸಮತೆಯೆಡೆಗೆ ನಮ್ಮ ನಡಿಗೆ, ನನ್ನ ಮತ ನನ್ನ ಆಯ್ಕೆ, ಇರಲಿ ಹೆಣ್ಣೋಟಕ್ಕೆ ಹೆಗ್ಗಳಿಕೆ ಎಂಬ ವಿಷಯದ ಸುತ್ತಾ ಧಾರವಾಡದ ಮಹಿಳಾ ದಿನ ನಡೆದರೆ, ಕೊಪ್ಪಳದಲ್ಲಿ ಸಮತೆಯೆಡೆಗೆ ನಮ್ಮ ನಡಿಗೆ, ನಮ್ಮ ಮಗಳು ಜಗದ ಬೆಳಕು, ನಮ್ಮ ದೇಹ ನಮ್ಮ ಹಕ್ಕು ಎಂಬ ವಿಷಯದ ಸುತ್ತಾ ಕೇಂದ್ರೀಕರಿಸಿತ್ತು. ಈ ಬಾರಿಯ ಮಂಡ್ಯದ ಮಹಿಳಾ ದಿನಾಚರಣೆಯಲ್ಲಿ ಗಟ್ಟಿ ದನಿ, ದಿಟ್ಟ ನಡೆ, ಘನತೆವೆತ್ತ ಬದುಕು ವಿಷಯದ ಕುರಿತು ನಡೆಯುತ್ತಿದೆ.

ಪ್ರತಿ ವರ್ಷವೂ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಮುಟ್ಟು, ಮಹಿಳಾ ಮೀಸಲಾತಿ, ಇತ್ಯಾದಿ ವಿಚಾರಗಳ ಕುರಿತು ಚಿಕ್ಕ ಪುಸ್ತಿಕೆಗಳನ್ನು ಮುದ್ರಿಸಿ ಜನರಿಗೆ ತಲುಪಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಬೀದಿನಾಟಕಗಳು, ಹಾಡುಗಳ ಮೂಲಕ ಜಾಗೃತಿ ಮೂಡಿಸುತ್ತಾ ಕೇವಲ ಎರಡು ದಿನ ಮಹಿಳಾ ದಿನಚರಣೆ ಮಾಡದೇ ಇದನ್ನೊಂದು ನಿರಂತರ ತಿಳಿವಿನ ಪ್ರಕ್ರಿಯೆಯಾಗಿ ವೇದಿಕೆ ಕೆಲಸ ಮಾಡುತ್ತಿದೆ.

ದುಡಿಯುವ ಮಹಿಳೆಯರ ದಿನ ಎಂದೇ ಖ್ಯಾತಿಯಾದ ಅಂತರಾಷ್ಟ್ರೀಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸುತ್ತಾ, ಜಾಗೃತಿ ಮೂಡಿಸುತ್ತಾ ವೇದಿಕೆ ಆಚರಿಸುತ್ತಿದೆ. ಸಾವಿರಾರು ಜನ ಪಾಲ್ಗೊಂಡು ಅರಿವಿನ ಪಯಣದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಈ ಬಾರಿಯ ಮಾರ್ಚ್‌ 07ರ ಶನಿವಾರ ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ “ಮಹಿಳಾ ಬದುಕು ಪಲ್ಲಟಗಳು” ವಿಷಯದ ಕುರಿತು ವಿಚಾರ ಸಂಕಿರಣ ನಡೆಯುತ್ತಿದೆ. ಮಾರ್ಚ್‌ 08ರ ಭಾನುವಾರ ನಗರದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಲಿದ್ದು, ರೈಲ್ವೇ ನಿಲ್ದಾಣದ ಬಳಿಯ ಸಿಲ್ವರ್‌ ಜ್ಯುಬಿಲಿ ಪಾರ್ಕ್‌‌ನಲ್ಲಿ ಬಹಿರಂಗ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಹ್ವಾನ ಪತ್ರಿಕೆ ಕೆಳಗಿವೆ ಓದಿ.

ಎಲ್ಲರೂ ತಪ್ಪದೇ ಬಂದು ಭಾಗವಹಿಸಿ… ನಿಮ್ಮ ಆಗಮನದ ನಿರೀಕ್ಷೆಯಲ್ಲಿದ್ದೇವೆ#international_women's_day#march_7_8_Mandya#ಅಂತಾರಾಷ್ಟ್ರೀಯ_ಮಹಿಳಾ_ದಿನಾಚರಣೆ

Posted by Karnataka Rajya Mahila Dourjanya virodhi Okkuta on Saturday, February 29, 2020

ಮಹಿಳೆಯರು ಕೂಡ ನಮ್ಮಂತೆಯೇ ಎಲ್ಲಾ ಹಕ್ಕುಗಳನ್ನು ಹೊಂದಿರುವ ಸಮಾನ ಜೀವಿಗಳು ಎಂದು ಸಮಾಜ ನೋಡುವಂತೆ ಮಾಡುವ ಈ ಅರಿವಿನ ಪಯಣಕ್ಕೆ ನೀವೂ ಜೊತೆಗೂಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...