Homeಕರ್ನಾಟಕಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

ಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

- Advertisement -
- Advertisement -

ಭಾರತದಲ್ಲಿ 31 ಜನರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದ್ದು, ಜನ ಸಂದಣಿ ಇರುವ ಕಡೆಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಹೋಗಲೇ ಬೇಕಾದರೆ ಮಾಸ್ಕ್ ಧರಿಸಿ ಹೋಗುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಕೊರೋನ ವೈರಸ್ ಹರಡುವ ಮತ್ತು ಜನರು ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಾಕಷ್ಟು ಪ್ರಚಾರವನ್ನು ನಡೆಸುತ್ತಿದೆ. ಹೀಗಾಗಿ ಜನರು ಎಚ್ಚರ ವಹಿಸುವ ಜೊತೆಗೆ ಸ್ವಲ್ಪಮಟ್ಟಿನ ಭೀತಿಗೂ ಒಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಈ ಬಾರಿ ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಕುರಿತು ವದಂತಿ ಹಬ್ಬಿಸಿದರೆ ಶಿಕ್ಷೆ ಅನುಭವಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ  ನೀಡಿದೆ. ಹೀಗಾಗಿ ಜನರು ಜಾಗೃತಿಗೊಳ್ಳಲು ಮತ್ತು ಭೀತಿಗೊಳ್ಳಲು ಪುಷ್ಟಿ ನೀಡಿದೆ. ಸರ್ಕಾರಗಳು ಮತ್ತು ಆರೋಗ್ಯ ಇಲಾಖೆಯ ಕಾಳಜಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಯಾವುದೇ ಸರ್ಕಾರ ಇದ್ದರೂ ಜನರು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜಾಗೃತಿ ಮೂಡಿಸಲೇಬೇಕು. ಆದರೆ ಇದೇ ಜನರ ಭೀತಿಗೆ ಕಾರಣವೂ ಆಗಬಾರದು ಅಲ್ಲವೇ?

ಮುಖ್ಯ ಸಂಗತಿಯೆಂದರೆ ತುಮಕೂರಿನಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾದಂತೆ ಕಂಡುಬರುತ್ತಿದೆ. ಇದೇ ಉದ್ದೇಶದಿಂದ ಮಾಸ್ಕ್ ಧರಿಸುವವರ ಸಂಖ್ಯೆ ಹೆಚ್ಚಾಗತೊಡಗಿದೆ. ಶಾಲೆಗೆ ಹೋಗುವ  ಮಕ್ಕಳಿಗೆ ಮಾಸ್ಕ್ ಹಾಕದೆ ಕಳಿಸುತ್ತಿಲ್ಲ. ಅಷ್ಟರಮಟ್ಟಿಗೆ ಜಾಗೃತಿ ಮತ್ತು ಭೀತಿ ಜಯರನ್ನು ಕಾಡತೊಡಗಿದೆ. ತುಮಕೂರು ನಗರದಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಬಗೆದಿರುವುದರಿಂದ ಧೂಳು ಕೂಡ ಹೆಚ್ಚಾಗಿದೆ. ವಾಹನಗಳು ಮುಂದೆ ಸಾಗಿದರೆ ಸಾಕು ಸುಯ್ ಅಂತ ಧೂಳು ಮೆತ್ತಿಕೊಳ್ಳುತ್ತದೆ. ಧೂಳಿನಿಂದ ರಕ್ಷಣೆ ಪಡೆಯಲು ಜನರು ಮಾಸ್ಕ್ ಧರಿಸುವಂತಹ ಪರಿಸ್ಥಿತಿ ಬಂದಿದೆ. ಕೊರೋನ ಭೀತಿ ಒಂದು ಕಡೆಯಾದರೆ ಧೂಳಿನ ಭೀತಿ ಮತ್ತೊಂದು ಕಡೆ.  ಇಲ್ಲಿನ ಆರೋಗ್ಯ ಇಲಾಖೆ ಕೊರೋನ ವೈರಸ್ ಬಂದವರಿಗಾಗಿ ಚಿಕಿತ್ಸೆ ನೀಡಲು ಹತ್ತು ಹಾಸಿಗೆಯ ಕೊಠಡಿ ಸಿದ್ದಮಾಡಿಟ್ಟುಕೊಂಡಿದೆ. ಆದರೆ ಧೂಳಿನ ಬಗ್ಗೆ ಜಾಗೃತಿ ಮೂಡಿಸುವ ಗೋಜಿಗೆ ಹೋಗಿಲ್ಲ.

ಕೊರೋನ ವೈರಸ್ ಮತ್ತು ಧೂಳಿನಿಂದ ರಕ್ಷಣೆ ಪಡೆಯಲು ಜನರು ಕಳೆದೊಂದು ವಾರದಿಂದಲೂ ಮಾಸ್ಕ್ ಖರೀದಿಸಿತ್ತಿದ್ದು ಈಗ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಉಂಟಾಗಿದೆ. ಮೆಡಿಕಲ್ ಶಾಪ್ ಗಳಲ್ಲಿ ಮಾಸ್ಕ್ ಕೇಳಿದರೆ ಸ್ಟಾಕ್ ಇಲ್ಲ ಎಂಬ ಉತ್ತರ ಬರುತ್ತದೆ. ಕೊರೋನಾ ವೈರಸ್ ಹರಡುತ್ತದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಗಳನ್ನು ಖರೀದಿಸಿದರು. ನಮ್ಮ ಅಂಗಡಿಯಲ್ಲಿದ್ದ ಮಾಸ್ಕ್ ನ್ನು 20 ರೂ. 60 ರೂ. 150 ರೂಗಳಿಗೆ ಮಾರಾಟ ಮಾಡಿದೆವು. ಈಗ ಇಡೀ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಇದೆ. ಜನರು ಬಂದು ಕೇಳಿ ವಾಪಸ್ ಹೋಗುತ್ತಿದ್ದಾರೆ. ಇರೋವರಿಗೂ ಮಾರಾಟ ಮಾಡಿದೆ. ಈಗ ಸಿಗುತ್ತಿಲ್ಲ. ಎಲ್ಲಾ ಕಡೇನೂ ಇದೇ ಪರಿಸ್ಥಿತಿ ಇದೆ. ನೀವೇ ನೋಡ್ತಾ ಇದ್ದೀರಲ್ಲ. ಅಂಗಡಿನಲ್ಲಿ ಕುಳಿತಿರೋಕೆ ಆಗುತ್ತಿಲ್ಲ. ಧೂಳು. ನಗರಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೇಸಿಗೆ ಬೇರೆ. ಧೂಳಿನಿಂದ ಹಲವು ರೋಗಗಳು ಬರುತ್ತವೆ ಜೊತೆಗೆ ಕೊರೋನಾ ಭೀತಿ ಬೇರೆ. ಏನ್ ಮಾಡೋದು ಹೇಳಿ ಎನ್ನುತ್ತಾರೆ ವಾಸವಿ ಮೆಡಿಕಲ್‌ನ ಕುಮಾರ್.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಅವುಗಳ ಬೆಲೆ ಗಗನಕ್ಕೇರಿದೆ. ಕೆಲವು ಶಾಲೆಗಳು ಪ್ರತಿಯೊಂದು ಮಗುವಿಗೂ ಮಾಸ್ಕ್ ಧರಿಸಿ ಬರುವುದನ್ನು ಕಡ್ಡಾಯ ಮಾಡಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಮಾಸ್ಕ್ ಗಳಿಗೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ಮಾಸ್ಕ್ ಕೊಡುತ್ತಿವೆ. ಹೀಗಾಗಿ ಮಾಸ್ಕ್ ಗಳು ಸಿಗುತ್ತಿಲ್ಲ. ಕೊರೋನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಮಾಸ್ಕ್ ಗಳ ಕೊರತೆ ಉಂಟಾಗಿದ್ದು ಇದಕ್ಕೆ ಆಯಾ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಇಲಾಖೆಗಳು ಕ್ರಮ ಕೈಗೊಂಡಂತೆ ಕಂಡುಬರುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...