Homeಅಂಕಣಗಳುದೊರೆಸ್ವಾಮಿ ಸನ್ಹೇಕ್ಕೋಗಿ ಕ್ಷಮೆ ಕೇಳಲೆ - ಯತ್ನಾಳ್‌ ಜೊತೆ ಯಾಹೂ ಮಾತುಕತೆ

ದೊರೆಸ್ವಾಮಿ ಸನ್ಹೇಕ್ಕೋಗಿ ಕ್ಷಮೆ ಕೇಳಲೆ – ಯತ್ನಾಳ್‌ ಜೊತೆ ಯಾಹೂ ಮಾತುಕತೆ

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಂಕೇತದಂತಿರುವ ದೊರೆಸ್ವಾಮಿಯವರ ಬಗ್ಗೆ ಅತ್ಯಂತ ಪ್ರೀತ್ಯಾಧರಗಳಿಂದ ಮಾತನಾಡಿರುವ ಬಿಜಾಪುರದ ಬಸನಗೌಡ ಪಾಟೀಲ ಯತ್ನಾಳ್ ಎಂಬ ಧೀಮಂತ ನಾಯಕನನ್ನು ಮಾತನಾಡಿಸಿ, ದೊರೆಸ್ವಾಮಿಯವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು ಅನ್ನಿಸಿತಲ್ಲಾ. ಆ ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: “ನಮಸ್ತೇ ಸದಾವತ್ಸಲೇ ಮಾತೃಭೂಮಿ….” “ಹಲೋ ಯಾರ್ರಿ”
“ನಾನಲೆ ಎಫ್.ಜೆ.ತಳವಾರ.”
“ಯಾರಂತ ಗೊತ್ತಾಗಲಿಲ್ರಿ.”
“ನಿಮ ತಂದಿ ಗೆಳಯ ಕಣೋ, ಯತ್ನಾಳ.”
“ಏನಾಗಬೇಕಿತ್ರಿ.”
“ಏನಿಲ್ಲಪ. ನಿನಕಡಿಂದ ನನಗ ಆಗಬೇಕಾದ್ದೇನಿಲ್ಲ. ನಿನ್ನ ಆರೋಗ್ಯ ಹೆಂಗದಾ.”
“ಯದುಕ್ರಿ ಹಾಂಗ ಕೇಳಕತ್ತಿರಿ.”
“ಯದಕಪ್ಪ ಅಂದ್ರಾ, ಇಲ್ಲಿ ದರವೊಬ್ಬರೂ ನಿನ್ನ ತೆಲಿ ಶುದ್ದಿಲ್ಲಂತ ಮಾತಾಡಕತ್ಯಾರ. ಅದಕ ನನಿಗ ಗಾಬರಿಯಾತು. ಆರಡಿ ಎತ್ತರಕ ವೀರಸಿಂಧೂರ ಲಕ್ಷ್ಮಣನಂಗಿದ್ದ. ಮುಂಜಾಲೆದ್ದು ಮೂರು ಎಮ್ಮಿ ಹಾಲಿಂಡತಿದ್ದ ನನ್ನ ಗೆಳೆಯನ ಮಗ ಇವುಗೇನಾತಪ ಅಂತ ಗಾಬರಾತಲೇ ಮಗನ.”
“ಯಾರೊ ಸುಳ್ಳು ಹೇಳ್ಯಾರ್ರಿ, ನನ್ನ ತಲಿಗೇನಾಗಿಲ್ಲ.”
“ಅಂದ್ರ ಮಿದುಳಿಗೇನೋ ಆಗೇತಿ ಅದಕ 23 ಕೇಸು ತೆಲಿ ಮೇಲದಾವು.”
“ಇಲ್ರಿ ಅವು ಸುಳ್ಳು ಕೇಸು. ಪ್ರಕೃತಿ ನೆಟ್ಟಗೈತಿ. ಅರಾಮದಿನಿ.”
“ಇರವಲ್ಯಾಕ, ಆದ್ರ ಸ್ವಾತಂತ್ರ ಹೋರಾಟಗಾರ ಶತಾಯುಷಿ ದೊರೆಸ್ವಾಮಿಗಳನ್ನ ಯದುಕ್ಕಲೆ ಬೈಯಕತ್ತಿಯಂತೆ.”
“ಬೋದಿಲ್ರೀ. ಅವ ಡೋಂಗಿ ಸ್ವಾತಂತ್ರ ಹೋರಾಟಗಾರ ಅಂದೀನಿ ಅಷ್ಟ.”
“ಮಗ ಸತ್ತಲೆ ನೀನು. ದೊರೆಸ್ವಾಮಿ ಅಂದ್ರೇನು. ನೀ ಅಂದ್ರೇನು. ಅವರ ಚಪ್ಪಲಿ ಬಿಡೋ ಜಾಗದಾಗ ನಿಂದ್ರಕ್ಕೆ ಲಾಯಕ್ಕಿಲ್ಲದ ಮನುಶ್ಯದಿ ನೀನು. ಯದುಕಲೆ ಅಂಗಂದಿ.”
“ಆತ ಕಾಂಗ್ರೆಸ್ಸಿನ ಪರ ಮಾತಾಡತಾರ.”
“ಸಿದ್ದರಾಮಯ್ಯನ ಸರಕಾರಿದ್ದಾಗ ಅವರ ಸರಕಾರನೂ ಟೀಕಿ ಮಾಡಿದರಲ್ಲಾ. ಆಗ ನಿನ್ನ ಕಿವಿಗೇನು ಗೂಟಬಡಿಕೊಂಡಿದ್ದೇನು.”
“ಆ ಟೀಕಿನೂ ಡೋಂಗಿರಿ. ಅವುರು ಕಾಂಗ್ರೆಸಿಗರ ಪರ”
“ಅವರ ಪರ ಅಲ್ಲಲೇ, ಯಾರು ಜನಕ್ಕೆ ಒಳ್ಳೇದು ಮಾಡ್ತರೋ ಅವುರ ಪರ ಇರತರ. ತಲಿಕೆಟ್ಟ ಹಲಕಟ್ಟವುರ ಪರ ಇರೂದಿಲ್ಲವುರು ತಿಳಿತಿಲ್ಲಾ.”
“ಅವುರು ಪಾಕೀಸ್ತಾನದ ಪರ ಅವುರ.”
“ಪಾಕಿಸ್ತಾನದ ಪರ ಯದಕ್ಕಿರತರಲೇ. ನೀವು ಏನದೀರಲ್ಲಾ, ಅಂದ್ರ ಬಿಜೆಪಿಗಳು ನಿಮಗಿರುವಷ್ಟು ಪಾಕಿಸ್ತಾನದ ಪ್ರೀತಿ ನಮ ದೇಶದಾಗ ಯಾರಿಗೂ ಇಲ್ಲ ನೋಡು. ಅಲ್ಲಲೆ ದಿನ ಬೆಳಗಾತು ಅಂದ್ರ ಪಾಕಿಸ್ತಾನ ಪಾಕಿಸ್ತಾನ ಅನ್ನಕತ್ತೀರಲ್ಲಾ, ಆ ದೇಶ ಕಂಡ್ರ ಅದೇನು ಪ್ರೀತಿಲೆ ನಿಮಗೆ.”
“ಪ್ರೀತಿಯಲ್ಲ ದ್ವೇಷ.”
“ದ್ವೇಷ ಅಲ್ಲಲೆ ಪ್ರೀತಿ. ನಿಮ್ಮ ಪ್ರಧಾನಿ ಏನದಾನಲ್ಲ ಮೋದಿ, ಆತ ಚೊಣಬಿ ಹೊಕ್ಕಂಗ ದೌಡು ಪಾಕಿಸ್ತಾನಕ್ಕೋಗಿ ಲಗೂನು ಬಂದನಲ್ಲ ಯದಕ್ಕೋಗಿದ್ದಾ. ದ್ವೇಷ ಇದ್ರೋತಿದ್ನೇನವ. ಪಾಪ ಆ ದೇಶದ ಪ್ರಧಾನಿ ಮಗಳ ಲಗ್ನಕ್ಕೋಗಿ ಬಿರಿಯಾನಿ ತಿಂದ. ಇನ್ನ ಮುಂದೆ ಹಿಂಗೇ ಇರೂನು ಅಂತೇಳಿ ಬಂದ. ಅದಕ್ಕೂ ಮೊದ್ಲು ವಾಜಪೇಯಿ, ನಿಮ್ಮ ವಿಜಯ ಸಂಕೇಶ್ವರನಂಗೆ ಬಸ್ ಓಡಿಸಿದ್ದ. ಈ ಕಡಿ ಬಸ್ ಹೋತು, ಆಕಂಡಿದ ಪಾಕಿಸ್ತಾನದ ಸೈನಿಕರು ಒಳಬಂದ್ರು. ಐದು ನೂರು ಮಂದಿ ನಮ್ಮ ಸೈನಿಕರು ತೀರಿಕೊಂಡ್ರು. ಮಕ್ಕಳಾ, ವಿಜಯೋತ್ಸವ ಮಾಡ್ತೀರಿ, ಇತಿಹಾಸಗೊತ್ತೇನಲೆ ನಿನಗ.”
“ಗೊತ್ತೈತಿ.”
“ಗೊತ್ತಿದ್ರ ದೊರೆಸ್ವಾಮಿ ಹೋರಾಟವ ಡೋಂಗಿ ಅಂತಿರಲಿಲ್ಲ ನೀನು. ಕ್ವಿಟ್ ಇಂಡಿಯಾ ಚಳುವಳೀಲಿ ನೀ ಹುಟ್ಟಿದ್ದೇನಲೇ? ಆಗಲೇ ದೊರೆಸ್ವಾಮಿ ಜೈಲಿಗೋಗಿದ್ರು.”
“ಆ ಚಳುವಳಿ ಇಲ್ದಿದ್ರೆ ಅವುರು ಜೈಲಿಗೋತಿರಲಿಲ್ಲ.”
“ತೆಲಿಯಾಗೇನು ಮೆದುಳೈತೋ ಎಮ್ಮಿ ಸಗಣಿ ಐತೋ ನಿನಗ. ಅಲ್ಲಪ್ಪ ಜೈಲಿಗೋಗದಿದ್ರೆ ಚಳುವಳಿ ಮಾಡತಿದ್ರು ಗೊತ್ತೇನು.”
“ಅವರ ಚಳುವಳಿನೆ ಡೋಂಗಿ.”
“ಇನ್ಯಾರದು ಖರೆ ಐತಿ ಹೇಳು ನೋಡೊನು.”
“ವೀರ ಸಾವರ್ಕರ ಚಳುವಳಿ.”
“ಲೇ ಮಂಗ್ಯನ ಮಗನ. ಆ ಸಾವರಕರ ಯಾರು ಗೊತ್ತೇನಲೆ. ಅಂಡಮಾನ್ ಜೈಲಾಗೆ ಇರಕ್ಕಾಗುದಿಲ್ಲಂತ ಹೇಳಿ ಬ್ರಿಟಿಷರಿಗೆ ಮೂರು ಬಾರಿ ಕ್ಷಮಾಪಣೆ ಪತ್ರ ಬರದು, ಬಿಡುಗಡೆಯಾಗಿ ನಾಗಪುರಕ್ಕೆ ಬಂದು ಖೋಲಿ ಹಿಡುದು ಕುಂತವ. ಹಿಂದೂಮಹಾಸಭಾ, ವಿಶ್ವಹಿಂದೂ ಪರಿಷತ್ ಮಾಡಿ ಇವತ್ತು ನಿನ್ನಂತವರ ತೆಲಿಕೆಟ್ಟು ಮಸರಗಡಿಗಿಯಾಗಂಗೆ ಮಾಡಿ ಹೋದವ. ನೀ ಮದುಲು ಹಿಂಗರಲಿಲ್ಲ, ಭಾಳ ಸಂಭಾವಿತಿದ್ದಿ. ಯಾವಾಗ ನಾಗಪುರಕ್ಕೆ ಕೇಳಂಗೆ ಮಾತಾಡಕತ್ತಿದ್ಯೋ ಆಗ ಹಿಂಗಾದಿ. ಒಂದು ತಿಳಕೊ ಮಗನ.”
“ಏನೇಳ್ರಿ.”
“ನೀ ಏಟೇ ವದರಿದ್ರು ಮಂತ್ರಿಯಾಗೂದಿಲ್ಲಲೆ.”
“ಯದಕ್ರಿ.”
“ದೊರೆಸ್ವಾಮಿ ಶಾಪ ಕಣಲೆ. ಅದಕ್ಕೂ ಮೊದ್ಲು ಶೋಭಾ ಕರಂದ್ಲಾಜೆ ಶಾಪ ಕೊಟ್ಟಿದ್ಲು.”
“ಹೌದೇನ್ರೀ.”
“ಹೌದಲೇ, ನೀ ಎಡೂರಪ್ಪ ಶೋಭಾ ಕರಂದ್ಲಾಜೆ ತೆಕ್ಕಿಬಡಕೊಂಡಿದ್ರು ನಾನೇ ನೋಡಿದೆ ಅಂತ ಚಿಕ್ಕಮಗಳೂರಾಗ ಹೇಳಿ ಹೋದಿ. ಅದು, ಶೋಬನ ಕಿವಿತಲುಪ್ತು, ಅದು ಎಡೂರಪ್ಪನ ಕಿವಿ ಕೂಡ ಆಗಿತ್ತು.”
“ಯಾರೊ ಚಾಡಿ ಹೇಳ್ಯಾರ್ರಿ.”
“ಇಲ್ಲಿ ಕೇಳಿಸಿಕೊಂಡಿದ್ದ ಅಲ್ಲೇಳಿದ್ರ ಚಾಡಿ ಯಂಗಲೆ ಆತದೆ. ಸುಳ್ಳು ಹೇಳಿದ್ರೆ ಅದು ಚಾಡಿಯಾಕ್ಯತಿ- ತಿಳಿತೇನಲೇ. ಅಂತೂ ನೀ ಎಡೂರಪ್ಪನ ಸಂಪುಟ ಸೇರೋದು ಸುಳ್ಳಾತು.”
“ಮಂತ್ರಿನೆ ಆಗಬೇಕು ಅನ್ನದೇನೂ.”
“ಅಲ್ಲಲೆ ಖಬರಗೇಡಿ ಕೇಂದ್ರದಾಗ ಮಂತ್ರಿಯಾಗಿದ್ದವ ರಾಜ್ಯದಾಗೂ ಮಂತ್ರಿಯಾಗಬೇಕಲ್ಲೇನು.”
“ಹೌದ್ರಿ.”
“ಮತ್ತ ಆಗಿಲ್ಲಂದ್ರ ನೀ ಆಯೋಗ್ಯದಿ, ನಾಲಾಯ್ಕದಿ, ಒಟ್ಟ ಶಾಸಕ ಆಗಕ್ಕೂ ಯೋಗ್ಯಲ್ಲ ನೀನು ಅಂದಂಗಾತು.”
“ನನ್ನ ಯೋಗ್ಯತೆ ಬಗ್ಗೆ ಮಾತಾಡಬೇಡಿ.”
“ಇಲ್ಲಪ ನಿನ್ನ ಯೋಗ್ಯತೆ ಬಾಳ ಬೇಷೈತಿ, ಅಲ್ಲಲೆ ಮನ್ನಿ ಇಡೀ ಕರನಾಟಕನೆ ನಿನ್ನ ವಿರುದ್ಧ ಪ್ರತಿಭಟನೆ ಮಾಡ್ತು. ವಿಜಾಪುರದ ಗೌರವನೆ ಹೋತಲ್ಲಲೇ. ಅದಕೂ ಮೊದ್ಲು ಬಿಜಾಪುರಂದ್ರ ಮಂದಿ ಎಷ್ಟು ಬೆಲಿ ಕೊಡತಿದ್ರ ಗೊತ್ತೇನು.”
“ಈಗ ಇನ್ನ ಕೊಡ್ತಾರ. ನಾ ಎಂಪಿಯಾಗಿ, ಮಂತ್ರಿಯಾಗಿ, ಎಮ್ಮೆಲ್ಲೆಯಾಗಿ ಬಿಜಾಪುರಕ್ಕ ಹೆಸರು ತಂದೀನಿ.”
“ತಂದಿ ಬುಡು ಮಗನ. ಅಲ್ಲಲೆ, ಒಮ್ಮೆ ಅಂತಾ ಸಿರಿಗೆರೆ ಶಿವಾಚಾರ್ಯ ಸ್ವಾಮಿ ಬಂದಿದ್ರು. ಅವರ ಕಾರ್ಯಕ್ರಮದ ಮೆರವಣಿಗಿ ಏನಿತ್ತಲ್ಲ ಅದಕ ಮುಸ್ಲಿಂ ಮಹಿಳೆಯರು ಎಷ್ಟು ಮಂದಿ ಬಂದಿದ್ರು ಗುರುತೇನ, ಮೂರು ಸಾವುರ ಮಂದಿ ಬಂದಿದ್ರು. ಆಗ ಗುರುಗಳು ನಮ್ಮ ಬಿಜಾಪುರದ ಧರ್ಮ ಸಾಮರಸ್ಯ ಕೊಂಡಾಡಿ ಹೋದ್ರು. ಇಂಥಾ ಊರಿಗೆ ನೀ ಎಲ್ಲಿಂದ ಬಂದೇ ಹನುಮಂತ. ಮೊದಲು ದಕ್ಷಿಣ ಕನ್ನಡಕ್ಕೋಗು, ಅಲ್ಲಿ ನಿನ್ನಂಥವರು ಭಾಳಮಂದಿ ಅದಾರ.”
“ವಿಜಾಪುರ ಅನಾಥಮಾಡಿ ನಾ ಎಲ್ಯೂ ಹೋಗುದಿಲ್ಲ.”
“ಅನಾಥಲ್ಲಲೇ, ನೀ ಇದ್ರಾ ಮಶಾಣಾಕ್ಯತಿ, ಈಗಾಗಲೇ ನಿಮ್ಮ ಬ್ರದರ್ಸ್ ದೆಹಲಿನ ಮಶಾಣ ಮಾಡಕತ್ಯಾರ, ಅದಿರ್ಲಿ ಮೊದಲು ನಮ್ಮ ದೊರೆಸ್ವಾಮಿ ಸನೇಕ್ಕೋಗಿ ಕ್ಷಮಿಸಿರಿಯಪ್ಪಾ ಅನ್ನು.”
“ನಾ ಅನ್ನುದಿಲ್ರಿ.”
“ಹಾಳಾಗಿ ಹೋಗು.”
“ಅಂಗೇ ಮಾಡ್ತೇನ್ರೀ…”

ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...