Homeಮುಖಪುಟಸತತ ಹೋರಾಟದ ನಂತರವೂ ದಕ್ಕದ ಲ್ಯಾಪ್‌ಟಾಪ್‌: ಅನಿರ್ದಿಷ್ಟ ಹೋರಾಟಕ್ಕೆ ಮುಂದಾದ ಅಂಧ ವಿದ್ಯಾರ್ಥಿಗಳು

ಸತತ ಹೋರಾಟದ ನಂತರವೂ ದಕ್ಕದ ಲ್ಯಾಪ್‌ಟಾಪ್‌: ಅನಿರ್ದಿಷ್ಟ ಹೋರಾಟಕ್ಕೆ ಮುಂದಾದ ಅಂಧ ವಿದ್ಯಾರ್ಥಿಗಳು

- Advertisement -
- Advertisement -

482 ಅಂಧ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್‌ಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ಪದೇ ಪದೇ ವಿಫಲವಾಗುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಅಂಧರ ಒಕ್ಕೂಟದ ಯುವ ವಿಭಾಗವು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

2015 ರಿಂದ 2017ರವರೆಗೆ ಅಂಧ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್‌ ವಿತರಿಸಲಾಗಿದೆ. ಆದರೆ ಆನಂತರ ನಿಂತುಹೋಗಿದೆ ಎಂದು ಯುವ ವಿಭಾಗವು ಆರೋಪಿಸಿದ್ದು ಮಾರ್ಚ್‌ 04ರಿಂದ ಬೆಂಗಳೂರಿನ ಮೌರ್ಯ ಸರ್ಕಲ್‌‌ನಲ್ಲಿನ ಗಾಂಧಿ ಪ್ರತಿಮೆಯ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ.

ಈ ಮೊಲದು ಫೆಬ್ರವರಿ 11 ರಂದು ನಾವು ವಿಶ್ವೇಶ್ವರಯ್ಯ ಗೋಪುರದ ಎದುರು ಪ್ರತಿಭಟನೆ ನಡೆಸಿದೆವು. ಆಗ ಪೊಲೀಸರು ನಮ್ಮನ್ನ ವಶಕ್ಕೆ ಪಡೆದರು. ಆ ಸಂದರ್ಭದಲ್ಲಿ ’ಅಂಗವೈಕಲ್ಯ ಮತ್ತು ಸಶಕ್ತ ನಾಗರಿಕ ಸಬಲೀಕರಣ ನಿರ್ದೇಶನಾಲ”ವು ಫೆಬ್ರವರಿ 29ರೊಳಗೆ ಲ್ಯಾಪ್‌ಟಾಪ್‌ಗಳನ್ನು ಒದಗಿಸುವ ಭರವಸೆ ನೀಡಿದ್ದರು. ಹಾಗಾಗಿ ನಮ್ಮ ಪ್ರತಿಭಟನೆಯನ್ನು ಕೈಬಿಟ್ಟಿದ್ದೆವು. ಆದರೆ ಒಂದು ತಿಂಗಳಾಗುತ್ತಾ ಬಂದಿದ್ದರೂ ಅವರು ಕೊಟ್ಟ ಮಾತಿಗೆ ತಪ್ಪಿಗೆ ತಪ್ಪಿದ್ದಾರೆ ಎಂದು ಒಕ್ಕೂಟದ ವೀರೇಶ್‌ ದೂರಿದ್ದಾರೆ.

ಫೆ.11 ರಂದು ಪ್ರತಿಭಟನೆ ನಡೆಸಿದ್ದು.

ಅಂಧರಾದ ಕಾರಣಕ್ಕಾಗಿ ಪರೀಕ್ಷೆಗಳಿಗೆ ತಯಾರಿ ನಡೆಸಲು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ನಮ್ಮದೇ ಲಿಪಿಯನ್ನು ಒಳಗೊಂಡಿರುವ ಲ್ಯಾಪ್‌ಟಾಪ್‌ಗಳು ಅಗತ್ಯವಾಗಿವೆ. ಆದರೆ ಸರ್ಕಾರ ಈ ವಿಚಾರದಲ್ಲಿ ಮೀನಾಮೇಷ ಎಣಿಸುತ್ತಿರುವುದಿರಂದ ತೀವ್ರ ತೊಂದರೆಯಲ್ಲಿದ್ದೇವೆ ಎಂದು ಅಂಧ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಪ್ರತಿ ಬಾರಿ ನಾವು ಪ್ರತಿಭಟನೆ ಮಾಡಿದಾಗಲೂ ಸರ್ಕಾರ ಕೇವಲ ಭರವಸೆ ಕೊಟ್ಟು ಕೈತೊಳೆದುಕೊಳ್ಳುತ್ತಿದೆ. 2018-19ರ ಹಣಕಾಸು ವರ್ಷದಲ್ಲಿ ಹಿಂದಿನ ನಿರ್ದೇಶಕ ಜೈ ವೈಭವ್ ಸ್ವಾಮಿ ಆ ವರ್ಷದ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳಿಗೆ ವಿತರಣೆಗಾಗಿ 484 ಲ್ಯಾಪ್‌ಟಾಪ್‌ಗಳನ್ನು ಖರೀದಿಸಲು ಕೆಲವು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದರು. ಆದರೆ ಆರಂಭದಲ್ಲಿ ಆಡಳಿತಾತ್ಮಕ ನಿರ್ಬಂಧಗಳು ಮತ್ತು ಕಾರ್ಯವಿಧಾನದ ತೊಡಕುಗಳ ಕಾರಣದಿಂದಾಗಿ ಖರೀದಿಗೆ ಟೆಂಡರ್ ಸಿಗಲಿಲ್ಲ. ನಂತರ 2019ರ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಿದ ಕಾರಣ ಖರೀದಿಯ ಕಾರ್ಯವಿಧಾನವನ್ನು ನಿಲ್ಲಿಸಲಾಯಿತು.

ಸಾರ್ವತ್ರಿಕ ಚುನಾವಣೆ ಮುಗಿದ ಕೂಡಲೇ ಮುಂಬರುವ ಹಣಕಾಸು ವರ್ಷದ ಆರಂಭದಲ್ಲಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಭರವಸೆ ನೀಡಲಾಯಿತು. ಆದರೆ ಇದುವರೆಗೂ ಜಾರಿಯಾಗಿಲ್ಲ ಹಾಗಾಗಿ ಅನಿರ್ಧಿಷ್ಟಾವದಿ ಹೋರಾಟಕ್ಕಿಳಿಯುವುದು ಅನಿವಾರ್ಯವಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...