Homeಅಂಕಣಗಳುದುಸ್ಥಿತಿಯಲ್ಲಿ ಬದುಕುತ್ತಿರುವ ಗುಬ್ಬಿ ವೀರಣ್ಣನ ಸೊಸೆ ರಂಗ ಕಲಾವಿದೆ ಶಾಂತಮ್ಮ

ದುಸ್ಥಿತಿಯಲ್ಲಿ ಬದುಕುತ್ತಿರುವ ಗುಬ್ಬಿ ವೀರಣ್ಣನ ಸೊಸೆ ರಂಗ ಕಲಾವಿದೆ ಶಾಂತಮ್ಮ

- Advertisement -
- Advertisement -
ಎಲೆಮರೆ-22

ರಾಮನಗರದ ಜಾನಪದ ಲೋಕ ಆಯೋಜಿಸಿದ್ದ ಲೋಕೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಹೋಗಿದ್ದೆ. ಭಾಷಣ ಮುಗಿಸಿಕೊಂಡು ಊರಿಗೆ ಮರಳುವಾಗ, ರಾಮನಗರದ ಪ್ರಜಾವಾಣಿ ಪತ್ರಕರ್ತ ರುದ್ರೇಶ್ ನಿಮಗೆ ಒಬ್ಬರನ್ನು ಪರಿಚಯಿಸುತ್ತೇನೆ ಬನ್ನಿ ಎಂದರು. ಯಾರು ಏನು ಎಂದು ಕೇಳದೆ ಸರಿ ಆಗಲಿ ಎಂದು ಆತನ ಬೈಕ್ ಏರಿ ಹೊರಟೆ. ಸಂದಿಗೊಂದಿ ಸುತ್ತಿಕೊಂಡು ಒಂದು ಪುಟ್ಟ ಮನೆಗೆ ಕರೆತಂದರು. ಇಳಿವಯಸ್ಸಿನ ಅಜ್ಜಿಯೊಬ್ಬರು ಬಂದು ಗೇಟ್ ತೆಗೆದು ಒಳ ಕರೆದರು. ಅದೊಂದು ಪುಟ್ಟ ಮನೆ. `ಬಾ ಮಗನೆ ಕೂತುಕೋ..’ ಎಂದು ಕುಡಿಯಲು ನೀರು ಕೊಟ್ಟರು. ಆಗ ರುದ್ರೇಶ ಇವರು ಶಾಂತಮ್ಮ ಅಂತ. ಗುಬ್ಬಿ ವೀರಣ್ಣನ ಮಗ ನಟ ಜಿ.ವಿ.ಚನ್ನಬಸಪ್ಪ ಅವರ ಮಡದಿ, ಇಂದು ಯಾರ ಆಸರೆಯೂ ಇಲ್ಲದಂತೆ ಬದುಕುತ್ತಿದ್ದಾರೆ ಎಂದು ಹೇಳಿದರು. ಶಾಂತಮ್ಮ ತಮ್ಮ ವೃತ್ತಿಜೀವನದ ಫೋಟೋಗಳ ಆಲ್ಬಮ್ ಮುಂದಿಟ್ಟರು. ನಾನು ಈ ಫೋಟೋಗಳನ್ನು ನೋಡುತ್ತಾಹೋದಂತೆ ಅಲ್ಲಲ್ಲಿ ತಡೆದು ಶಾಂತಮ್ಮ ಒಂದೊಂದು ಫೋಟೋದ ಸಂದರ್ಭವನ್ನು ವಿವರಿಸತೊಡಗಿದರು. ಮುಖದಲ್ಲಿ ಒಮ್ಮೊಮ್ಮೆ ಮಿಂಚು, ಮತ್ತೊಮ್ಮೆ ಕಡುದುಃಖ. ಹಳೆಯ ನೆನಪುಗಳು ಉತ್ಸಾಹ ಹೆಚ್ಚಿಸಿ ಒಮ್ಮೆ ಜೋರು ಮಾತಾಡಿದರೆ, ಮತ್ತೊಮ್ಮೆ ಪಿಸುದನಿಯಲ್ಲಿ ಅದನ್ನೆಲ್ಲಾ ಹೇಳಬಾರದು ಮರಿ ಎಂದು ಕಣ್ಣಲ್ಲಿ ನೀರು ತರುತ್ತಿದ್ದರು. ಒಂದು ಗಂಟೆಯ ಮಾತುಕತೆ ನನ್ನನ್ನು ಎಪ್ಪತ್ತು ಎಂಬತ್ತರ ದಶಕದ ರಂಗಭೂಮಿಯ ವಾತಾವರಣವನ್ನು ಕಣ್ಮುಂದೆ ಸೃಷ್ಟಿಸಿತು. ಸಾವಿರಾರು ನಾಟಕಗಳಲ್ಲಿ ಅಭಿನಯಿಸಿ ದುಸ್ಥಿತಿಯಲ್ಲಿ ಬದುಕುತ್ತಿರುವ ಶಾಂತಮ್ಮನ ಬಗೆಗೆ ದುಃಖವೂ ಆಯಿತು.

ಒಮ್ಮೆ ಪ್ರಜಾಮತ ಎನ್ನುವ ಪತ್ರಿಕೆಯಲ್ಲಿ ವಾದಿರಾಜ, ಜಯಂತಿ, ರಾಧಾ-ರುಕ್ಮಿಣಿ (ನಟಿ ಶೃತಿ ಅವರ ತಾಯಿ) ಯವರ ಫೋಟೋ ಪ್ರಕಟವಾಗಿರುತ್ತದೆ. ಪುಟ್ಟ ಹುಡುಗಿ ಪೇಪರ್ ನೋಡುತ್ತಾ ಈ ನಟನಟಿಯರ ಚಿತ್ರ ನೋಡುತ್ತಾಳೆ. ನಾನು ಇವರ ಹಾಗೆ ನಟಿಯಾಗಬೇಕೆಂದು ಕನಸು ಕಾಣುತ್ತಾಳೆ. ಈ ಕನಸಿನ ದಾರಿ ಹಿಡಿದು 1964 ರಲ್ಲಿ 13ನೇ ವಯಸ್ಸಿನಲ್ಲಿ ಲವ-ಕುಶ ನಾಟಕದಲ್ಲಿ ಬಾಲನಟಿಯಾಗಿ ಆ ಹುಡುಗಿ ನಟಿಸಿ ಎಲ್ಲರ ಗಮನ ಸೆಳೆಯುತ್ತಾರೆ. ಈ ಹುಡುಗಿಯೇ ಮುಂದೆ ಗುಬ್ಬಿ ವೀರಣ್ಣ ನಾಟಕ ಕಂಪನಿ ಸೇರಿ 40 ವರ್ಷಗಳ ಕಾಲ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸುತ್ತಾಳೆ. ಆ ಪುಟ್ಟ ಹುಡುಗಿಯೇ ಇಂದು ರಾಮನಗರದಲ್ಲಿ ಒಂಟಿಜೀವನ ನಡೆಸುತ್ತಿರುವ ರಂಗನಟಿ ಶಾಂತಮ್ಮ.

ರಾಮನಗರದ ಬಳಿ ಇರುವ ಪುಟ್ಟ ಊರು ಅರ್ಚಕರಳ್ಳಿಯಲ್ಲಿ ನಿಂಗಯ್ಯ ಮತ್ತು ಪುಟ್ಟಮ್ಮನ ಮಗಳಾಗಿ ಶಾಂತಮ್ಮ 1951 ರಲ್ಲಿ ಜನಿಸಿದರು. `ಮೊದಲ ನಾಟಕ ಲವ-ಕುಶದಲ್ಲಿ ಬಾಲ ನೃತ್ಯಕಲಾವಿದೆಯಾಗಿ ಅಭಿನಯಿಸಿದಾಗ ಮೊದಲು ನನಗೆ ಬಣ್ಣ ಹಚ್ಚಿದ್ದು ರಾಧಮ್ಮ. ನನ್ನ ಮೊದಲ ಸಂಬಳ ಹದಿನೈದು ರೂಪಾಯಿ. ಅಂದು ಆರಂಭವಾದ ಕಲಾ ಬದುಕು ಸುದೀರ್ಘ ನಲವತ್ತೆರಡು ವರ್ಷ ನಾಟಕ ಕಂಪನಿ ಬಿಟ್ಟರೆ ಬೇರೆ ಲೋಕವೆ ಗೊತ್ತಿರಲಿಲ್ಲ’ ಎನ್ನುತ್ತಾರೆ. ಮೈಸೂರು ಮಹಾರಾಜರ ಸಮ್ಮುಖದಲ್ಲಿ `ಸಾಹುಕಾರ’ ನಾಟಕದಲ್ಲಿ ಬಾಲಕಲಾವಿದೆಯಾಗಿ ನರ್ತನ ಮಾಡಿದ್ದು ಹಾಗೂ ವರನಟ ಡಾ. ರಾಜಕುಮಾರ್ ಅವರಿಂದ ನೆನಪಿನ ಕಾಣಿಕೆ ಸ್ವೀಕರಿಸಿದ್ದು ನನ್ನ ಜೀವನದ ಮರೆಯಲಾರದ ಕ್ಷಣಗಳು’ ಎನ್ನುತ್ತಾರೆ.

ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ನಾಟಕದಲ್ಲಿ ಪಾರ್ವತಿಯಾಗಿ, ಸಂಸಾರನೌಕೆಯಲ್ಲಿ ಗಿರಿಜೆಯಾಗಿ, ಆರ್. ನಾಗರತ್ನಮ್ಮ ಅವರ ಶ್ರೀಕೃಷ್ಣ ಗಾರುಡಿಯಲ್ಲಿ ಸಹದೇವನ ಪಾತ್ರ, ಮುದುಕನ ಮದುವೆಯಲ್ಲಿ ಕಾವೇರಿ, ಕಲ್ಯಾಣಿ, ಗೋಮುಖ ವ್ಯಾಘ್ರದಲ್ಲಿ ತುಳಸಿ, ಚನ್ನಪ್ಪ ಚನ್ನೇಗೌಡ ಪಾತ್ರದಲ್ಲಿ ಪಾರ್ವತಿ, ಶ್ರೀಕೃಷ್ಣ ಲೀಲೆಯ ಲಲಿತ, ಸುಂದರಿ, ಶರಣ ಬಸವೇಶ್ವರ ನಾಟಕದ ಗಂಗಾಂಬಿಕೆ, ಸಾಹುಕಾರ ನಾಟಕದ ಇಂದುಮತಿ, ಅಣ್ಣ ತಮ್ಮ ನಾಟಕದಲ್ಲಿ ಹಾಸ್ಯ ಕಲಾವಿದೆಯಾಗಿ ಲಕ್ಷ್ಮಿ, ಶೋಭಾ ಪಾತ್ರ, ಲವ-ಕುಶ ನಾಟಕದಲ್ಲಿ ಸೀತೆಯಾಗಿ, ಹೀಗೆ ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ಭಕ್ತಿ ಪ್ರಧಾನ ಎಲ್ಲಾ ಬಗೆಯ ನಾಟಕಗಳಲ್ಲಿ ಎಲ್ಲಾ ಬಗೆಯ ಪಾತ್ರಗಳಿಗೆ ಶಾಂತಮ್ಮ ಜೀವ ತುಂಬಿ ನಟಿಸಿದರು.

`ರಾಜ್ಯದಾದ್ಯಂತ ಸಾವಿರಾರು ಪ್ರದರ್ಶನಗಳನ್ನು ನೀಡಿದ್ದೇನೆ. ಒಮ್ಮೊಮ್ಮೆ ದಿನಕ್ಕೆ ಮೂರು ಬಾರಿ ಪ್ರದರ್ಶನ ನೀಡಿರುವೆ. ಗುಬ್ಬಿ ವೀರಣ್ಣ ಅವರ ಹಿರಿಯ ಪುತ್ರಿ ಜಿ.ವಿ. ಸುವರ್ಣಮ್ಮ ಅವರೊಂದಿಗೆ `ಪಾದುಕ ಪಟ್ಟಾಭಿಷೇಕ’ದಲ್ಲಿ ಅವರು ಮಂಥರೆಯಾಗಿ ನಾನು ಸೀತೆ, ಕೈಕೆಯಾಗಿ ನಟಿಸಿದ್ದೆ. ಯೋಗಾನರಸಿಂಹಮೂರ್ತಿ ಅವರ ಕಂಪನಿಯಲ್ಲಿ `ಬೀದಿ ಕಾಮಣ್ಣ’ ನಾಟಕದಲ್ಲಿ ಎಂ.ಎಸ್.ಸತ್ಯ ಅವರ ಜೋಡಿಯಾಗಿ, ಸದಾರಮೆ ನಾಟಕದಲ್ಲಿ ನರಸಿಂಹರಾಜು, ಶಾಂತಕುಮಾರ ರಾಯರು, ಜಿ.ವಿ.ಚನ್ನಬಸಪ್ಪ, ಜಿ.ವಿ.ರಾಜಣ್ಣ (ಗುಬ್ಬಿ ವೀರಣ್ಣ ಅವರ ಪುತ್ರರು), ನಟ ರಾಮಕೃಷ್ಣ, ಚೋಮನದುಡಿ ವಾಸುದೇವ, ಧೀರೇಂದ್ರ ಗೋಪಾಲ್, ಸುಂದರ ಕೃಷ್ಣ ಅರಸ್, ಸುಧೀರ್, ರಾಜಾನಂದ್, ಗಾಜಿನ ಮನೆ ನಾಟಕದಲ್ಲಿ ಚಿಂದೋಡಿ ಲೀಲಾ, ಉಮಾಶ್ರೀ, ರಾಧಾ-ರುಕ್ಮಿಣಿ, ಶ್ರೀಲಲಿತಾ ಸೇರಿದಂತೆ ಹಲವರೊಂದಿಗೆ ಅಭಿನಯಿಸಿದ್ದೇನೆ’ ಎಂದು ಶಾಂತಮ್ಮ ಹಳೆ ನೆನಪುಗಳನ್ನು ಮೆಲುಕು ಹಾಕುತ್ತಾರೆ.

ಸಾಮಾಜಿಕ ನಾಟಕಗಳಾದ `ವರ ನೋಡಿ ಹೆಣ್ಣು ಕೊಡು’ ನಾಟಕದಲ್ಲಿ ರತ್ನನ ಪಾತ್ರ, `ಚನ್ನಪ್ಪ ಚನ್ನಗೌಡ’ ನಾಟಕದಲ್ಲಿ ಪಾರ್ವತಿ ಪಾತ್ರದಲ್ಲಿ ಶಾಂತಮ್ಮ ತುಂಬಾ ಜನಪ್ರಿಯರಾಗಿದ್ದರು. `ಮೂರು ಬಾರಿ ಅಣ್ಣಾವ್ರನ್ನ ನೋಡಿ ಮಾತಾಡಿಸಿದ್ದೆ. ಫಾರಿನ್‍ಗೆ ಹೋಗಬೇಕಾದ್ರೆ ದಾವಣಗೆರೆ ಕ್ಯಾಂಪಿಗೆ ಬಂದಿದ್ರು, ದೇವತಾ ಮನುಷ್ಯ ಶೂಟಿಂಗ್‍ನಲ್ಲಿ ಹೇಳಿಕಳಿಸಿದ್ರು ಆಗ ನಮ್ಮ ಯಜಮಾನರು ಮತ್ತು ನಾನು ತುಂಬಾ ಹೊತ್ತು ಮಾತಾಡಿದ್ವಿ’ ಎಂದು ಡಾ. ರಾಜಕುಮಾರ್ ಅವರ ಭೇಟಿಯ ನೆನಪುಗಳನ್ನು ಹೇಳುತ್ತಾರೆ. ಯಾವುದೇ ನಾಟಕದಲ್ಲಿ ಇಂತ ಪಾತ್ರ ಮಾಡೋರಿಲ್ಲ ಅಂದ್ರೆ ಸಾಕು ಯಾವುದೇ ಪಾತ್ರವಿರಲಿ ಅದನ್ನು ನಿರ್ವಹಿಸಿ ಸೈ ಅನ್ನಿಸಿಕೊಂಡಿದಿನಿ, ಅಷ್ಟರಮಟ್ಟಿಗೆ ರಂಗಭೂಮಿಯಲ್ಲಿ ನಾನು ಪಳಗಿದ್ದೆ, ಈಗಲೂ ಕೃಷ್ಣ ಲೀಲೆ ನಾಟಕದ ರಾಧೆ ಪಾತ್ರದ ಲಂಗವನ್ನು, ಮಂತ್ರಿಣಿ ಪಾತ್ರದ ಡ್ರೆಸ್ಸುಗಳನ್ನು, ಆಗಿನ ವಿಗ್ಗುಗಳನ್ನು ನೆನಪಿಗಾಗಿ ಕಾಪಾಡಿರುವೆ’ ಎನ್ನುತ್ತಾರೆ.

ನಾಟಕಗಳ ಅಭಿನಯದಲ್ಲಿ ಪರಸ್ಪರರು ಆಕರ್ಷಣೆಯಾಗಿ 1971 ರಲ್ಲಿ ಗುಬ್ಬಿ ವೀರಣ್ಣನ ಮಗ ಜಿ.ವಿ.ಚನ್ನಬಸಪ್ಪ ಅವರನ್ನು ಮದುವೆಯಾದರು. ಇದು ಎರಡನೆ ಮದುವೆಯಾದ ಕಾರಣ ಶಾಂತಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಲು ಆಗಲಿಲ್ಲ. ಎಲ್ಲರೂ ನನಗೆ ಮೋಸ ಮಾಡಿದರು ಎಂದು ಶಾಂತಮ್ಮ ದುಃಖಿಸುತ್ತಾರೆ. ಈಗಲೂ ಅವಕಾಶ ಸಿಕ್ಕರೆ ನಟಿಸಲು ಸಿದ್ಧ ಎನ್ನುವ ಸ್ವಾಭಿಮಾನಿ ಶಾಂತಮ್ಮ ನಿಜಕ್ಕೂ ಕಡುಕಷ್ಟದಲ್ಲಿ ಬದುಕುತ್ತಿದ್ದಾರೆ. ಪ್ರಜಾವಾಣಿ ಪತ್ರಕರ್ತ ರುದ್ರೇಶ್ ಶಾಂತಮ್ಮಗೆ ಒಂದಷ್ಟು ಆಸರೆಯಾಗಿದ್ದಾರೆ. ತಾಂತ್ರಿಕ ಕಾರಣದಿಂದ ಕಳೆದ ಮೂರು ತಿಂಗಳಿಂದ ಕಲಾವಿದರ ಮಾಸಾಶನವೂ ಬರುತ್ತಿಲ್ಲ. ಈ ವಿಷಯವನ್ನು ಕವಿ ನಾಗೇಂದ್ರ ಪ್ರಸಾದ್ ಅವರ ಗಮನಕ್ಕೆ ತಂದಾಗ ಶಿವಾರ್ಜುನ ಸಿನೆಮಾದ ನಿರ್ಮಾಪಕ ಶಿವಾರ್ಜುನ ಅವರಿಂದ ಒಂದಷ್ಟು ನೆರವು ಕೊಡಿಸಿದ್ದಾರೆ. ಇಂತಹ ರಂಗಕಲಾವಿದೆಗೆ ನೆರವಾಗುವ ಮನಸ್ಸಿದ್ದವರು ಖಂಡಿತಾ ಸಹಾಯ ಮಾಡಬಹುದು. ಎಲೆಮರೆಕಾಲಂನಲ್ಲಿ ಈ ತೆರನಾಗಿ ಸಹಾಯವನ್ನು ಯಾರಿಗೂ ಕೋರಿಲ್ಲ, ಆದರೆ ಶಾಂತಮ್ಮನ ದುಸ್ಥಿತಿಗೆ `ನ್ಯಾಯಪಥ’ವೂ ನೆರವಿಗೆ ಬರಬೇಕೆನ್ನುವ ಕಾರಣಕ್ಕೆ ಶಾಂತಮ್ಮನ ಬ್ಯಾಂಕ್ ವಿವರ ಮತ್ತು ಅವರ ಮೊಬೈಲ್ ಸಂಖ್ಯೆಯನ್ನು ಕೊಡುತ್ತಿದ್ದೇವೆ. ಈ ಇಳಿಗಾಲದಲ್ಲಿ ಮನಸ್ಸಿದ್ದವರು ಶಾಂತಮ್ಮನಿಗೆ ನೆರವಾಗಿ.

ಬ್ಯಾಂಕ್ ಖಾತೆ ವಿವರ:
Name: N.Shanthamma
A/C: 0593101026583
IFSC: CNRB0000593
Bank: CANARA BANK
Mobil: 9845643106

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...