Homeಅಂಕಣಗಳುಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

ಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

- Advertisement -
- Advertisement -

ಗುಜರಾತಿನಿಂದ ತೆವಳಿದ ಕೋಮು ಗಲಭೆಯ ವಿಖ್ಯಾತ ವಿಕರಾಳ ಮಾದರಿ ದೆಹಲಿಯ ಸಾವುಗಳನ್ನು ಅರ್ಧ ಶತಕದತ್ತ ಒಯ್ಯತೊಡಗಿದೆ. ನೈಋತ್ಯ ದೆಹಲಿಯ ಭಾರೀ ಚರಂಡಿಗಳಲ್ಲಿ ಕೊಳೆತ ಹೆಣಗಳು ತೇಲತೊಡಗಿವೆ. ರಣಕೇಕೆ, ರಕ್ತಪಾತ, ಅಟ್ಟಹಾಸ, ಅಕ್ರಂದನಗಳು ಅಡಗಿವೆ. ದಿಕ್ಕುಗಾಣದ ತಬ್ಬಲಿತನ, ದುಃಖ, ಆಘಾತಗಳು ಮಡುಗಟ್ಟಿವೆ. ಬದುಕುಗಳನ್ನು ಬಂಧು ಮಿತ್ರರನ್ನು ಕಳೆದುಕೊಂಡು ಬರಿಗೈಯಾಗಿರುವವರು ತಮ್ಮ ನೆಲದಲ್ಲೇ ಅನಾಥರಾಗಿದ್ದಾರೆ. ಪರಕೀಯತೆ ಮುತ್ತಿ ಕಾಡಿದೆ. ಬೆಂದ ಬದುಕುಗಳನ್ನು ಎಲ್ಲಿಂದ ಪುನಃ ಕಟ್ಟಬೇಕೋ ಕಾಣದಾಗಿದ್ದಾರೆ.

ಹದ್ದುಬಸ್ತುಗಳಿಲ್ಲದೆ ಹೂಂಕರಿಸಿದ ಕ್ರೌರ್ಯ ಅಮಾನುಷತೆ ಪೈಶಾಚಿಕ ನಗ್ನ ನರ್ತನದ ನಡುವೆ ಮಾನವೀಯತೆ ಮತ್ತು ಬಂಧುತ್ವದ ಪ್ರೀತಿ ಹರಿಸಿ ಜೀವಗಳನ್ನು ಕಾಪಾಡಿದ ಅನೇಕ ಉದಾಹರಣೆಗಳು ಕಾರ್ಮೋಡದ ನಡುವಿನ ಕೋಲ್ಮಿಂಚಿನಂತೆ ಗೋಚರಿಸಿವೆ.

ದೇಶದ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ಮೂಗಿನ ಕೆಳಗೆ ಮೂರು ದಿನಗಳ ಕಾಲ ಕಾನೂನು ಮತ್ತು ಸುವ್ಯವಸ್ಥೆ ಎಂಬುದು ಸಂಪೂರ್ಣ ಕುಸಿದು ಗಲಭೆಕೋರರ ಕಾಲ ಕೆಳಗೆ ನರಳಿದ ಪರಿ ಸೋಜಿಗ ಮತ್ತು ಖೇದ ಉಂಟು ಮಾಡಿದೆ. ದೆಹಲಿ ಪೊಲೀಸ್ ವ್ಯವಸ್ಥೆ ಖುದ್ದಾಗಿ ಮುಂದೆ ನಿಂತು ಕೊಲೆಗಡುಕ ಗಲಭೆಕೋರ ಗುಂಪುಗಳಿಗೆ ಉತ್ತೇಜನ ನೀಡಿದ ಅನೇಕ ಕರಾಳ ನಿದರ್ಶನಗಳು ಹೊರಬಿದ್ದಿವೆ.

ಇಂತಹ ಪೊಲೀಸ್ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟಿನ ನ್ಯಾಯಮೂರ್ತಿಯೊಬ್ಬರನ್ನು ರಾತ್ರೋರಾತ್ರಿ ಎತ್ತಂಗಡಿ ಮಾಡಲಾಗಿದೆ. ದಂಡಿಸಬೇಕಾದವರ ರಕ್ಷಣೆಗೆ ಮುಂದಾಗಿದೆ ಕೇಂದ್ರ ಸರ್ಕಾರ. ಪೊಲೀಸರನ್ನು ದಂಡಿಸುವುದು ಬಿಟ್ಟು ನ್ಯಾಯವನ್ನು ನೇಣಿಗೇರಿಸಲಾಗಿದೆ. ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಬಿಜೆಪಿ ತಲೆಯಾಳುಗಳ ವಿರುದ್ಧ ಕಾನೂನು ಮತ್ತು ಸುವ್ಯವಸ್ಥೆಯ ಕಿರುಬೆರಳು ಕೂಡ ಇದುವರೆಗೆ ಕದಲಲಿಲ್ಲ.

ವರ್ಗಾವಣೆಯಾದ ನ್ಯಾಯಮೂರ್ತಿಯವರ ಜಾಗದಲ್ಲಿ ಕುಳಿತು ವಿಚಾರಣೆ ನಡೆಸಿದ ಮತ್ತೊಂದು ನ್ಯಾಯಪೀಠ ದೆಹಲಿ ಪೊಲೀಸರ ನಿಷ್ಕ್ರಿಯತೆ ಕುರಿತ ಕೇಸಿನ ವಿಚಾರಣೆಯನ್ನು ಒಂದೂವರೆ ತಿಂಗಳ ಕಾಲ ಮುಂದಕ್ಕೆ ಹಾಕಿದೆ. ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಶಾಂತಿಯಾತ್ರೆಯಲ್ಲೂ ಕೋಮುವಾದವನ್ನು ಬಡಿದೆಬ್ಬಿಸುವ ಪ್ರಯತ್ನ ಮಾಡಿದ ಕುರಿತು ಆಳುವ ವ್ಯವಸ್ಥೆ ಮೌನ ಕಿವಿಗಡಚಿಕ್ಕಿದೆ. ಜೈಲಿಗೆ ಅಟ್ಟಬೇಕಾದ ವ್ಯಕ್ತಿಗೆ ವೈ ಕೆಟಗರಿಯ ಸರ್ಕಾರಿ ಮೈಗಾವಲನ್ನು ಒದಗಿಸಿರುವುದು ವಿಕೃತಿಯ ಪರಮಾವಧಿ.

ದೆಹಲಿಯ ನರಮೇಧದ ಬೂದಿ ಇನ್ನೂ ಪೂರ್ಣ ತಣಿದಿಲ್ಲ. ರಕ್ತದಾಹದ ರಣಕೇಕೆ ಬಂಗಾಳದಲ್ಲಿ ಮೊಳಗಿದೆ. ದೆಹಲಿ ವಿಧಾನಸಭಾ ಚುನಾವಣೆಗಳ ಪ್ರಚಾರವನ್ನು ದ್ವೇಷ ಮತ್ತು ಧೃವೀಕರಣದಿಂದ ತುಂಬಿಸಿದ ಗೃಹಮಂತ್ರಿಯವರು ಕೊಲ್ಕತ್ತಾಕ್ಕೆ ಕಾಲಿಟ್ಟಿದ್ದಾರೆ. ಅಲ್ಲಿಯೂ ಚುನಾವಣೆಗಳು ಕದ ಬಡಿಯುತ್ತಿವೆ. ‘ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ’ ಘೋಷಣೆಗಳು ಬಂಗಾಳದಲ್ಲಿಯೂ ಕೇಳಿ ಬಂದಿವೆ. ದೆಹಲಿಯ ನರಮೇಧ ಬಂಗಾಳಕ್ಕೆ ಪಯಣಿಸದಿರಲಿ. ಈಶಾನ್ಯ ಭಾರತ ಮತ್ತೊಮ್ಮೆ ಭುಗಿಲೇಳತೊಡಗಿದೆ. ದೆಹಲಿಯಂತೆ ಮೇಘಾಲಯದಲ್ಲೂ ಎನ್.ಆರ್.ಸಿ. ಮತ್ತು ಸಿ.ಎ.ಎ. ಜನರ ಪ್ರಾಣಗಳನ್ನು ಬಲಿ ಪಡೆಯತೊಡಗಿವೆ. ಇರಿತಗಳಿಂದ ಮೂವರು ಅಸುನೀಗಿದ್ದಾರೆ. ಕೇಂದ್ರ ಸರ್ಕಾರ ಹೊತ್ತಿಸಿರುವ ಪೌರತ್ವದ ಕಿಚ್ಚು ಬಗೆಬಗೆಯ ಧೃವೀಕರಣಗಳನ್ನು ಬಿತ್ತಿ ಬೆಳೆಸತೊಡಗಿದೆ.

ಬುಡಕಟ್ಟುಗಳ ಭಾರತವಾಗಿರುವ ಈಶಾನ್ಯದಲ್ಲಿ ಅಸ್ಮಿತೆಯ ಪ್ರಶ್ನೆ ಬಲು ಸೂಕ್ಷ್ಮದ್ದು. ಅಸ್ಸಾಮಿನಲ್ಲಿ ಎನ್.ಆರ್.ಸಿ. ಮತ್ತು ಆನಂತರದ ಸಿ.ಎ.ಎ. ಈ ಸೀಮೆಯ ಶಾಂತಿಯನ್ನು ಗಾಢವಾಗಿ ಕದಡಿವೆ. ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಈ ಅಶಾಂತಿಯ ಭೂತವನ್ನು ಬಡಿದೆಬ್ಬಿಸಿ ಹಬ್ಬಿಸಿರುವವರು ರಾಜಕಾರಣಿಗಳು. ಈ ಭೂತ ತಮ್ಮ ಮುಷ್ಠಿಯ ಬಂಧಿ ಎಂಬ ಭ್ರಮೆಯಲ್ಲಿ ಮುಳುಗಿದ್ದಾರೆ. ಈ ಹಿಡಿತದಿಂದ .ಬಿಡಿಸಿಕೊಂಡು ಅಕರಾಳ ವಿಕರಾಳ ರೂಪ ಧರಿಸಿ ಅಮಾಯಕರ ಬೇಟೆಯಲ್ಲಿ ತೊಡಗಿದೆ. ತನ್ನನ್ನು ಬಡಿದೆಬ್ಬಿಸಿದವರನ್ನೂ ಇಂದಲ್ಲ ನಾಳೆ ಬಲಿ ತೆಗೆದುಕೊಂಡೀತು. ಹಚ್ಚಲಾಗುವ ಕಿಚ್ಚಿಗೆ ಹಿಂದೂಗಳು- ಮುಸಲ್ಮಾನರು ಎಂಬ ಧರ್ಮ ಇರುವುದಿಲ್ಲ. ಉರಿ ಉರಿದು, ಕಂಡದ್ದನ್ನೆಲ್ಲ ಬೂದಿಯಾಗಿಸುವುದೊಂದೇ ಅದರ ನಿಜ ಧರ್ಮ. ಸಿ.ಎ.ಎ. ಮತ್ತು ಎನ್.ಆರ್.ಸಿ. ಈಶಾನ್ಯ ಭಾರತದಲ್ಲಿ ಎಬ್ಬಿಸಿರುವ ಶಂಕೆ ಮತ್ತು ಭಯ ಬೇರೆಯದೇ ಆದದ್ದು. ಸಿ.ಎ.ಎ. ಅಡಿಯಲ್ಲಿ ಹಿಂದೂ-ಬೌದ್ಧ-ಕ್ರೈಸ್ತರ ಹೆಸರಿನಲ್ಲಿ ‘ಹೊರಗಿನವರು’ ಬಂದು ಬೀಡು ಬಿಟ್ಟು, ತಮ್ಮ ನೆಲ ಜಲ ಸಂಸ್ಕೃತಿ ಅಸ್ಮಿತೆಯ ಮೇಲೆ ದಾಳಿ ನಡೆಸಿ ರಾಜಕೀಯ ಅಧಿಕಾರವನ್ನೂ ಕಿತ್ತುಕೊಂಡಾರು, ತಮ್ಮ ನೆಲದಲ್ಲಿ ತಾವೇ ಪರಕೀಯರಂತೆ ಬದುಕಬೇಕಾದೀತು ಎಂಬುದು ಈಶಾನ್ಯ ರಾಜ್ಯಗಳ ಜನಸಮುದಾಯಗಳ ಆಶಂಕೆ. ನೆಲದ ಮಕ್ಕಳಾದ ಬುಡಕಟ್ಟುಗಳು ಮತ್ತು ಪರಕೀಯರು ಎಂಬ ರೂಪವನ್ನು ಸಿ.ಎ.ಎ.- ಎನ್.ಆರ್.ಸಿ. ಧರಿಸಿದೆ. ಇಬ್ಬರ ನಡುವೆ ರಕ್ತಸಿಕ್ತ ಕದನವನ್ನು ಹುಟ್ಟಿ ಹಾಕಿದೆ. ಮೊನ್ನೆ ಮೇಘಾಲಯದಲ್ಲಿ ನಡೆದ ಇಂತಹ ಘರ್ಷಣೆಗಳಲ್ಲಿ ಸತ್ತ ಮೂವರ ಪೈಕಿ ಇಬ್ಬರು ಅಸ್ಸಾಮಿನವರು. ಬುಡಕಟ್ಟು ಜನಾಂಗಗಳು ಪರಕೀಯರು ಎಂದು ಭಾವಿಸುವ ‘ಇತರರು’. ಇವರು ಹಿಂದೂಗಳೇ ಇರಬಹುದು, ಮುಸಲ್ಮಾನರೂ ಆಗಿರಬಹುದು.

ಸಿ.ಎ.ಎ.-ಎನ್.ಆರ್.ಸಿ. ತರಲೇಬೇಕೆಂಬ ಜಿದ್ದು ಸಮುದಾಯಗಳ ನಡುವೆ ಅಪನಂಬಿಕೆ ಮತ್ತು ಬಿಗುವಿನ ಭಾವಗಳನ್ನು ದಟ್ಟಗೊಳಿಸತೊಡಗಿವೆ ಎಂಬ ವಾಸ್ತವವನ್ನು ಸರ್ಕಾರ ಗುರುತಿಸಿ ಒಪ್ಪಿಕೊಳ್ಳಬೇಕು. ಒಪ್ಪಿಕೊಂಡರೆ ಹೊರದಾರಿ ತಾನಾಗಿಯೇ ಗೋಚರಿಸೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...